Homeಮುಖಪುಟಟಿಕಾಯತ್ ಮನವಿಗೆ ಭಾರೀ ಬೆಂಬಲ: ರೈತರೊಟ್ಟಿಗೆ ಹರಿದುಬರುತ್ತಿರುವ ಸಾವಿರಾರು ಯುವಜನರು

ಟಿಕಾಯತ್ ಮನವಿಗೆ ಭಾರೀ ಬೆಂಬಲ: ರೈತರೊಟ್ಟಿಗೆ ಹರಿದುಬರುತ್ತಿರುವ ಸಾವಿರಾರು ಯುವಜನರು

- Advertisement -
- Advertisement -

ರಾಕೇಶ್ ಟಿಕಾಯತ್ ಮನವಿಗೆ ಓಗೊಟ್ಟು ಉತ್ತರಪ್ರದೇಶದ ರೈತರು, ವಿದ್ಯಾರ್ಥಿಗಳು, ನಾಗರೀಕರೂ ಸೇರಿದಂತೆ ಸಹಸ್ರಾರು ಸಂಖ್ಯೆಯ ಜನರು ರೈತ ಹೋರಾಟವನ್ನು ಬೆಂಬಲಿಸಿ ಗಾಜಿಪುರ ಗಡಿಯಲ್ಲಿ ಕುಳಿತಿದ್ದಾರೆ. ವಿಶೇಷವಾಗಿ ಯುವಜನತೆಯ ಉತ್ಸಾಹ ಮತ್ತು ಸ್ಪೂರ್ತಿ ಅವರ ಘೋಷಣೆಗಳ ಮೂಲಕ ಮುಗಿಲುಮುಟ್ಟುತ್ತಿದೆ.

ಈ ಕುರಿತು ಗೌರಿ ಮೀಡಿಯಾ ಟ್ರಸ್ಟ್‌ನ ಅಧ್ಯಕ್ಷರಾದ ದೊಡ್ಡಿಪಾಳ್ಯ ನರಸಿಂಹ ಮೂರ್ತಿಯವರು ನಾನು ಗೌರಿ ತಂಡದ ಭಾಗವಾಗಿ ದೆಹಲಿ-ಉತ್ತರಪ್ರದೇಶದ ಗಡಿಯ ಗಾಜಿಪುರದಿಂದ ನೇರ ಮಾಹಿತಿ ನೀಡಿದ್ದಾರೆ.

“ಮೊನ್ನೆ ಸಿಂಘು ಗಡಿಯಲ್ಲಿ ಗದ್ದಲವಾದಾಗಿನಿಂದ ಹೊಸಬರು ತುಂಬಾ ಜನರು ಬಂದು ರೈತರ ಪ್ರತಿಭಟನೆಗೆ ಸೇರಿಕೊಳ್ಳುತಿದ್ದು, ಅವರಲ್ಲಿ ಒಂದು ರೀತಿಯ ಜೋಶ್ ಇದೆ. ಜೊತೆಗೆ, ಗದ್ದಲ, ಲಾಠಿಚಾರ್ಜ್ ಇದಾವುದಕ್ಕೂ ಬೆದರದೆ ಎನರ್ಜಿಟಿಕ್ ಆಗಿ ತಮ್ಮ ನಿಲುವನ್ನು ಬಿಟ್ಟುಕೊಡುವುದಿಲ್ಲ ಎನ್ನುತ್ತಿದ್ದಾರೆ. ದೊಡ್ಡ ಸಂಖ್ಯೆಯಲ್ಲಿ ಯುವಕರು ಸೇರಿದ್ದಾರೆ” ಎಂದು ಹೇಳಿದರು.

ಇದನ್ನೂ ಓದಿ: ರೈತರ ಪ್ರತಿಭಟನೆ: ಯುಪಿ ಸರ್ಕಾರದ ಕ್ರಮಕ್ಕೆ ಖಂಡನೆ – ಬಿಜೆಪಿ ನಾಯಕರಲ್ಲಿ ಅಸಮಾಧಾನ

“ಸಿಂಘು ಗಡಿಯಲ್ಲಿ ಸ್ವಲ್ಪಮಟ್ಟಿನ ಉದ್ವಿಗ್ನ ವಾತಾವರಣವಿದೆ. ಕಲ್ಲೂ ತೂರಾಟದಂತಹ ಅಹಿತಕರ ಘಟನೆಗಳೂ ನಡೆಯಬಹುದೆಂಬ ಕಾರಣಕ್ಕೆ ಹೊರಗಿನಿಂದ ಬರುವ ಹೊಸಬರನ್ನು ಸೂಕ್ಷ್ಮವಾಗಿ ಗಮನಿಸುತ್ತಾರೆ. ಫೋಟೋ ತೆಗೆಯುವವರನ್ನು ಯಾಕೆ? ಏನು? ಅಂತೆಲ್ಲಾ ಪ್ರಶ್ನಿಸುತ್ತಾರೆ. ಆದರೆ ಗಾಜಿಪುರ ಗಡಿಯಲ್ಲಿ ಅಂತಹ ಆತಂಕದ ವಾತಾವರಣವಿಲ್ಲದೇ ಮುಕ್ತವಾಗಿದೆ. ಹೊಸಬರು ಸೇರಿದಂತೆ ಹಲವಾರು ಜನರು ಕೂಡಿ ಟೀ, ಊಟ, ನೀರು ಮುಂತಾದವುಗಳನ್ನ ಹಂಚುತ್ತಾ ಮುಕ್ತವಾಗಿ ಓಡಾಡುತ್ತಿದ್ದಾರೆ. ಹೀಗೆ ಹತ್ತಾರು ಕಿಲೋಮೀಟರ್‌ವರೆಗೂ ಮುಂದುವರೆಯುತ್ತಿದೆ” ಎಂದು ವಿವರಿಸಿದರು.

ಇಲ್ಲಿ ಸೇರಿರುವ ರೈತರು ಮತ್ತು ರೈತ ಬೆಂಬಲಿಗರೆಲ್ಲರೂ “ಮೋದಿ ಮುರ್ದಾಬಾದ್-ರಾಕೇಶ್ ಟಿಕಾಯತ್ ಜಿಂದಾಬಾದ್, ನಾವು ನಿಮ್ಮೊಂದಿಗೆ ಇದ್ದೇವೆ” ಎನ್ನುವಂತಹ ಘೋಷಣೆಗಳನ್ನು ಕೂಗುತ್ತಿದ್ದಾರೆ. ರಾಕೇಶ್ ಟಿಕಾಯತ್ ಅವರು ಕಣ್ಣಿರು ಹಾಕಿದ್ದರಿಂದಾಗಿ ಉತ್ತರಪ್ರದೇಶದ ಜನರು ಮತ್ತಷ್ಟು ಕೆರಳಿದ್ದಾರೆ. ಈ ಪ್ರತಿಭಟನೆ ಅವರ ಸ್ವಾಭಿಮಾನವೆಂಬಂತೆ ಪರಿಗಣಿಸಿದ್ದು, ಜೊತೆಗೆ ಇನ್ನಷ್ಟು ಜನರು ಸೇರಿಕೊಳ್ಳುತ್ತೆಲೇ ಇದ್ದಾರೆ. ಈ ಹೋರಾಟವನ್ನು ಮಣಿಸುವುದಕ್ಕೆ ಸಾಧ್ಯವಿಲ್ಲ ಎಂದು ಹೇಳುತ್ತಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್ ಚೆಕ್: ಸಿಂಘು ಗಡಿಯ ಒಂದು ಭಾಗದಲ್ಲಿ ದಾಂಧಲೆ ಮಾಡಿದ್ದು ಸ್ಥಳೀಯರಲ್ಲ ಬಿಜೆಪಿ ಕಾರ್ಯಕರ್ತರು!

ಕಳೆದ 2 ತಿಂಗಳಿನಿಂದ ಶಾಂತಿಯುತವಾಗಿ ನಡೆದುಕೊಂಡು ಬಂದ ರೈತರ ಪ್ರತಿಭಟನೆ ಈಗ ಹಿಂಸಾತ್ಮಕ ಘಟನೆಗಳಿಗೆ ಸಾಕ್ಷಿಯಾಗುತ್ತಿದೆ. ಜನವರಿ 26 ರಂದು ಲಕ್ಷಾಂತರ ರೈತರು ದೆಹಲಿಯಲ್ಲಿ ಟ್ರ್ಯಾಕ್ಟರ್ ಪೆರೇಡ್ ನಡೆಸಿದ್ದರು. ಈ ವೇಳೆ ಪ್ರಚೋದಿತ ಗುಂಪೊಂದು ಕೆಂಪುಕೋಟೆಗೆ ನುಗ್ಗಿ ಸಿಖ್ ಧಾರ್ಮಿಕ ಧ್ವಜ ಹಾರಿಸಿತ್ತು. ಇದರ ಕುರಿತು ದೇಶದಾದ್ಯಂತ ಪರ-ವಿರೋಧ ಚರ್ಚೆಗಳು ವ್ಯಾಪಕವಾಗಿ ನಡೆದಿತ್ತು. ಇದರ ಬೆನ್ನಲ್ಲೇ ದೆಹಲಿ-ಉತ್ತರಪ್ರದೇಶದ ಗಡಿಯಲ್ಲಿರುವ ರೈತರು ಸ್ಥಳ ಖಾಲಿ ಮಾಡಬೇಕು ಎಂದು ಆದೇಶಿಸಲಾಗಿತ್ತು.

ಮರುದಿನ ರಾತ್ರಿ ರೈತರ ಮೇಲೆ ಪೊಲೀಸರು ಹಲ್ಲೆ ನಡೆಸಲು ಯೋಜಿಸಿದ್ದಾರೆ ಎಂಬ ಆರೋಪಗಳೂ ಕೇಳಿ ಬಂದಿತ್ತು. ಆದರೆ ರೈತ ಮುಖಂಡ ರಾಕೇಶ್ ಟಿಕಾಯತ್ ಗುರುವಾರ ರಾತ್ರಿ ಭಾವನಾತ್ಮಕ ಭಾಷಣದ ನಂತರ ಶುಕ್ರವಾರ ಕಿಸಾನ್ ಮಹಾಪಂಚಾಯತ್‌ಗೆ 10 ಸಾವಿರಕ್ಕೂ ಹೆಚ್ಚು ರೈತರು ಮುಜಪ್ಪರ್‌ನಗರದಿಂದ ಗಾಜಿಪುರ ಗಡಿಗೆ ಬಂದಿದ್ದಾರೆ.

ಇದರ ಬೆನ್ನಲ್ಲೇ ಸಿಂಘು ಗಡಿಯಲ್ಲಿ ಕೆಲವು ದುಷ್ಕರ್ಮಿಗಳ ಆಯುಧದಾರಿ ಗುಂಪೊಂದು ರೈತರ ಟೆಂಟುಗಳಿಗೆ ನುಗ್ಗಿ ದಾಂಧಲೆ ನಡೆಸಿ ಹಲ್ಲೆ ಮಾಡಿತ್ತು. ಇಲ್ಲಿ ಕಲ್ಲು ತೂರಾಟ ಸೇರಿದಂತೆ ರೈತರು, ದುಷ್ಕರ್ಮಿಗಳು ಮತ್ತು ಪೊಲೀಸರ ನಡುವೆ ಮಾರಾಮಾರಿ ನಡೆದಿತ್ತು. ಆದರೆ ದುಷ್ಕರ್ಮಿಗಳು ಗುಂಪು ಬ್ಯಾರಿಕೇಡ್ ದಾಟಿ ರೈತರ ಟೆಂಟುಗಳಿಗೆ ನುಗ್ಗುವ ತನಕ ಪೊಲೀಸರು ಕೈಕಟ್ಟಿ ನಿಂತಿದ್ದರು ಎಂದು ಆರೋಪಿಸಲಾಗಿದೆಜೊತೆಗೆ ಅಲ್ಲಿದ್ದವರು ಬಿಜೆಪಿ ಕಾರ್ಯಕರ್ತರು ಎಂದು ಆಲ್ಟ್ ನ್ಯೂಸ್ ವರದಿ ಮಾಡಿತ್ತು.


ಇದನ್ನೂ ಓದಿ: ಕೃಷಿ ಕಾಯ್ದೆಗಳ ರದ್ದತಿ: ಇಂದಿನ ಸರ್ವಪಕ್ಷ ಸಭೆಯಲ್ಲಿ ಪ್ರಧಾನಿ ಮೋದಿ ಹೇಳಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...