HomeಮುಖಪುಟMatch is fixed: ಚುನಾವಣಾ ಆಯೋಗ ಉತ್ತರ ನೀಡುವ ಬದಲು ಸಾಕ್ಷ್ಯಗಳನ್ನು ನಾಶಪಡಿಸುತ್ತಿದೆ; ರಾಹುಲ್ ಗಾಂಧಿ

Match is fixed: ಚುನಾವಣಾ ಆಯೋಗ ಉತ್ತರ ನೀಡುವ ಬದಲು ಸಾಕ್ಷ್ಯಗಳನ್ನು ನಾಶಪಡಿಸುತ್ತಿದೆ; ರಾಹುಲ್ ಗಾಂಧಿ

- Advertisement -
- Advertisement -

ಭಾರತೀಯ ಚುನಾವಣಾ ಆಯೋಗ ಉತ್ತರ ನೀಡುವ ಬದಲು ಸಾಕ್ಷ್ಯಗಳನ್ನು ನಾಶಪಡಿಸುತ್ತಿದೆ ಎಂದು ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಫಲಿತಾಂಶ ಪ್ರಕಟವಾದ 45 ದಿನಗಳ ನಂತರ ಚುನಾವಣಾ ಪ್ರಕ್ರಿಯೆಯ ಸಿಸಿಟಿವಿ, ವೆಬ್‌ಕಾಸ್ಟಿಂಗ್ ಮತ್ತು ವಿಡಿಯೋ ತುಣುಕನ್ನು ನಾಶಪಡಿಸುವಂತೆ ಚುನಾವಣಾ ಸಂಸ್ಥೆ ತನ್ನ ರಾಜ್ಯ ಅಧಿಕಾರಿಗಳಿಗೆ ಸೂಚಿಸಿದ ನಂತರ ರಾಹುಲ್ ಗಾಂಧಿ ಈ ಹೇಳಿಕೆ ನೀಡಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಈ ಕುರಿತು ಫೋಸ್ಟ್ ಹಾಕಿರುವ ರಾಹುಲ್ ಗಾಂಧಿ ಚುನಾವಣಾ ಆಯೋಗದ ನಡೆಯನ್ನು ಟೀಕಿಸಿದ್ದು, “ಇದು ಪ್ರಜಾಪ್ರಭುತ್ವದ ಹೊಣೆಗಾರಿಕೆಯನ್ನು ದುರ್ಬಲಗೊಳಿಸುತ್ತದೆ” ಎಂದಿದ್ದಾರೆ.

“ಮತದಾರರ ಪಟ್ಟಿ? ಯಂತ್ರ ಓದಬಹುದಾದ ಸ್ವರೂಪ ನೀಡುವುದಿಲ್ಲ. ಸಿಸಿಟಿವಿ ದೃಶ್ಯಾವಳಿ? ಕಾನೂನು ಬದಲಿಸಿ ಮರೆಮಾಡಲಾಗಿದೆ. ಚುನಾವಣಾ ಫೋಟೋಗಳು ಮತ್ತು ವೀಡಿಯೊಗಳು? ಈಗ 1 ವರ್ಷ ಅಲ್ಲ, ಬದಲಾಗಿ ಅವುಗಳನ್ನು 45 ದಿನಗಳಲ್ಲಿ ಡಿಲೀಟ್ ಮಾಡಲಾಗುತ್ತಿದೆ. ಉತ್ತರಗಳನ್ನು ನೀಡಬೇಕಾದವರು ಸಾಕ್ಷ್ಯಗಳನ್ನು ನಾಶಪಡಿಸುತ್ತಿದ್ದಾರೆ” ಎಂದು ರಾಹುಲ್ ಗಾಂಧಿ ಬರೆದುಕೊಂಡಿದ್ದಾರೆ.

“ಇದು ‘ಮ್ಯಾಚ್ ಫಿಕ್ಸಿಂಗ್’ ಆಗಿದೆ ಎಂಬುದನ್ನು ಸ್ಪಷ್ಟಪಡಿಸುತ್ತದೆ. ಫಿಕ್ಸಿಂಗ್ ಚುನಾವಣೆಯು ಪ್ರಜಾಪ್ರಭುತ್ವಕ್ಕೆ ವಿಷವಾಗಿದೆ. ಚುನಾವಣಾ ಕ್ರಮಗಳು ತೀವ್ರ ಕಳವಳಕಾರಿಯಾಗಿವೆ” ಎಂದು ರಾಹುಲ್ ಗಾಂಧಿ ಹಿಂದಿಯಲ್ಲಿ ಪೋಸ್ಟ್ ಮಾಡಿದ್ದಾರೆ.

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿರುವ ರಾಹುಲ್ ಗಾಂಧಿ, ಮತದಾರರ ಪಟ್ಟಿ, ಮತದಾನದ ಡೇಟಾ ಮತ್ತು ವಿಡಿಯೋ ದೃಶ್ಯಾವಳಿಗಳನ್ನು ಪರಿಶೀಲಿಸಲು ಚುನಾವಣಾ ಆಯೋಗವನ್ನು ಒತ್ತಾಯಿಸುತ್ತಿದ್ದಾರೆ.

ಫಲಿತಾಂಶ ಪ್ರಕಟಗೊಂಡ 45 ದಿನಗಳ ಒಳಗೆ ನ್ಯಾಯಾಲಯದಲ್ಲಿ ಅದನ್ನು ಪ್ರಶ್ನಿಸದಿದ್ದರೆ, ಚುನಾವಣಾ ಪ್ರಕ್ರಿಯೆಯ ಸಿಸಿಟಿವಿ, ವೆಬ್‌ಕಾಸ್ಟಿಂಗ್ ಮತ್ತು ವಿಡಿಯೋ ದೃಶ್ಯಗಳನ್ನು ನಾಶಪಡಿಸುವಂತೆ ಚುನಾವಣಾ ಆಯೋಗವು ತನ್ನ ರಾಜ್ಯ ಚುನಾವಣಾ ಅಧಿಕಾರಿಗಳಿಗೆ ಸೂಚಿಸಿದೆ. ನಂತರ ರಾಹುಲ್ ಗಾಂಧಿ ಪ್ರತಿಕ್ರಿಯೆ ನೀಡಿದ್ದಾರೆ. “ದುರುದ್ದೇಶಪೂರಿತ ನಿರೂಪಣೆಗಳನ್ನು ರಚಿಸಲು ಚುನಾವಣಾ ಆಯೋಗ ತನ್ನ ಎಲೆಕ್ಟ್ರಾನಿಕ್ ಡೇಟಾವನ್ನು ಬಳಸುವ ಭಯವಿದೆ ಎಂದು ಅವರು ಹೇಳಿದ್ದಾರೆ.

ಮೇ 30ರಂದು ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗಳಿಗೆ ಬರೆದ ಪತ್ರದಲ್ಲಿ, ಚುನಾವಣಾ ಪ್ರಕ್ರಿಯೆಯ ವಿವಿಧ ಹಂತಗಳನ್ನು ಬಹು ರೆಕಾರ್ಡಿಂಗ್ ಸಾಧನಗಳಾದ ಛಾಯಾಗ್ರಹಣ, ವಿಡಿಯೋಗ್ರಫಿ, ಸಿಸಿಟಿವಿ ಮತ್ತು ವೆಬ್‌ಕಾಸ್ಟಿಂಗ್ ಮೂಲಕ ದಾಖಲಿಸಲು ಸೂಚನೆಗಳನ್ನು ನೀಡಿರುವುದಾಗಿ ಚುನಾವಣಾ ಆಯೋಗ ತಿಳಿಸಿದೆ.

ಚುನಾವಣಾ ಕಾನೂನುಗಳು ಅಂತಹ ಧ್ವನಿಮುದ್ರಣಗಳನ್ನು ಕಡ್ಡಾಯಗೊಳಿಸದಿದ್ದರೂ, ಆಯೋಗವು ಚುನಾವಣಾ ಪ್ರಕ್ರಿಯೆಯ ವಿವಿಧ ಹಂತಗಳಲ್ಲಿ ಅವುಗಳನ್ನು ಆಂತರಿಕ ನಿರ್ವಹಣಾ ಸಾಧನವಾಗಿ ಬಳಸುತ್ತದೆ.

ಮೋದಿ ಘೋಷಣೆ ನೀಡುವ ಕಲೆಯಲ್ಲಿ ಪರಿಣತಿ ಹೊಂದಿದ್ದಾರೆಯೆ ಹೊರತು, ಪರಿಹಾರಗಳನ್ನಲ್ಲ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...