Homeಕರ್ನಾಟಕಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವು ಪ್ರಕರಣ : ಐವಿ ಕಂಪನಿ ವಿರುದ್ದ ಕ್ರಮಕ್ಕೆ ಸೂಚಿಸಿದ ಸಿಎಂ

ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವು ಪ್ರಕರಣ : ಐವಿ ಕಂಪನಿ ವಿರುದ್ದ ಕ್ರಮಕ್ಕೆ ಸೂಚಿಸಿದ ಸಿಎಂ

- Advertisement -
- Advertisement -

ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ (BIMS) ನವೆಂಬರ್ 10ರ ಬಳಿಕ ಮೃತಪಟ್ಟ ಬಾಣಂತಿಯರ ಸಂಖ್ಯೆ ಗುರುವಾರ (ಡಿ.5) ಐದಕ್ಕೆ ಏರಿಕೆಯಾಗಿದ್ದು, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ತಪ್ಪಿತಸ್ಥರ ವಿರುದ್ದ ಕ್ರಮಕ್ಕೆ ಸೂಚಿಸಿದೆ.

ನವೆಂಬರ್ 9ರಂದು ಜಿಲ್ಲಾಸ್ಪತ್ರೆಯಲ್ಲಿ 9 ಮಹಿಳೆಯರಿಗೆ ಸಿಸೇರಿಯನ್ ಮೂಲಕ ಹೆರಿಗೆ ಮಾಡಿಸಲಾಗಿತ್ತು. ಬಳಿಕ ಅವರಿಗೆ ಐವಿ ದ್ರಾವಣ (ಐವಿ ರಿಂಗರ್ ಲ್ಯಾಕ್ಟೇಟ್ ದ್ರಾವಣ) ನೀಡಲಾಗಿದೆ. ದ್ರಾವಣ ಪಡೆದ ಎರಡೇ ಗಂಟೆಯಲ್ಲಿ ಒಂಬತ್ತೂ ಬಾಣಂತಿಯರು ಅಸ್ವಸ್ಥರಾಗಿದ್ದರು.

ನಂದಿನಿ, ಲಲಿತಮ್ಮ, ಸುಮಯ್ಯಾ ರೋಜಾ, ಮುಸ್ಕಾನ್, ಅಮೃತಾ, ಮಹಾಲಕ್ಷ್ಮೀ, ರಾಜೇಶ್ವರಿ, ಸುಮಲತಾ ಎಂಬವರಿಗೆ ಹೆರಿಗೆ ಬಳಿಕ ಐವಿ ದ್ರಾವಣ ನೀಡಲಾಗಿದೆ. ಈ ಪೈಕಿ ನಂದಿನಿ, ಲಲಿತಮ್ಮ, ರೋಜಾ, ಮುಸ್ಕಾನ್ ಹಾಗೂ ಸುಮಯ್ಯಾ ಮೃತಪಟ್ಟಿದ್ದಾರೆ. ಇನ್ನುಳಿದ ನಾಲ್ವರು ಬಾಣಂತಿಯರು ಚಿಕಿತ್ಸೆ ಪಡೆದು ಬಿಡುಗಡೆಯಾಗಿದ್ದಾರೆ.

ಐವಿ ದ್ರಾವಣ ಪಡೆದಿದ್ದ ಬಳಿಕ ತೀವ್ರ ಅಸ್ವಸ್ಥಗೊಂಡಿದ್ದ ಬಾಣಂತಿಯರ ಪೈಕಿ ಏಳು ಮಂದಿ ಕಿಡ್ನಿ ಮತ್ತು ಬಹು ಅಂಗಾಂಗ ವೈಫಲ್ಯತೆಯಿಂದ ಬಳಲುತ್ತಿದ್ದರು. ಕೂಡಲೇ ಅವರನ್ನು ಬಳ್ಳಾರಿ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವಿಮ್ಸ್​ನಲ್ಲಿ ಪರೀಕ್ಷಿಸಿದಾಗ ಏಳು ಮಂದಿಯಲ್ಲಿ ಮೂವರಲ್ಲಿ ಇಲಿ ಜ್ವರ ಪತ್ತೆಯಾಗಿತ್ತು.

ನವೆಂಬರ್ 10ರ ಬಳಿಕ 9 ಬಾಣಂತಿಯರ ಪೈಕಿ ನಾಲ್ವರು ( ನಂದಿನಿ, ಲಲಿತಮ್ಮ, ರೋಜಾ, ಮುಸ್ಕಾನ್) ಮೃತಪಟ್ಟಿದ್ದರು. ಕಿಡ್ನಿ ವೈಫಲ್ಯ ಮತ್ತು ಇಲಿ ಜ್ವರದಿಂದ ಬಳಲುತ್ತಿದ್ದ ಮತ್ತೊಬ್ಬರು ಬಾಣಂತಿ ಸುಮ್ಮಯ್ಯಾ ಅವರು ನವೆಂಬರ್​ 12ರಿಂದ ವಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಗುರುವಾರ (ಡಿ.5) ಚಿಕಿತ್ಸೆ ಫಲಿಸದೆ ಸುಮಯ್ಯಾ ಮೃತಪಟ್ಟಿದ್ದಾರೆ. ಮೃತ ಬಾಣಂತಿಯರೆಲ್ಲರೂ 25 ವರ್ಷದೊಳಗಿನವರು ಎಂದು ತಿಳಿದು ಬಂದಿದೆ.

ಐವಿ ಕಂಪನಿ ವಿರುದ್ದ ಕ್ರಮಕ್ಕೆ ಸೂಚನೆ

ಶುಕ್ರವಾರ (ಡಿ.6) ನಡೆದ ಸಚಿವ ಸಂಪುಟ ಸಭೆಗೆ ಬಾಣಂತಿಯರ ಸಾವಿನ ಕುರಿತು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾಹಿತಿ ನೀಡಿದ್ದಾರೆ. ವಿಷಯ ಅರಿತುಕೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ ಐವಿ ದ್ರಾವಣ ಪೂರೈಕೆ ಮಾಡಿದ ಕಂಪನಿ ವಿರುದ್ದ ಕಠಿಣ ಕ್ರಮಕ್ಕೆ ಸೂಚಿಸಿದ್ದಾರೆ.

ಸಂಪುಟ ಸಭೆಯ ಬಳಿಕ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ “ಔಷಧಿ ಸರಬರಾಜು ನಿಗಮಕ್ಕೆ ಕಾಯಕಲ್ಪದ ಅಗತ್ಯವಿದೆ. ಗುಣಮಟ್ಟದ ಔಷಧಿಗಳನ್ನು ಪೂರೈಸುವಂತಹ ದೊಡ್ಡ ಕಂಪನಿಗಳು ನಿಗಮ ಕರೆಯುವ ಟೆಂಡರ್‌ಗಳಲ್ಲಿ ಭಾಗಿಯಾಗುವಂತೆ ನಿಯಮಗಳಲ್ಲಿ ಬದಲಾವಣೆಗಳನ್ನು ಸೂಚಿಸಿ ಪ್ರಸ್ತಾವನೆ ಸಲ್ಲಿಸಲಾಗಿದೆ” ಎಂದು ತಿಳಿಸಿದ್ದಾರೆ.

ರಾಜೀನಾಮೆಗೆ ಸಿದ್ದ-ದಿನೇಶ್ ಗುಂಡೂರಾವ್ 

ಬಾಣಂತಿಯರ ಸಾವಿನ ಪ್ರಕರಣದಲ್ಲಿ ನನ್ನಿಂದ ಲೋಪವಾಗಿದ್ದರೆ, ಖಂಡಿತ ರಾಜೀನಾಮೆ ನೀಡಲು ಸಿದ್ದ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಆಡಳಿತ ಮತ್ತು ಪ್ರತಿಪಕ್ಷಗಳು ಜೊತೆ ಸೇರಿ ಈ ಸಮಸ್ಯೆ ಪರಿಹರಿಸಬೇಕಿದೆ. ಪ್ರತಿಪಕ್ಷದವರ ಸಲಹೆಗಳನ್ನು ಮುಕ್ತವಾಗಿ ಸ್ವೀಕರಿಸುತ್ತೇವೆ ಎಂದಿದ್ದಾರೆ.

‘ರಾಜ್ಯ ತಿರಸ್ಕರಿಸಿದ್ದ ದ್ರಾವಣಕ್ಕೆ ಕೇಂದ್ರ ಪುರಸ್ಕಾರ’

ಬಾಣಂತಿಯರ ಸಾವಿಗೆ ಐವಿ ದ್ರಾವಣ ಕಾರಣ ಎಂದು ಮೇಲ್ನೋಟಕ್ಕೆ ಕಂಡು ಬಂದಿರುವುದಾಗಿ ವರದಿಯಾಗಿದೆ. ‘ಪಶ್ಚಿಮ್ ಬಂಗಾ ಫಾರ್ಮಾಸ್ಯುಟಿಕಲ್ಸ್’ ಎಂಬ ಕಂಪನಿ ಪೂರೈಸಿರುವ ಐವಿ ದ್ರಾವಣ ಕೊಟ್ಟ ಬಳಿಕ ಬಾಣಂತಿಯರು ಅಸ್ವಸ್ಥಗೊಂಡು ಸಾವನ್ನಪ್ಪಿದ್ದಾರೆ ಎಂದು ಆರೋಪಿಸಲಾಗಿದೆ.

“ಪಶ್ಚಿಮ್ ಬಂಗಾ ಫಾರ್ಮಾಸ್ಯುಟಿಕಲ್ಸ್ ಕಂಪನಿಯ ಐವಿ ದ್ರಾವಣ ಕಳಪೆ ಗುಣಮಟ್ಟದ್ದು ಎಂಬುವುದು ರಾಜ್ಯದ ಪ್ರಯೋಗಾಲಯಗಳು ನಡೆಸಿದ ಪರೀಕ್ಷೆಗಳಲ್ಲಿ ಪತ್ತೆಯಾಗಿತ್ತು. ಆದರೆ, ಕೇಂದ್ರ ಸರ್ಕಾರದ ಔಷಧ ನಿಯಂತ್ರಕರು ಅದೇ ದ್ರಾವಣವನ್ನು ಪುರಸ್ಕರಿಸಿದ್ದಾರೆ” ಎಂದು ಸಚಿವ ದಿನೇಶ್ ಗುಂಡೂರಾವ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಅಂತಹ ಕಂಪನಿಗಳು ಮತ್ತು ಅವುಗಳ ಉತ್ಪನ್ನಗಳು ಮಾರಾಟಕ್ಕೆ ಅರ್ಹ ಎಂದು ಕೇಂದ್ರದ ಸಂಸ್ಥೆಗಳು ವರದಿ ನೀಡುವ ಕಾರಣದಿಂದ ಅವುಗಳನ್ನು ಕಪ್ಪುಪಟ್ಟಿಗೆ ಸೇರಿಸಲು ಸಾಧ್ಯವಾಗಿಲ್ಲ. ಅವುಗಳ ಉತ್ಪನ್ನಗಳನ್ನು ತಿರಸ್ಕರಿಸಲೂ ಆಗುವುದಿಲ್ಲ” ಎಂದಿದ್ದಾರೆ.

ಈ ಬಗ್ಗೆ ಕೇಂದ್ರ ಔಷಧ ನಿಯಂತ್ರಕರಿಗೆ ಪತ್ರ ಬರೆದಿದ್ದೇವೆ. ಅವರ ಕ್ರಮದಿಂದ ತೊಂದರೆ ಆಗುತ್ತಿದೆ ಎಂಬುವುದನ್ನು ವಿವರಿಸಿದ್ದೇವೆ. ಜೊತೆಗೆ ಉತ್ತಮ ಗುಣಮಟ್ಟದ ಔಷಧಗಳ ಪೂರೈಕೆಗೆ ಅನುಕೂಲವಾಗುವಂತೆ ಟೆಂಡರ್ ನಿಯಮಗಳನ್ನು ಕಠಿಣಗೊಳಿಸಲು ಕ್ರಮ ತೆಗೆದುಕೊಂಡಿದ್ದೇವೆ ಎಂದು ತಿಳಿಸಿದ್ದಾರೆ.

ಲೋಕಾಯುಕ್ತ ತನಿಖೆ ನಡೆಸಿ-ಆರ್.ಅಶೋಕ್

ಬಾಣಂತಿಯರ ಸಾವು ಪ್ರಕರಣಗಳನ್ನು ಲೋಕಾಯುಕ್ತ ತನಿಖೆಗೆ ವಹಿಸಬೇಕು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕರ ಆರ್. ಅಶೋಕ್ ಆಗ್ರಹಿಸಿದ್ದಾರೆ. ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

ನ್ಯಾಯಾಂಗ ತನಿಖೆಗೆ ಬಿಜೆಪಿ ಮನವಿ

ಬಳ್ಳಾರಿ ಮತ್ತು ರಾಜ್ಯದ ವಿವಿಧ ಜಿಲ್ಲಾಸ್ಪತ್ರೆಗಳಲ್ಲಿ ಬಾಣಂತಿಯರು ಮತ್ತು ಶಿಶು ಮರಣದ ಪ್ರಕರಣಗಳ ಕುರಿತು ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಬಿಜೆಪಿ ರಾಜ್ಯ ಘಟಕದ ನಿಯೋಗ ಲೋಕಾಯುಕ್ತರನ್ನು ಒತ್ತಾಯಿಸಿದೆ.

ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ, ವಿಧಾನಪರಿಷತ್ ಸದಸ್ಯ ಎನ್‌ ರವಿಕುಮಾರ್, ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಮಂಜುಳಾ, ಶಾಸಕ ಸಿ.ಕೆ ರಾಮಮೂರ್ತಿ, ಸೇರಿದಂತೆ ಪ್ರಮುಖರು ಇದ್ದ ನಿಯೋಗ ಶುಕ್ರವಾರ (ಡಿ.6) ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್ ಪಾಟೀಲ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ.

ರಾಜ್ಯ ಸರ್ಕಾರವೇ ಹೊಣೆ- ಬಿ.ವೈ ವಿಜಯೇಂದ್ರ

ಕಪ್ಪು ಪಟ್ಟಿಗೆ ಸೇರಿಸಲಾದ ಕಂಪನಿಯ ಐವಿ ದ್ರಾವಣ ಖರೀದಿಸಲಾಗಿದೆ. ಅದರಿಂದ ಬಾಣಂತಿಯರು ಸಾವನ್ನಪ್ಪಿದ್ದಾರೆ. ರಾಜ್ಯ ಸರ್ಕಾರವೇ ಇದಕ್ಕೆ ನೇರ ಹೊಣೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ | ಚಿಕ್ಕಮಗಳೂರು : ನರಸೀಪುರದಲ್ಲಿ ಪೂಜೆ ಪುನರಾರಂಭ : ಅಧಿಕಾರಿಗಳ ಸಮ್ಮುಖದಲ್ಲಿ ದೇಗುಲ ಪ್ರವೇಶಿಸಿದ ದಲಿತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...

‘ನಿಮ್ಮ ಮೌನ ಸ್ವೀಕಾರಾರ್ಹವಲ್ಲ’: ರಾಮ ಮಂದಿರ ದೇಣಿಗೆ ‘ಕಳ್ಳತನ’ದ ತನಿಖೆಗೆ ಮೋದಿಗೆ ಖರ್ಗೆ-ರಾಹುಲ್ ಗಾಂಧಿ ಪತ್ರ

ನವದೆಹಲಿ: ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಅಯೋಧ್ಯೆ ರಾಮ ಮಂದಿರ ನಿರ್ಮಾಣದ ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಆರ್ಥಿಕ ಅಕ್ರಮ ಹಾಗೂ ‘ಕಳ್ಳತನ’ದ ವಿಷಯ ರಾಷ್ಟ್ರ ರಾಜಕಾರಣದಲ್ಲಿ...

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...