Homeಮುಖಪುಟಬಿಜೆಪಿಯೇತರ ಸರ್ಕಾರ ರಚಿಸಲು ನಾಳೆ ವಿರೋಧ ಪಕ್ಷಗಳ ಸಭೆ: ವಿವಿಧ ಪಕ್ಷಗಳ ನಾಯಕರು ಭಾಗಿ

ಬಿಜೆಪಿಯೇತರ ಸರ್ಕಾರ ರಚಿಸಲು ನಾಳೆ ವಿರೋಧ ಪಕ್ಷಗಳ ಸಭೆ: ವಿವಿಧ ಪಕ್ಷಗಳ ನಾಯಕರು ಭಾಗಿ

- Advertisement -
- Advertisement -

ಬಿಹಾರದ ಮುಖ್ಯಮಂತ್ರಿ ನಿತೀಶ್‌ಕುಮಾರ್ ಮತ್ತು ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್‌ ರವರು 2024ರಲ್ಲಿ ಬಿಜೆಪಿ ಮಣಿಸಲು ವಿರೋಧ ಪಕ್ಷಗಳ ಬೃಹತ್ ಸಭೆ ಆಯೋಜಿಸಿದ್ದು ಹಲವು ಪ್ರತಿಪಕ್ಷಗಳ ಮುಖಂಡರನ್ನು ಪಾಟ್ನಾದ ಸಭೆಗೆ ಆಹ್ವಾನಿಸಿದ್ದಾರೆ.

ಎನ್‌ಡಿಎ ಮೈತ್ರಿಕೂಟದ ಭಾಗವಾಗಿದ್ದ ನಿತೀಶ್ ಕುಮಾರ್ ಕಳೆದ ವರ್ಷ ಮೈತ್ರಿ ಮುಗಿದುಕೊಂಡು ಬಿಹಾರದಲ್ಲಿ ಮಹಾಘಟಬಂಧನ್ ಮೈತ್ರಿ ಸೇರಿ ಸಿಎಂ ಆಗಿದ್ದಾರೆ. ಅಲ್ಲದೇ 2024ರ ಚುನಾವಣೆಯಲ್ಲಿ ಬಿಜೆಪಿ ಸೋಲಿಸಲು ಪ್ರತಿ ಪಕ್ಷಗಳನ್ನು ಒಗ್ಗೂಡಿಸಲು ಯತ್ನಿಸುತ್ತಿದ್ದಾರೆ. ಆ ಭಾಗವಾಗಿ ಜೂನ್ 23 ರಂದು ಪಾಟ್ನಾದಲ್ಲಿ ಪ್ರತಿ ಪಕ್ಷಗಳ ಮುಖಂಡರ ಮಹತ್ವದ ಸಭೆ ಕರೆದಿದ್ದಾರೆ.

”ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿಯನ್ನು ಮಣಿಸುವ ತಂತ್ರ ರೂಪಿಸಲಷ್ಟೇ ಸಭೆಯಲ್ಲಿ ಆದ್ಯತೆ ನೀಡಲಾಗುತ್ತಿದೆ. ಸೀಟುಗಳ ಹಂಚಿಕೆಯಾಗಲೀ ಅಥವಾ ನಾಯಕತ್ವ ವಿಷಯವನ್ನು ಸಭೆಯಲ್ಲಿ ಚರ್ಚಿಸದಿರಲು ನಿರ್ಧರಿಸಲಾಗಿದೆ” ಎಂದು ಮೂಲಗಳು ಹೇಳಿವೆ.

”ಮಣಿಪುರ ಗಲಭೆ ಹಾಗೂ ಇದನ್ನು ನಿರ್ವಹಿಸುವಲ್ಲಿ ಕೇಂದ್ರ ಸರ್ಕಾರದ ವೈಫಲ್ಯ ಕುರಿತು ನಾಯಕರು ಚರ್ಚೆ ನಡೆಸಲಿದ್ದಾರೆ. ಇಂತಹ ಇನ್ನೂ ಅನೇಕ ವಿಷಯಗಳನ್ನು ಮುಂದಿಟ್ಟುಕೊಂಡು ಬಿಜೆಪಿಯನ್ನು ಕಟ್ಟಿಹಾಕುವ ಬಗೆ ಕುರಿತು ಸಭೆಯಲ್ಲಿ ಚರ್ಚೆಗಳು ನಡೆಯಲಿವೆ” ಎಂದು ಹೆಸರು ಬಹಿರಂಗಪಡಿಸಲಿಚ್ಛಿಸದ ವ್ಯಕ್ತಿ ತಿಳಿಸಿದ್ದಾರೆ.

ಪಾಟ್ನಾ ಸಭೆ ಕುರಿತು ಬಿಜೆಪಿ ಪ್ರತಿಕ್ರಿಯೆ: ”ತಮ್ಮ ಸ್ಥಾನಮಾನದ ಕುರಿತೇ ವಿರೋಧಪಕ್ಷಗಳಲ್ಲಿ ಪರಸ್ಪರ ಗೊಂದಲಗಳಿವೆ. ಈ ಕೂಟದ ಪ್ರಧಾನಮಂತ್ರಿ ಅಭ್ಯರ್ಥಿ ಯಾರು ಎಂಬುದೇ ಇನ್ನೂ ತೀರ್ಮಾನವಾಗಿಲ್ಲ” ಎಂದು ವ್ಯಂಗ್ಯವಾಡಿತ್ತು.

ಬಿಜೆಪಿಗೆ ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್ ತಿರುಗೇಟು: ”ವಿರೋಧಪಕ್ಷಗಳಿಗೆ ನಾಯಕತ್ವದ ಮುಖ ಅಗತ್ಯವಿಲ್ಲ. ಇದು ಒಗ್ಗಟ್ಟಿನ ಹೋರಾಟ. 2024ರ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಿದ ನಂತರ ಎಲ್ಲರೂ ಚರ್ಚಿಸಿ ನಿರ್ಧರಿಸಲಾಗುವುದು” ಎಂದಿದ್ದಾರೆ.

ಇದನ್ನೂ ಓದಿ: ನೂತನ ಶಾಸಕರಿಗೆ ಪ್ರೇರಣಾ ಉಪನ್ಯಾಸ ನೀಡಲು ಗುರುರಾಜ ಕರ್ಜಗಿ, ರವಿಶಂಕರ್ ಗುರೂಜಿಗೆ ಆಹ್ವಾನ: ತೀವ್ರ ವಿರೋಧ

ಈ ಬಗ್ಗೆ ಸಿಪಿಐ ಮುಖಂಡ ಡಿ. ರಾಜಾ ಮಾತನಾಡಿ, ”ಜಾತ್ಯತೀತ ಪಕ್ಷಗಳು ಒಂದಾಗಿ ಬಿಜೆಪಿಯನ್ನು ಮಣಿಸಬೇಕಿದೆ. ಸ್ಥಾನಗಳನ್ನು ಗೆಲ್ಲುವುದಷ್ಟೇ ಈ ಹೋರಾಟದ ಮುಖ್ಯ ಉದ್ದೇಶವಲ್ಲ. ಪ್ರಜಾಪ್ರಭುತ್ವ, ಸಂವಿಧಾನ, ದೇಶದ ಜಾತ್ಯತೀತ ಸತ್ವ ಮತ್ತು ಸ್ವತಂತ್ರ ಸಂಸತ್ತಿನ ಸಾರ್ವಭೌಮತ್ವವನ್ನು ಕಾಪಾಡುವುದೇ ಮುಖ್ಯ ಉದ್ದೇಶವಾಗಿದೆ” ಎಂದಿದ್ದಾರೆ.

”ಚುನಾವಣೆ ಘೋಷಣೆಯಾದ ನಂತರ ಸೀಟುಗಳ ಹಂಚಿಕೆ ಕುರಿತು ಆಯಾ ರಾಜ್ಯ ಮಟ್ಟದಲ್ಲಿ ಚರ್ಚೆಗಳು ನಡೆಯಲಿವೆ. ಇದನ್ನು ಅಲ್ಲಿನ ಪಕ್ಷಗಳ ಹಿಡಿತವನ್ನು ಪರಿಗಣಿಸಿ ನಿರ್ಧರಿಸಲಾಗುವುದು. ಈ ವಿಷಯದಲ್ಲಿ ಜಾತ್ಯತೀತ ನಿಲುವುಳ್ಳ ಪಕ್ಷಗಳು ಇನ್ನಷ್ಟು ಉದಾರವಾಗಿ ಹಾಗೂ ಪರಸ್ಪರ ಮಾತುಕತೆ ಮೂಲಕ ಹಂಚಿಕೆ ಮಾಡಿಕೊಳ್ಳಬೇಕಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

ನಾಳಿನ ಸಭೆಯಲ್ಲಿ ಕಾಂಗ್ರೆಸ್ ಮುಖಂಡರಾದ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ತೃಣಮೂಲ ಕಾಂಗ್ರೆಸ್ ಪಕ್ಷದಿಂದ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಸಮಾಜವಾದಿ ಪಕ್ಷದ ಮುಖ್ಯಸ್ಥ ಮತ್ತು ಉತ್ತರ ಪ್ರದೇಶದ ಮಾಜಿ ಸಿಎಂ ಅಖಿಲೇಶ್ ಯಾದವ್, ಮಹಾರಾಷ್ಟ್ರದ ಮಾಜಿ ಸಿಎಂ ಉದ್ಧವ್ ಠಾಕ್ರೆ, ಎನ್‌ಸಿಪಿ ಮುಖಂಡ ಶರದ್ ಪವಾರ್ ಭಾಗವಹಿಸಲಿದ್ದಾರೆ.

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್, ಸಿಪಿಐ ಪಕ್ಷ ಮುಖಂಡ ಡಿ.ರಾಜ, ಸಿಪಿಎ(ಎಂ) ಮುಖಂಡ ಸೀತರಾಂ ಯೆಚೂರಿ, ಸಿಪಿಐ(ಎಂಎಲ್‌)ಲಿಬರೇಷನ್ ಪಕ್ಷದ ದೀಪಂಕರ್ ಭಟ್ಟಾಚಾರ್ಯ ಸೇರಿದಂತೆ ಹಲವರು ಭಾಗವವಹಿಸುವ ನಿರೀಕ್ಷೆ ಇದೆ. ಆರ್‌ಎಲ್‌ಡಿ ಮುಖ್ಯಸ್ಥ ಜಯಂತ್ ಚೌಧರಿ ಪೂರ್ವನಿರ್ಧರಿತ ಕಾರ್ಯಕ್ರಮ ಇರುವುದರಿಂದ ಭಾಗವಹಿಸಲು ಸಾಧ್ಯವಾಗುತ್ತಿಲ್ಲ. ಆದರೆ ವಿರೋಧ ಪಕ್ಷಗಳ ಜೊತೆ ತಮ್ಮ ಪಕ್ಷ ಇರಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಈ ಸಭೆಯಲ್ಲಿ ಸೀಟು ಹಂಚಿಕೆ ಕುರಿತು ಯಾವುದೇ ಚರ್ಚೆಗಳು ನಡೆಯುವುದಿಲ್ಲ. ಬದಲಿಗೆ ಬಿಜೆಪಿ ಸೋಲಿಸಲು ಇರುವ ಸಾಧ್ಯತೆಗಳ ಬಗ್ಗೆ ಚರ್ಚಿಸಲಾಗುತ್ತದೆ ಎನ್ನಲಾಗಿದೆ.

ಸಭೆಗೆ ಬಿಎಸ್‌ಪಿ, ಬಿಆರ್‌ಎಸ್‌, ಬಿಜೆಪಿ, ವೈಎಸ್‌ಆರ್ ಕಾಂಗ್ರೆಸ್, ಜೆಡಿಎಸ್ ಸೇರಿದಂತೆ ಹಲವು ವಿಪಕ್ಷಗಳು ಭಾಗವಹಿಸುತ್ತಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...