Homeಮುಖಪುಟಕೈಸರ್‌ಗಂಜ್‌ನಲ್ಲಿ ಬೃಹತ್ ರ್ಯಾಲಿ: ಲೈಂಗಿಕ ಕಿರುಕುಳದ ಆರೋಪಿ, ಬಿಜೆಪಿ ಸಂಸದ ಬ್ರಿಜ್‌ಭೂಷಣ್ ಶಕ್ತಿ ಪ್ರದರ್ಶನ

ಕೈಸರ್‌ಗಂಜ್‌ನಲ್ಲಿ ಬೃಹತ್ ರ್ಯಾಲಿ: ಲೈಂಗಿಕ ಕಿರುಕುಳದ ಆರೋಪಿ, ಬಿಜೆಪಿ ಸಂಸದ ಬ್ರಿಜ್‌ಭೂಷಣ್ ಶಕ್ತಿ ಪ್ರದರ್ಶನ

- Advertisement -
- Advertisement -

ಲೈಂಗಿಕ ಕಿರುಕುಳದ ಆರೋಪಿ, ಕುಸ್ತಿ ಫೆಡರೇಷನ್‌ ಮುಖ್ಯಸ್ಥ ಹಾಗೂ ಬಿಜೆಪಿ ಸಂಸದ ಬ್ರಿಜ್‌ಭೂಷಣ್ ಶರಣ್ ಸಿಂಗ್ ಅವರು ತಮ್ಮ ಸ್ವಕ್ಷೇತ್ರ ಉತ್ತರ ಪ್ರದೇಶದ ಬಹರಾಯಿಚ್ ಜಿಲ್ಲೆಯ ಕೈಸರ್‌ಗಂಜ್‌ನಲ್ಲಿ ಬೃಹತ್ ರ್ಯಾಲಿಯನ್ನು ಭಾನುವಾರ ನಡೆಸಿದ್ದಾರೆ. ಅವರ ಬಂಧನಕ್ಕೆ ಒತ್ತಡ ಹೆಚ್ಚುತ್ತಿರುವದರಿಂದ ತಮ್ಮ ಶಕ್ತಿ ಪ್ರದರ್ಶನಕ್ಕಾಗಿಯೇ ಈ ರ್ಯಾಲಿ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.

ಖ್ಯಾತ ಕುಸ್ತಿಪಟುಗಳು ಬ್ರಿಜ್‌ಭೂಷಣ್ ವಿರುದ್ಧ ಪ್ರತಿಭಟನೆ ನಡೆಸುತ್ತಿರುವುದು ದೇಶಾದ್ಯಂತ ಸುದ್ದಿಯಾಗಿದೆ. ಆದರೂ ಕೇಂದ್ರ ಸರ್ಕಾರ ಮಾತ್ರ ತಮ್ಮ ಸಂಸದನ ವಿರುದ್ಧ ಕ್ರಮ ಕೈಗೊಂಡಿಲ್ಲ. ಆದರೆ ಇದೀಗ ಕೇಂದ್ರದ ಮೇಲೆ ಸಾಕಷ್ಟು ಒತ್ತಡ ಇರುವುದರಿಂದ ಅವರ ವಿರುದ್ಧ ಕ್ರಮ ಕೈಗೊಳ್ಳುವ ಎಲ್ಲ ಸಾಧ್ಯತೆಗಳಿವೆ ಹಾಗಾಗಿ ಅವರು ಇದೀಗ  ಈ ಭಾಗದಲ್ಲಿ ತಮ್ಮ ಶಕ್ತಿ ಕುಂದಿಲ್ಲ ಎನ್ನುವ ಸಂದೇಶವನ್ನು ಬಿಜೆಪಿಗೆ ನೀಡುವ ಉದ್ದೇಶವೂ ಈ ರ್ಯಾಲಿಯ ಹಿಂದಿದೆ ಎಂದು ರಾಜಕೀಯ ವಿಶ್ಲೇಷಕರು ಹಾಗೂ ಸಿಂಗ್ ಅವರ ಆಪ್ತರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಕಳೆದ ಒಂಬತ್ತು ವರ್ಷ ಪೂರೈಸಿದ್ದನ್ನು ಸಂಭ್ರಮಿಸಲು ಈ ರ್ಯಾಲಿಯನ್ನು ಆಯೋಜಿಸಿದ್ದಾಗಿ ಸಿಂಗ್ ಅವರು ಹೇಳಿದ್ದಾರೆ. ಆದರೆ ಇದು ಅವರ ಕ್ಷೇತ್ರದಲ್ಲಿ ತಮ್ಮ ಶಕ್ತಿ ಕುಂದಿಲ್ಲ ಎನ್ನುವ ಸಂದೇಶವನ್ನು ನೀಡಲು ಎನ್ನುವುದು ಹಲವರ ಅಭಿಪ್ರಾಯವಾಗಿದೆ.

ಇದನ್ನೂ ಓದಿ: ಲೈಂಗಿಕ ಕಿರುಕುಳಕ್ಕೆ ಸಂಬಂಧಿಸಿದ ವಿಡಿಯೋ, ಫೋಟೊ, ವಾಟ್ಸ್​ಆ್ಯಪ್ ಚಾಟ್ ಒದಗಿಸುವಂತೆ ಕುಸ್ತಿಪಟುಗಳಿಗೆ ಸಾಕ್ಷ್ಯ ಕೇಳಿದ ಪೊಲೀಸರು

ಈ ರ್ಯಾಲಿಯನ್ನ ಉದ್ದೇಶಿಸಿ ಮಾತನಾಡಿರುವ ಬ್ರಿಜ್‌ಭೂಷಣ್, ”ಕೆಲವು ಬಾರಿ ದುಃಖವನ್ನು, ಕೆಲವು ಬಾರಿ ನೋವನ್ನು ಅನುಭವಿಸಬೇಕಾಗುತ್ತದೆ, ಕೆಲವು ಸಲ ವಿಷವನ್ನೂ ಕುಡಿಯಬೇಕಾಗುತ್ತದೆ… ಆಗ ಮಾತ್ರವೇ ಈ ಜಗತ್ತಿನಲ್ಲಿ ಬದುಕಲು ಸಾಧ್ಯ” ಎಂಬ ಉರ್ದು ಕವಿತೆಯ ಸಾಲುಗಳ ಮೂಲಕ ಬ್ರಿಜ್‌ಭೂಷನ್ ಸಿಂಗ್ ಅವರು ತಮ್ಮ ಭಾಷಣವನ್ನು ಆರಂಭಿಸಿದರು.

”ದೇವರು ಇಚ್ಛಿಸಿದ್ದು ನಡೆದೇ ತೀರುತ್ತದೆ ಅಂದಮೇಲೆ ಅದರ ಕುರಿತು ವಾದ ಮಾಡಿ ಪ್ರಯೋಜನವೇನು?” ಎನ್ನುವ ‘ರಾಮಚರಿತ ಮಾನಸ’ದ ಸಾಲುಗಳನ್ನೂ ತಮ್ಮ ಭಾಷಣದಲ್ಲಿ ಉಲ್ಲೇಖಿಸಿದ್ದಾರೆ.

ಈ ರೀತಿ ಅರ್ಥವಿಲ್ಲದೇ ಮಾತನಾಡಿದ ಬ್ರಿಜ್‌ಭೂಷಣ್ ತಮ್ಮ ಭಾಷಣದಲ್ಲಿ ಒಮ್ಮೆಯೂ ಮಹಿಳಾ ಕುಸ್ತಿಪಟುಗಳ ಪ್ರತಿಭಟನೆಯ ಪ್ರಸ್ತಾಪವನ್ನು ಮಾಡಲಿಲ್ಲ. ಹಾಗೆಯೇ ತಮ್ಮ ಮೇಲಿನ ಆರೋಪಕ್ಕೆ ಸಮಜಾಯಿಷಿಯನ್ನೂ ನೀಡಲಿಲ್ಲ. ಬದಲಿಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳುತ್ತಾ, ಕಾಂಗ್ರೆಸ್ ವಿರುದ್ಧ ಹರಿಹಾಯ್ದರು. ಈ ಬೃಹತ್ ರ್ಯಾಲಿಯಲ್ಲಿ ಮಧ್ಯಪ್ರದೇಶದ ಸಚಿವ, ಉತ್ತರ ಪ್ರದೇಶದ ಐವರು ಶಾಸಕರ ಜೊತೆಗೆ ಬಿಜೆಪಿ ಕಾರ್ಯಕರ್ತರು ಭಾರಿ ಸಂಖ್ಯೆಯಲ್ಲಿ ಭಾಗಿಯಾಗಿದ್ದರು.

ಇದೇ ವೇಳೆ, ತಾನು ಕೈಸರ್‌ಗಂಜ್‌ ಲೋಕಸಭಾ ಕ್ಷೇತ್ರದಿಂದಲೇ ಮತ್ತೊಮ್ಮೆ ಲೋಕಸಭೆಗೆ ಸ್ಪರ್ಧಿಸುತ್ತೇನೆ ಎಂದು ಲೈಂಗಿಕ ಕಿರುಕುಳದ ಆರೋಪಿ, ಕುಸ್ತಿ ಫೆಡರೇಷನ್ ಅಧ್ಯಕ್ಷ ಬ್ರಿಜ್‌ಭೂಷನ್ ಶರಣ್ ಸಿಂಗ್ ಹೇಳಿದರು.

ಕುಸ್ತಿಪಟುಗಳ ಪ್ರತಿಭಟನೆಗೆ ರೈತ ಸಂಘಟನೆಗಳು, ಬೇರೆ ಕ್ರೀಡಾಪಟುಗಳು ಬೆಂಬಲ ಸೂಚಿಸುತ್ತಿರುವುದರಿಂದ ಕೇಂದ್ರ ಸಕಾರ್ರರದ ಮೇಲೆ ಒತ್ತಡ ಹೆಚ್ಚಾಗಿದೆ. ಇತ್ತಿಚೆಗೆ ಕ್ರೀಡಾಸಚಿವ ಅನುರಾಗ ಠಾಕೂರ್ ಅವರು ಜೂ.15ರೊಳಗೆ ತನಿಖೆ ಮುಗಿಸುವ ಭರವಸೆ ನೀಡಿದ್ದಾರೆ. ಹಾಗಾಗಿ ಕ್ರಮ ತೆಗೆದುಕೊಂಡರೆ ಬ್ರಿಜ್‌ಭೂಷಣ್ ಸಿಂಗ್ ಅವರು, ಪಕ್ಷ ಬಿಡುವ ಯೋಚನೆಯಲ್ಲೂ ಇದ್ದಾರೆ ಎಂದು ಹೇಳಲಾಗುತ್ತಿದೆ.

ಬ್ರಿಜ್‌ಭೂಷಣ್ ಸಿಂಗ್ ಅವರು ಈ ಹಿಂದೆ ಬೇರೆ ಪಕ್ಷದಲ್ಲಿದ್ದರು. ಮಹಿಳಾ ಕುಸ್ತಿಪಟುಗಳ ಪ್ರತಿಭಟನೆ ಸಂಬಂಧ ಅವರ ವಿರುದ್ಧ ಕ್ರಮ ಕೈಗೊಂಡರೆ ಅವರು ಬಿಜೆಪಿಯನ್ನು ಬಿಟ್ಟು ಬೇರೆ ಪಕ್ಷಕ್ಕೆ ಹೋಗುವ ಸಾಧ್ಯತೆ ಇದೆ ಎಂದು ಬಿಜೆಪಿಯ ಕೆಲ ನಾಯಕರು ಹೇಳಿದ್ದಾರೆ. ಬ್ರಿಜ್‌ಭೂಷಣ್ ಅವರು ಕೆಲವು ದಿನಗಳ ಹಿಂದೆ ಇದಕ್ಕೆ ಪುಷ್ಟಿ ನೀಡುವಂತಹ ಒಂದು ಹೇಳಿಕೆ ನೀಡಿದ್ದರು.

”ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ನನ್ನ ಬೆಂಬಲಕ್ಕೆ ನಿಂತಿದ್ದಾರೆ. ಯಾಕೆಂದರೆ ಅವರಿಗೆ ‘ಸತ್ಯ’ ತಿಳಿದಿದೆ. ಅಖಿಲೇಶ್‌ನನ್ನು ನಾನು ಆತನ ಸಣ್ಣ ವಯಸ್ಸಿನಿಂದ ನೋಡುತ್ತಿದ್ದೇನೆ. ಉತ್ತರ ಪ್ರದೇಶದ ಶೇ 80ರಷ್ಟು ಕುಸ್ತಿಪಟುಗಳು ಸಮಾಜವಾದಿ ಸಿದ್ಧಾಂತವನ್ನು ಪ್ರತಿಪಾದಿಸುತ್ತಾರೆ” ಎಂದು ಅಚ್ಚರಿಯ ಹೇಳಿಕೆ ನೀಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...