Homeಕರ್ನಾಟಕಜನಾಕ್ರೋಶದ ಸ್ಫೋಟ: ರಾಜ್ಯಾದ್ಯಂತ ಮನೆಗಳಲ್ಲಿಯೇ ಭುಗಿಲೆದ್ದ ಪ್ರತಿಭಟನೆಗಳು

ಜನಾಕ್ರೋಶದ ಸ್ಫೋಟ: ರಾಜ್ಯಾದ್ಯಂತ ಮನೆಗಳಲ್ಲಿಯೇ ಭುಗಿಲೆದ್ದ ಪ್ರತಿಭಟನೆಗಳು

ಜನರು ತಮ್ಮ ಮನೆ ಮುಂದೆಯೇ ತಟ್ಟೆ ಲೋಟ ಬಡಿದು, ಖಾಲಿ ಚೀಲ ಪ್ರದರ್ಶಿಸುವ ಮೂಲಕ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

- Advertisement -
- Advertisement -

ಜನರ ಜೀವ ಮತ್ತು ಜೀವನೋಪಾಯ ಉಳಿಸಲು ಸರ್ಕಾರ ಕೈಗೊಳ್ಳಬೇಕಾದ ಪಂಚ ತುರ್ತು ಕ್ರಮಗಳ ಬಗ್ಗೆ ತಿಂಗಳಿನಿಂದ ಹೋರಾಟ ಮಾಡುತ್ತಿರುವ ಜನಾಗ್ರಹ ಆಂದೋಲನವು ಕರೆ ನೀಡಿದ್ದ ರಾಜ್ಯವ್ಯಾಪಿ ಜನಾಗ್ರಹ ಪ್ರತಿಭಟನೆಗೆ ಭಾರೀ ಬೆಂಬಲ ವ್ಯಕ್ತವಾಗಿದ್ದು, ರಾಜ್ಯಾದ್ಯಂತ ಜನಾಕ್ರೋಶ ಭುಗಿಲೆದ್ದಿದೆ.

ಕೊರೊನಾ ಲಾಕ್‌ಡೌನ್‌ನಿಂದಾಗಿ ಜನರು ತತ್ತರಿಸಿ ಹೋಗಿದ್ದಾರೆ, ಈಗಲೂ ಬೆಡ್, ಆಕ್ಸಿಜನ್ ಸಮಸ್ಯೆ ಬಗೆಹರಿದಿಲ್ಲ. ಇಂತಹ ಸಂದರ್ಭದಲ್ಲಿ ಎಲ್ಲರಿಗೂ ಉಚಿತ ಚಿಕಿತ್ಸೆ ನೀಡಬೇಕಾದ ಸರ್ಕಾರ ಕೈಚೆಲ್ಲಿ ಕೂತಿದೆ. ಭಿಕ್ಷೆ ರೀತಿಯಲ್ಲಿ ಬಿಡಿಗಾಸಿನ ಪ್ಯಾಕೇಜ್ ಘೋಷಣೆ ಮಾಡಿ ಜನರ ಕಣ್ಣಿಗೆ ಮಣ್ಣೆರೆಚುವ ಕೆಲಸದಲ್ಲಿ ಸರ್ಕಾರ ನಿರತವಾಗಿದೆ ಎಂದು ಜನರು ಕಿಡಿಕಾರಿದ್ದಾರೆ.

ಇದನ್ನೂ ಓದಿ: “ನಾವೂ ಬದುಕಬೇಕು”: ರಾಜ್ಯಾದ್ಯಂತ ಜನಾಗ್ರಹ ಆಂದೋಲನ

ಹಾಗಾಗಿ ಕೂಡಲೇ ಸರ್ಕಾರ ಕೋವಿಡ್ ನಿಯಂತ್ರಣಕ್ಕೆ ಸಮರೋಪಾದಿಯಲ್ಲಿ ಕೆಲಸ ಮಾಡಬೇಕು. ಬಡಜನರಿಗೆ ಸಮರ್ಪಕ ಪಡಿತರ ಮತ್ತು ಮಾಸಿಕ 5000 ರೂಗಳನ್ನು ನೀಡಬೇಕು. ರೈತರಿಗೆ ಸಬ್ಸಿಡಿ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಉಚಿತ ಚಿಕಿತ್ಸೆ, ಸರ್ವರಿಗೂ ವ್ಯಾಕ್ಸಿನ್, ಬಿಪಿಎಲ್ ಜನರಿಗೆ ಸಮಗ್ರ ದಿನಸಿ – ಮಾಸಿಕ 5000 ನೆರವು ಧನ, ಅನಾಥವಾದ ಕುಟುಂಬಗಳಿಗೆ 5 ಲಕ್ಷ ಪರಿಹಾರ ಮತ್ತು ಕೃಷಿ ಬೀಜ, ಗೊಬ್ಬರಕ್ಕೆ ವಿಶೇಷ ಸಬ್ಸಿಡಿ ಈ ಐದು ಪಂಚ ಕ್ರಮಗಳನ್ನು ಜಾರಿಗೆ ತರಬೇಕೆಂದು ಜನಾಗ್ರಹ ಆಂದೋಲನ ಆಗ್ರಹಿಸಿದೆ. ಜನಪರ ಸಂಘಟನೆಗಳು ಹಾಗೂ ಪಕ್ಷಗಳು ಕರೆ ನೀಡಿವೆ.

ಜನರ ಜೀವ ಉಳಿಸುವ ಕ್ರಮಗಳಿಗಾಗಿ ಹಾಗೂ ಸಂಕಷ್ಟದಲ್ಲಿರುವ ಜನರ ಜೀವನೋಪಾಯಕ್ಕೆ ಆಸರೆಯಾಗಬಲ್ಲ ಪ್ಯಾಕೇಜಿಗಾಗಿ ತಮ್ಮ ತಮ್ಮ ಮನೆ ಮುಂದೆಯೇ ಜನರು ತಟ್ಟೆ ಲೋಟ ಬಡಿದು, ಖಾಲಿ ಚೀಲ ಪ್ರದರ್ಶಿಸುವ ಮೂಲಕ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಜನಾಗ್ರಹ ಆಂದೋಲನಕ್ಕೆ ವಿಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್ ಕೂಡ ಬೆಂಬಲ ವ್ಯಕ್ತಪಡಿಸಿವೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, “ಕಾಂಗ್ರೆಸ್ ಪಕ್ಷವು ಈ ಜನಾಗ್ರಹ ಆಂದೋಲನವನ್ನು ಹಾಗೂ ಅದರ ಹಕ್ಕೊತ್ತಾಯಗಳನ್ನು ಬೆಂಬಲಿಸುತ್ತದೆ” ಎಂದಿದ್ದಾರೆ.

ರಾಜ್ಯದ ವಿವಿದ ಕಡೆ ನಡೆಯುತ್ತಿರುವ ಜನಾಗ್ರಹ ಆಂದೋಲನದ ಕೆಲ ಚಿತ್ರಗಳು ಇಲ್ಲಿವೆ.


ಇದನ್ನೂ ಓದಿ: “ನಾವೂ ಬದುಕಬೇಕು”: ಜನಾಗ್ರಹ ಆಂದೋಲನಕ್ಕೆ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಬೆಂಬಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...