Homeಮುಖಪುಟಟಿಕಾಯತ್ ಮನವಿಗೆ ಭಾರೀ ಬೆಂಬಲ: ರೈತರೊಟ್ಟಿಗೆ ಹರಿದುಬರುತ್ತಿರುವ ಸಾವಿರಾರು ಯುವಜನರು

ಟಿಕಾಯತ್ ಮನವಿಗೆ ಭಾರೀ ಬೆಂಬಲ: ರೈತರೊಟ್ಟಿಗೆ ಹರಿದುಬರುತ್ತಿರುವ ಸಾವಿರಾರು ಯುವಜನರು

- Advertisement -
- Advertisement -

ರಾಕೇಶ್ ಟಿಕಾಯತ್ ಮನವಿಗೆ ಓಗೊಟ್ಟು ಉತ್ತರಪ್ರದೇಶದ ರೈತರು, ವಿದ್ಯಾರ್ಥಿಗಳು, ನಾಗರೀಕರೂ ಸೇರಿದಂತೆ ಸಹಸ್ರಾರು ಸಂಖ್ಯೆಯ ಜನರು ರೈತ ಹೋರಾಟವನ್ನು ಬೆಂಬಲಿಸಿ ಗಾಜಿಪುರ ಗಡಿಯಲ್ಲಿ ಕುಳಿತಿದ್ದಾರೆ. ವಿಶೇಷವಾಗಿ ಯುವಜನತೆಯ ಉತ್ಸಾಹ ಮತ್ತು ಸ್ಪೂರ್ತಿ ಅವರ ಘೋಷಣೆಗಳ ಮೂಲಕ ಮುಗಿಲುಮುಟ್ಟುತ್ತಿದೆ.

ಈ ಕುರಿತು ಗೌರಿ ಮೀಡಿಯಾ ಟ್ರಸ್ಟ್‌ನ ಅಧ್ಯಕ್ಷರಾದ ದೊಡ್ಡಿಪಾಳ್ಯ ನರಸಿಂಹ ಮೂರ್ತಿಯವರು ನಾನು ಗೌರಿ ತಂಡದ ಭಾಗವಾಗಿ ದೆಹಲಿ-ಉತ್ತರಪ್ರದೇಶದ ಗಡಿಯ ಗಾಜಿಪುರದಿಂದ ನೇರ ಮಾಹಿತಿ ನೀಡಿದ್ದಾರೆ.

“ಮೊನ್ನೆ ಸಿಂಘು ಗಡಿಯಲ್ಲಿ ಗದ್ದಲವಾದಾಗಿನಿಂದ ಹೊಸಬರು ತುಂಬಾ ಜನರು ಬಂದು ರೈತರ ಪ್ರತಿಭಟನೆಗೆ ಸೇರಿಕೊಳ್ಳುತಿದ್ದು, ಅವರಲ್ಲಿ ಒಂದು ರೀತಿಯ ಜೋಶ್ ಇದೆ. ಜೊತೆಗೆ, ಗದ್ದಲ, ಲಾಠಿಚಾರ್ಜ್ ಇದಾವುದಕ್ಕೂ ಬೆದರದೆ ಎನರ್ಜಿಟಿಕ್ ಆಗಿ ತಮ್ಮ ನಿಲುವನ್ನು ಬಿಟ್ಟುಕೊಡುವುದಿಲ್ಲ ಎನ್ನುತ್ತಿದ್ದಾರೆ. ದೊಡ್ಡ ಸಂಖ್ಯೆಯಲ್ಲಿ ಯುವಕರು ಸೇರಿದ್ದಾರೆ” ಎಂದು ಹೇಳಿದರು.

ಇದನ್ನೂ ಓದಿ: ರೈತರ ಪ್ರತಿಭಟನೆ: ಯುಪಿ ಸರ್ಕಾರದ ಕ್ರಮಕ್ಕೆ ಖಂಡನೆ – ಬಿಜೆಪಿ ನಾಯಕರಲ್ಲಿ ಅಸಮಾಧಾನ

“ಸಿಂಘು ಗಡಿಯಲ್ಲಿ ಸ್ವಲ್ಪಮಟ್ಟಿನ ಉದ್ವಿಗ್ನ ವಾತಾವರಣವಿದೆ. ಕಲ್ಲೂ ತೂರಾಟದಂತಹ ಅಹಿತಕರ ಘಟನೆಗಳೂ ನಡೆಯಬಹುದೆಂಬ ಕಾರಣಕ್ಕೆ ಹೊರಗಿನಿಂದ ಬರುವ ಹೊಸಬರನ್ನು ಸೂಕ್ಷ್ಮವಾಗಿ ಗಮನಿಸುತ್ತಾರೆ. ಫೋಟೋ ತೆಗೆಯುವವರನ್ನು ಯಾಕೆ? ಏನು? ಅಂತೆಲ್ಲಾ ಪ್ರಶ್ನಿಸುತ್ತಾರೆ. ಆದರೆ ಗಾಜಿಪುರ ಗಡಿಯಲ್ಲಿ ಅಂತಹ ಆತಂಕದ ವಾತಾವರಣವಿಲ್ಲದೇ ಮುಕ್ತವಾಗಿದೆ. ಹೊಸಬರು ಸೇರಿದಂತೆ ಹಲವಾರು ಜನರು ಕೂಡಿ ಟೀ, ಊಟ, ನೀರು ಮುಂತಾದವುಗಳನ್ನ ಹಂಚುತ್ತಾ ಮುಕ್ತವಾಗಿ ಓಡಾಡುತ್ತಿದ್ದಾರೆ. ಹೀಗೆ ಹತ್ತಾರು ಕಿಲೋಮೀಟರ್‌ವರೆಗೂ ಮುಂದುವರೆಯುತ್ತಿದೆ” ಎಂದು ವಿವರಿಸಿದರು.

ಇಲ್ಲಿ ಸೇರಿರುವ ರೈತರು ಮತ್ತು ರೈತ ಬೆಂಬಲಿಗರೆಲ್ಲರೂ “ಮೋದಿ ಮುರ್ದಾಬಾದ್-ರಾಕೇಶ್ ಟಿಕಾಯತ್ ಜಿಂದಾಬಾದ್, ನಾವು ನಿಮ್ಮೊಂದಿಗೆ ಇದ್ದೇವೆ” ಎನ್ನುವಂತಹ ಘೋಷಣೆಗಳನ್ನು ಕೂಗುತ್ತಿದ್ದಾರೆ. ರಾಕೇಶ್ ಟಿಕಾಯತ್ ಅವರು ಕಣ್ಣಿರು ಹಾಕಿದ್ದರಿಂದಾಗಿ ಉತ್ತರಪ್ರದೇಶದ ಜನರು ಮತ್ತಷ್ಟು ಕೆರಳಿದ್ದಾರೆ. ಈ ಪ್ರತಿಭಟನೆ ಅವರ ಸ್ವಾಭಿಮಾನವೆಂಬಂತೆ ಪರಿಗಣಿಸಿದ್ದು, ಜೊತೆಗೆ ಇನ್ನಷ್ಟು ಜನರು ಸೇರಿಕೊಳ್ಳುತ್ತೆಲೇ ಇದ್ದಾರೆ. ಈ ಹೋರಾಟವನ್ನು ಮಣಿಸುವುದಕ್ಕೆ ಸಾಧ್ಯವಿಲ್ಲ ಎಂದು ಹೇಳುತ್ತಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್ ಚೆಕ್: ಸಿಂಘು ಗಡಿಯ ಒಂದು ಭಾಗದಲ್ಲಿ ದಾಂಧಲೆ ಮಾಡಿದ್ದು ಸ್ಥಳೀಯರಲ್ಲ ಬಿಜೆಪಿ ಕಾರ್ಯಕರ್ತರು!

ಕಳೆದ 2 ತಿಂಗಳಿನಿಂದ ಶಾಂತಿಯುತವಾಗಿ ನಡೆದುಕೊಂಡು ಬಂದ ರೈತರ ಪ್ರತಿಭಟನೆ ಈಗ ಹಿಂಸಾತ್ಮಕ ಘಟನೆಗಳಿಗೆ ಸಾಕ್ಷಿಯಾಗುತ್ತಿದೆ. ಜನವರಿ 26 ರಂದು ಲಕ್ಷಾಂತರ ರೈತರು ದೆಹಲಿಯಲ್ಲಿ ಟ್ರ್ಯಾಕ್ಟರ್ ಪೆರೇಡ್ ನಡೆಸಿದ್ದರು. ಈ ವೇಳೆ ಪ್ರಚೋದಿತ ಗುಂಪೊಂದು ಕೆಂಪುಕೋಟೆಗೆ ನುಗ್ಗಿ ಸಿಖ್ ಧಾರ್ಮಿಕ ಧ್ವಜ ಹಾರಿಸಿತ್ತು. ಇದರ ಕುರಿತು ದೇಶದಾದ್ಯಂತ ಪರ-ವಿರೋಧ ಚರ್ಚೆಗಳು ವ್ಯಾಪಕವಾಗಿ ನಡೆದಿತ್ತು. ಇದರ ಬೆನ್ನಲ್ಲೇ ದೆಹಲಿ-ಉತ್ತರಪ್ರದೇಶದ ಗಡಿಯಲ್ಲಿರುವ ರೈತರು ಸ್ಥಳ ಖಾಲಿ ಮಾಡಬೇಕು ಎಂದು ಆದೇಶಿಸಲಾಗಿತ್ತು.

ಮರುದಿನ ರಾತ್ರಿ ರೈತರ ಮೇಲೆ ಪೊಲೀಸರು ಹಲ್ಲೆ ನಡೆಸಲು ಯೋಜಿಸಿದ್ದಾರೆ ಎಂಬ ಆರೋಪಗಳೂ ಕೇಳಿ ಬಂದಿತ್ತು. ಆದರೆ ರೈತ ಮುಖಂಡ ರಾಕೇಶ್ ಟಿಕಾಯತ್ ಗುರುವಾರ ರಾತ್ರಿ ಭಾವನಾತ್ಮಕ ಭಾಷಣದ ನಂತರ ಶುಕ್ರವಾರ ಕಿಸಾನ್ ಮಹಾಪಂಚಾಯತ್‌ಗೆ 10 ಸಾವಿರಕ್ಕೂ ಹೆಚ್ಚು ರೈತರು ಮುಜಪ್ಪರ್‌ನಗರದಿಂದ ಗಾಜಿಪುರ ಗಡಿಗೆ ಬಂದಿದ್ದಾರೆ.

ಇದರ ಬೆನ್ನಲ್ಲೇ ಸಿಂಘು ಗಡಿಯಲ್ಲಿ ಕೆಲವು ದುಷ್ಕರ್ಮಿಗಳ ಆಯುಧದಾರಿ ಗುಂಪೊಂದು ರೈತರ ಟೆಂಟುಗಳಿಗೆ ನುಗ್ಗಿ ದಾಂಧಲೆ ನಡೆಸಿ ಹಲ್ಲೆ ಮಾಡಿತ್ತು. ಇಲ್ಲಿ ಕಲ್ಲು ತೂರಾಟ ಸೇರಿದಂತೆ ರೈತರು, ದುಷ್ಕರ್ಮಿಗಳು ಮತ್ತು ಪೊಲೀಸರ ನಡುವೆ ಮಾರಾಮಾರಿ ನಡೆದಿತ್ತು. ಆದರೆ ದುಷ್ಕರ್ಮಿಗಳು ಗುಂಪು ಬ್ಯಾರಿಕೇಡ್ ದಾಟಿ ರೈತರ ಟೆಂಟುಗಳಿಗೆ ನುಗ್ಗುವ ತನಕ ಪೊಲೀಸರು ಕೈಕಟ್ಟಿ ನಿಂತಿದ್ದರು ಎಂದು ಆರೋಪಿಸಲಾಗಿದೆಜೊತೆಗೆ ಅಲ್ಲಿದ್ದವರು ಬಿಜೆಪಿ ಕಾರ್ಯಕರ್ತರು ಎಂದು ಆಲ್ಟ್ ನ್ಯೂಸ್ ವರದಿ ಮಾಡಿತ್ತು.


ಇದನ್ನೂ ಓದಿ: ಕೃಷಿ ಕಾಯ್ದೆಗಳ ರದ್ದತಿ: ಇಂದಿನ ಸರ್ವಪಕ್ಷ ಸಭೆಯಲ್ಲಿ ಪ್ರಧಾನಿ ಮೋದಿ ಹೇಳಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...