HomeಮುಖಪುಟMatch is fixed: ಚುನಾವಣಾ ಆಯೋಗ ಉತ್ತರ ನೀಡುವ ಬದಲು ಸಾಕ್ಷ್ಯಗಳನ್ನು ನಾಶಪಡಿಸುತ್ತಿದೆ; ರಾಹುಲ್ ಗಾಂಧಿ

Match is fixed: ಚುನಾವಣಾ ಆಯೋಗ ಉತ್ತರ ನೀಡುವ ಬದಲು ಸಾಕ್ಷ್ಯಗಳನ್ನು ನಾಶಪಡಿಸುತ್ತಿದೆ; ರಾಹುಲ್ ಗಾಂಧಿ

- Advertisement -
- Advertisement -

ಭಾರತೀಯ ಚುನಾವಣಾ ಆಯೋಗ ಉತ್ತರ ನೀಡುವ ಬದಲು ಸಾಕ್ಷ್ಯಗಳನ್ನು ನಾಶಪಡಿಸುತ್ತಿದೆ ಎಂದು ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಫಲಿತಾಂಶ ಪ್ರಕಟವಾದ 45 ದಿನಗಳ ನಂತರ ಚುನಾವಣಾ ಪ್ರಕ್ರಿಯೆಯ ಸಿಸಿಟಿವಿ, ವೆಬ್‌ಕಾಸ್ಟಿಂಗ್ ಮತ್ತು ವಿಡಿಯೋ ತುಣುಕನ್ನು ನಾಶಪಡಿಸುವಂತೆ ಚುನಾವಣಾ ಸಂಸ್ಥೆ ತನ್ನ ರಾಜ್ಯ ಅಧಿಕಾರಿಗಳಿಗೆ ಸೂಚಿಸಿದ ನಂತರ ರಾಹುಲ್ ಗಾಂಧಿ ಈ ಹೇಳಿಕೆ ನೀಡಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಈ ಕುರಿತು ಫೋಸ್ಟ್ ಹಾಕಿರುವ ರಾಹುಲ್ ಗಾಂಧಿ ಚುನಾವಣಾ ಆಯೋಗದ ನಡೆಯನ್ನು ಟೀಕಿಸಿದ್ದು, “ಇದು ಪ್ರಜಾಪ್ರಭುತ್ವದ ಹೊಣೆಗಾರಿಕೆಯನ್ನು ದುರ್ಬಲಗೊಳಿಸುತ್ತದೆ” ಎಂದಿದ್ದಾರೆ.

“ಮತದಾರರ ಪಟ್ಟಿ? ಯಂತ್ರ ಓದಬಹುದಾದ ಸ್ವರೂಪ ನೀಡುವುದಿಲ್ಲ. ಸಿಸಿಟಿವಿ ದೃಶ್ಯಾವಳಿ? ಕಾನೂನು ಬದಲಿಸಿ ಮರೆಮಾಡಲಾಗಿದೆ. ಚುನಾವಣಾ ಫೋಟೋಗಳು ಮತ್ತು ವೀಡಿಯೊಗಳು? ಈಗ 1 ವರ್ಷ ಅಲ್ಲ, ಬದಲಾಗಿ ಅವುಗಳನ್ನು 45 ದಿನಗಳಲ್ಲಿ ಡಿಲೀಟ್ ಮಾಡಲಾಗುತ್ತಿದೆ. ಉತ್ತರಗಳನ್ನು ನೀಡಬೇಕಾದವರು ಸಾಕ್ಷ್ಯಗಳನ್ನು ನಾಶಪಡಿಸುತ್ತಿದ್ದಾರೆ” ಎಂದು ರಾಹುಲ್ ಗಾಂಧಿ ಬರೆದುಕೊಂಡಿದ್ದಾರೆ.

“ಇದು ‘ಮ್ಯಾಚ್ ಫಿಕ್ಸಿಂಗ್’ ಆಗಿದೆ ಎಂಬುದನ್ನು ಸ್ಪಷ್ಟಪಡಿಸುತ್ತದೆ. ಫಿಕ್ಸಿಂಗ್ ಚುನಾವಣೆಯು ಪ್ರಜಾಪ್ರಭುತ್ವಕ್ಕೆ ವಿಷವಾಗಿದೆ. ಚುನಾವಣಾ ಕ್ರಮಗಳು ತೀವ್ರ ಕಳವಳಕಾರಿಯಾಗಿವೆ” ಎಂದು ರಾಹುಲ್ ಗಾಂಧಿ ಹಿಂದಿಯಲ್ಲಿ ಪೋಸ್ಟ್ ಮಾಡಿದ್ದಾರೆ.

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿರುವ ರಾಹುಲ್ ಗಾಂಧಿ, ಮತದಾರರ ಪಟ್ಟಿ, ಮತದಾನದ ಡೇಟಾ ಮತ್ತು ವಿಡಿಯೋ ದೃಶ್ಯಾವಳಿಗಳನ್ನು ಪರಿಶೀಲಿಸಲು ಚುನಾವಣಾ ಆಯೋಗವನ್ನು ಒತ್ತಾಯಿಸುತ್ತಿದ್ದಾರೆ.

ಫಲಿತಾಂಶ ಪ್ರಕಟಗೊಂಡ 45 ದಿನಗಳ ಒಳಗೆ ನ್ಯಾಯಾಲಯದಲ್ಲಿ ಅದನ್ನು ಪ್ರಶ್ನಿಸದಿದ್ದರೆ, ಚುನಾವಣಾ ಪ್ರಕ್ರಿಯೆಯ ಸಿಸಿಟಿವಿ, ವೆಬ್‌ಕಾಸ್ಟಿಂಗ್ ಮತ್ತು ವಿಡಿಯೋ ದೃಶ್ಯಗಳನ್ನು ನಾಶಪಡಿಸುವಂತೆ ಚುನಾವಣಾ ಆಯೋಗವು ತನ್ನ ರಾಜ್ಯ ಚುನಾವಣಾ ಅಧಿಕಾರಿಗಳಿಗೆ ಸೂಚಿಸಿದೆ. ನಂತರ ರಾಹುಲ್ ಗಾಂಧಿ ಪ್ರತಿಕ್ರಿಯೆ ನೀಡಿದ್ದಾರೆ. “ದುರುದ್ದೇಶಪೂರಿತ ನಿರೂಪಣೆಗಳನ್ನು ರಚಿಸಲು ಚುನಾವಣಾ ಆಯೋಗ ತನ್ನ ಎಲೆಕ್ಟ್ರಾನಿಕ್ ಡೇಟಾವನ್ನು ಬಳಸುವ ಭಯವಿದೆ ಎಂದು ಅವರು ಹೇಳಿದ್ದಾರೆ.

ಮೇ 30ರಂದು ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗಳಿಗೆ ಬರೆದ ಪತ್ರದಲ್ಲಿ, ಚುನಾವಣಾ ಪ್ರಕ್ರಿಯೆಯ ವಿವಿಧ ಹಂತಗಳನ್ನು ಬಹು ರೆಕಾರ್ಡಿಂಗ್ ಸಾಧನಗಳಾದ ಛಾಯಾಗ್ರಹಣ, ವಿಡಿಯೋಗ್ರಫಿ, ಸಿಸಿಟಿವಿ ಮತ್ತು ವೆಬ್‌ಕಾಸ್ಟಿಂಗ್ ಮೂಲಕ ದಾಖಲಿಸಲು ಸೂಚನೆಗಳನ್ನು ನೀಡಿರುವುದಾಗಿ ಚುನಾವಣಾ ಆಯೋಗ ತಿಳಿಸಿದೆ.

ಚುನಾವಣಾ ಕಾನೂನುಗಳು ಅಂತಹ ಧ್ವನಿಮುದ್ರಣಗಳನ್ನು ಕಡ್ಡಾಯಗೊಳಿಸದಿದ್ದರೂ, ಆಯೋಗವು ಚುನಾವಣಾ ಪ್ರಕ್ರಿಯೆಯ ವಿವಿಧ ಹಂತಗಳಲ್ಲಿ ಅವುಗಳನ್ನು ಆಂತರಿಕ ನಿರ್ವಹಣಾ ಸಾಧನವಾಗಿ ಬಳಸುತ್ತದೆ.

ಮೋದಿ ಘೋಷಣೆ ನೀಡುವ ಕಲೆಯಲ್ಲಿ ಪರಿಣತಿ ಹೊಂದಿದ್ದಾರೆಯೆ ಹೊರತು, ಪರಿಹಾರಗಳನ್ನಲ್ಲ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...