Homeಮುಖಪುಟಟಿಕಾಯತ್ ಮನವಿಗೆ ಭಾರೀ ಬೆಂಬಲ: ರೈತರೊಟ್ಟಿಗೆ ಹರಿದುಬರುತ್ತಿರುವ ಸಾವಿರಾರು ಯುವಜನರು

ಟಿಕಾಯತ್ ಮನವಿಗೆ ಭಾರೀ ಬೆಂಬಲ: ರೈತರೊಟ್ಟಿಗೆ ಹರಿದುಬರುತ್ತಿರುವ ಸಾವಿರಾರು ಯುವಜನರು

- Advertisement -
- Advertisement -

ರಾಕೇಶ್ ಟಿಕಾಯತ್ ಮನವಿಗೆ ಓಗೊಟ್ಟು ಉತ್ತರಪ್ರದೇಶದ ರೈತರು, ವಿದ್ಯಾರ್ಥಿಗಳು, ನಾಗರೀಕರೂ ಸೇರಿದಂತೆ ಸಹಸ್ರಾರು ಸಂಖ್ಯೆಯ ಜನರು ರೈತ ಹೋರಾಟವನ್ನು ಬೆಂಬಲಿಸಿ ಗಾಜಿಪುರ ಗಡಿಯಲ್ಲಿ ಕುಳಿತಿದ್ದಾರೆ. ವಿಶೇಷವಾಗಿ ಯುವಜನತೆಯ ಉತ್ಸಾಹ ಮತ್ತು ಸ್ಪೂರ್ತಿ ಅವರ ಘೋಷಣೆಗಳ ಮೂಲಕ ಮುಗಿಲುಮುಟ್ಟುತ್ತಿದೆ.

ಈ ಕುರಿತು ಗೌರಿ ಮೀಡಿಯಾ ಟ್ರಸ್ಟ್‌ನ ಅಧ್ಯಕ್ಷರಾದ ದೊಡ್ಡಿಪಾಳ್ಯ ನರಸಿಂಹ ಮೂರ್ತಿಯವರು ನಾನು ಗೌರಿ ತಂಡದ ಭಾಗವಾಗಿ ದೆಹಲಿ-ಉತ್ತರಪ್ರದೇಶದ ಗಡಿಯ ಗಾಜಿಪುರದಿಂದ ನೇರ ಮಾಹಿತಿ ನೀಡಿದ್ದಾರೆ.

“ಮೊನ್ನೆ ಸಿಂಘು ಗಡಿಯಲ್ಲಿ ಗದ್ದಲವಾದಾಗಿನಿಂದ ಹೊಸಬರು ತುಂಬಾ ಜನರು ಬಂದು ರೈತರ ಪ್ರತಿಭಟನೆಗೆ ಸೇರಿಕೊಳ್ಳುತಿದ್ದು, ಅವರಲ್ಲಿ ಒಂದು ರೀತಿಯ ಜೋಶ್ ಇದೆ. ಜೊತೆಗೆ, ಗದ್ದಲ, ಲಾಠಿಚಾರ್ಜ್ ಇದಾವುದಕ್ಕೂ ಬೆದರದೆ ಎನರ್ಜಿಟಿಕ್ ಆಗಿ ತಮ್ಮ ನಿಲುವನ್ನು ಬಿಟ್ಟುಕೊಡುವುದಿಲ್ಲ ಎನ್ನುತ್ತಿದ್ದಾರೆ. ದೊಡ್ಡ ಸಂಖ್ಯೆಯಲ್ಲಿ ಯುವಕರು ಸೇರಿದ್ದಾರೆ” ಎಂದು ಹೇಳಿದರು.

ಇದನ್ನೂ ಓದಿ: ರೈತರ ಪ್ರತಿಭಟನೆ: ಯುಪಿ ಸರ್ಕಾರದ ಕ್ರಮಕ್ಕೆ ಖಂಡನೆ – ಬಿಜೆಪಿ ನಾಯಕರಲ್ಲಿ ಅಸಮಾಧಾನ

“ಸಿಂಘು ಗಡಿಯಲ್ಲಿ ಸ್ವಲ್ಪಮಟ್ಟಿನ ಉದ್ವಿಗ್ನ ವಾತಾವರಣವಿದೆ. ಕಲ್ಲೂ ತೂರಾಟದಂತಹ ಅಹಿತಕರ ಘಟನೆಗಳೂ ನಡೆಯಬಹುದೆಂಬ ಕಾರಣಕ್ಕೆ ಹೊರಗಿನಿಂದ ಬರುವ ಹೊಸಬರನ್ನು ಸೂಕ್ಷ್ಮವಾಗಿ ಗಮನಿಸುತ್ತಾರೆ. ಫೋಟೋ ತೆಗೆಯುವವರನ್ನು ಯಾಕೆ? ಏನು? ಅಂತೆಲ್ಲಾ ಪ್ರಶ್ನಿಸುತ್ತಾರೆ. ಆದರೆ ಗಾಜಿಪುರ ಗಡಿಯಲ್ಲಿ ಅಂತಹ ಆತಂಕದ ವಾತಾವರಣವಿಲ್ಲದೇ ಮುಕ್ತವಾಗಿದೆ. ಹೊಸಬರು ಸೇರಿದಂತೆ ಹಲವಾರು ಜನರು ಕೂಡಿ ಟೀ, ಊಟ, ನೀರು ಮುಂತಾದವುಗಳನ್ನ ಹಂಚುತ್ತಾ ಮುಕ್ತವಾಗಿ ಓಡಾಡುತ್ತಿದ್ದಾರೆ. ಹೀಗೆ ಹತ್ತಾರು ಕಿಲೋಮೀಟರ್‌ವರೆಗೂ ಮುಂದುವರೆಯುತ್ತಿದೆ” ಎಂದು ವಿವರಿಸಿದರು.

ಇಲ್ಲಿ ಸೇರಿರುವ ರೈತರು ಮತ್ತು ರೈತ ಬೆಂಬಲಿಗರೆಲ್ಲರೂ “ಮೋದಿ ಮುರ್ದಾಬಾದ್-ರಾಕೇಶ್ ಟಿಕಾಯತ್ ಜಿಂದಾಬಾದ್, ನಾವು ನಿಮ್ಮೊಂದಿಗೆ ಇದ್ದೇವೆ” ಎನ್ನುವಂತಹ ಘೋಷಣೆಗಳನ್ನು ಕೂಗುತ್ತಿದ್ದಾರೆ. ರಾಕೇಶ್ ಟಿಕಾಯತ್ ಅವರು ಕಣ್ಣಿರು ಹಾಕಿದ್ದರಿಂದಾಗಿ ಉತ್ತರಪ್ರದೇಶದ ಜನರು ಮತ್ತಷ್ಟು ಕೆರಳಿದ್ದಾರೆ. ಈ ಪ್ರತಿಭಟನೆ ಅವರ ಸ್ವಾಭಿಮಾನವೆಂಬಂತೆ ಪರಿಗಣಿಸಿದ್ದು, ಜೊತೆಗೆ ಇನ್ನಷ್ಟು ಜನರು ಸೇರಿಕೊಳ್ಳುತ್ತೆಲೇ ಇದ್ದಾರೆ. ಈ ಹೋರಾಟವನ್ನು ಮಣಿಸುವುದಕ್ಕೆ ಸಾಧ್ಯವಿಲ್ಲ ಎಂದು ಹೇಳುತ್ತಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್ ಚೆಕ್: ಸಿಂಘು ಗಡಿಯ ಒಂದು ಭಾಗದಲ್ಲಿ ದಾಂಧಲೆ ಮಾಡಿದ್ದು ಸ್ಥಳೀಯರಲ್ಲ ಬಿಜೆಪಿ ಕಾರ್ಯಕರ್ತರು!

ಕಳೆದ 2 ತಿಂಗಳಿನಿಂದ ಶಾಂತಿಯುತವಾಗಿ ನಡೆದುಕೊಂಡು ಬಂದ ರೈತರ ಪ್ರತಿಭಟನೆ ಈಗ ಹಿಂಸಾತ್ಮಕ ಘಟನೆಗಳಿಗೆ ಸಾಕ್ಷಿಯಾಗುತ್ತಿದೆ. ಜನವರಿ 26 ರಂದು ಲಕ್ಷಾಂತರ ರೈತರು ದೆಹಲಿಯಲ್ಲಿ ಟ್ರ್ಯಾಕ್ಟರ್ ಪೆರೇಡ್ ನಡೆಸಿದ್ದರು. ಈ ವೇಳೆ ಪ್ರಚೋದಿತ ಗುಂಪೊಂದು ಕೆಂಪುಕೋಟೆಗೆ ನುಗ್ಗಿ ಸಿಖ್ ಧಾರ್ಮಿಕ ಧ್ವಜ ಹಾರಿಸಿತ್ತು. ಇದರ ಕುರಿತು ದೇಶದಾದ್ಯಂತ ಪರ-ವಿರೋಧ ಚರ್ಚೆಗಳು ವ್ಯಾಪಕವಾಗಿ ನಡೆದಿತ್ತು. ಇದರ ಬೆನ್ನಲ್ಲೇ ದೆಹಲಿ-ಉತ್ತರಪ್ರದೇಶದ ಗಡಿಯಲ್ಲಿರುವ ರೈತರು ಸ್ಥಳ ಖಾಲಿ ಮಾಡಬೇಕು ಎಂದು ಆದೇಶಿಸಲಾಗಿತ್ತು.

ಮರುದಿನ ರಾತ್ರಿ ರೈತರ ಮೇಲೆ ಪೊಲೀಸರು ಹಲ್ಲೆ ನಡೆಸಲು ಯೋಜಿಸಿದ್ದಾರೆ ಎಂಬ ಆರೋಪಗಳೂ ಕೇಳಿ ಬಂದಿತ್ತು. ಆದರೆ ರೈತ ಮುಖಂಡ ರಾಕೇಶ್ ಟಿಕಾಯತ್ ಗುರುವಾರ ರಾತ್ರಿ ಭಾವನಾತ್ಮಕ ಭಾಷಣದ ನಂತರ ಶುಕ್ರವಾರ ಕಿಸಾನ್ ಮಹಾಪಂಚಾಯತ್‌ಗೆ 10 ಸಾವಿರಕ್ಕೂ ಹೆಚ್ಚು ರೈತರು ಮುಜಪ್ಪರ್‌ನಗರದಿಂದ ಗಾಜಿಪುರ ಗಡಿಗೆ ಬಂದಿದ್ದಾರೆ.

ಇದರ ಬೆನ್ನಲ್ಲೇ ಸಿಂಘು ಗಡಿಯಲ್ಲಿ ಕೆಲವು ದುಷ್ಕರ್ಮಿಗಳ ಆಯುಧದಾರಿ ಗುಂಪೊಂದು ರೈತರ ಟೆಂಟುಗಳಿಗೆ ನುಗ್ಗಿ ದಾಂಧಲೆ ನಡೆಸಿ ಹಲ್ಲೆ ಮಾಡಿತ್ತು. ಇಲ್ಲಿ ಕಲ್ಲು ತೂರಾಟ ಸೇರಿದಂತೆ ರೈತರು, ದುಷ್ಕರ್ಮಿಗಳು ಮತ್ತು ಪೊಲೀಸರ ನಡುವೆ ಮಾರಾಮಾರಿ ನಡೆದಿತ್ತು. ಆದರೆ ದುಷ್ಕರ್ಮಿಗಳು ಗುಂಪು ಬ್ಯಾರಿಕೇಡ್ ದಾಟಿ ರೈತರ ಟೆಂಟುಗಳಿಗೆ ನುಗ್ಗುವ ತನಕ ಪೊಲೀಸರು ಕೈಕಟ್ಟಿ ನಿಂತಿದ್ದರು ಎಂದು ಆರೋಪಿಸಲಾಗಿದೆಜೊತೆಗೆ ಅಲ್ಲಿದ್ದವರು ಬಿಜೆಪಿ ಕಾರ್ಯಕರ್ತರು ಎಂದು ಆಲ್ಟ್ ನ್ಯೂಸ್ ವರದಿ ಮಾಡಿತ್ತು.


ಇದನ್ನೂ ಓದಿ: ಕೃಷಿ ಕಾಯ್ದೆಗಳ ರದ್ದತಿ: ಇಂದಿನ ಸರ್ವಪಕ್ಷ ಸಭೆಯಲ್ಲಿ ಪ್ರಧಾನಿ ಮೋದಿ ಹೇಳಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...

ಮುಂಬೈ| ಬುರ್ಖಾ ಧರಿಸಿ ಲೋಕಲ್‌ ಟ್ರೈನ್‌ನ ಮಹಿಳಾ ಬೋಗಿಯಲ್ಲಿ ಪ್ರಯಾಣಿಸಿದ ವ್ಯಕ್ತಿ ಬಂಧನ

ಮುಂಬೈನ ಉಪನಗರ ರೈಲಿನ ಮಹಿಳಾ ಬೋಗಿಯಲ್ಲಿ ಬುರ್ಖಾ ಧರಿಸಿ ಪ್ರಯಾಣಿಸುತ್ತಿದ್ದ ಆರೋಪದ ಮೇಲೆ ನಾಸಿಕ್‌ನ 57 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಈ ಘಟನೆ ಫೆಬ್ರವರಿ 6 ರಂದು ಘಾಟ್ಕೋಪರ್...

ಎಪ್‌ಸ್ಟೀನ್‌ ಫೈಲ್ಸ್ ಜನಾಕ್ರೋಶ : ಎಐ ಶೃಂಗಸಭೆಯಿಂದ ದೂರ ಉಳಿದ ಬಿಲ್‌ ಗೇಟ್ಸ್‌

ಎಪ್‌ಸ್ಟೀನ್‌ ಫೈಲ್ಸ್‌ ಮುಂದಿಟ್ಟುಕೊಂಡು ಜನರು ತೀವ್ರ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, 'ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ'ಯಿಂದ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ದೂರ ಉಳಿದಿದ್ದಾರೆ. ಈ ಕುರಿತು ಗೇಟ್ಸ್ ಫೌಂಡೇಶನ್ ಇಂಡಿಯಾ ಗುರುವಾರ...

ಬೆಂಗಳೂರಿನಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್‌ಗಳಿಗೆ ಎಚ್ಚರಿಕೆ

ಬೆಂಗಳೂರು: ಫ್ರೇಸರ್ ಟೌನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಎಂಎಂ ರಸ್ತೆಯಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್ ಮಾಲೀಕರಿಗೆ ಸ್ಥಳೀಯ ನಿವಾಸಿಗಳು ಎಚ್ಚರಿಕೆ ನೀಡಿದ್ದಾರೆ. ರಂಜಾನ್ ಆಹಾರ ಮೇಳದಿಂದ ಸಂಚಾರ ದಟ್ಟಣೆ. ಅವ್ಯವಸ್ಥೆಯ ಜೊತೆಗೆ...