Homeಮುಖಪುಟಕೈಸರ್‌ಗಂಜ್‌ನಲ್ಲಿ ಬೃಹತ್ ರ್ಯಾಲಿ: ಲೈಂಗಿಕ ಕಿರುಕುಳದ ಆರೋಪಿ, ಬಿಜೆಪಿ ಸಂಸದ ಬ್ರಿಜ್‌ಭೂಷಣ್ ಶಕ್ತಿ ಪ್ರದರ್ಶನ

ಕೈಸರ್‌ಗಂಜ್‌ನಲ್ಲಿ ಬೃಹತ್ ರ್ಯಾಲಿ: ಲೈಂಗಿಕ ಕಿರುಕುಳದ ಆರೋಪಿ, ಬಿಜೆಪಿ ಸಂಸದ ಬ್ರಿಜ್‌ಭೂಷಣ್ ಶಕ್ತಿ ಪ್ರದರ್ಶನ

- Advertisement -
- Advertisement -

ಲೈಂಗಿಕ ಕಿರುಕುಳದ ಆರೋಪಿ, ಕುಸ್ತಿ ಫೆಡರೇಷನ್‌ ಮುಖ್ಯಸ್ಥ ಹಾಗೂ ಬಿಜೆಪಿ ಸಂಸದ ಬ್ರಿಜ್‌ಭೂಷಣ್ ಶರಣ್ ಸಿಂಗ್ ಅವರು ತಮ್ಮ ಸ್ವಕ್ಷೇತ್ರ ಉತ್ತರ ಪ್ರದೇಶದ ಬಹರಾಯಿಚ್ ಜಿಲ್ಲೆಯ ಕೈಸರ್‌ಗಂಜ್‌ನಲ್ಲಿ ಬೃಹತ್ ರ್ಯಾಲಿಯನ್ನು ಭಾನುವಾರ ನಡೆಸಿದ್ದಾರೆ. ಅವರ ಬಂಧನಕ್ಕೆ ಒತ್ತಡ ಹೆಚ್ಚುತ್ತಿರುವದರಿಂದ ತಮ್ಮ ಶಕ್ತಿ ಪ್ರದರ್ಶನಕ್ಕಾಗಿಯೇ ಈ ರ್ಯಾಲಿ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.

ಖ್ಯಾತ ಕುಸ್ತಿಪಟುಗಳು ಬ್ರಿಜ್‌ಭೂಷಣ್ ವಿರುದ್ಧ ಪ್ರತಿಭಟನೆ ನಡೆಸುತ್ತಿರುವುದು ದೇಶಾದ್ಯಂತ ಸುದ್ದಿಯಾಗಿದೆ. ಆದರೂ ಕೇಂದ್ರ ಸರ್ಕಾರ ಮಾತ್ರ ತಮ್ಮ ಸಂಸದನ ವಿರುದ್ಧ ಕ್ರಮ ಕೈಗೊಂಡಿಲ್ಲ. ಆದರೆ ಇದೀಗ ಕೇಂದ್ರದ ಮೇಲೆ ಸಾಕಷ್ಟು ಒತ್ತಡ ಇರುವುದರಿಂದ ಅವರ ವಿರುದ್ಧ ಕ್ರಮ ಕೈಗೊಳ್ಳುವ ಎಲ್ಲ ಸಾಧ್ಯತೆಗಳಿವೆ ಹಾಗಾಗಿ ಅವರು ಇದೀಗ  ಈ ಭಾಗದಲ್ಲಿ ತಮ್ಮ ಶಕ್ತಿ ಕುಂದಿಲ್ಲ ಎನ್ನುವ ಸಂದೇಶವನ್ನು ಬಿಜೆಪಿಗೆ ನೀಡುವ ಉದ್ದೇಶವೂ ಈ ರ್ಯಾಲಿಯ ಹಿಂದಿದೆ ಎಂದು ರಾಜಕೀಯ ವಿಶ್ಲೇಷಕರು ಹಾಗೂ ಸಿಂಗ್ ಅವರ ಆಪ್ತರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಕಳೆದ ಒಂಬತ್ತು ವರ್ಷ ಪೂರೈಸಿದ್ದನ್ನು ಸಂಭ್ರಮಿಸಲು ಈ ರ್ಯಾಲಿಯನ್ನು ಆಯೋಜಿಸಿದ್ದಾಗಿ ಸಿಂಗ್ ಅವರು ಹೇಳಿದ್ದಾರೆ. ಆದರೆ ಇದು ಅವರ ಕ್ಷೇತ್ರದಲ್ಲಿ ತಮ್ಮ ಶಕ್ತಿ ಕುಂದಿಲ್ಲ ಎನ್ನುವ ಸಂದೇಶವನ್ನು ನೀಡಲು ಎನ್ನುವುದು ಹಲವರ ಅಭಿಪ್ರಾಯವಾಗಿದೆ.

ಇದನ್ನೂ ಓದಿ: ಲೈಂಗಿಕ ಕಿರುಕುಳಕ್ಕೆ ಸಂಬಂಧಿಸಿದ ವಿಡಿಯೋ, ಫೋಟೊ, ವಾಟ್ಸ್​ಆ್ಯಪ್ ಚಾಟ್ ಒದಗಿಸುವಂತೆ ಕುಸ್ತಿಪಟುಗಳಿಗೆ ಸಾಕ್ಷ್ಯ ಕೇಳಿದ ಪೊಲೀಸರು

ಈ ರ್ಯಾಲಿಯನ್ನ ಉದ್ದೇಶಿಸಿ ಮಾತನಾಡಿರುವ ಬ್ರಿಜ್‌ಭೂಷಣ್, ”ಕೆಲವು ಬಾರಿ ದುಃಖವನ್ನು, ಕೆಲವು ಬಾರಿ ನೋವನ್ನು ಅನುಭವಿಸಬೇಕಾಗುತ್ತದೆ, ಕೆಲವು ಸಲ ವಿಷವನ್ನೂ ಕುಡಿಯಬೇಕಾಗುತ್ತದೆ… ಆಗ ಮಾತ್ರವೇ ಈ ಜಗತ್ತಿನಲ್ಲಿ ಬದುಕಲು ಸಾಧ್ಯ” ಎಂಬ ಉರ್ದು ಕವಿತೆಯ ಸಾಲುಗಳ ಮೂಲಕ ಬ್ರಿಜ್‌ಭೂಷನ್ ಸಿಂಗ್ ಅವರು ತಮ್ಮ ಭಾಷಣವನ್ನು ಆರಂಭಿಸಿದರು.

”ದೇವರು ಇಚ್ಛಿಸಿದ್ದು ನಡೆದೇ ತೀರುತ್ತದೆ ಅಂದಮೇಲೆ ಅದರ ಕುರಿತು ವಾದ ಮಾಡಿ ಪ್ರಯೋಜನವೇನು?” ಎನ್ನುವ ‘ರಾಮಚರಿತ ಮಾನಸ’ದ ಸಾಲುಗಳನ್ನೂ ತಮ್ಮ ಭಾಷಣದಲ್ಲಿ ಉಲ್ಲೇಖಿಸಿದ್ದಾರೆ.

ಈ ರೀತಿ ಅರ್ಥವಿಲ್ಲದೇ ಮಾತನಾಡಿದ ಬ್ರಿಜ್‌ಭೂಷಣ್ ತಮ್ಮ ಭಾಷಣದಲ್ಲಿ ಒಮ್ಮೆಯೂ ಮಹಿಳಾ ಕುಸ್ತಿಪಟುಗಳ ಪ್ರತಿಭಟನೆಯ ಪ್ರಸ್ತಾಪವನ್ನು ಮಾಡಲಿಲ್ಲ. ಹಾಗೆಯೇ ತಮ್ಮ ಮೇಲಿನ ಆರೋಪಕ್ಕೆ ಸಮಜಾಯಿಷಿಯನ್ನೂ ನೀಡಲಿಲ್ಲ. ಬದಲಿಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳುತ್ತಾ, ಕಾಂಗ್ರೆಸ್ ವಿರುದ್ಧ ಹರಿಹಾಯ್ದರು. ಈ ಬೃಹತ್ ರ್ಯಾಲಿಯಲ್ಲಿ ಮಧ್ಯಪ್ರದೇಶದ ಸಚಿವ, ಉತ್ತರ ಪ್ರದೇಶದ ಐವರು ಶಾಸಕರ ಜೊತೆಗೆ ಬಿಜೆಪಿ ಕಾರ್ಯಕರ್ತರು ಭಾರಿ ಸಂಖ್ಯೆಯಲ್ಲಿ ಭಾಗಿಯಾಗಿದ್ದರು.

ಇದೇ ವೇಳೆ, ತಾನು ಕೈಸರ್‌ಗಂಜ್‌ ಲೋಕಸಭಾ ಕ್ಷೇತ್ರದಿಂದಲೇ ಮತ್ತೊಮ್ಮೆ ಲೋಕಸಭೆಗೆ ಸ್ಪರ್ಧಿಸುತ್ತೇನೆ ಎಂದು ಲೈಂಗಿಕ ಕಿರುಕುಳದ ಆರೋಪಿ, ಕುಸ್ತಿ ಫೆಡರೇಷನ್ ಅಧ್ಯಕ್ಷ ಬ್ರಿಜ್‌ಭೂಷನ್ ಶರಣ್ ಸಿಂಗ್ ಹೇಳಿದರು.

ಕುಸ್ತಿಪಟುಗಳ ಪ್ರತಿಭಟನೆಗೆ ರೈತ ಸಂಘಟನೆಗಳು, ಬೇರೆ ಕ್ರೀಡಾಪಟುಗಳು ಬೆಂಬಲ ಸೂಚಿಸುತ್ತಿರುವುದರಿಂದ ಕೇಂದ್ರ ಸಕಾರ್ರರದ ಮೇಲೆ ಒತ್ತಡ ಹೆಚ್ಚಾಗಿದೆ. ಇತ್ತಿಚೆಗೆ ಕ್ರೀಡಾಸಚಿವ ಅನುರಾಗ ಠಾಕೂರ್ ಅವರು ಜೂ.15ರೊಳಗೆ ತನಿಖೆ ಮುಗಿಸುವ ಭರವಸೆ ನೀಡಿದ್ದಾರೆ. ಹಾಗಾಗಿ ಕ್ರಮ ತೆಗೆದುಕೊಂಡರೆ ಬ್ರಿಜ್‌ಭೂಷಣ್ ಸಿಂಗ್ ಅವರು, ಪಕ್ಷ ಬಿಡುವ ಯೋಚನೆಯಲ್ಲೂ ಇದ್ದಾರೆ ಎಂದು ಹೇಳಲಾಗುತ್ತಿದೆ.

ಬ್ರಿಜ್‌ಭೂಷಣ್ ಸಿಂಗ್ ಅವರು ಈ ಹಿಂದೆ ಬೇರೆ ಪಕ್ಷದಲ್ಲಿದ್ದರು. ಮಹಿಳಾ ಕುಸ್ತಿಪಟುಗಳ ಪ್ರತಿಭಟನೆ ಸಂಬಂಧ ಅವರ ವಿರುದ್ಧ ಕ್ರಮ ಕೈಗೊಂಡರೆ ಅವರು ಬಿಜೆಪಿಯನ್ನು ಬಿಟ್ಟು ಬೇರೆ ಪಕ್ಷಕ್ಕೆ ಹೋಗುವ ಸಾಧ್ಯತೆ ಇದೆ ಎಂದು ಬಿಜೆಪಿಯ ಕೆಲ ನಾಯಕರು ಹೇಳಿದ್ದಾರೆ. ಬ್ರಿಜ್‌ಭೂಷಣ್ ಅವರು ಕೆಲವು ದಿನಗಳ ಹಿಂದೆ ಇದಕ್ಕೆ ಪುಷ್ಟಿ ನೀಡುವಂತಹ ಒಂದು ಹೇಳಿಕೆ ನೀಡಿದ್ದರು.

”ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ನನ್ನ ಬೆಂಬಲಕ್ಕೆ ನಿಂತಿದ್ದಾರೆ. ಯಾಕೆಂದರೆ ಅವರಿಗೆ ‘ಸತ್ಯ’ ತಿಳಿದಿದೆ. ಅಖಿಲೇಶ್‌ನನ್ನು ನಾನು ಆತನ ಸಣ್ಣ ವಯಸ್ಸಿನಿಂದ ನೋಡುತ್ತಿದ್ದೇನೆ. ಉತ್ತರ ಪ್ರದೇಶದ ಶೇ 80ರಷ್ಟು ಕುಸ್ತಿಪಟುಗಳು ಸಮಾಜವಾದಿ ಸಿದ್ಧಾಂತವನ್ನು ಪ್ರತಿಪಾದಿಸುತ್ತಾರೆ” ಎಂದು ಅಚ್ಚರಿಯ ಹೇಳಿಕೆ ನೀಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...