Homeಮುಖಪುಟಕೈಸರ್‌ಗಂಜ್‌ನಲ್ಲಿ ಬೃಹತ್ ರ್ಯಾಲಿ: ಲೈಂಗಿಕ ಕಿರುಕುಳದ ಆರೋಪಿ, ಬಿಜೆಪಿ ಸಂಸದ ಬ್ರಿಜ್‌ಭೂಷಣ್ ಶಕ್ತಿ ಪ್ರದರ್ಶನ

ಕೈಸರ್‌ಗಂಜ್‌ನಲ್ಲಿ ಬೃಹತ್ ರ್ಯಾಲಿ: ಲೈಂಗಿಕ ಕಿರುಕುಳದ ಆರೋಪಿ, ಬಿಜೆಪಿ ಸಂಸದ ಬ್ರಿಜ್‌ಭೂಷಣ್ ಶಕ್ತಿ ಪ್ರದರ್ಶನ

- Advertisement -
- Advertisement -

ಲೈಂಗಿಕ ಕಿರುಕುಳದ ಆರೋಪಿ, ಕುಸ್ತಿ ಫೆಡರೇಷನ್‌ ಮುಖ್ಯಸ್ಥ ಹಾಗೂ ಬಿಜೆಪಿ ಸಂಸದ ಬ್ರಿಜ್‌ಭೂಷಣ್ ಶರಣ್ ಸಿಂಗ್ ಅವರು ತಮ್ಮ ಸ್ವಕ್ಷೇತ್ರ ಉತ್ತರ ಪ್ರದೇಶದ ಬಹರಾಯಿಚ್ ಜಿಲ್ಲೆಯ ಕೈಸರ್‌ಗಂಜ್‌ನಲ್ಲಿ ಬೃಹತ್ ರ್ಯಾಲಿಯನ್ನು ಭಾನುವಾರ ನಡೆಸಿದ್ದಾರೆ. ಅವರ ಬಂಧನಕ್ಕೆ ಒತ್ತಡ ಹೆಚ್ಚುತ್ತಿರುವದರಿಂದ ತಮ್ಮ ಶಕ್ತಿ ಪ್ರದರ್ಶನಕ್ಕಾಗಿಯೇ ಈ ರ್ಯಾಲಿ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.

ಖ್ಯಾತ ಕುಸ್ತಿಪಟುಗಳು ಬ್ರಿಜ್‌ಭೂಷಣ್ ವಿರುದ್ಧ ಪ್ರತಿಭಟನೆ ನಡೆಸುತ್ತಿರುವುದು ದೇಶಾದ್ಯಂತ ಸುದ್ದಿಯಾಗಿದೆ. ಆದರೂ ಕೇಂದ್ರ ಸರ್ಕಾರ ಮಾತ್ರ ತಮ್ಮ ಸಂಸದನ ವಿರುದ್ಧ ಕ್ರಮ ಕೈಗೊಂಡಿಲ್ಲ. ಆದರೆ ಇದೀಗ ಕೇಂದ್ರದ ಮೇಲೆ ಸಾಕಷ್ಟು ಒತ್ತಡ ಇರುವುದರಿಂದ ಅವರ ವಿರುದ್ಧ ಕ್ರಮ ಕೈಗೊಳ್ಳುವ ಎಲ್ಲ ಸಾಧ್ಯತೆಗಳಿವೆ ಹಾಗಾಗಿ ಅವರು ಇದೀಗ  ಈ ಭಾಗದಲ್ಲಿ ತಮ್ಮ ಶಕ್ತಿ ಕುಂದಿಲ್ಲ ಎನ್ನುವ ಸಂದೇಶವನ್ನು ಬಿಜೆಪಿಗೆ ನೀಡುವ ಉದ್ದೇಶವೂ ಈ ರ್ಯಾಲಿಯ ಹಿಂದಿದೆ ಎಂದು ರಾಜಕೀಯ ವಿಶ್ಲೇಷಕರು ಹಾಗೂ ಸಿಂಗ್ ಅವರ ಆಪ್ತರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಕಳೆದ ಒಂಬತ್ತು ವರ್ಷ ಪೂರೈಸಿದ್ದನ್ನು ಸಂಭ್ರಮಿಸಲು ಈ ರ್ಯಾಲಿಯನ್ನು ಆಯೋಜಿಸಿದ್ದಾಗಿ ಸಿಂಗ್ ಅವರು ಹೇಳಿದ್ದಾರೆ. ಆದರೆ ಇದು ಅವರ ಕ್ಷೇತ್ರದಲ್ಲಿ ತಮ್ಮ ಶಕ್ತಿ ಕುಂದಿಲ್ಲ ಎನ್ನುವ ಸಂದೇಶವನ್ನು ನೀಡಲು ಎನ್ನುವುದು ಹಲವರ ಅಭಿಪ್ರಾಯವಾಗಿದೆ.

ಇದನ್ನೂ ಓದಿ: ಲೈಂಗಿಕ ಕಿರುಕುಳಕ್ಕೆ ಸಂಬಂಧಿಸಿದ ವಿಡಿಯೋ, ಫೋಟೊ, ವಾಟ್ಸ್​ಆ್ಯಪ್ ಚಾಟ್ ಒದಗಿಸುವಂತೆ ಕುಸ್ತಿಪಟುಗಳಿಗೆ ಸಾಕ್ಷ್ಯ ಕೇಳಿದ ಪೊಲೀಸರು

ಈ ರ್ಯಾಲಿಯನ್ನ ಉದ್ದೇಶಿಸಿ ಮಾತನಾಡಿರುವ ಬ್ರಿಜ್‌ಭೂಷಣ್, ”ಕೆಲವು ಬಾರಿ ದುಃಖವನ್ನು, ಕೆಲವು ಬಾರಿ ನೋವನ್ನು ಅನುಭವಿಸಬೇಕಾಗುತ್ತದೆ, ಕೆಲವು ಸಲ ವಿಷವನ್ನೂ ಕುಡಿಯಬೇಕಾಗುತ್ತದೆ… ಆಗ ಮಾತ್ರವೇ ಈ ಜಗತ್ತಿನಲ್ಲಿ ಬದುಕಲು ಸಾಧ್ಯ” ಎಂಬ ಉರ್ದು ಕವಿತೆಯ ಸಾಲುಗಳ ಮೂಲಕ ಬ್ರಿಜ್‌ಭೂಷನ್ ಸಿಂಗ್ ಅವರು ತಮ್ಮ ಭಾಷಣವನ್ನು ಆರಂಭಿಸಿದರು.

”ದೇವರು ಇಚ್ಛಿಸಿದ್ದು ನಡೆದೇ ತೀರುತ್ತದೆ ಅಂದಮೇಲೆ ಅದರ ಕುರಿತು ವಾದ ಮಾಡಿ ಪ್ರಯೋಜನವೇನು?” ಎನ್ನುವ ‘ರಾಮಚರಿತ ಮಾನಸ’ದ ಸಾಲುಗಳನ್ನೂ ತಮ್ಮ ಭಾಷಣದಲ್ಲಿ ಉಲ್ಲೇಖಿಸಿದ್ದಾರೆ.

ಈ ರೀತಿ ಅರ್ಥವಿಲ್ಲದೇ ಮಾತನಾಡಿದ ಬ್ರಿಜ್‌ಭೂಷಣ್ ತಮ್ಮ ಭಾಷಣದಲ್ಲಿ ಒಮ್ಮೆಯೂ ಮಹಿಳಾ ಕುಸ್ತಿಪಟುಗಳ ಪ್ರತಿಭಟನೆಯ ಪ್ರಸ್ತಾಪವನ್ನು ಮಾಡಲಿಲ್ಲ. ಹಾಗೆಯೇ ತಮ್ಮ ಮೇಲಿನ ಆರೋಪಕ್ಕೆ ಸಮಜಾಯಿಷಿಯನ್ನೂ ನೀಡಲಿಲ್ಲ. ಬದಲಿಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳುತ್ತಾ, ಕಾಂಗ್ರೆಸ್ ವಿರುದ್ಧ ಹರಿಹಾಯ್ದರು. ಈ ಬೃಹತ್ ರ್ಯಾಲಿಯಲ್ಲಿ ಮಧ್ಯಪ್ರದೇಶದ ಸಚಿವ, ಉತ್ತರ ಪ್ರದೇಶದ ಐವರು ಶಾಸಕರ ಜೊತೆಗೆ ಬಿಜೆಪಿ ಕಾರ್ಯಕರ್ತರು ಭಾರಿ ಸಂಖ್ಯೆಯಲ್ಲಿ ಭಾಗಿಯಾಗಿದ್ದರು.

ಇದೇ ವೇಳೆ, ತಾನು ಕೈಸರ್‌ಗಂಜ್‌ ಲೋಕಸಭಾ ಕ್ಷೇತ್ರದಿಂದಲೇ ಮತ್ತೊಮ್ಮೆ ಲೋಕಸಭೆಗೆ ಸ್ಪರ್ಧಿಸುತ್ತೇನೆ ಎಂದು ಲೈಂಗಿಕ ಕಿರುಕುಳದ ಆರೋಪಿ, ಕುಸ್ತಿ ಫೆಡರೇಷನ್ ಅಧ್ಯಕ್ಷ ಬ್ರಿಜ್‌ಭೂಷನ್ ಶರಣ್ ಸಿಂಗ್ ಹೇಳಿದರು.

ಕುಸ್ತಿಪಟುಗಳ ಪ್ರತಿಭಟನೆಗೆ ರೈತ ಸಂಘಟನೆಗಳು, ಬೇರೆ ಕ್ರೀಡಾಪಟುಗಳು ಬೆಂಬಲ ಸೂಚಿಸುತ್ತಿರುವುದರಿಂದ ಕೇಂದ್ರ ಸಕಾರ್ರರದ ಮೇಲೆ ಒತ್ತಡ ಹೆಚ್ಚಾಗಿದೆ. ಇತ್ತಿಚೆಗೆ ಕ್ರೀಡಾಸಚಿವ ಅನುರಾಗ ಠಾಕೂರ್ ಅವರು ಜೂ.15ರೊಳಗೆ ತನಿಖೆ ಮುಗಿಸುವ ಭರವಸೆ ನೀಡಿದ್ದಾರೆ. ಹಾಗಾಗಿ ಕ್ರಮ ತೆಗೆದುಕೊಂಡರೆ ಬ್ರಿಜ್‌ಭೂಷಣ್ ಸಿಂಗ್ ಅವರು, ಪಕ್ಷ ಬಿಡುವ ಯೋಚನೆಯಲ್ಲೂ ಇದ್ದಾರೆ ಎಂದು ಹೇಳಲಾಗುತ್ತಿದೆ.

ಬ್ರಿಜ್‌ಭೂಷಣ್ ಸಿಂಗ್ ಅವರು ಈ ಹಿಂದೆ ಬೇರೆ ಪಕ್ಷದಲ್ಲಿದ್ದರು. ಮಹಿಳಾ ಕುಸ್ತಿಪಟುಗಳ ಪ್ರತಿಭಟನೆ ಸಂಬಂಧ ಅವರ ವಿರುದ್ಧ ಕ್ರಮ ಕೈಗೊಂಡರೆ ಅವರು ಬಿಜೆಪಿಯನ್ನು ಬಿಟ್ಟು ಬೇರೆ ಪಕ್ಷಕ್ಕೆ ಹೋಗುವ ಸಾಧ್ಯತೆ ಇದೆ ಎಂದು ಬಿಜೆಪಿಯ ಕೆಲ ನಾಯಕರು ಹೇಳಿದ್ದಾರೆ. ಬ್ರಿಜ್‌ಭೂಷಣ್ ಅವರು ಕೆಲವು ದಿನಗಳ ಹಿಂದೆ ಇದಕ್ಕೆ ಪುಷ್ಟಿ ನೀಡುವಂತಹ ಒಂದು ಹೇಳಿಕೆ ನೀಡಿದ್ದರು.

”ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ನನ್ನ ಬೆಂಬಲಕ್ಕೆ ನಿಂತಿದ್ದಾರೆ. ಯಾಕೆಂದರೆ ಅವರಿಗೆ ‘ಸತ್ಯ’ ತಿಳಿದಿದೆ. ಅಖಿಲೇಶ್‌ನನ್ನು ನಾನು ಆತನ ಸಣ್ಣ ವಯಸ್ಸಿನಿಂದ ನೋಡುತ್ತಿದ್ದೇನೆ. ಉತ್ತರ ಪ್ರದೇಶದ ಶೇ 80ರಷ್ಟು ಕುಸ್ತಿಪಟುಗಳು ಸಮಾಜವಾದಿ ಸಿದ್ಧಾಂತವನ್ನು ಪ್ರತಿಪಾದಿಸುತ್ತಾರೆ” ಎಂದು ಅಚ್ಚರಿಯ ಹೇಳಿಕೆ ನೀಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...