Homeಮುಖಪುಟಬಿಜೆಪಿಯೇತರ ಸರ್ಕಾರ ರಚಿಸಲು ನಾಳೆ ವಿರೋಧ ಪಕ್ಷಗಳ ಸಭೆ: ವಿವಿಧ ಪಕ್ಷಗಳ ನಾಯಕರು ಭಾಗಿ

ಬಿಜೆಪಿಯೇತರ ಸರ್ಕಾರ ರಚಿಸಲು ನಾಳೆ ವಿರೋಧ ಪಕ್ಷಗಳ ಸಭೆ: ವಿವಿಧ ಪಕ್ಷಗಳ ನಾಯಕರು ಭಾಗಿ

- Advertisement -
- Advertisement -

ಬಿಹಾರದ ಮುಖ್ಯಮಂತ್ರಿ ನಿತೀಶ್‌ಕುಮಾರ್ ಮತ್ತು ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್‌ ರವರು 2024ರಲ್ಲಿ ಬಿಜೆಪಿ ಮಣಿಸಲು ವಿರೋಧ ಪಕ್ಷಗಳ ಬೃಹತ್ ಸಭೆ ಆಯೋಜಿಸಿದ್ದು ಹಲವು ಪ್ರತಿಪಕ್ಷಗಳ ಮುಖಂಡರನ್ನು ಪಾಟ್ನಾದ ಸಭೆಗೆ ಆಹ್ವಾನಿಸಿದ್ದಾರೆ.

ಎನ್‌ಡಿಎ ಮೈತ್ರಿಕೂಟದ ಭಾಗವಾಗಿದ್ದ ನಿತೀಶ್ ಕುಮಾರ್ ಕಳೆದ ವರ್ಷ ಮೈತ್ರಿ ಮುಗಿದುಕೊಂಡು ಬಿಹಾರದಲ್ಲಿ ಮಹಾಘಟಬಂಧನ್ ಮೈತ್ರಿ ಸೇರಿ ಸಿಎಂ ಆಗಿದ್ದಾರೆ. ಅಲ್ಲದೇ 2024ರ ಚುನಾವಣೆಯಲ್ಲಿ ಬಿಜೆಪಿ ಸೋಲಿಸಲು ಪ್ರತಿ ಪಕ್ಷಗಳನ್ನು ಒಗ್ಗೂಡಿಸಲು ಯತ್ನಿಸುತ್ತಿದ್ದಾರೆ. ಆ ಭಾಗವಾಗಿ ಜೂನ್ 23 ರಂದು ಪಾಟ್ನಾದಲ್ಲಿ ಪ್ರತಿ ಪಕ್ಷಗಳ ಮುಖಂಡರ ಮಹತ್ವದ ಸಭೆ ಕರೆದಿದ್ದಾರೆ.

”ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿಯನ್ನು ಮಣಿಸುವ ತಂತ್ರ ರೂಪಿಸಲಷ್ಟೇ ಸಭೆಯಲ್ಲಿ ಆದ್ಯತೆ ನೀಡಲಾಗುತ್ತಿದೆ. ಸೀಟುಗಳ ಹಂಚಿಕೆಯಾಗಲೀ ಅಥವಾ ನಾಯಕತ್ವ ವಿಷಯವನ್ನು ಸಭೆಯಲ್ಲಿ ಚರ್ಚಿಸದಿರಲು ನಿರ್ಧರಿಸಲಾಗಿದೆ” ಎಂದು ಮೂಲಗಳು ಹೇಳಿವೆ.

”ಮಣಿಪುರ ಗಲಭೆ ಹಾಗೂ ಇದನ್ನು ನಿರ್ವಹಿಸುವಲ್ಲಿ ಕೇಂದ್ರ ಸರ್ಕಾರದ ವೈಫಲ್ಯ ಕುರಿತು ನಾಯಕರು ಚರ್ಚೆ ನಡೆಸಲಿದ್ದಾರೆ. ಇಂತಹ ಇನ್ನೂ ಅನೇಕ ವಿಷಯಗಳನ್ನು ಮುಂದಿಟ್ಟುಕೊಂಡು ಬಿಜೆಪಿಯನ್ನು ಕಟ್ಟಿಹಾಕುವ ಬಗೆ ಕುರಿತು ಸಭೆಯಲ್ಲಿ ಚರ್ಚೆಗಳು ನಡೆಯಲಿವೆ” ಎಂದು ಹೆಸರು ಬಹಿರಂಗಪಡಿಸಲಿಚ್ಛಿಸದ ವ್ಯಕ್ತಿ ತಿಳಿಸಿದ್ದಾರೆ.

ಪಾಟ್ನಾ ಸಭೆ ಕುರಿತು ಬಿಜೆಪಿ ಪ್ರತಿಕ್ರಿಯೆ: ”ತಮ್ಮ ಸ್ಥಾನಮಾನದ ಕುರಿತೇ ವಿರೋಧಪಕ್ಷಗಳಲ್ಲಿ ಪರಸ್ಪರ ಗೊಂದಲಗಳಿವೆ. ಈ ಕೂಟದ ಪ್ರಧಾನಮಂತ್ರಿ ಅಭ್ಯರ್ಥಿ ಯಾರು ಎಂಬುದೇ ಇನ್ನೂ ತೀರ್ಮಾನವಾಗಿಲ್ಲ” ಎಂದು ವ್ಯಂಗ್ಯವಾಡಿತ್ತು.

ಬಿಜೆಪಿಗೆ ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್ ತಿರುಗೇಟು: ”ವಿರೋಧಪಕ್ಷಗಳಿಗೆ ನಾಯಕತ್ವದ ಮುಖ ಅಗತ್ಯವಿಲ್ಲ. ಇದು ಒಗ್ಗಟ್ಟಿನ ಹೋರಾಟ. 2024ರ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಿದ ನಂತರ ಎಲ್ಲರೂ ಚರ್ಚಿಸಿ ನಿರ್ಧರಿಸಲಾಗುವುದು” ಎಂದಿದ್ದಾರೆ.

ಇದನ್ನೂ ಓದಿ: ನೂತನ ಶಾಸಕರಿಗೆ ಪ್ರೇರಣಾ ಉಪನ್ಯಾಸ ನೀಡಲು ಗುರುರಾಜ ಕರ್ಜಗಿ, ರವಿಶಂಕರ್ ಗುರೂಜಿಗೆ ಆಹ್ವಾನ: ತೀವ್ರ ವಿರೋಧ

ಈ ಬಗ್ಗೆ ಸಿಪಿಐ ಮುಖಂಡ ಡಿ. ರಾಜಾ ಮಾತನಾಡಿ, ”ಜಾತ್ಯತೀತ ಪಕ್ಷಗಳು ಒಂದಾಗಿ ಬಿಜೆಪಿಯನ್ನು ಮಣಿಸಬೇಕಿದೆ. ಸ್ಥಾನಗಳನ್ನು ಗೆಲ್ಲುವುದಷ್ಟೇ ಈ ಹೋರಾಟದ ಮುಖ್ಯ ಉದ್ದೇಶವಲ್ಲ. ಪ್ರಜಾಪ್ರಭುತ್ವ, ಸಂವಿಧಾನ, ದೇಶದ ಜಾತ್ಯತೀತ ಸತ್ವ ಮತ್ತು ಸ್ವತಂತ್ರ ಸಂಸತ್ತಿನ ಸಾರ್ವಭೌಮತ್ವವನ್ನು ಕಾಪಾಡುವುದೇ ಮುಖ್ಯ ಉದ್ದೇಶವಾಗಿದೆ” ಎಂದಿದ್ದಾರೆ.

”ಚುನಾವಣೆ ಘೋಷಣೆಯಾದ ನಂತರ ಸೀಟುಗಳ ಹಂಚಿಕೆ ಕುರಿತು ಆಯಾ ರಾಜ್ಯ ಮಟ್ಟದಲ್ಲಿ ಚರ್ಚೆಗಳು ನಡೆಯಲಿವೆ. ಇದನ್ನು ಅಲ್ಲಿನ ಪಕ್ಷಗಳ ಹಿಡಿತವನ್ನು ಪರಿಗಣಿಸಿ ನಿರ್ಧರಿಸಲಾಗುವುದು. ಈ ವಿಷಯದಲ್ಲಿ ಜಾತ್ಯತೀತ ನಿಲುವುಳ್ಳ ಪಕ್ಷಗಳು ಇನ್ನಷ್ಟು ಉದಾರವಾಗಿ ಹಾಗೂ ಪರಸ್ಪರ ಮಾತುಕತೆ ಮೂಲಕ ಹಂಚಿಕೆ ಮಾಡಿಕೊಳ್ಳಬೇಕಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

ನಾಳಿನ ಸಭೆಯಲ್ಲಿ ಕಾಂಗ್ರೆಸ್ ಮುಖಂಡರಾದ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ತೃಣಮೂಲ ಕಾಂಗ್ರೆಸ್ ಪಕ್ಷದಿಂದ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಸಮಾಜವಾದಿ ಪಕ್ಷದ ಮುಖ್ಯಸ್ಥ ಮತ್ತು ಉತ್ತರ ಪ್ರದೇಶದ ಮಾಜಿ ಸಿಎಂ ಅಖಿಲೇಶ್ ಯಾದವ್, ಮಹಾರಾಷ್ಟ್ರದ ಮಾಜಿ ಸಿಎಂ ಉದ್ಧವ್ ಠಾಕ್ರೆ, ಎನ್‌ಸಿಪಿ ಮುಖಂಡ ಶರದ್ ಪವಾರ್ ಭಾಗವಹಿಸಲಿದ್ದಾರೆ.

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್, ಸಿಪಿಐ ಪಕ್ಷ ಮುಖಂಡ ಡಿ.ರಾಜ, ಸಿಪಿಎ(ಎಂ) ಮುಖಂಡ ಸೀತರಾಂ ಯೆಚೂರಿ, ಸಿಪಿಐ(ಎಂಎಲ್‌)ಲಿಬರೇಷನ್ ಪಕ್ಷದ ದೀಪಂಕರ್ ಭಟ್ಟಾಚಾರ್ಯ ಸೇರಿದಂತೆ ಹಲವರು ಭಾಗವವಹಿಸುವ ನಿರೀಕ್ಷೆ ಇದೆ. ಆರ್‌ಎಲ್‌ಡಿ ಮುಖ್ಯಸ್ಥ ಜಯಂತ್ ಚೌಧರಿ ಪೂರ್ವನಿರ್ಧರಿತ ಕಾರ್ಯಕ್ರಮ ಇರುವುದರಿಂದ ಭಾಗವಹಿಸಲು ಸಾಧ್ಯವಾಗುತ್ತಿಲ್ಲ. ಆದರೆ ವಿರೋಧ ಪಕ್ಷಗಳ ಜೊತೆ ತಮ್ಮ ಪಕ್ಷ ಇರಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಈ ಸಭೆಯಲ್ಲಿ ಸೀಟು ಹಂಚಿಕೆ ಕುರಿತು ಯಾವುದೇ ಚರ್ಚೆಗಳು ನಡೆಯುವುದಿಲ್ಲ. ಬದಲಿಗೆ ಬಿಜೆಪಿ ಸೋಲಿಸಲು ಇರುವ ಸಾಧ್ಯತೆಗಳ ಬಗ್ಗೆ ಚರ್ಚಿಸಲಾಗುತ್ತದೆ ಎನ್ನಲಾಗಿದೆ.

ಸಭೆಗೆ ಬಿಎಸ್‌ಪಿ, ಬಿಆರ್‌ಎಸ್‌, ಬಿಜೆಪಿ, ವೈಎಸ್‌ಆರ್ ಕಾಂಗ್ರೆಸ್, ಜೆಡಿಎಸ್ ಸೇರಿದಂತೆ ಹಲವು ವಿಪಕ್ಷಗಳು ಭಾಗವಹಿಸುತ್ತಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...