Homeಕರ್ನಾಟಕಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವು ಪ್ರಕರಣ : ಐವಿ ಕಂಪನಿ ವಿರುದ್ದ ಕ್ರಮಕ್ಕೆ ಸೂಚಿಸಿದ ಸಿಎಂ

ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವು ಪ್ರಕರಣ : ಐವಿ ಕಂಪನಿ ವಿರುದ್ದ ಕ್ರಮಕ್ಕೆ ಸೂಚಿಸಿದ ಸಿಎಂ

- Advertisement -
- Advertisement -

ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ (BIMS) ನವೆಂಬರ್ 10ರ ಬಳಿಕ ಮೃತಪಟ್ಟ ಬಾಣಂತಿಯರ ಸಂಖ್ಯೆ ಗುರುವಾರ (ಡಿ.5) ಐದಕ್ಕೆ ಏರಿಕೆಯಾಗಿದ್ದು, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ತಪ್ಪಿತಸ್ಥರ ವಿರುದ್ದ ಕ್ರಮಕ್ಕೆ ಸೂಚಿಸಿದೆ.

ನವೆಂಬರ್ 9ರಂದು ಜಿಲ್ಲಾಸ್ಪತ್ರೆಯಲ್ಲಿ 9 ಮಹಿಳೆಯರಿಗೆ ಸಿಸೇರಿಯನ್ ಮೂಲಕ ಹೆರಿಗೆ ಮಾಡಿಸಲಾಗಿತ್ತು. ಬಳಿಕ ಅವರಿಗೆ ಐವಿ ದ್ರಾವಣ (ಐವಿ ರಿಂಗರ್ ಲ್ಯಾಕ್ಟೇಟ್ ದ್ರಾವಣ) ನೀಡಲಾಗಿದೆ. ದ್ರಾವಣ ಪಡೆದ ಎರಡೇ ಗಂಟೆಯಲ್ಲಿ ಒಂಬತ್ತೂ ಬಾಣಂತಿಯರು ಅಸ್ವಸ್ಥರಾಗಿದ್ದರು.

ನಂದಿನಿ, ಲಲಿತಮ್ಮ, ಸುಮಯ್ಯಾ ರೋಜಾ, ಮುಸ್ಕಾನ್, ಅಮೃತಾ, ಮಹಾಲಕ್ಷ್ಮೀ, ರಾಜೇಶ್ವರಿ, ಸುಮಲತಾ ಎಂಬವರಿಗೆ ಹೆರಿಗೆ ಬಳಿಕ ಐವಿ ದ್ರಾವಣ ನೀಡಲಾಗಿದೆ. ಈ ಪೈಕಿ ನಂದಿನಿ, ಲಲಿತಮ್ಮ, ರೋಜಾ, ಮುಸ್ಕಾನ್ ಹಾಗೂ ಸುಮಯ್ಯಾ ಮೃತಪಟ್ಟಿದ್ದಾರೆ. ಇನ್ನುಳಿದ ನಾಲ್ವರು ಬಾಣಂತಿಯರು ಚಿಕಿತ್ಸೆ ಪಡೆದು ಬಿಡುಗಡೆಯಾಗಿದ್ದಾರೆ.

ಐವಿ ದ್ರಾವಣ ಪಡೆದಿದ್ದ ಬಳಿಕ ತೀವ್ರ ಅಸ್ವಸ್ಥಗೊಂಡಿದ್ದ ಬಾಣಂತಿಯರ ಪೈಕಿ ಏಳು ಮಂದಿ ಕಿಡ್ನಿ ಮತ್ತು ಬಹು ಅಂಗಾಂಗ ವೈಫಲ್ಯತೆಯಿಂದ ಬಳಲುತ್ತಿದ್ದರು. ಕೂಡಲೇ ಅವರನ್ನು ಬಳ್ಳಾರಿ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವಿಮ್ಸ್​ನಲ್ಲಿ ಪರೀಕ್ಷಿಸಿದಾಗ ಏಳು ಮಂದಿಯಲ್ಲಿ ಮೂವರಲ್ಲಿ ಇಲಿ ಜ್ವರ ಪತ್ತೆಯಾಗಿತ್ತು.

ನವೆಂಬರ್ 10ರ ಬಳಿಕ 9 ಬಾಣಂತಿಯರ ಪೈಕಿ ನಾಲ್ವರು ( ನಂದಿನಿ, ಲಲಿತಮ್ಮ, ರೋಜಾ, ಮುಸ್ಕಾನ್) ಮೃತಪಟ್ಟಿದ್ದರು. ಕಿಡ್ನಿ ವೈಫಲ್ಯ ಮತ್ತು ಇಲಿ ಜ್ವರದಿಂದ ಬಳಲುತ್ತಿದ್ದ ಮತ್ತೊಬ್ಬರು ಬಾಣಂತಿ ಸುಮ್ಮಯ್ಯಾ ಅವರು ನವೆಂಬರ್​ 12ರಿಂದ ವಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಗುರುವಾರ (ಡಿ.5) ಚಿಕಿತ್ಸೆ ಫಲಿಸದೆ ಸುಮಯ್ಯಾ ಮೃತಪಟ್ಟಿದ್ದಾರೆ. ಮೃತ ಬಾಣಂತಿಯರೆಲ್ಲರೂ 25 ವರ್ಷದೊಳಗಿನವರು ಎಂದು ತಿಳಿದು ಬಂದಿದೆ.

ಐವಿ ಕಂಪನಿ ವಿರುದ್ದ ಕ್ರಮಕ್ಕೆ ಸೂಚನೆ

ಶುಕ್ರವಾರ (ಡಿ.6) ನಡೆದ ಸಚಿವ ಸಂಪುಟ ಸಭೆಗೆ ಬಾಣಂತಿಯರ ಸಾವಿನ ಕುರಿತು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾಹಿತಿ ನೀಡಿದ್ದಾರೆ. ವಿಷಯ ಅರಿತುಕೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ ಐವಿ ದ್ರಾವಣ ಪೂರೈಕೆ ಮಾಡಿದ ಕಂಪನಿ ವಿರುದ್ದ ಕಠಿಣ ಕ್ರಮಕ್ಕೆ ಸೂಚಿಸಿದ್ದಾರೆ.

ಸಂಪುಟ ಸಭೆಯ ಬಳಿಕ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ “ಔಷಧಿ ಸರಬರಾಜು ನಿಗಮಕ್ಕೆ ಕಾಯಕಲ್ಪದ ಅಗತ್ಯವಿದೆ. ಗುಣಮಟ್ಟದ ಔಷಧಿಗಳನ್ನು ಪೂರೈಸುವಂತಹ ದೊಡ್ಡ ಕಂಪನಿಗಳು ನಿಗಮ ಕರೆಯುವ ಟೆಂಡರ್‌ಗಳಲ್ಲಿ ಭಾಗಿಯಾಗುವಂತೆ ನಿಯಮಗಳಲ್ಲಿ ಬದಲಾವಣೆಗಳನ್ನು ಸೂಚಿಸಿ ಪ್ರಸ್ತಾವನೆ ಸಲ್ಲಿಸಲಾಗಿದೆ” ಎಂದು ತಿಳಿಸಿದ್ದಾರೆ.

ರಾಜೀನಾಮೆಗೆ ಸಿದ್ದ-ದಿನೇಶ್ ಗುಂಡೂರಾವ್ 

ಬಾಣಂತಿಯರ ಸಾವಿನ ಪ್ರಕರಣದಲ್ಲಿ ನನ್ನಿಂದ ಲೋಪವಾಗಿದ್ದರೆ, ಖಂಡಿತ ರಾಜೀನಾಮೆ ನೀಡಲು ಸಿದ್ದ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಆಡಳಿತ ಮತ್ತು ಪ್ರತಿಪಕ್ಷಗಳು ಜೊತೆ ಸೇರಿ ಈ ಸಮಸ್ಯೆ ಪರಿಹರಿಸಬೇಕಿದೆ. ಪ್ರತಿಪಕ್ಷದವರ ಸಲಹೆಗಳನ್ನು ಮುಕ್ತವಾಗಿ ಸ್ವೀಕರಿಸುತ್ತೇವೆ ಎಂದಿದ್ದಾರೆ.

‘ರಾಜ್ಯ ತಿರಸ್ಕರಿಸಿದ್ದ ದ್ರಾವಣಕ್ಕೆ ಕೇಂದ್ರ ಪುರಸ್ಕಾರ’

ಬಾಣಂತಿಯರ ಸಾವಿಗೆ ಐವಿ ದ್ರಾವಣ ಕಾರಣ ಎಂದು ಮೇಲ್ನೋಟಕ್ಕೆ ಕಂಡು ಬಂದಿರುವುದಾಗಿ ವರದಿಯಾಗಿದೆ. ‘ಪಶ್ಚಿಮ್ ಬಂಗಾ ಫಾರ್ಮಾಸ್ಯುಟಿಕಲ್ಸ್’ ಎಂಬ ಕಂಪನಿ ಪೂರೈಸಿರುವ ಐವಿ ದ್ರಾವಣ ಕೊಟ್ಟ ಬಳಿಕ ಬಾಣಂತಿಯರು ಅಸ್ವಸ್ಥಗೊಂಡು ಸಾವನ್ನಪ್ಪಿದ್ದಾರೆ ಎಂದು ಆರೋಪಿಸಲಾಗಿದೆ.

“ಪಶ್ಚಿಮ್ ಬಂಗಾ ಫಾರ್ಮಾಸ್ಯುಟಿಕಲ್ಸ್ ಕಂಪನಿಯ ಐವಿ ದ್ರಾವಣ ಕಳಪೆ ಗುಣಮಟ್ಟದ್ದು ಎಂಬುವುದು ರಾಜ್ಯದ ಪ್ರಯೋಗಾಲಯಗಳು ನಡೆಸಿದ ಪರೀಕ್ಷೆಗಳಲ್ಲಿ ಪತ್ತೆಯಾಗಿತ್ತು. ಆದರೆ, ಕೇಂದ್ರ ಸರ್ಕಾರದ ಔಷಧ ನಿಯಂತ್ರಕರು ಅದೇ ದ್ರಾವಣವನ್ನು ಪುರಸ್ಕರಿಸಿದ್ದಾರೆ” ಎಂದು ಸಚಿವ ದಿನೇಶ್ ಗುಂಡೂರಾವ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಅಂತಹ ಕಂಪನಿಗಳು ಮತ್ತು ಅವುಗಳ ಉತ್ಪನ್ನಗಳು ಮಾರಾಟಕ್ಕೆ ಅರ್ಹ ಎಂದು ಕೇಂದ್ರದ ಸಂಸ್ಥೆಗಳು ವರದಿ ನೀಡುವ ಕಾರಣದಿಂದ ಅವುಗಳನ್ನು ಕಪ್ಪುಪಟ್ಟಿಗೆ ಸೇರಿಸಲು ಸಾಧ್ಯವಾಗಿಲ್ಲ. ಅವುಗಳ ಉತ್ಪನ್ನಗಳನ್ನು ತಿರಸ್ಕರಿಸಲೂ ಆಗುವುದಿಲ್ಲ” ಎಂದಿದ್ದಾರೆ.

ಈ ಬಗ್ಗೆ ಕೇಂದ್ರ ಔಷಧ ನಿಯಂತ್ರಕರಿಗೆ ಪತ್ರ ಬರೆದಿದ್ದೇವೆ. ಅವರ ಕ್ರಮದಿಂದ ತೊಂದರೆ ಆಗುತ್ತಿದೆ ಎಂಬುವುದನ್ನು ವಿವರಿಸಿದ್ದೇವೆ. ಜೊತೆಗೆ ಉತ್ತಮ ಗುಣಮಟ್ಟದ ಔಷಧಗಳ ಪೂರೈಕೆಗೆ ಅನುಕೂಲವಾಗುವಂತೆ ಟೆಂಡರ್ ನಿಯಮಗಳನ್ನು ಕಠಿಣಗೊಳಿಸಲು ಕ್ರಮ ತೆಗೆದುಕೊಂಡಿದ್ದೇವೆ ಎಂದು ತಿಳಿಸಿದ್ದಾರೆ.

ಲೋಕಾಯುಕ್ತ ತನಿಖೆ ನಡೆಸಿ-ಆರ್.ಅಶೋಕ್

ಬಾಣಂತಿಯರ ಸಾವು ಪ್ರಕರಣಗಳನ್ನು ಲೋಕಾಯುಕ್ತ ತನಿಖೆಗೆ ವಹಿಸಬೇಕು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕರ ಆರ್. ಅಶೋಕ್ ಆಗ್ರಹಿಸಿದ್ದಾರೆ. ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

ನ್ಯಾಯಾಂಗ ತನಿಖೆಗೆ ಬಿಜೆಪಿ ಮನವಿ

ಬಳ್ಳಾರಿ ಮತ್ತು ರಾಜ್ಯದ ವಿವಿಧ ಜಿಲ್ಲಾಸ್ಪತ್ರೆಗಳಲ್ಲಿ ಬಾಣಂತಿಯರು ಮತ್ತು ಶಿಶು ಮರಣದ ಪ್ರಕರಣಗಳ ಕುರಿತು ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಬಿಜೆಪಿ ರಾಜ್ಯ ಘಟಕದ ನಿಯೋಗ ಲೋಕಾಯುಕ್ತರನ್ನು ಒತ್ತಾಯಿಸಿದೆ.

ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ, ವಿಧಾನಪರಿಷತ್ ಸದಸ್ಯ ಎನ್‌ ರವಿಕುಮಾರ್, ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಮಂಜುಳಾ, ಶಾಸಕ ಸಿ.ಕೆ ರಾಮಮೂರ್ತಿ, ಸೇರಿದಂತೆ ಪ್ರಮುಖರು ಇದ್ದ ನಿಯೋಗ ಶುಕ್ರವಾರ (ಡಿ.6) ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್ ಪಾಟೀಲ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ.

ರಾಜ್ಯ ಸರ್ಕಾರವೇ ಹೊಣೆ- ಬಿ.ವೈ ವಿಜಯೇಂದ್ರ

ಕಪ್ಪು ಪಟ್ಟಿಗೆ ಸೇರಿಸಲಾದ ಕಂಪನಿಯ ಐವಿ ದ್ರಾವಣ ಖರೀದಿಸಲಾಗಿದೆ. ಅದರಿಂದ ಬಾಣಂತಿಯರು ಸಾವನ್ನಪ್ಪಿದ್ದಾರೆ. ರಾಜ್ಯ ಸರ್ಕಾರವೇ ಇದಕ್ಕೆ ನೇರ ಹೊಣೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ | ಚಿಕ್ಕಮಗಳೂರು : ನರಸೀಪುರದಲ್ಲಿ ಪೂಜೆ ಪುನರಾರಂಭ : ಅಧಿಕಾರಿಗಳ ಸಮ್ಮುಖದಲ್ಲಿ ದೇಗುಲ ಪ್ರವೇಶಿಸಿದ ದಲಿತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...