Homeಮುಖಪುಟಕೈಸರ್‌ಗಂಜ್‌ನಲ್ಲಿ ಬೃಹತ್ ರ್ಯಾಲಿ: ಲೈಂಗಿಕ ಕಿರುಕುಳದ ಆರೋಪಿ, ಬಿಜೆಪಿ ಸಂಸದ ಬ್ರಿಜ್‌ಭೂಷಣ್ ಶಕ್ತಿ ಪ್ರದರ್ಶನ

ಕೈಸರ್‌ಗಂಜ್‌ನಲ್ಲಿ ಬೃಹತ್ ರ್ಯಾಲಿ: ಲೈಂಗಿಕ ಕಿರುಕುಳದ ಆರೋಪಿ, ಬಿಜೆಪಿ ಸಂಸದ ಬ್ರಿಜ್‌ಭೂಷಣ್ ಶಕ್ತಿ ಪ್ರದರ್ಶನ

- Advertisement -
- Advertisement -

ಲೈಂಗಿಕ ಕಿರುಕುಳದ ಆರೋಪಿ, ಕುಸ್ತಿ ಫೆಡರೇಷನ್‌ ಮುಖ್ಯಸ್ಥ ಹಾಗೂ ಬಿಜೆಪಿ ಸಂಸದ ಬ್ರಿಜ್‌ಭೂಷಣ್ ಶರಣ್ ಸಿಂಗ್ ಅವರು ತಮ್ಮ ಸ್ವಕ್ಷೇತ್ರ ಉತ್ತರ ಪ್ರದೇಶದ ಬಹರಾಯಿಚ್ ಜಿಲ್ಲೆಯ ಕೈಸರ್‌ಗಂಜ್‌ನಲ್ಲಿ ಬೃಹತ್ ರ್ಯಾಲಿಯನ್ನು ಭಾನುವಾರ ನಡೆಸಿದ್ದಾರೆ. ಅವರ ಬಂಧನಕ್ಕೆ ಒತ್ತಡ ಹೆಚ್ಚುತ್ತಿರುವದರಿಂದ ತಮ್ಮ ಶಕ್ತಿ ಪ್ರದರ್ಶನಕ್ಕಾಗಿಯೇ ಈ ರ್ಯಾಲಿ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.

ಖ್ಯಾತ ಕುಸ್ತಿಪಟುಗಳು ಬ್ರಿಜ್‌ಭೂಷಣ್ ವಿರುದ್ಧ ಪ್ರತಿಭಟನೆ ನಡೆಸುತ್ತಿರುವುದು ದೇಶಾದ್ಯಂತ ಸುದ್ದಿಯಾಗಿದೆ. ಆದರೂ ಕೇಂದ್ರ ಸರ್ಕಾರ ಮಾತ್ರ ತಮ್ಮ ಸಂಸದನ ವಿರುದ್ಧ ಕ್ರಮ ಕೈಗೊಂಡಿಲ್ಲ. ಆದರೆ ಇದೀಗ ಕೇಂದ್ರದ ಮೇಲೆ ಸಾಕಷ್ಟು ಒತ್ತಡ ಇರುವುದರಿಂದ ಅವರ ವಿರುದ್ಧ ಕ್ರಮ ಕೈಗೊಳ್ಳುವ ಎಲ್ಲ ಸಾಧ್ಯತೆಗಳಿವೆ ಹಾಗಾಗಿ ಅವರು ಇದೀಗ  ಈ ಭಾಗದಲ್ಲಿ ತಮ್ಮ ಶಕ್ತಿ ಕುಂದಿಲ್ಲ ಎನ್ನುವ ಸಂದೇಶವನ್ನು ಬಿಜೆಪಿಗೆ ನೀಡುವ ಉದ್ದೇಶವೂ ಈ ರ್ಯಾಲಿಯ ಹಿಂದಿದೆ ಎಂದು ರಾಜಕೀಯ ವಿಶ್ಲೇಷಕರು ಹಾಗೂ ಸಿಂಗ್ ಅವರ ಆಪ್ತರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಕಳೆದ ಒಂಬತ್ತು ವರ್ಷ ಪೂರೈಸಿದ್ದನ್ನು ಸಂಭ್ರಮಿಸಲು ಈ ರ್ಯಾಲಿಯನ್ನು ಆಯೋಜಿಸಿದ್ದಾಗಿ ಸಿಂಗ್ ಅವರು ಹೇಳಿದ್ದಾರೆ. ಆದರೆ ಇದು ಅವರ ಕ್ಷೇತ್ರದಲ್ಲಿ ತಮ್ಮ ಶಕ್ತಿ ಕುಂದಿಲ್ಲ ಎನ್ನುವ ಸಂದೇಶವನ್ನು ನೀಡಲು ಎನ್ನುವುದು ಹಲವರ ಅಭಿಪ್ರಾಯವಾಗಿದೆ.

ಇದನ್ನೂ ಓದಿ: ಲೈಂಗಿಕ ಕಿರುಕುಳಕ್ಕೆ ಸಂಬಂಧಿಸಿದ ವಿಡಿಯೋ, ಫೋಟೊ, ವಾಟ್ಸ್​ಆ್ಯಪ್ ಚಾಟ್ ಒದಗಿಸುವಂತೆ ಕುಸ್ತಿಪಟುಗಳಿಗೆ ಸಾಕ್ಷ್ಯ ಕೇಳಿದ ಪೊಲೀಸರು

ಈ ರ್ಯಾಲಿಯನ್ನ ಉದ್ದೇಶಿಸಿ ಮಾತನಾಡಿರುವ ಬ್ರಿಜ್‌ಭೂಷಣ್, ”ಕೆಲವು ಬಾರಿ ದುಃಖವನ್ನು, ಕೆಲವು ಬಾರಿ ನೋವನ್ನು ಅನುಭವಿಸಬೇಕಾಗುತ್ತದೆ, ಕೆಲವು ಸಲ ವಿಷವನ್ನೂ ಕುಡಿಯಬೇಕಾಗುತ್ತದೆ… ಆಗ ಮಾತ್ರವೇ ಈ ಜಗತ್ತಿನಲ್ಲಿ ಬದುಕಲು ಸಾಧ್ಯ” ಎಂಬ ಉರ್ದು ಕವಿತೆಯ ಸಾಲುಗಳ ಮೂಲಕ ಬ್ರಿಜ್‌ಭೂಷನ್ ಸಿಂಗ್ ಅವರು ತಮ್ಮ ಭಾಷಣವನ್ನು ಆರಂಭಿಸಿದರು.

”ದೇವರು ಇಚ್ಛಿಸಿದ್ದು ನಡೆದೇ ತೀರುತ್ತದೆ ಅಂದಮೇಲೆ ಅದರ ಕುರಿತು ವಾದ ಮಾಡಿ ಪ್ರಯೋಜನವೇನು?” ಎನ್ನುವ ‘ರಾಮಚರಿತ ಮಾನಸ’ದ ಸಾಲುಗಳನ್ನೂ ತಮ್ಮ ಭಾಷಣದಲ್ಲಿ ಉಲ್ಲೇಖಿಸಿದ್ದಾರೆ.

ಈ ರೀತಿ ಅರ್ಥವಿಲ್ಲದೇ ಮಾತನಾಡಿದ ಬ್ರಿಜ್‌ಭೂಷಣ್ ತಮ್ಮ ಭಾಷಣದಲ್ಲಿ ಒಮ್ಮೆಯೂ ಮಹಿಳಾ ಕುಸ್ತಿಪಟುಗಳ ಪ್ರತಿಭಟನೆಯ ಪ್ರಸ್ತಾಪವನ್ನು ಮಾಡಲಿಲ್ಲ. ಹಾಗೆಯೇ ತಮ್ಮ ಮೇಲಿನ ಆರೋಪಕ್ಕೆ ಸಮಜಾಯಿಷಿಯನ್ನೂ ನೀಡಲಿಲ್ಲ. ಬದಲಿಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳುತ್ತಾ, ಕಾಂಗ್ರೆಸ್ ವಿರುದ್ಧ ಹರಿಹಾಯ್ದರು. ಈ ಬೃಹತ್ ರ್ಯಾಲಿಯಲ್ಲಿ ಮಧ್ಯಪ್ರದೇಶದ ಸಚಿವ, ಉತ್ತರ ಪ್ರದೇಶದ ಐವರು ಶಾಸಕರ ಜೊತೆಗೆ ಬಿಜೆಪಿ ಕಾರ್ಯಕರ್ತರು ಭಾರಿ ಸಂಖ್ಯೆಯಲ್ಲಿ ಭಾಗಿಯಾಗಿದ್ದರು.

ಇದೇ ವೇಳೆ, ತಾನು ಕೈಸರ್‌ಗಂಜ್‌ ಲೋಕಸಭಾ ಕ್ಷೇತ್ರದಿಂದಲೇ ಮತ್ತೊಮ್ಮೆ ಲೋಕಸಭೆಗೆ ಸ್ಪರ್ಧಿಸುತ್ತೇನೆ ಎಂದು ಲೈಂಗಿಕ ಕಿರುಕುಳದ ಆರೋಪಿ, ಕುಸ್ತಿ ಫೆಡರೇಷನ್ ಅಧ್ಯಕ್ಷ ಬ್ರಿಜ್‌ಭೂಷನ್ ಶರಣ್ ಸಿಂಗ್ ಹೇಳಿದರು.

ಕುಸ್ತಿಪಟುಗಳ ಪ್ರತಿಭಟನೆಗೆ ರೈತ ಸಂಘಟನೆಗಳು, ಬೇರೆ ಕ್ರೀಡಾಪಟುಗಳು ಬೆಂಬಲ ಸೂಚಿಸುತ್ತಿರುವುದರಿಂದ ಕೇಂದ್ರ ಸಕಾರ್ರರದ ಮೇಲೆ ಒತ್ತಡ ಹೆಚ್ಚಾಗಿದೆ. ಇತ್ತಿಚೆಗೆ ಕ್ರೀಡಾಸಚಿವ ಅನುರಾಗ ಠಾಕೂರ್ ಅವರು ಜೂ.15ರೊಳಗೆ ತನಿಖೆ ಮುಗಿಸುವ ಭರವಸೆ ನೀಡಿದ್ದಾರೆ. ಹಾಗಾಗಿ ಕ್ರಮ ತೆಗೆದುಕೊಂಡರೆ ಬ್ರಿಜ್‌ಭೂಷಣ್ ಸಿಂಗ್ ಅವರು, ಪಕ್ಷ ಬಿಡುವ ಯೋಚನೆಯಲ್ಲೂ ಇದ್ದಾರೆ ಎಂದು ಹೇಳಲಾಗುತ್ತಿದೆ.

ಬ್ರಿಜ್‌ಭೂಷಣ್ ಸಿಂಗ್ ಅವರು ಈ ಹಿಂದೆ ಬೇರೆ ಪಕ್ಷದಲ್ಲಿದ್ದರು. ಮಹಿಳಾ ಕುಸ್ತಿಪಟುಗಳ ಪ್ರತಿಭಟನೆ ಸಂಬಂಧ ಅವರ ವಿರುದ್ಧ ಕ್ರಮ ಕೈಗೊಂಡರೆ ಅವರು ಬಿಜೆಪಿಯನ್ನು ಬಿಟ್ಟು ಬೇರೆ ಪಕ್ಷಕ್ಕೆ ಹೋಗುವ ಸಾಧ್ಯತೆ ಇದೆ ಎಂದು ಬಿಜೆಪಿಯ ಕೆಲ ನಾಯಕರು ಹೇಳಿದ್ದಾರೆ. ಬ್ರಿಜ್‌ಭೂಷಣ್ ಅವರು ಕೆಲವು ದಿನಗಳ ಹಿಂದೆ ಇದಕ್ಕೆ ಪುಷ್ಟಿ ನೀಡುವಂತಹ ಒಂದು ಹೇಳಿಕೆ ನೀಡಿದ್ದರು.

”ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ನನ್ನ ಬೆಂಬಲಕ್ಕೆ ನಿಂತಿದ್ದಾರೆ. ಯಾಕೆಂದರೆ ಅವರಿಗೆ ‘ಸತ್ಯ’ ತಿಳಿದಿದೆ. ಅಖಿಲೇಶ್‌ನನ್ನು ನಾನು ಆತನ ಸಣ್ಣ ವಯಸ್ಸಿನಿಂದ ನೋಡುತ್ತಿದ್ದೇನೆ. ಉತ್ತರ ಪ್ರದೇಶದ ಶೇ 80ರಷ್ಟು ಕುಸ್ತಿಪಟುಗಳು ಸಮಾಜವಾದಿ ಸಿದ್ಧಾಂತವನ್ನು ಪ್ರತಿಪಾದಿಸುತ್ತಾರೆ” ಎಂದು ಅಚ್ಚರಿಯ ಹೇಳಿಕೆ ನೀಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...