Homeಮುಖಪುಟಟಿಕಾಯತ್ ಮನವಿಗೆ ಭಾರೀ ಬೆಂಬಲ: ರೈತರೊಟ್ಟಿಗೆ ಹರಿದುಬರುತ್ತಿರುವ ಸಾವಿರಾರು ಯುವಜನರು

ಟಿಕಾಯತ್ ಮನವಿಗೆ ಭಾರೀ ಬೆಂಬಲ: ರೈತರೊಟ್ಟಿಗೆ ಹರಿದುಬರುತ್ತಿರುವ ಸಾವಿರಾರು ಯುವಜನರು

- Advertisement -
- Advertisement -

ರಾಕೇಶ್ ಟಿಕಾಯತ್ ಮನವಿಗೆ ಓಗೊಟ್ಟು ಉತ್ತರಪ್ರದೇಶದ ರೈತರು, ವಿದ್ಯಾರ್ಥಿಗಳು, ನಾಗರೀಕರೂ ಸೇರಿದಂತೆ ಸಹಸ್ರಾರು ಸಂಖ್ಯೆಯ ಜನರು ರೈತ ಹೋರಾಟವನ್ನು ಬೆಂಬಲಿಸಿ ಗಾಜಿಪುರ ಗಡಿಯಲ್ಲಿ ಕುಳಿತಿದ್ದಾರೆ. ವಿಶೇಷವಾಗಿ ಯುವಜನತೆಯ ಉತ್ಸಾಹ ಮತ್ತು ಸ್ಪೂರ್ತಿ ಅವರ ಘೋಷಣೆಗಳ ಮೂಲಕ ಮುಗಿಲುಮುಟ್ಟುತ್ತಿದೆ.

ಈ ಕುರಿತು ಗೌರಿ ಮೀಡಿಯಾ ಟ್ರಸ್ಟ್‌ನ ಅಧ್ಯಕ್ಷರಾದ ದೊಡ್ಡಿಪಾಳ್ಯ ನರಸಿಂಹ ಮೂರ್ತಿಯವರು ನಾನು ಗೌರಿ ತಂಡದ ಭಾಗವಾಗಿ ದೆಹಲಿ-ಉತ್ತರಪ್ರದೇಶದ ಗಡಿಯ ಗಾಜಿಪುರದಿಂದ ನೇರ ಮಾಹಿತಿ ನೀಡಿದ್ದಾರೆ.

“ಮೊನ್ನೆ ಸಿಂಘು ಗಡಿಯಲ್ಲಿ ಗದ್ದಲವಾದಾಗಿನಿಂದ ಹೊಸಬರು ತುಂಬಾ ಜನರು ಬಂದು ರೈತರ ಪ್ರತಿಭಟನೆಗೆ ಸೇರಿಕೊಳ್ಳುತಿದ್ದು, ಅವರಲ್ಲಿ ಒಂದು ರೀತಿಯ ಜೋಶ್ ಇದೆ. ಜೊತೆಗೆ, ಗದ್ದಲ, ಲಾಠಿಚಾರ್ಜ್ ಇದಾವುದಕ್ಕೂ ಬೆದರದೆ ಎನರ್ಜಿಟಿಕ್ ಆಗಿ ತಮ್ಮ ನಿಲುವನ್ನು ಬಿಟ್ಟುಕೊಡುವುದಿಲ್ಲ ಎನ್ನುತ್ತಿದ್ದಾರೆ. ದೊಡ್ಡ ಸಂಖ್ಯೆಯಲ್ಲಿ ಯುವಕರು ಸೇರಿದ್ದಾರೆ” ಎಂದು ಹೇಳಿದರು.

ಇದನ್ನೂ ಓದಿ: ರೈತರ ಪ್ರತಿಭಟನೆ: ಯುಪಿ ಸರ್ಕಾರದ ಕ್ರಮಕ್ಕೆ ಖಂಡನೆ – ಬಿಜೆಪಿ ನಾಯಕರಲ್ಲಿ ಅಸಮಾಧಾನ

“ಸಿಂಘು ಗಡಿಯಲ್ಲಿ ಸ್ವಲ್ಪಮಟ್ಟಿನ ಉದ್ವಿಗ್ನ ವಾತಾವರಣವಿದೆ. ಕಲ್ಲೂ ತೂರಾಟದಂತಹ ಅಹಿತಕರ ಘಟನೆಗಳೂ ನಡೆಯಬಹುದೆಂಬ ಕಾರಣಕ್ಕೆ ಹೊರಗಿನಿಂದ ಬರುವ ಹೊಸಬರನ್ನು ಸೂಕ್ಷ್ಮವಾಗಿ ಗಮನಿಸುತ್ತಾರೆ. ಫೋಟೋ ತೆಗೆಯುವವರನ್ನು ಯಾಕೆ? ಏನು? ಅಂತೆಲ್ಲಾ ಪ್ರಶ್ನಿಸುತ್ತಾರೆ. ಆದರೆ ಗಾಜಿಪುರ ಗಡಿಯಲ್ಲಿ ಅಂತಹ ಆತಂಕದ ವಾತಾವರಣವಿಲ್ಲದೇ ಮುಕ್ತವಾಗಿದೆ. ಹೊಸಬರು ಸೇರಿದಂತೆ ಹಲವಾರು ಜನರು ಕೂಡಿ ಟೀ, ಊಟ, ನೀರು ಮುಂತಾದವುಗಳನ್ನ ಹಂಚುತ್ತಾ ಮುಕ್ತವಾಗಿ ಓಡಾಡುತ್ತಿದ್ದಾರೆ. ಹೀಗೆ ಹತ್ತಾರು ಕಿಲೋಮೀಟರ್‌ವರೆಗೂ ಮುಂದುವರೆಯುತ್ತಿದೆ” ಎಂದು ವಿವರಿಸಿದರು.

ಇಲ್ಲಿ ಸೇರಿರುವ ರೈತರು ಮತ್ತು ರೈತ ಬೆಂಬಲಿಗರೆಲ್ಲರೂ “ಮೋದಿ ಮುರ್ದಾಬಾದ್-ರಾಕೇಶ್ ಟಿಕಾಯತ್ ಜಿಂದಾಬಾದ್, ನಾವು ನಿಮ್ಮೊಂದಿಗೆ ಇದ್ದೇವೆ” ಎನ್ನುವಂತಹ ಘೋಷಣೆಗಳನ್ನು ಕೂಗುತ್ತಿದ್ದಾರೆ. ರಾಕೇಶ್ ಟಿಕಾಯತ್ ಅವರು ಕಣ್ಣಿರು ಹಾಕಿದ್ದರಿಂದಾಗಿ ಉತ್ತರಪ್ರದೇಶದ ಜನರು ಮತ್ತಷ್ಟು ಕೆರಳಿದ್ದಾರೆ. ಈ ಪ್ರತಿಭಟನೆ ಅವರ ಸ್ವಾಭಿಮಾನವೆಂಬಂತೆ ಪರಿಗಣಿಸಿದ್ದು, ಜೊತೆಗೆ ಇನ್ನಷ್ಟು ಜನರು ಸೇರಿಕೊಳ್ಳುತ್ತೆಲೇ ಇದ್ದಾರೆ. ಈ ಹೋರಾಟವನ್ನು ಮಣಿಸುವುದಕ್ಕೆ ಸಾಧ್ಯವಿಲ್ಲ ಎಂದು ಹೇಳುತ್ತಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್ ಚೆಕ್: ಸಿಂಘು ಗಡಿಯ ಒಂದು ಭಾಗದಲ್ಲಿ ದಾಂಧಲೆ ಮಾಡಿದ್ದು ಸ್ಥಳೀಯರಲ್ಲ ಬಿಜೆಪಿ ಕಾರ್ಯಕರ್ತರು!

ಕಳೆದ 2 ತಿಂಗಳಿನಿಂದ ಶಾಂತಿಯುತವಾಗಿ ನಡೆದುಕೊಂಡು ಬಂದ ರೈತರ ಪ್ರತಿಭಟನೆ ಈಗ ಹಿಂಸಾತ್ಮಕ ಘಟನೆಗಳಿಗೆ ಸಾಕ್ಷಿಯಾಗುತ್ತಿದೆ. ಜನವರಿ 26 ರಂದು ಲಕ್ಷಾಂತರ ರೈತರು ದೆಹಲಿಯಲ್ಲಿ ಟ್ರ್ಯಾಕ್ಟರ್ ಪೆರೇಡ್ ನಡೆಸಿದ್ದರು. ಈ ವೇಳೆ ಪ್ರಚೋದಿತ ಗುಂಪೊಂದು ಕೆಂಪುಕೋಟೆಗೆ ನುಗ್ಗಿ ಸಿಖ್ ಧಾರ್ಮಿಕ ಧ್ವಜ ಹಾರಿಸಿತ್ತು. ಇದರ ಕುರಿತು ದೇಶದಾದ್ಯಂತ ಪರ-ವಿರೋಧ ಚರ್ಚೆಗಳು ವ್ಯಾಪಕವಾಗಿ ನಡೆದಿತ್ತು. ಇದರ ಬೆನ್ನಲ್ಲೇ ದೆಹಲಿ-ಉತ್ತರಪ್ರದೇಶದ ಗಡಿಯಲ್ಲಿರುವ ರೈತರು ಸ್ಥಳ ಖಾಲಿ ಮಾಡಬೇಕು ಎಂದು ಆದೇಶಿಸಲಾಗಿತ್ತು.

ಮರುದಿನ ರಾತ್ರಿ ರೈತರ ಮೇಲೆ ಪೊಲೀಸರು ಹಲ್ಲೆ ನಡೆಸಲು ಯೋಜಿಸಿದ್ದಾರೆ ಎಂಬ ಆರೋಪಗಳೂ ಕೇಳಿ ಬಂದಿತ್ತು. ಆದರೆ ರೈತ ಮುಖಂಡ ರಾಕೇಶ್ ಟಿಕಾಯತ್ ಗುರುವಾರ ರಾತ್ರಿ ಭಾವನಾತ್ಮಕ ಭಾಷಣದ ನಂತರ ಶುಕ್ರವಾರ ಕಿಸಾನ್ ಮಹಾಪಂಚಾಯತ್‌ಗೆ 10 ಸಾವಿರಕ್ಕೂ ಹೆಚ್ಚು ರೈತರು ಮುಜಪ್ಪರ್‌ನಗರದಿಂದ ಗಾಜಿಪುರ ಗಡಿಗೆ ಬಂದಿದ್ದಾರೆ.

ಇದರ ಬೆನ್ನಲ್ಲೇ ಸಿಂಘು ಗಡಿಯಲ್ಲಿ ಕೆಲವು ದುಷ್ಕರ್ಮಿಗಳ ಆಯುಧದಾರಿ ಗುಂಪೊಂದು ರೈತರ ಟೆಂಟುಗಳಿಗೆ ನುಗ್ಗಿ ದಾಂಧಲೆ ನಡೆಸಿ ಹಲ್ಲೆ ಮಾಡಿತ್ತು. ಇಲ್ಲಿ ಕಲ್ಲು ತೂರಾಟ ಸೇರಿದಂತೆ ರೈತರು, ದುಷ್ಕರ್ಮಿಗಳು ಮತ್ತು ಪೊಲೀಸರ ನಡುವೆ ಮಾರಾಮಾರಿ ನಡೆದಿತ್ತು. ಆದರೆ ದುಷ್ಕರ್ಮಿಗಳು ಗುಂಪು ಬ್ಯಾರಿಕೇಡ್ ದಾಟಿ ರೈತರ ಟೆಂಟುಗಳಿಗೆ ನುಗ್ಗುವ ತನಕ ಪೊಲೀಸರು ಕೈಕಟ್ಟಿ ನಿಂತಿದ್ದರು ಎಂದು ಆರೋಪಿಸಲಾಗಿದೆಜೊತೆಗೆ ಅಲ್ಲಿದ್ದವರು ಬಿಜೆಪಿ ಕಾರ್ಯಕರ್ತರು ಎಂದು ಆಲ್ಟ್ ನ್ಯೂಸ್ ವರದಿ ಮಾಡಿತ್ತು.


ಇದನ್ನೂ ಓದಿ: ಕೃಷಿ ಕಾಯ್ದೆಗಳ ರದ್ದತಿ: ಇಂದಿನ ಸರ್ವಪಕ್ಷ ಸಭೆಯಲ್ಲಿ ಪ್ರಧಾನಿ ಮೋದಿ ಹೇಳಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....