Homeಮುಖಪುಟಟಿಕಾಯತ್ ಮನವಿಗೆ ಭಾರೀ ಬೆಂಬಲ: ರೈತರೊಟ್ಟಿಗೆ ಹರಿದುಬರುತ್ತಿರುವ ಸಾವಿರಾರು ಯುವಜನರು

ಟಿಕಾಯತ್ ಮನವಿಗೆ ಭಾರೀ ಬೆಂಬಲ: ರೈತರೊಟ್ಟಿಗೆ ಹರಿದುಬರುತ್ತಿರುವ ಸಾವಿರಾರು ಯುವಜನರು

- Advertisement -
- Advertisement -

ರಾಕೇಶ್ ಟಿಕಾಯತ್ ಮನವಿಗೆ ಓಗೊಟ್ಟು ಉತ್ತರಪ್ರದೇಶದ ರೈತರು, ವಿದ್ಯಾರ್ಥಿಗಳು, ನಾಗರೀಕರೂ ಸೇರಿದಂತೆ ಸಹಸ್ರಾರು ಸಂಖ್ಯೆಯ ಜನರು ರೈತ ಹೋರಾಟವನ್ನು ಬೆಂಬಲಿಸಿ ಗಾಜಿಪುರ ಗಡಿಯಲ್ಲಿ ಕುಳಿತಿದ್ದಾರೆ. ವಿಶೇಷವಾಗಿ ಯುವಜನತೆಯ ಉತ್ಸಾಹ ಮತ್ತು ಸ್ಪೂರ್ತಿ ಅವರ ಘೋಷಣೆಗಳ ಮೂಲಕ ಮುಗಿಲುಮುಟ್ಟುತ್ತಿದೆ.

ಈ ಕುರಿತು ಗೌರಿ ಮೀಡಿಯಾ ಟ್ರಸ್ಟ್‌ನ ಅಧ್ಯಕ್ಷರಾದ ದೊಡ್ಡಿಪಾಳ್ಯ ನರಸಿಂಹ ಮೂರ್ತಿಯವರು ನಾನು ಗೌರಿ ತಂಡದ ಭಾಗವಾಗಿ ದೆಹಲಿ-ಉತ್ತರಪ್ರದೇಶದ ಗಡಿಯ ಗಾಜಿಪುರದಿಂದ ನೇರ ಮಾಹಿತಿ ನೀಡಿದ್ದಾರೆ.

“ಮೊನ್ನೆ ಸಿಂಘು ಗಡಿಯಲ್ಲಿ ಗದ್ದಲವಾದಾಗಿನಿಂದ ಹೊಸಬರು ತುಂಬಾ ಜನರು ಬಂದು ರೈತರ ಪ್ರತಿಭಟನೆಗೆ ಸೇರಿಕೊಳ್ಳುತಿದ್ದು, ಅವರಲ್ಲಿ ಒಂದು ರೀತಿಯ ಜೋಶ್ ಇದೆ. ಜೊತೆಗೆ, ಗದ್ದಲ, ಲಾಠಿಚಾರ್ಜ್ ಇದಾವುದಕ್ಕೂ ಬೆದರದೆ ಎನರ್ಜಿಟಿಕ್ ಆಗಿ ತಮ್ಮ ನಿಲುವನ್ನು ಬಿಟ್ಟುಕೊಡುವುದಿಲ್ಲ ಎನ್ನುತ್ತಿದ್ದಾರೆ. ದೊಡ್ಡ ಸಂಖ್ಯೆಯಲ್ಲಿ ಯುವಕರು ಸೇರಿದ್ದಾರೆ” ಎಂದು ಹೇಳಿದರು.

ಇದನ್ನೂ ಓದಿ: ರೈತರ ಪ್ರತಿಭಟನೆ: ಯುಪಿ ಸರ್ಕಾರದ ಕ್ರಮಕ್ಕೆ ಖಂಡನೆ – ಬಿಜೆಪಿ ನಾಯಕರಲ್ಲಿ ಅಸಮಾಧಾನ

“ಸಿಂಘು ಗಡಿಯಲ್ಲಿ ಸ್ವಲ್ಪಮಟ್ಟಿನ ಉದ್ವಿಗ್ನ ವಾತಾವರಣವಿದೆ. ಕಲ್ಲೂ ತೂರಾಟದಂತಹ ಅಹಿತಕರ ಘಟನೆಗಳೂ ನಡೆಯಬಹುದೆಂಬ ಕಾರಣಕ್ಕೆ ಹೊರಗಿನಿಂದ ಬರುವ ಹೊಸಬರನ್ನು ಸೂಕ್ಷ್ಮವಾಗಿ ಗಮನಿಸುತ್ತಾರೆ. ಫೋಟೋ ತೆಗೆಯುವವರನ್ನು ಯಾಕೆ? ಏನು? ಅಂತೆಲ್ಲಾ ಪ್ರಶ್ನಿಸುತ್ತಾರೆ. ಆದರೆ ಗಾಜಿಪುರ ಗಡಿಯಲ್ಲಿ ಅಂತಹ ಆತಂಕದ ವಾತಾವರಣವಿಲ್ಲದೇ ಮುಕ್ತವಾಗಿದೆ. ಹೊಸಬರು ಸೇರಿದಂತೆ ಹಲವಾರು ಜನರು ಕೂಡಿ ಟೀ, ಊಟ, ನೀರು ಮುಂತಾದವುಗಳನ್ನ ಹಂಚುತ್ತಾ ಮುಕ್ತವಾಗಿ ಓಡಾಡುತ್ತಿದ್ದಾರೆ. ಹೀಗೆ ಹತ್ತಾರು ಕಿಲೋಮೀಟರ್‌ವರೆಗೂ ಮುಂದುವರೆಯುತ್ತಿದೆ” ಎಂದು ವಿವರಿಸಿದರು.

ಇಲ್ಲಿ ಸೇರಿರುವ ರೈತರು ಮತ್ತು ರೈತ ಬೆಂಬಲಿಗರೆಲ್ಲರೂ “ಮೋದಿ ಮುರ್ದಾಬಾದ್-ರಾಕೇಶ್ ಟಿಕಾಯತ್ ಜಿಂದಾಬಾದ್, ನಾವು ನಿಮ್ಮೊಂದಿಗೆ ಇದ್ದೇವೆ” ಎನ್ನುವಂತಹ ಘೋಷಣೆಗಳನ್ನು ಕೂಗುತ್ತಿದ್ದಾರೆ. ರಾಕೇಶ್ ಟಿಕಾಯತ್ ಅವರು ಕಣ್ಣಿರು ಹಾಕಿದ್ದರಿಂದಾಗಿ ಉತ್ತರಪ್ರದೇಶದ ಜನರು ಮತ್ತಷ್ಟು ಕೆರಳಿದ್ದಾರೆ. ಈ ಪ್ರತಿಭಟನೆ ಅವರ ಸ್ವಾಭಿಮಾನವೆಂಬಂತೆ ಪರಿಗಣಿಸಿದ್ದು, ಜೊತೆಗೆ ಇನ್ನಷ್ಟು ಜನರು ಸೇರಿಕೊಳ್ಳುತ್ತೆಲೇ ಇದ್ದಾರೆ. ಈ ಹೋರಾಟವನ್ನು ಮಣಿಸುವುದಕ್ಕೆ ಸಾಧ್ಯವಿಲ್ಲ ಎಂದು ಹೇಳುತ್ತಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್ ಚೆಕ್: ಸಿಂಘು ಗಡಿಯ ಒಂದು ಭಾಗದಲ್ಲಿ ದಾಂಧಲೆ ಮಾಡಿದ್ದು ಸ್ಥಳೀಯರಲ್ಲ ಬಿಜೆಪಿ ಕಾರ್ಯಕರ್ತರು!

ಕಳೆದ 2 ತಿಂಗಳಿನಿಂದ ಶಾಂತಿಯುತವಾಗಿ ನಡೆದುಕೊಂಡು ಬಂದ ರೈತರ ಪ್ರತಿಭಟನೆ ಈಗ ಹಿಂಸಾತ್ಮಕ ಘಟನೆಗಳಿಗೆ ಸಾಕ್ಷಿಯಾಗುತ್ತಿದೆ. ಜನವರಿ 26 ರಂದು ಲಕ್ಷಾಂತರ ರೈತರು ದೆಹಲಿಯಲ್ಲಿ ಟ್ರ್ಯಾಕ್ಟರ್ ಪೆರೇಡ್ ನಡೆಸಿದ್ದರು. ಈ ವೇಳೆ ಪ್ರಚೋದಿತ ಗುಂಪೊಂದು ಕೆಂಪುಕೋಟೆಗೆ ನುಗ್ಗಿ ಸಿಖ್ ಧಾರ್ಮಿಕ ಧ್ವಜ ಹಾರಿಸಿತ್ತು. ಇದರ ಕುರಿತು ದೇಶದಾದ್ಯಂತ ಪರ-ವಿರೋಧ ಚರ್ಚೆಗಳು ವ್ಯಾಪಕವಾಗಿ ನಡೆದಿತ್ತು. ಇದರ ಬೆನ್ನಲ್ಲೇ ದೆಹಲಿ-ಉತ್ತರಪ್ರದೇಶದ ಗಡಿಯಲ್ಲಿರುವ ರೈತರು ಸ್ಥಳ ಖಾಲಿ ಮಾಡಬೇಕು ಎಂದು ಆದೇಶಿಸಲಾಗಿತ್ತು.

ಮರುದಿನ ರಾತ್ರಿ ರೈತರ ಮೇಲೆ ಪೊಲೀಸರು ಹಲ್ಲೆ ನಡೆಸಲು ಯೋಜಿಸಿದ್ದಾರೆ ಎಂಬ ಆರೋಪಗಳೂ ಕೇಳಿ ಬಂದಿತ್ತು. ಆದರೆ ರೈತ ಮುಖಂಡ ರಾಕೇಶ್ ಟಿಕಾಯತ್ ಗುರುವಾರ ರಾತ್ರಿ ಭಾವನಾತ್ಮಕ ಭಾಷಣದ ನಂತರ ಶುಕ್ರವಾರ ಕಿಸಾನ್ ಮಹಾಪಂಚಾಯತ್‌ಗೆ 10 ಸಾವಿರಕ್ಕೂ ಹೆಚ್ಚು ರೈತರು ಮುಜಪ್ಪರ್‌ನಗರದಿಂದ ಗಾಜಿಪುರ ಗಡಿಗೆ ಬಂದಿದ್ದಾರೆ.

ಇದರ ಬೆನ್ನಲ್ಲೇ ಸಿಂಘು ಗಡಿಯಲ್ಲಿ ಕೆಲವು ದುಷ್ಕರ್ಮಿಗಳ ಆಯುಧದಾರಿ ಗುಂಪೊಂದು ರೈತರ ಟೆಂಟುಗಳಿಗೆ ನುಗ್ಗಿ ದಾಂಧಲೆ ನಡೆಸಿ ಹಲ್ಲೆ ಮಾಡಿತ್ತು. ಇಲ್ಲಿ ಕಲ್ಲು ತೂರಾಟ ಸೇರಿದಂತೆ ರೈತರು, ದುಷ್ಕರ್ಮಿಗಳು ಮತ್ತು ಪೊಲೀಸರ ನಡುವೆ ಮಾರಾಮಾರಿ ನಡೆದಿತ್ತು. ಆದರೆ ದುಷ್ಕರ್ಮಿಗಳು ಗುಂಪು ಬ್ಯಾರಿಕೇಡ್ ದಾಟಿ ರೈತರ ಟೆಂಟುಗಳಿಗೆ ನುಗ್ಗುವ ತನಕ ಪೊಲೀಸರು ಕೈಕಟ್ಟಿ ನಿಂತಿದ್ದರು ಎಂದು ಆರೋಪಿಸಲಾಗಿದೆಜೊತೆಗೆ ಅಲ್ಲಿದ್ದವರು ಬಿಜೆಪಿ ಕಾರ್ಯಕರ್ತರು ಎಂದು ಆಲ್ಟ್ ನ್ಯೂಸ್ ವರದಿ ಮಾಡಿತ್ತು.


ಇದನ್ನೂ ಓದಿ: ಕೃಷಿ ಕಾಯ್ದೆಗಳ ರದ್ದತಿ: ಇಂದಿನ ಸರ್ವಪಕ್ಷ ಸಭೆಯಲ್ಲಿ ಪ್ರಧಾನಿ ಮೋದಿ ಹೇಳಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...