Homeಕರ್ನಾಟಕಜನಾಕ್ರೋಶದ ಸ್ಫೋಟ: ರಾಜ್ಯಾದ್ಯಂತ ಮನೆಗಳಲ್ಲಿಯೇ ಭುಗಿಲೆದ್ದ ಪ್ರತಿಭಟನೆಗಳು

ಜನಾಕ್ರೋಶದ ಸ್ಫೋಟ: ರಾಜ್ಯಾದ್ಯಂತ ಮನೆಗಳಲ್ಲಿಯೇ ಭುಗಿಲೆದ್ದ ಪ್ರತಿಭಟನೆಗಳು

ಜನರು ತಮ್ಮ ಮನೆ ಮುಂದೆಯೇ ತಟ್ಟೆ ಲೋಟ ಬಡಿದು, ಖಾಲಿ ಚೀಲ ಪ್ರದರ್ಶಿಸುವ ಮೂಲಕ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

- Advertisement -
- Advertisement -

ಜನರ ಜೀವ ಮತ್ತು ಜೀವನೋಪಾಯ ಉಳಿಸಲು ಸರ್ಕಾರ ಕೈಗೊಳ್ಳಬೇಕಾದ ಪಂಚ ತುರ್ತು ಕ್ರಮಗಳ ಬಗ್ಗೆ ತಿಂಗಳಿನಿಂದ ಹೋರಾಟ ಮಾಡುತ್ತಿರುವ ಜನಾಗ್ರಹ ಆಂದೋಲನವು ಕರೆ ನೀಡಿದ್ದ ರಾಜ್ಯವ್ಯಾಪಿ ಜನಾಗ್ರಹ ಪ್ರತಿಭಟನೆಗೆ ಭಾರೀ ಬೆಂಬಲ ವ್ಯಕ್ತವಾಗಿದ್ದು, ರಾಜ್ಯಾದ್ಯಂತ ಜನಾಕ್ರೋಶ ಭುಗಿಲೆದ್ದಿದೆ.

ಕೊರೊನಾ ಲಾಕ್‌ಡೌನ್‌ನಿಂದಾಗಿ ಜನರು ತತ್ತರಿಸಿ ಹೋಗಿದ್ದಾರೆ, ಈಗಲೂ ಬೆಡ್, ಆಕ್ಸಿಜನ್ ಸಮಸ್ಯೆ ಬಗೆಹರಿದಿಲ್ಲ. ಇಂತಹ ಸಂದರ್ಭದಲ್ಲಿ ಎಲ್ಲರಿಗೂ ಉಚಿತ ಚಿಕಿತ್ಸೆ ನೀಡಬೇಕಾದ ಸರ್ಕಾರ ಕೈಚೆಲ್ಲಿ ಕೂತಿದೆ. ಭಿಕ್ಷೆ ರೀತಿಯಲ್ಲಿ ಬಿಡಿಗಾಸಿನ ಪ್ಯಾಕೇಜ್ ಘೋಷಣೆ ಮಾಡಿ ಜನರ ಕಣ್ಣಿಗೆ ಮಣ್ಣೆರೆಚುವ ಕೆಲಸದಲ್ಲಿ ಸರ್ಕಾರ ನಿರತವಾಗಿದೆ ಎಂದು ಜನರು ಕಿಡಿಕಾರಿದ್ದಾರೆ.

ಇದನ್ನೂ ಓದಿ: “ನಾವೂ ಬದುಕಬೇಕು”: ರಾಜ್ಯಾದ್ಯಂತ ಜನಾಗ್ರಹ ಆಂದೋಲನ

ಹಾಗಾಗಿ ಕೂಡಲೇ ಸರ್ಕಾರ ಕೋವಿಡ್ ನಿಯಂತ್ರಣಕ್ಕೆ ಸಮರೋಪಾದಿಯಲ್ಲಿ ಕೆಲಸ ಮಾಡಬೇಕು. ಬಡಜನರಿಗೆ ಸಮರ್ಪಕ ಪಡಿತರ ಮತ್ತು ಮಾಸಿಕ 5000 ರೂಗಳನ್ನು ನೀಡಬೇಕು. ರೈತರಿಗೆ ಸಬ್ಸಿಡಿ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಉಚಿತ ಚಿಕಿತ್ಸೆ, ಸರ್ವರಿಗೂ ವ್ಯಾಕ್ಸಿನ್, ಬಿಪಿಎಲ್ ಜನರಿಗೆ ಸಮಗ್ರ ದಿನಸಿ – ಮಾಸಿಕ 5000 ನೆರವು ಧನ, ಅನಾಥವಾದ ಕುಟುಂಬಗಳಿಗೆ 5 ಲಕ್ಷ ಪರಿಹಾರ ಮತ್ತು ಕೃಷಿ ಬೀಜ, ಗೊಬ್ಬರಕ್ಕೆ ವಿಶೇಷ ಸಬ್ಸಿಡಿ ಈ ಐದು ಪಂಚ ಕ್ರಮಗಳನ್ನು ಜಾರಿಗೆ ತರಬೇಕೆಂದು ಜನಾಗ್ರಹ ಆಂದೋಲನ ಆಗ್ರಹಿಸಿದೆ. ಜನಪರ ಸಂಘಟನೆಗಳು ಹಾಗೂ ಪಕ್ಷಗಳು ಕರೆ ನೀಡಿವೆ.

ಜನರ ಜೀವ ಉಳಿಸುವ ಕ್ರಮಗಳಿಗಾಗಿ ಹಾಗೂ ಸಂಕಷ್ಟದಲ್ಲಿರುವ ಜನರ ಜೀವನೋಪಾಯಕ್ಕೆ ಆಸರೆಯಾಗಬಲ್ಲ ಪ್ಯಾಕೇಜಿಗಾಗಿ ತಮ್ಮ ತಮ್ಮ ಮನೆ ಮುಂದೆಯೇ ಜನರು ತಟ್ಟೆ ಲೋಟ ಬಡಿದು, ಖಾಲಿ ಚೀಲ ಪ್ರದರ್ಶಿಸುವ ಮೂಲಕ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಜನಾಗ್ರಹ ಆಂದೋಲನಕ್ಕೆ ವಿಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್ ಕೂಡ ಬೆಂಬಲ ವ್ಯಕ್ತಪಡಿಸಿವೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, “ಕಾಂಗ್ರೆಸ್ ಪಕ್ಷವು ಈ ಜನಾಗ್ರಹ ಆಂದೋಲನವನ್ನು ಹಾಗೂ ಅದರ ಹಕ್ಕೊತ್ತಾಯಗಳನ್ನು ಬೆಂಬಲಿಸುತ್ತದೆ” ಎಂದಿದ್ದಾರೆ.

ರಾಜ್ಯದ ವಿವಿದ ಕಡೆ ನಡೆಯುತ್ತಿರುವ ಜನಾಗ್ರಹ ಆಂದೋಲನದ ಕೆಲ ಚಿತ್ರಗಳು ಇಲ್ಲಿವೆ.


ಇದನ್ನೂ ಓದಿ: “ನಾವೂ ಬದುಕಬೇಕು”: ಜನಾಗ್ರಹ ಆಂದೋಲನಕ್ಕೆ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಬೆಂಬಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...