Homeಮುಖಪುಟ’ಮಾಸ್ಟರ್‌ಸ್ಟ್ರೋಕ್’: ಪ್ರಧಾನಿ ಮೋದಿ ಬಗ್ಗೆ ’ನಿರುದ್ಯೋಗಿ ಭಕ್ತ’ನ 56 ಪುಟಗಳ ಖಾಲಿ ಪುಸ್ತಕ!

’ಮಾಸ್ಟರ್‌ಸ್ಟ್ರೋಕ್’: ಪ್ರಧಾನಿ ಮೋದಿ ಬಗ್ಗೆ ’ನಿರುದ್ಯೋಗಿ ಭಕ್ತ’ನ 56 ಪುಟಗಳ ಖಾಲಿ ಪುಸ್ತಕ!

"ಪುಸ್ತಕವು 420 ವ್ಯಕ್ತಿಯ 420 ರಹಸ್ಯಗಳನ್ನು ಹೇಳುತ್ತದೆ, 2014 ರಿಂದ ದೇಶವು ಹೇಗೆ ಪ್ರಗತಿ ಸಾಧಿಸಿದೆ ಎಂಬುದರ ಬಗ್ಗೆ ವಿವರಿಸುತ್ತದೆ. ಈ ಪುಸ್ತಕ ನೊಬೆಲ್ ಪ್ರಶಸ್ತಿಯನ್ನು ಪಡೆಯಬೇಕು"

- Advertisement -
- Advertisement -

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಬಗ್ಗೆ ಅಮೆಜಾನ್‌ನಲ್ಲಿ ಪುಸ್ತಕವೊಂದು ಬಿಡುಗಡೆಯಾಗಿದೆ. ಮೇ 23 ರಂದು ಬಿಡುಗಡೆಯಾಗಿರುವ ಈ ಪುಸ್ತಕದ ಹೆಸರು “ಮಾಸ್ಟರ್‌ಸ್ಟ್ರೋಕ್: ಭಾರತದ ಉದ್ಯೋಗ ಬೆಳವಣಿಗೆಯಲ್ಲಿ ಪ್ರಧಾನ ಮಂತ್ರಿಗೆ ಸಹಾಯ ಮಾಡಿದ 420 ರಹಸ್ಯಗಳು!”.

ಪುಸ್ತಕದ ಲೇಖಕನ ಹೆಸರು ನಿರುದ್ಯೋಗಿ ಭಕ್ತ (ಬೆರೋಜ್ಗರ್ ಭಕ್ತ್) ಎಂದಿದ್ದು. ಈ ಪುಸ್ತಕದಲ್ಲಿ 56 ಪುಟಗಳಿದ್ದು, ಎಲ್ಲವೂ ಖಾಲಿ ಪುಟಗಳಾಗಿವೆ. ಪುಸ್ತಕದ ಬಗ್ಗೆ ಹಲವು ಮಂದಿ ಕಾಮೆಂಟ್ ಮಾಡಿದ್ದು, ಪುಸ್ತಕದೊಳಗಿರುವ ವಿಷಯ ಅದ್ಭುತವಾಗಿದೆ ಎಂದಿದ್ದಾರೆ.

ಪುಸ್ತಕದ ವಿವರಣೆಯಲ್ಲಿ, “ಕೊರೊನಾ ವಿರುದ್ಧದ ಹೋರಾಟದಲ್ಲಿ ಅದ್ಭುತವಾಗಿ ಗೆಲುವು ಸಾಧಿಸಲು ಮತ್ತು ಸಮೃದ್ಧಿಯ ಹಾದಿಯಲ್ಲಿ ನಡೆಯಲು ಹೆಣಗಾಡುತ್ತಿರುವ ರಾಷ್ಟ್ರಕ್ಕೆ ಒಬ್ಬ ಮಹಾನ್ ನಾಯಕ ಹೇಗೆ ಸಹಾಯ ಮಾಡಿದನು” ಎಂಬುದರ ಬಗ್ಗೆ ಬರೆಯಲಾಗಿದೆ ಎಂದು ತಿಳಿಸಿದೆ.

ಇದನ್ನೂ ಓದಿ: ಕೇಂದ್ರದ ದಮನಕಾರಿ ರಾಜಕೀಯ ತಂತ್ರ ಮತ್ತು ಕೋವಿಡ್‌ ನಂತರದಲ್ಲಿ ಸಂಭವಿಸಬಹುದಾದ ಹೊಸ ಬದಲಾವಣೆಗಳು

 

ಇಂತಹ ಒಂದು ಪುಸ್ತಕವನ್ನು ಅಮೆಜಾನ್ ಒಪ್ಪಿಕೊಂಡಿದ್ದರ ಬಗ್ಗೆಯೂ ಮೆಚ್ಚುಗೆ ವ್ಯಕ್ತವಾಗಿದೆ.

ಭಯಂಕರ್‌ ಲೋಗ್ ಎಂಬ ಟ್ವಿಟ್ಟರ್‌ ಖಾತೆ ಬಳಕೆದಾರರು, “ಭಾರತದಲ್ಲಿ ಅಮೆಜಾನ್ ಶೀಘ್ರದಲ್ಲೇ ಮುಚ್ಚಲಿದೆ ಎಂದು ತೋರುತ್ತಿದೆ. ಯಾರೋ ಒಬ್ಬರು ಅಮೆಜಾನ್‌ನಲ್ಲಿ ಮಾಸ್ಟರ್‌ಸ್ಟ್ರೋಕ್ ಎಂಬ ಪುಸ್ತಕವನ್ನು ಪ್ರಕಟಿಸಿದ್ದಾರೆ. ಇದು ಪೂರ್ತಿ ಖಾಲಿ ಪುಟಗಳನ್ನು ಹೊಂದಿದೆ” ಎಂದು ಕೀಟಲೆ ಮಾಡಿದ್ದಾರೆ.

 

PC: Amazon

ಪುಸ್ತಕದ ವಿಮರ್ಶೆಗಳಲ್ಲಿ ಹಲವು ಮಂದಿ ತುಂಬ ಅದ್ಭುತ ಪುಸ್ತಕ, ಓದಲೇ ಬೇಕು, ಮಾಸ್ಟರ್‌ಪೀಸ್, ಮಾಸ್ಟರ್‌ಸ್ಟ್ರೋಕ್, ಲೇಖಕರಿಗೆ ಧನ್ಯವಾದಗಳು ಎಂಬಂತಹ ಮಾತುಗಳನ್ನು ಹೇಳಿದ್ದಾರೆ.

“ಈ ಪುಸ್ತಕ ತುಂಬಾ ಸೃಜನಶೀಲ ಮತ್ತು ಅದನ್ನು ಓದುವ ಮೋಜನ್ನು ನೀಡಿದೆ. ಎಲ್ಲಾ ಪ್ಲಾಟ್‌ಫಾರ್ಮ್‌ಗಳಲ್ಲಿ 5-ಸ್ಟಾರ್ ರೇಟಿಂಗ್‌ಗೆ ಈ ಪುಸ್ತಕ ಅರ್ಹವಾಗಿದೆ. ಇದು ಇಲ್ಲಿಯವರೆಗೆ ನಾನು ತುಂಬಾ ವೇಗವಾಗಿ ಓದಿದ ಪುಸ್ತಕ” ಎಂದು ವ್ಯಕ್ತಿಯೊಬ್ಬರು ಬರೆದಿದ್ದಾರೆ.

“ಇದು ಬಹಳ ಉತ್ತಮ ಪುಸ್ತಕ. ಈ ಪುಸ್ತಕವು 420 ವ್ಯಕ್ತಿಯ 420 ರಹಸ್ಯಗಳನ್ನು ಹೇಳುತ್ತದೆ, 2014 ರಿಂದ ದೇಶವು ಹೇಗೆ ಪ್ರಗತಿ ಸಾಧಿಸಿದೆ ಎಂಬುದರ ಬಗ್ಗೆ ವಿವರಿಸುತ್ತದೆ. ಈ ಪುಸ್ತಕ ನೊಬೆಲ್ ಪ್ರಶಸ್ತಿಯನ್ನು ಪಡೆಯಬೇಕು” ಎಂದು ಮತ್ತೊಬ್ಬರು ಹೇಳಿದ್ದಾರೆ.

ನಿರುದ್ಯೋಗಿ ಭಕ್ತನ ಈ ಪುಸ್ತಕಕ್ಕೆ ಫೈವ್ ಸ್ಟಾರ್ ರೇಟೀಂಗ್ ದೊರೆತಿದೆ. 56 ಪುಟಗಳ ಖಾಲಿ ಪುಸ್ತಕದ ಬೆಲೆ 56 ರೂಪಾಯಿ. ಪುಸ್ತಕವನ್ನು ಮಕ್ಕಳಿಂದ 18 ವರ್ಷದವರು ಓದಬಹುದು ಎಂದಿದೆ.


ಇದನ್ನೂ ಓದಿ: ರೈತ ಹೋರಾಟಕ್ಕೆ 6 ತಿಂಗಳು- ಹೇಗಿದೆ ಪ್ರತಿಭಟನಾ ನಿರತ ಗಡಿಗಳಲ್ಲಿನ ಪರಿಸ್ಥಿತಿ..?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...