Homeಮುಖಪುಟಕೈಸರ್‌ಗಂಜ್‌ನಲ್ಲಿ ಬೃಹತ್ ರ್ಯಾಲಿ: ಲೈಂಗಿಕ ಕಿರುಕುಳದ ಆರೋಪಿ, ಬಿಜೆಪಿ ಸಂಸದ ಬ್ರಿಜ್‌ಭೂಷಣ್ ಶಕ್ತಿ ಪ್ರದರ್ಶನ

ಕೈಸರ್‌ಗಂಜ್‌ನಲ್ಲಿ ಬೃಹತ್ ರ್ಯಾಲಿ: ಲೈಂಗಿಕ ಕಿರುಕುಳದ ಆರೋಪಿ, ಬಿಜೆಪಿ ಸಂಸದ ಬ್ರಿಜ್‌ಭೂಷಣ್ ಶಕ್ತಿ ಪ್ರದರ್ಶನ

- Advertisement -
- Advertisement -

ಲೈಂಗಿಕ ಕಿರುಕುಳದ ಆರೋಪಿ, ಕುಸ್ತಿ ಫೆಡರೇಷನ್‌ ಮುಖ್ಯಸ್ಥ ಹಾಗೂ ಬಿಜೆಪಿ ಸಂಸದ ಬ್ರಿಜ್‌ಭೂಷಣ್ ಶರಣ್ ಸಿಂಗ್ ಅವರು ತಮ್ಮ ಸ್ವಕ್ಷೇತ್ರ ಉತ್ತರ ಪ್ರದೇಶದ ಬಹರಾಯಿಚ್ ಜಿಲ್ಲೆಯ ಕೈಸರ್‌ಗಂಜ್‌ನಲ್ಲಿ ಬೃಹತ್ ರ್ಯಾಲಿಯನ್ನು ಭಾನುವಾರ ನಡೆಸಿದ್ದಾರೆ. ಅವರ ಬಂಧನಕ್ಕೆ ಒತ್ತಡ ಹೆಚ್ಚುತ್ತಿರುವದರಿಂದ ತಮ್ಮ ಶಕ್ತಿ ಪ್ರದರ್ಶನಕ್ಕಾಗಿಯೇ ಈ ರ್ಯಾಲಿ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.

ಖ್ಯಾತ ಕುಸ್ತಿಪಟುಗಳು ಬ್ರಿಜ್‌ಭೂಷಣ್ ವಿರುದ್ಧ ಪ್ರತಿಭಟನೆ ನಡೆಸುತ್ತಿರುವುದು ದೇಶಾದ್ಯಂತ ಸುದ್ದಿಯಾಗಿದೆ. ಆದರೂ ಕೇಂದ್ರ ಸರ್ಕಾರ ಮಾತ್ರ ತಮ್ಮ ಸಂಸದನ ವಿರುದ್ಧ ಕ್ರಮ ಕೈಗೊಂಡಿಲ್ಲ. ಆದರೆ ಇದೀಗ ಕೇಂದ್ರದ ಮೇಲೆ ಸಾಕಷ್ಟು ಒತ್ತಡ ಇರುವುದರಿಂದ ಅವರ ವಿರುದ್ಧ ಕ್ರಮ ಕೈಗೊಳ್ಳುವ ಎಲ್ಲ ಸಾಧ್ಯತೆಗಳಿವೆ ಹಾಗಾಗಿ ಅವರು ಇದೀಗ  ಈ ಭಾಗದಲ್ಲಿ ತಮ್ಮ ಶಕ್ತಿ ಕುಂದಿಲ್ಲ ಎನ್ನುವ ಸಂದೇಶವನ್ನು ಬಿಜೆಪಿಗೆ ನೀಡುವ ಉದ್ದೇಶವೂ ಈ ರ್ಯಾಲಿಯ ಹಿಂದಿದೆ ಎಂದು ರಾಜಕೀಯ ವಿಶ್ಲೇಷಕರು ಹಾಗೂ ಸಿಂಗ್ ಅವರ ಆಪ್ತರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಕಳೆದ ಒಂಬತ್ತು ವರ್ಷ ಪೂರೈಸಿದ್ದನ್ನು ಸಂಭ್ರಮಿಸಲು ಈ ರ್ಯಾಲಿಯನ್ನು ಆಯೋಜಿಸಿದ್ದಾಗಿ ಸಿಂಗ್ ಅವರು ಹೇಳಿದ್ದಾರೆ. ಆದರೆ ಇದು ಅವರ ಕ್ಷೇತ್ರದಲ್ಲಿ ತಮ್ಮ ಶಕ್ತಿ ಕುಂದಿಲ್ಲ ಎನ್ನುವ ಸಂದೇಶವನ್ನು ನೀಡಲು ಎನ್ನುವುದು ಹಲವರ ಅಭಿಪ್ರಾಯವಾಗಿದೆ.

ಇದನ್ನೂ ಓದಿ: ಲೈಂಗಿಕ ಕಿರುಕುಳಕ್ಕೆ ಸಂಬಂಧಿಸಿದ ವಿಡಿಯೋ, ಫೋಟೊ, ವಾಟ್ಸ್​ಆ್ಯಪ್ ಚಾಟ್ ಒದಗಿಸುವಂತೆ ಕುಸ್ತಿಪಟುಗಳಿಗೆ ಸಾಕ್ಷ್ಯ ಕೇಳಿದ ಪೊಲೀಸರು

ಈ ರ್ಯಾಲಿಯನ್ನ ಉದ್ದೇಶಿಸಿ ಮಾತನಾಡಿರುವ ಬ್ರಿಜ್‌ಭೂಷಣ್, ”ಕೆಲವು ಬಾರಿ ದುಃಖವನ್ನು, ಕೆಲವು ಬಾರಿ ನೋವನ್ನು ಅನುಭವಿಸಬೇಕಾಗುತ್ತದೆ, ಕೆಲವು ಸಲ ವಿಷವನ್ನೂ ಕುಡಿಯಬೇಕಾಗುತ್ತದೆ… ಆಗ ಮಾತ್ರವೇ ಈ ಜಗತ್ತಿನಲ್ಲಿ ಬದುಕಲು ಸಾಧ್ಯ” ಎಂಬ ಉರ್ದು ಕವಿತೆಯ ಸಾಲುಗಳ ಮೂಲಕ ಬ್ರಿಜ್‌ಭೂಷನ್ ಸಿಂಗ್ ಅವರು ತಮ್ಮ ಭಾಷಣವನ್ನು ಆರಂಭಿಸಿದರು.

”ದೇವರು ಇಚ್ಛಿಸಿದ್ದು ನಡೆದೇ ತೀರುತ್ತದೆ ಅಂದಮೇಲೆ ಅದರ ಕುರಿತು ವಾದ ಮಾಡಿ ಪ್ರಯೋಜನವೇನು?” ಎನ್ನುವ ‘ರಾಮಚರಿತ ಮಾನಸ’ದ ಸಾಲುಗಳನ್ನೂ ತಮ್ಮ ಭಾಷಣದಲ್ಲಿ ಉಲ್ಲೇಖಿಸಿದ್ದಾರೆ.

ಈ ರೀತಿ ಅರ್ಥವಿಲ್ಲದೇ ಮಾತನಾಡಿದ ಬ್ರಿಜ್‌ಭೂಷಣ್ ತಮ್ಮ ಭಾಷಣದಲ್ಲಿ ಒಮ್ಮೆಯೂ ಮಹಿಳಾ ಕುಸ್ತಿಪಟುಗಳ ಪ್ರತಿಭಟನೆಯ ಪ್ರಸ್ತಾಪವನ್ನು ಮಾಡಲಿಲ್ಲ. ಹಾಗೆಯೇ ತಮ್ಮ ಮೇಲಿನ ಆರೋಪಕ್ಕೆ ಸಮಜಾಯಿಷಿಯನ್ನೂ ನೀಡಲಿಲ್ಲ. ಬದಲಿಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳುತ್ತಾ, ಕಾಂಗ್ರೆಸ್ ವಿರುದ್ಧ ಹರಿಹಾಯ್ದರು. ಈ ಬೃಹತ್ ರ್ಯಾಲಿಯಲ್ಲಿ ಮಧ್ಯಪ್ರದೇಶದ ಸಚಿವ, ಉತ್ತರ ಪ್ರದೇಶದ ಐವರು ಶಾಸಕರ ಜೊತೆಗೆ ಬಿಜೆಪಿ ಕಾರ್ಯಕರ್ತರು ಭಾರಿ ಸಂಖ್ಯೆಯಲ್ಲಿ ಭಾಗಿಯಾಗಿದ್ದರು.

ಇದೇ ವೇಳೆ, ತಾನು ಕೈಸರ್‌ಗಂಜ್‌ ಲೋಕಸಭಾ ಕ್ಷೇತ್ರದಿಂದಲೇ ಮತ್ತೊಮ್ಮೆ ಲೋಕಸಭೆಗೆ ಸ್ಪರ್ಧಿಸುತ್ತೇನೆ ಎಂದು ಲೈಂಗಿಕ ಕಿರುಕುಳದ ಆರೋಪಿ, ಕುಸ್ತಿ ಫೆಡರೇಷನ್ ಅಧ್ಯಕ್ಷ ಬ್ರಿಜ್‌ಭೂಷನ್ ಶರಣ್ ಸಿಂಗ್ ಹೇಳಿದರು.

ಕುಸ್ತಿಪಟುಗಳ ಪ್ರತಿಭಟನೆಗೆ ರೈತ ಸಂಘಟನೆಗಳು, ಬೇರೆ ಕ್ರೀಡಾಪಟುಗಳು ಬೆಂಬಲ ಸೂಚಿಸುತ್ತಿರುವುದರಿಂದ ಕೇಂದ್ರ ಸಕಾರ್ರರದ ಮೇಲೆ ಒತ್ತಡ ಹೆಚ್ಚಾಗಿದೆ. ಇತ್ತಿಚೆಗೆ ಕ್ರೀಡಾಸಚಿವ ಅನುರಾಗ ಠಾಕೂರ್ ಅವರು ಜೂ.15ರೊಳಗೆ ತನಿಖೆ ಮುಗಿಸುವ ಭರವಸೆ ನೀಡಿದ್ದಾರೆ. ಹಾಗಾಗಿ ಕ್ರಮ ತೆಗೆದುಕೊಂಡರೆ ಬ್ರಿಜ್‌ಭೂಷಣ್ ಸಿಂಗ್ ಅವರು, ಪಕ್ಷ ಬಿಡುವ ಯೋಚನೆಯಲ್ಲೂ ಇದ್ದಾರೆ ಎಂದು ಹೇಳಲಾಗುತ್ತಿದೆ.

ಬ್ರಿಜ್‌ಭೂಷಣ್ ಸಿಂಗ್ ಅವರು ಈ ಹಿಂದೆ ಬೇರೆ ಪಕ್ಷದಲ್ಲಿದ್ದರು. ಮಹಿಳಾ ಕುಸ್ತಿಪಟುಗಳ ಪ್ರತಿಭಟನೆ ಸಂಬಂಧ ಅವರ ವಿರುದ್ಧ ಕ್ರಮ ಕೈಗೊಂಡರೆ ಅವರು ಬಿಜೆಪಿಯನ್ನು ಬಿಟ್ಟು ಬೇರೆ ಪಕ್ಷಕ್ಕೆ ಹೋಗುವ ಸಾಧ್ಯತೆ ಇದೆ ಎಂದು ಬಿಜೆಪಿಯ ಕೆಲ ನಾಯಕರು ಹೇಳಿದ್ದಾರೆ. ಬ್ರಿಜ್‌ಭೂಷಣ್ ಅವರು ಕೆಲವು ದಿನಗಳ ಹಿಂದೆ ಇದಕ್ಕೆ ಪುಷ್ಟಿ ನೀಡುವಂತಹ ಒಂದು ಹೇಳಿಕೆ ನೀಡಿದ್ದರು.

”ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ನನ್ನ ಬೆಂಬಲಕ್ಕೆ ನಿಂತಿದ್ದಾರೆ. ಯಾಕೆಂದರೆ ಅವರಿಗೆ ‘ಸತ್ಯ’ ತಿಳಿದಿದೆ. ಅಖಿಲೇಶ್‌ನನ್ನು ನಾನು ಆತನ ಸಣ್ಣ ವಯಸ್ಸಿನಿಂದ ನೋಡುತ್ತಿದ್ದೇನೆ. ಉತ್ತರ ಪ್ರದೇಶದ ಶೇ 80ರಷ್ಟು ಕುಸ್ತಿಪಟುಗಳು ಸಮಾಜವಾದಿ ಸಿದ್ಧಾಂತವನ್ನು ಪ್ರತಿಪಾದಿಸುತ್ತಾರೆ” ಎಂದು ಅಚ್ಚರಿಯ ಹೇಳಿಕೆ ನೀಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...