Homeಕರ್ನಾಟಕಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವು ಪ್ರಕರಣ : ಐವಿ ಕಂಪನಿ ವಿರುದ್ದ ಕ್ರಮಕ್ಕೆ ಸೂಚಿಸಿದ ಸಿಎಂ

ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವು ಪ್ರಕರಣ : ಐವಿ ಕಂಪನಿ ವಿರುದ್ದ ಕ್ರಮಕ್ಕೆ ಸೂಚಿಸಿದ ಸಿಎಂ

- Advertisement -
- Advertisement -

ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ (BIMS) ನವೆಂಬರ್ 10ರ ಬಳಿಕ ಮೃತಪಟ್ಟ ಬಾಣಂತಿಯರ ಸಂಖ್ಯೆ ಗುರುವಾರ (ಡಿ.5) ಐದಕ್ಕೆ ಏರಿಕೆಯಾಗಿದ್ದು, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ತಪ್ಪಿತಸ್ಥರ ವಿರುದ್ದ ಕ್ರಮಕ್ಕೆ ಸೂಚಿಸಿದೆ.

ನವೆಂಬರ್ 9ರಂದು ಜಿಲ್ಲಾಸ್ಪತ್ರೆಯಲ್ಲಿ 9 ಮಹಿಳೆಯರಿಗೆ ಸಿಸೇರಿಯನ್ ಮೂಲಕ ಹೆರಿಗೆ ಮಾಡಿಸಲಾಗಿತ್ತು. ಬಳಿಕ ಅವರಿಗೆ ಐವಿ ದ್ರಾವಣ (ಐವಿ ರಿಂಗರ್ ಲ್ಯಾಕ್ಟೇಟ್ ದ್ರಾವಣ) ನೀಡಲಾಗಿದೆ. ದ್ರಾವಣ ಪಡೆದ ಎರಡೇ ಗಂಟೆಯಲ್ಲಿ ಒಂಬತ್ತೂ ಬಾಣಂತಿಯರು ಅಸ್ವಸ್ಥರಾಗಿದ್ದರು.

ನಂದಿನಿ, ಲಲಿತಮ್ಮ, ಸುಮಯ್ಯಾ ರೋಜಾ, ಮುಸ್ಕಾನ್, ಅಮೃತಾ, ಮಹಾಲಕ್ಷ್ಮೀ, ರಾಜೇಶ್ವರಿ, ಸುಮಲತಾ ಎಂಬವರಿಗೆ ಹೆರಿಗೆ ಬಳಿಕ ಐವಿ ದ್ರಾವಣ ನೀಡಲಾಗಿದೆ. ಈ ಪೈಕಿ ನಂದಿನಿ, ಲಲಿತಮ್ಮ, ರೋಜಾ, ಮುಸ್ಕಾನ್ ಹಾಗೂ ಸುಮಯ್ಯಾ ಮೃತಪಟ್ಟಿದ್ದಾರೆ. ಇನ್ನುಳಿದ ನಾಲ್ವರು ಬಾಣಂತಿಯರು ಚಿಕಿತ್ಸೆ ಪಡೆದು ಬಿಡುಗಡೆಯಾಗಿದ್ದಾರೆ.

ಐವಿ ದ್ರಾವಣ ಪಡೆದಿದ್ದ ಬಳಿಕ ತೀವ್ರ ಅಸ್ವಸ್ಥಗೊಂಡಿದ್ದ ಬಾಣಂತಿಯರ ಪೈಕಿ ಏಳು ಮಂದಿ ಕಿಡ್ನಿ ಮತ್ತು ಬಹು ಅಂಗಾಂಗ ವೈಫಲ್ಯತೆಯಿಂದ ಬಳಲುತ್ತಿದ್ದರು. ಕೂಡಲೇ ಅವರನ್ನು ಬಳ್ಳಾರಿ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವಿಮ್ಸ್​ನಲ್ಲಿ ಪರೀಕ್ಷಿಸಿದಾಗ ಏಳು ಮಂದಿಯಲ್ಲಿ ಮೂವರಲ್ಲಿ ಇಲಿ ಜ್ವರ ಪತ್ತೆಯಾಗಿತ್ತು.

ನವೆಂಬರ್ 10ರ ಬಳಿಕ 9 ಬಾಣಂತಿಯರ ಪೈಕಿ ನಾಲ್ವರು ( ನಂದಿನಿ, ಲಲಿತಮ್ಮ, ರೋಜಾ, ಮುಸ್ಕಾನ್) ಮೃತಪಟ್ಟಿದ್ದರು. ಕಿಡ್ನಿ ವೈಫಲ್ಯ ಮತ್ತು ಇಲಿ ಜ್ವರದಿಂದ ಬಳಲುತ್ತಿದ್ದ ಮತ್ತೊಬ್ಬರು ಬಾಣಂತಿ ಸುಮ್ಮಯ್ಯಾ ಅವರು ನವೆಂಬರ್​ 12ರಿಂದ ವಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಗುರುವಾರ (ಡಿ.5) ಚಿಕಿತ್ಸೆ ಫಲಿಸದೆ ಸುಮಯ್ಯಾ ಮೃತಪಟ್ಟಿದ್ದಾರೆ. ಮೃತ ಬಾಣಂತಿಯರೆಲ್ಲರೂ 25 ವರ್ಷದೊಳಗಿನವರು ಎಂದು ತಿಳಿದು ಬಂದಿದೆ.

ಐವಿ ಕಂಪನಿ ವಿರುದ್ದ ಕ್ರಮಕ್ಕೆ ಸೂಚನೆ

ಶುಕ್ರವಾರ (ಡಿ.6) ನಡೆದ ಸಚಿವ ಸಂಪುಟ ಸಭೆಗೆ ಬಾಣಂತಿಯರ ಸಾವಿನ ಕುರಿತು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾಹಿತಿ ನೀಡಿದ್ದಾರೆ. ವಿಷಯ ಅರಿತುಕೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ ಐವಿ ದ್ರಾವಣ ಪೂರೈಕೆ ಮಾಡಿದ ಕಂಪನಿ ವಿರುದ್ದ ಕಠಿಣ ಕ್ರಮಕ್ಕೆ ಸೂಚಿಸಿದ್ದಾರೆ.

ಸಂಪುಟ ಸಭೆಯ ಬಳಿಕ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ “ಔಷಧಿ ಸರಬರಾಜು ನಿಗಮಕ್ಕೆ ಕಾಯಕಲ್ಪದ ಅಗತ್ಯವಿದೆ. ಗುಣಮಟ್ಟದ ಔಷಧಿಗಳನ್ನು ಪೂರೈಸುವಂತಹ ದೊಡ್ಡ ಕಂಪನಿಗಳು ನಿಗಮ ಕರೆಯುವ ಟೆಂಡರ್‌ಗಳಲ್ಲಿ ಭಾಗಿಯಾಗುವಂತೆ ನಿಯಮಗಳಲ್ಲಿ ಬದಲಾವಣೆಗಳನ್ನು ಸೂಚಿಸಿ ಪ್ರಸ್ತಾವನೆ ಸಲ್ಲಿಸಲಾಗಿದೆ” ಎಂದು ತಿಳಿಸಿದ್ದಾರೆ.

ರಾಜೀನಾಮೆಗೆ ಸಿದ್ದ-ದಿನೇಶ್ ಗುಂಡೂರಾವ್ 

ಬಾಣಂತಿಯರ ಸಾವಿನ ಪ್ರಕರಣದಲ್ಲಿ ನನ್ನಿಂದ ಲೋಪವಾಗಿದ್ದರೆ, ಖಂಡಿತ ರಾಜೀನಾಮೆ ನೀಡಲು ಸಿದ್ದ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಆಡಳಿತ ಮತ್ತು ಪ್ರತಿಪಕ್ಷಗಳು ಜೊತೆ ಸೇರಿ ಈ ಸಮಸ್ಯೆ ಪರಿಹರಿಸಬೇಕಿದೆ. ಪ್ರತಿಪಕ್ಷದವರ ಸಲಹೆಗಳನ್ನು ಮುಕ್ತವಾಗಿ ಸ್ವೀಕರಿಸುತ್ತೇವೆ ಎಂದಿದ್ದಾರೆ.

‘ರಾಜ್ಯ ತಿರಸ್ಕರಿಸಿದ್ದ ದ್ರಾವಣಕ್ಕೆ ಕೇಂದ್ರ ಪುರಸ್ಕಾರ’

ಬಾಣಂತಿಯರ ಸಾವಿಗೆ ಐವಿ ದ್ರಾವಣ ಕಾರಣ ಎಂದು ಮೇಲ್ನೋಟಕ್ಕೆ ಕಂಡು ಬಂದಿರುವುದಾಗಿ ವರದಿಯಾಗಿದೆ. ‘ಪಶ್ಚಿಮ್ ಬಂಗಾ ಫಾರ್ಮಾಸ್ಯುಟಿಕಲ್ಸ್’ ಎಂಬ ಕಂಪನಿ ಪೂರೈಸಿರುವ ಐವಿ ದ್ರಾವಣ ಕೊಟ್ಟ ಬಳಿಕ ಬಾಣಂತಿಯರು ಅಸ್ವಸ್ಥಗೊಂಡು ಸಾವನ್ನಪ್ಪಿದ್ದಾರೆ ಎಂದು ಆರೋಪಿಸಲಾಗಿದೆ.

“ಪಶ್ಚಿಮ್ ಬಂಗಾ ಫಾರ್ಮಾಸ್ಯುಟಿಕಲ್ಸ್ ಕಂಪನಿಯ ಐವಿ ದ್ರಾವಣ ಕಳಪೆ ಗುಣಮಟ್ಟದ್ದು ಎಂಬುವುದು ರಾಜ್ಯದ ಪ್ರಯೋಗಾಲಯಗಳು ನಡೆಸಿದ ಪರೀಕ್ಷೆಗಳಲ್ಲಿ ಪತ್ತೆಯಾಗಿತ್ತು. ಆದರೆ, ಕೇಂದ್ರ ಸರ್ಕಾರದ ಔಷಧ ನಿಯಂತ್ರಕರು ಅದೇ ದ್ರಾವಣವನ್ನು ಪುರಸ್ಕರಿಸಿದ್ದಾರೆ” ಎಂದು ಸಚಿವ ದಿನೇಶ್ ಗುಂಡೂರಾವ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಅಂತಹ ಕಂಪನಿಗಳು ಮತ್ತು ಅವುಗಳ ಉತ್ಪನ್ನಗಳು ಮಾರಾಟಕ್ಕೆ ಅರ್ಹ ಎಂದು ಕೇಂದ್ರದ ಸಂಸ್ಥೆಗಳು ವರದಿ ನೀಡುವ ಕಾರಣದಿಂದ ಅವುಗಳನ್ನು ಕಪ್ಪುಪಟ್ಟಿಗೆ ಸೇರಿಸಲು ಸಾಧ್ಯವಾಗಿಲ್ಲ. ಅವುಗಳ ಉತ್ಪನ್ನಗಳನ್ನು ತಿರಸ್ಕರಿಸಲೂ ಆಗುವುದಿಲ್ಲ” ಎಂದಿದ್ದಾರೆ.

ಈ ಬಗ್ಗೆ ಕೇಂದ್ರ ಔಷಧ ನಿಯಂತ್ರಕರಿಗೆ ಪತ್ರ ಬರೆದಿದ್ದೇವೆ. ಅವರ ಕ್ರಮದಿಂದ ತೊಂದರೆ ಆಗುತ್ತಿದೆ ಎಂಬುವುದನ್ನು ವಿವರಿಸಿದ್ದೇವೆ. ಜೊತೆಗೆ ಉತ್ತಮ ಗುಣಮಟ್ಟದ ಔಷಧಗಳ ಪೂರೈಕೆಗೆ ಅನುಕೂಲವಾಗುವಂತೆ ಟೆಂಡರ್ ನಿಯಮಗಳನ್ನು ಕಠಿಣಗೊಳಿಸಲು ಕ್ರಮ ತೆಗೆದುಕೊಂಡಿದ್ದೇವೆ ಎಂದು ತಿಳಿಸಿದ್ದಾರೆ.

ಲೋಕಾಯುಕ್ತ ತನಿಖೆ ನಡೆಸಿ-ಆರ್.ಅಶೋಕ್

ಬಾಣಂತಿಯರ ಸಾವು ಪ್ರಕರಣಗಳನ್ನು ಲೋಕಾಯುಕ್ತ ತನಿಖೆಗೆ ವಹಿಸಬೇಕು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕರ ಆರ್. ಅಶೋಕ್ ಆಗ್ರಹಿಸಿದ್ದಾರೆ. ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

ನ್ಯಾಯಾಂಗ ತನಿಖೆಗೆ ಬಿಜೆಪಿ ಮನವಿ

ಬಳ್ಳಾರಿ ಮತ್ತು ರಾಜ್ಯದ ವಿವಿಧ ಜಿಲ್ಲಾಸ್ಪತ್ರೆಗಳಲ್ಲಿ ಬಾಣಂತಿಯರು ಮತ್ತು ಶಿಶು ಮರಣದ ಪ್ರಕರಣಗಳ ಕುರಿತು ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಬಿಜೆಪಿ ರಾಜ್ಯ ಘಟಕದ ನಿಯೋಗ ಲೋಕಾಯುಕ್ತರನ್ನು ಒತ್ತಾಯಿಸಿದೆ.

ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ, ವಿಧಾನಪರಿಷತ್ ಸದಸ್ಯ ಎನ್‌ ರವಿಕುಮಾರ್, ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಮಂಜುಳಾ, ಶಾಸಕ ಸಿ.ಕೆ ರಾಮಮೂರ್ತಿ, ಸೇರಿದಂತೆ ಪ್ರಮುಖರು ಇದ್ದ ನಿಯೋಗ ಶುಕ್ರವಾರ (ಡಿ.6) ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್ ಪಾಟೀಲ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ.

ರಾಜ್ಯ ಸರ್ಕಾರವೇ ಹೊಣೆ- ಬಿ.ವೈ ವಿಜಯೇಂದ್ರ

ಕಪ್ಪು ಪಟ್ಟಿಗೆ ಸೇರಿಸಲಾದ ಕಂಪನಿಯ ಐವಿ ದ್ರಾವಣ ಖರೀದಿಸಲಾಗಿದೆ. ಅದರಿಂದ ಬಾಣಂತಿಯರು ಸಾವನ್ನಪ್ಪಿದ್ದಾರೆ. ರಾಜ್ಯ ಸರ್ಕಾರವೇ ಇದಕ್ಕೆ ನೇರ ಹೊಣೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ | ಚಿಕ್ಕಮಗಳೂರು : ನರಸೀಪುರದಲ್ಲಿ ಪೂಜೆ ಪುನರಾರಂಭ : ಅಧಿಕಾರಿಗಳ ಸಮ್ಮುಖದಲ್ಲಿ ದೇಗುಲ ಪ್ರವೇಶಿಸಿದ ದಲಿತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...