HomeಮುಖಪುಟMatch is fixed: ಚುನಾವಣಾ ಆಯೋಗ ಉತ್ತರ ನೀಡುವ ಬದಲು ಸಾಕ್ಷ್ಯಗಳನ್ನು ನಾಶಪಡಿಸುತ್ತಿದೆ; ರಾಹುಲ್ ಗಾಂಧಿ

Match is fixed: ಚುನಾವಣಾ ಆಯೋಗ ಉತ್ತರ ನೀಡುವ ಬದಲು ಸಾಕ್ಷ್ಯಗಳನ್ನು ನಾಶಪಡಿಸುತ್ತಿದೆ; ರಾಹುಲ್ ಗಾಂಧಿ

- Advertisement -
- Advertisement -

ಭಾರತೀಯ ಚುನಾವಣಾ ಆಯೋಗ ಉತ್ತರ ನೀಡುವ ಬದಲು ಸಾಕ್ಷ್ಯಗಳನ್ನು ನಾಶಪಡಿಸುತ್ತಿದೆ ಎಂದು ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಫಲಿತಾಂಶ ಪ್ರಕಟವಾದ 45 ದಿನಗಳ ನಂತರ ಚುನಾವಣಾ ಪ್ರಕ್ರಿಯೆಯ ಸಿಸಿಟಿವಿ, ವೆಬ್‌ಕಾಸ್ಟಿಂಗ್ ಮತ್ತು ವಿಡಿಯೋ ತುಣುಕನ್ನು ನಾಶಪಡಿಸುವಂತೆ ಚುನಾವಣಾ ಸಂಸ್ಥೆ ತನ್ನ ರಾಜ್ಯ ಅಧಿಕಾರಿಗಳಿಗೆ ಸೂಚಿಸಿದ ನಂತರ ರಾಹುಲ್ ಗಾಂಧಿ ಈ ಹೇಳಿಕೆ ನೀಡಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಈ ಕುರಿತು ಫೋಸ್ಟ್ ಹಾಕಿರುವ ರಾಹುಲ್ ಗಾಂಧಿ ಚುನಾವಣಾ ಆಯೋಗದ ನಡೆಯನ್ನು ಟೀಕಿಸಿದ್ದು, “ಇದು ಪ್ರಜಾಪ್ರಭುತ್ವದ ಹೊಣೆಗಾರಿಕೆಯನ್ನು ದುರ್ಬಲಗೊಳಿಸುತ್ತದೆ” ಎಂದಿದ್ದಾರೆ.

“ಮತದಾರರ ಪಟ್ಟಿ? ಯಂತ್ರ ಓದಬಹುದಾದ ಸ್ವರೂಪ ನೀಡುವುದಿಲ್ಲ. ಸಿಸಿಟಿವಿ ದೃಶ್ಯಾವಳಿ? ಕಾನೂನು ಬದಲಿಸಿ ಮರೆಮಾಡಲಾಗಿದೆ. ಚುನಾವಣಾ ಫೋಟೋಗಳು ಮತ್ತು ವೀಡಿಯೊಗಳು? ಈಗ 1 ವರ್ಷ ಅಲ್ಲ, ಬದಲಾಗಿ ಅವುಗಳನ್ನು 45 ದಿನಗಳಲ್ಲಿ ಡಿಲೀಟ್ ಮಾಡಲಾಗುತ್ತಿದೆ. ಉತ್ತರಗಳನ್ನು ನೀಡಬೇಕಾದವರು ಸಾಕ್ಷ್ಯಗಳನ್ನು ನಾಶಪಡಿಸುತ್ತಿದ್ದಾರೆ” ಎಂದು ರಾಹುಲ್ ಗಾಂಧಿ ಬರೆದುಕೊಂಡಿದ್ದಾರೆ.

“ಇದು ‘ಮ್ಯಾಚ್ ಫಿಕ್ಸಿಂಗ್’ ಆಗಿದೆ ಎಂಬುದನ್ನು ಸ್ಪಷ್ಟಪಡಿಸುತ್ತದೆ. ಫಿಕ್ಸಿಂಗ್ ಚುನಾವಣೆಯು ಪ್ರಜಾಪ್ರಭುತ್ವಕ್ಕೆ ವಿಷವಾಗಿದೆ. ಚುನಾವಣಾ ಕ್ರಮಗಳು ತೀವ್ರ ಕಳವಳಕಾರಿಯಾಗಿವೆ” ಎಂದು ರಾಹುಲ್ ಗಾಂಧಿ ಹಿಂದಿಯಲ್ಲಿ ಪೋಸ್ಟ್ ಮಾಡಿದ್ದಾರೆ.

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿರುವ ರಾಹುಲ್ ಗಾಂಧಿ, ಮತದಾರರ ಪಟ್ಟಿ, ಮತದಾನದ ಡೇಟಾ ಮತ್ತು ವಿಡಿಯೋ ದೃಶ್ಯಾವಳಿಗಳನ್ನು ಪರಿಶೀಲಿಸಲು ಚುನಾವಣಾ ಆಯೋಗವನ್ನು ಒತ್ತಾಯಿಸುತ್ತಿದ್ದಾರೆ.

ಫಲಿತಾಂಶ ಪ್ರಕಟಗೊಂಡ 45 ದಿನಗಳ ಒಳಗೆ ನ್ಯಾಯಾಲಯದಲ್ಲಿ ಅದನ್ನು ಪ್ರಶ್ನಿಸದಿದ್ದರೆ, ಚುನಾವಣಾ ಪ್ರಕ್ರಿಯೆಯ ಸಿಸಿಟಿವಿ, ವೆಬ್‌ಕಾಸ್ಟಿಂಗ್ ಮತ್ತು ವಿಡಿಯೋ ದೃಶ್ಯಗಳನ್ನು ನಾಶಪಡಿಸುವಂತೆ ಚುನಾವಣಾ ಆಯೋಗವು ತನ್ನ ರಾಜ್ಯ ಚುನಾವಣಾ ಅಧಿಕಾರಿಗಳಿಗೆ ಸೂಚಿಸಿದೆ. ನಂತರ ರಾಹುಲ್ ಗಾಂಧಿ ಪ್ರತಿಕ್ರಿಯೆ ನೀಡಿದ್ದಾರೆ. “ದುರುದ್ದೇಶಪೂರಿತ ನಿರೂಪಣೆಗಳನ್ನು ರಚಿಸಲು ಚುನಾವಣಾ ಆಯೋಗ ತನ್ನ ಎಲೆಕ್ಟ್ರಾನಿಕ್ ಡೇಟಾವನ್ನು ಬಳಸುವ ಭಯವಿದೆ ಎಂದು ಅವರು ಹೇಳಿದ್ದಾರೆ.

ಮೇ 30ರಂದು ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗಳಿಗೆ ಬರೆದ ಪತ್ರದಲ್ಲಿ, ಚುನಾವಣಾ ಪ್ರಕ್ರಿಯೆಯ ವಿವಿಧ ಹಂತಗಳನ್ನು ಬಹು ರೆಕಾರ್ಡಿಂಗ್ ಸಾಧನಗಳಾದ ಛಾಯಾಗ್ರಹಣ, ವಿಡಿಯೋಗ್ರಫಿ, ಸಿಸಿಟಿವಿ ಮತ್ತು ವೆಬ್‌ಕಾಸ್ಟಿಂಗ್ ಮೂಲಕ ದಾಖಲಿಸಲು ಸೂಚನೆಗಳನ್ನು ನೀಡಿರುವುದಾಗಿ ಚುನಾವಣಾ ಆಯೋಗ ತಿಳಿಸಿದೆ.

ಚುನಾವಣಾ ಕಾನೂನುಗಳು ಅಂತಹ ಧ್ವನಿಮುದ್ರಣಗಳನ್ನು ಕಡ್ಡಾಯಗೊಳಿಸದಿದ್ದರೂ, ಆಯೋಗವು ಚುನಾವಣಾ ಪ್ರಕ್ರಿಯೆಯ ವಿವಿಧ ಹಂತಗಳಲ್ಲಿ ಅವುಗಳನ್ನು ಆಂತರಿಕ ನಿರ್ವಹಣಾ ಸಾಧನವಾಗಿ ಬಳಸುತ್ತದೆ.

ಮೋದಿ ಘೋಷಣೆ ನೀಡುವ ಕಲೆಯಲ್ಲಿ ಪರಿಣತಿ ಹೊಂದಿದ್ದಾರೆಯೆ ಹೊರತು, ಪರಿಹಾರಗಳನ್ನಲ್ಲ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...