Homeಮುಖಪುಟ’ಮಾಸ್ಟರ್‌ಸ್ಟ್ರೋಕ್’: ಪ್ರಧಾನಿ ಮೋದಿ ಬಗ್ಗೆ ’ನಿರುದ್ಯೋಗಿ ಭಕ್ತ’ನ 56 ಪುಟಗಳ ಖಾಲಿ ಪುಸ್ತಕ!

’ಮಾಸ್ಟರ್‌ಸ್ಟ್ರೋಕ್’: ಪ್ರಧಾನಿ ಮೋದಿ ಬಗ್ಗೆ ’ನಿರುದ್ಯೋಗಿ ಭಕ್ತ’ನ 56 ಪುಟಗಳ ಖಾಲಿ ಪುಸ್ತಕ!

"ಪುಸ್ತಕವು 420 ವ್ಯಕ್ತಿಯ 420 ರಹಸ್ಯಗಳನ್ನು ಹೇಳುತ್ತದೆ, 2014 ರಿಂದ ದೇಶವು ಹೇಗೆ ಪ್ರಗತಿ ಸಾಧಿಸಿದೆ ಎಂಬುದರ ಬಗ್ಗೆ ವಿವರಿಸುತ್ತದೆ. ಈ ಪುಸ್ತಕ ನೊಬೆಲ್ ಪ್ರಶಸ್ತಿಯನ್ನು ಪಡೆಯಬೇಕು"

- Advertisement -
- Advertisement -

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಬಗ್ಗೆ ಅಮೆಜಾನ್‌ನಲ್ಲಿ ಪುಸ್ತಕವೊಂದು ಬಿಡುಗಡೆಯಾಗಿದೆ. ಮೇ 23 ರಂದು ಬಿಡುಗಡೆಯಾಗಿರುವ ಈ ಪುಸ್ತಕದ ಹೆಸರು “ಮಾಸ್ಟರ್‌ಸ್ಟ್ರೋಕ್: ಭಾರತದ ಉದ್ಯೋಗ ಬೆಳವಣಿಗೆಯಲ್ಲಿ ಪ್ರಧಾನ ಮಂತ್ರಿಗೆ ಸಹಾಯ ಮಾಡಿದ 420 ರಹಸ್ಯಗಳು!”.

ಪುಸ್ತಕದ ಲೇಖಕನ ಹೆಸರು ನಿರುದ್ಯೋಗಿ ಭಕ್ತ (ಬೆರೋಜ್ಗರ್ ಭಕ್ತ್) ಎಂದಿದ್ದು. ಈ ಪುಸ್ತಕದಲ್ಲಿ 56 ಪುಟಗಳಿದ್ದು, ಎಲ್ಲವೂ ಖಾಲಿ ಪುಟಗಳಾಗಿವೆ. ಪುಸ್ತಕದ ಬಗ್ಗೆ ಹಲವು ಮಂದಿ ಕಾಮೆಂಟ್ ಮಾಡಿದ್ದು, ಪುಸ್ತಕದೊಳಗಿರುವ ವಿಷಯ ಅದ್ಭುತವಾಗಿದೆ ಎಂದಿದ್ದಾರೆ.

ಪುಸ್ತಕದ ವಿವರಣೆಯಲ್ಲಿ, “ಕೊರೊನಾ ವಿರುದ್ಧದ ಹೋರಾಟದಲ್ಲಿ ಅದ್ಭುತವಾಗಿ ಗೆಲುವು ಸಾಧಿಸಲು ಮತ್ತು ಸಮೃದ್ಧಿಯ ಹಾದಿಯಲ್ಲಿ ನಡೆಯಲು ಹೆಣಗಾಡುತ್ತಿರುವ ರಾಷ್ಟ್ರಕ್ಕೆ ಒಬ್ಬ ಮಹಾನ್ ನಾಯಕ ಹೇಗೆ ಸಹಾಯ ಮಾಡಿದನು” ಎಂಬುದರ ಬಗ್ಗೆ ಬರೆಯಲಾಗಿದೆ ಎಂದು ತಿಳಿಸಿದೆ.

ಇದನ್ನೂ ಓದಿ: ಕೇಂದ್ರದ ದಮನಕಾರಿ ರಾಜಕೀಯ ತಂತ್ರ ಮತ್ತು ಕೋವಿಡ್‌ ನಂತರದಲ್ಲಿ ಸಂಭವಿಸಬಹುದಾದ ಹೊಸ ಬದಲಾವಣೆಗಳು

 

ಇಂತಹ ಒಂದು ಪುಸ್ತಕವನ್ನು ಅಮೆಜಾನ್ ಒಪ್ಪಿಕೊಂಡಿದ್ದರ ಬಗ್ಗೆಯೂ ಮೆಚ್ಚುಗೆ ವ್ಯಕ್ತವಾಗಿದೆ.

ಭಯಂಕರ್‌ ಲೋಗ್ ಎಂಬ ಟ್ವಿಟ್ಟರ್‌ ಖಾತೆ ಬಳಕೆದಾರರು, “ಭಾರತದಲ್ಲಿ ಅಮೆಜಾನ್ ಶೀಘ್ರದಲ್ಲೇ ಮುಚ್ಚಲಿದೆ ಎಂದು ತೋರುತ್ತಿದೆ. ಯಾರೋ ಒಬ್ಬರು ಅಮೆಜಾನ್‌ನಲ್ಲಿ ಮಾಸ್ಟರ್‌ಸ್ಟ್ರೋಕ್ ಎಂಬ ಪುಸ್ತಕವನ್ನು ಪ್ರಕಟಿಸಿದ್ದಾರೆ. ಇದು ಪೂರ್ತಿ ಖಾಲಿ ಪುಟಗಳನ್ನು ಹೊಂದಿದೆ” ಎಂದು ಕೀಟಲೆ ಮಾಡಿದ್ದಾರೆ.

 

PC: Amazon

ಪುಸ್ತಕದ ವಿಮರ್ಶೆಗಳಲ್ಲಿ ಹಲವು ಮಂದಿ ತುಂಬ ಅದ್ಭುತ ಪುಸ್ತಕ, ಓದಲೇ ಬೇಕು, ಮಾಸ್ಟರ್‌ಪೀಸ್, ಮಾಸ್ಟರ್‌ಸ್ಟ್ರೋಕ್, ಲೇಖಕರಿಗೆ ಧನ್ಯವಾದಗಳು ಎಂಬಂತಹ ಮಾತುಗಳನ್ನು ಹೇಳಿದ್ದಾರೆ.

“ಈ ಪುಸ್ತಕ ತುಂಬಾ ಸೃಜನಶೀಲ ಮತ್ತು ಅದನ್ನು ಓದುವ ಮೋಜನ್ನು ನೀಡಿದೆ. ಎಲ್ಲಾ ಪ್ಲಾಟ್‌ಫಾರ್ಮ್‌ಗಳಲ್ಲಿ 5-ಸ್ಟಾರ್ ರೇಟಿಂಗ್‌ಗೆ ಈ ಪುಸ್ತಕ ಅರ್ಹವಾಗಿದೆ. ಇದು ಇಲ್ಲಿಯವರೆಗೆ ನಾನು ತುಂಬಾ ವೇಗವಾಗಿ ಓದಿದ ಪುಸ್ತಕ” ಎಂದು ವ್ಯಕ್ತಿಯೊಬ್ಬರು ಬರೆದಿದ್ದಾರೆ.

“ಇದು ಬಹಳ ಉತ್ತಮ ಪುಸ್ತಕ. ಈ ಪುಸ್ತಕವು 420 ವ್ಯಕ್ತಿಯ 420 ರಹಸ್ಯಗಳನ್ನು ಹೇಳುತ್ತದೆ, 2014 ರಿಂದ ದೇಶವು ಹೇಗೆ ಪ್ರಗತಿ ಸಾಧಿಸಿದೆ ಎಂಬುದರ ಬಗ್ಗೆ ವಿವರಿಸುತ್ತದೆ. ಈ ಪುಸ್ತಕ ನೊಬೆಲ್ ಪ್ರಶಸ್ತಿಯನ್ನು ಪಡೆಯಬೇಕು” ಎಂದು ಮತ್ತೊಬ್ಬರು ಹೇಳಿದ್ದಾರೆ.

ನಿರುದ್ಯೋಗಿ ಭಕ್ತನ ಈ ಪುಸ್ತಕಕ್ಕೆ ಫೈವ್ ಸ್ಟಾರ್ ರೇಟೀಂಗ್ ದೊರೆತಿದೆ. 56 ಪುಟಗಳ ಖಾಲಿ ಪುಸ್ತಕದ ಬೆಲೆ 56 ರೂಪಾಯಿ. ಪುಸ್ತಕವನ್ನು ಮಕ್ಕಳಿಂದ 18 ವರ್ಷದವರು ಓದಬಹುದು ಎಂದಿದೆ.


ಇದನ್ನೂ ಓದಿ: ರೈತ ಹೋರಾಟಕ್ಕೆ 6 ತಿಂಗಳು- ಹೇಗಿದೆ ಪ್ರತಿಭಟನಾ ನಿರತ ಗಡಿಗಳಲ್ಲಿನ ಪರಿಸ್ಥಿತಿ..?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...