Homeಕರ್ನಾಟಕಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವು ಪ್ರಕರಣ : ಐವಿ ಕಂಪನಿ ವಿರುದ್ದ ಕ್ರಮಕ್ಕೆ ಸೂಚಿಸಿದ ಸಿಎಂ

ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವು ಪ್ರಕರಣ : ಐವಿ ಕಂಪನಿ ವಿರುದ್ದ ಕ್ರಮಕ್ಕೆ ಸೂಚಿಸಿದ ಸಿಎಂ

- Advertisement -
- Advertisement -

ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ (BIMS) ನವೆಂಬರ್ 10ರ ಬಳಿಕ ಮೃತಪಟ್ಟ ಬಾಣಂತಿಯರ ಸಂಖ್ಯೆ ಗುರುವಾರ (ಡಿ.5) ಐದಕ್ಕೆ ಏರಿಕೆಯಾಗಿದ್ದು, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ತಪ್ಪಿತಸ್ಥರ ವಿರುದ್ದ ಕ್ರಮಕ್ಕೆ ಸೂಚಿಸಿದೆ.

ನವೆಂಬರ್ 9ರಂದು ಜಿಲ್ಲಾಸ್ಪತ್ರೆಯಲ್ಲಿ 9 ಮಹಿಳೆಯರಿಗೆ ಸಿಸೇರಿಯನ್ ಮೂಲಕ ಹೆರಿಗೆ ಮಾಡಿಸಲಾಗಿತ್ತು. ಬಳಿಕ ಅವರಿಗೆ ಐವಿ ದ್ರಾವಣ (ಐವಿ ರಿಂಗರ್ ಲ್ಯಾಕ್ಟೇಟ್ ದ್ರಾವಣ) ನೀಡಲಾಗಿದೆ. ದ್ರಾವಣ ಪಡೆದ ಎರಡೇ ಗಂಟೆಯಲ್ಲಿ ಒಂಬತ್ತೂ ಬಾಣಂತಿಯರು ಅಸ್ವಸ್ಥರಾಗಿದ್ದರು.

ನಂದಿನಿ, ಲಲಿತಮ್ಮ, ಸುಮಯ್ಯಾ ರೋಜಾ, ಮುಸ್ಕಾನ್, ಅಮೃತಾ, ಮಹಾಲಕ್ಷ್ಮೀ, ರಾಜೇಶ್ವರಿ, ಸುಮಲತಾ ಎಂಬವರಿಗೆ ಹೆರಿಗೆ ಬಳಿಕ ಐವಿ ದ್ರಾವಣ ನೀಡಲಾಗಿದೆ. ಈ ಪೈಕಿ ನಂದಿನಿ, ಲಲಿತಮ್ಮ, ರೋಜಾ, ಮುಸ್ಕಾನ್ ಹಾಗೂ ಸುಮಯ್ಯಾ ಮೃತಪಟ್ಟಿದ್ದಾರೆ. ಇನ್ನುಳಿದ ನಾಲ್ವರು ಬಾಣಂತಿಯರು ಚಿಕಿತ್ಸೆ ಪಡೆದು ಬಿಡುಗಡೆಯಾಗಿದ್ದಾರೆ.

ಐವಿ ದ್ರಾವಣ ಪಡೆದಿದ್ದ ಬಳಿಕ ತೀವ್ರ ಅಸ್ವಸ್ಥಗೊಂಡಿದ್ದ ಬಾಣಂತಿಯರ ಪೈಕಿ ಏಳು ಮಂದಿ ಕಿಡ್ನಿ ಮತ್ತು ಬಹು ಅಂಗಾಂಗ ವೈಫಲ್ಯತೆಯಿಂದ ಬಳಲುತ್ತಿದ್ದರು. ಕೂಡಲೇ ಅವರನ್ನು ಬಳ್ಳಾರಿ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವಿಮ್ಸ್​ನಲ್ಲಿ ಪರೀಕ್ಷಿಸಿದಾಗ ಏಳು ಮಂದಿಯಲ್ಲಿ ಮೂವರಲ್ಲಿ ಇಲಿ ಜ್ವರ ಪತ್ತೆಯಾಗಿತ್ತು.

ನವೆಂಬರ್ 10ರ ಬಳಿಕ 9 ಬಾಣಂತಿಯರ ಪೈಕಿ ನಾಲ್ವರು ( ನಂದಿನಿ, ಲಲಿತಮ್ಮ, ರೋಜಾ, ಮುಸ್ಕಾನ್) ಮೃತಪಟ್ಟಿದ್ದರು. ಕಿಡ್ನಿ ವೈಫಲ್ಯ ಮತ್ತು ಇಲಿ ಜ್ವರದಿಂದ ಬಳಲುತ್ತಿದ್ದ ಮತ್ತೊಬ್ಬರು ಬಾಣಂತಿ ಸುಮ್ಮಯ್ಯಾ ಅವರು ನವೆಂಬರ್​ 12ರಿಂದ ವಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಗುರುವಾರ (ಡಿ.5) ಚಿಕಿತ್ಸೆ ಫಲಿಸದೆ ಸುಮಯ್ಯಾ ಮೃತಪಟ್ಟಿದ್ದಾರೆ. ಮೃತ ಬಾಣಂತಿಯರೆಲ್ಲರೂ 25 ವರ್ಷದೊಳಗಿನವರು ಎಂದು ತಿಳಿದು ಬಂದಿದೆ.

ಐವಿ ಕಂಪನಿ ವಿರುದ್ದ ಕ್ರಮಕ್ಕೆ ಸೂಚನೆ

ಶುಕ್ರವಾರ (ಡಿ.6) ನಡೆದ ಸಚಿವ ಸಂಪುಟ ಸಭೆಗೆ ಬಾಣಂತಿಯರ ಸಾವಿನ ಕುರಿತು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾಹಿತಿ ನೀಡಿದ್ದಾರೆ. ವಿಷಯ ಅರಿತುಕೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ ಐವಿ ದ್ರಾವಣ ಪೂರೈಕೆ ಮಾಡಿದ ಕಂಪನಿ ವಿರುದ್ದ ಕಠಿಣ ಕ್ರಮಕ್ಕೆ ಸೂಚಿಸಿದ್ದಾರೆ.

ಸಂಪುಟ ಸಭೆಯ ಬಳಿಕ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ “ಔಷಧಿ ಸರಬರಾಜು ನಿಗಮಕ್ಕೆ ಕಾಯಕಲ್ಪದ ಅಗತ್ಯವಿದೆ. ಗುಣಮಟ್ಟದ ಔಷಧಿಗಳನ್ನು ಪೂರೈಸುವಂತಹ ದೊಡ್ಡ ಕಂಪನಿಗಳು ನಿಗಮ ಕರೆಯುವ ಟೆಂಡರ್‌ಗಳಲ್ಲಿ ಭಾಗಿಯಾಗುವಂತೆ ನಿಯಮಗಳಲ್ಲಿ ಬದಲಾವಣೆಗಳನ್ನು ಸೂಚಿಸಿ ಪ್ರಸ್ತಾವನೆ ಸಲ್ಲಿಸಲಾಗಿದೆ” ಎಂದು ತಿಳಿಸಿದ್ದಾರೆ.

ರಾಜೀನಾಮೆಗೆ ಸಿದ್ದ-ದಿನೇಶ್ ಗುಂಡೂರಾವ್ 

ಬಾಣಂತಿಯರ ಸಾವಿನ ಪ್ರಕರಣದಲ್ಲಿ ನನ್ನಿಂದ ಲೋಪವಾಗಿದ್ದರೆ, ಖಂಡಿತ ರಾಜೀನಾಮೆ ನೀಡಲು ಸಿದ್ದ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಆಡಳಿತ ಮತ್ತು ಪ್ರತಿಪಕ್ಷಗಳು ಜೊತೆ ಸೇರಿ ಈ ಸಮಸ್ಯೆ ಪರಿಹರಿಸಬೇಕಿದೆ. ಪ್ರತಿಪಕ್ಷದವರ ಸಲಹೆಗಳನ್ನು ಮುಕ್ತವಾಗಿ ಸ್ವೀಕರಿಸುತ್ತೇವೆ ಎಂದಿದ್ದಾರೆ.

‘ರಾಜ್ಯ ತಿರಸ್ಕರಿಸಿದ್ದ ದ್ರಾವಣಕ್ಕೆ ಕೇಂದ್ರ ಪುರಸ್ಕಾರ’

ಬಾಣಂತಿಯರ ಸಾವಿಗೆ ಐವಿ ದ್ರಾವಣ ಕಾರಣ ಎಂದು ಮೇಲ್ನೋಟಕ್ಕೆ ಕಂಡು ಬಂದಿರುವುದಾಗಿ ವರದಿಯಾಗಿದೆ. ‘ಪಶ್ಚಿಮ್ ಬಂಗಾ ಫಾರ್ಮಾಸ್ಯುಟಿಕಲ್ಸ್’ ಎಂಬ ಕಂಪನಿ ಪೂರೈಸಿರುವ ಐವಿ ದ್ರಾವಣ ಕೊಟ್ಟ ಬಳಿಕ ಬಾಣಂತಿಯರು ಅಸ್ವಸ್ಥಗೊಂಡು ಸಾವನ್ನಪ್ಪಿದ್ದಾರೆ ಎಂದು ಆರೋಪಿಸಲಾಗಿದೆ.

“ಪಶ್ಚಿಮ್ ಬಂಗಾ ಫಾರ್ಮಾಸ್ಯುಟಿಕಲ್ಸ್ ಕಂಪನಿಯ ಐವಿ ದ್ರಾವಣ ಕಳಪೆ ಗುಣಮಟ್ಟದ್ದು ಎಂಬುವುದು ರಾಜ್ಯದ ಪ್ರಯೋಗಾಲಯಗಳು ನಡೆಸಿದ ಪರೀಕ್ಷೆಗಳಲ್ಲಿ ಪತ್ತೆಯಾಗಿತ್ತು. ಆದರೆ, ಕೇಂದ್ರ ಸರ್ಕಾರದ ಔಷಧ ನಿಯಂತ್ರಕರು ಅದೇ ದ್ರಾವಣವನ್ನು ಪುರಸ್ಕರಿಸಿದ್ದಾರೆ” ಎಂದು ಸಚಿವ ದಿನೇಶ್ ಗುಂಡೂರಾವ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಅಂತಹ ಕಂಪನಿಗಳು ಮತ್ತು ಅವುಗಳ ಉತ್ಪನ್ನಗಳು ಮಾರಾಟಕ್ಕೆ ಅರ್ಹ ಎಂದು ಕೇಂದ್ರದ ಸಂಸ್ಥೆಗಳು ವರದಿ ನೀಡುವ ಕಾರಣದಿಂದ ಅವುಗಳನ್ನು ಕಪ್ಪುಪಟ್ಟಿಗೆ ಸೇರಿಸಲು ಸಾಧ್ಯವಾಗಿಲ್ಲ. ಅವುಗಳ ಉತ್ಪನ್ನಗಳನ್ನು ತಿರಸ್ಕರಿಸಲೂ ಆಗುವುದಿಲ್ಲ” ಎಂದಿದ್ದಾರೆ.

ಈ ಬಗ್ಗೆ ಕೇಂದ್ರ ಔಷಧ ನಿಯಂತ್ರಕರಿಗೆ ಪತ್ರ ಬರೆದಿದ್ದೇವೆ. ಅವರ ಕ್ರಮದಿಂದ ತೊಂದರೆ ಆಗುತ್ತಿದೆ ಎಂಬುವುದನ್ನು ವಿವರಿಸಿದ್ದೇವೆ. ಜೊತೆಗೆ ಉತ್ತಮ ಗುಣಮಟ್ಟದ ಔಷಧಗಳ ಪೂರೈಕೆಗೆ ಅನುಕೂಲವಾಗುವಂತೆ ಟೆಂಡರ್ ನಿಯಮಗಳನ್ನು ಕಠಿಣಗೊಳಿಸಲು ಕ್ರಮ ತೆಗೆದುಕೊಂಡಿದ್ದೇವೆ ಎಂದು ತಿಳಿಸಿದ್ದಾರೆ.

ಲೋಕಾಯುಕ್ತ ತನಿಖೆ ನಡೆಸಿ-ಆರ್.ಅಶೋಕ್

ಬಾಣಂತಿಯರ ಸಾವು ಪ್ರಕರಣಗಳನ್ನು ಲೋಕಾಯುಕ್ತ ತನಿಖೆಗೆ ವಹಿಸಬೇಕು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕರ ಆರ್. ಅಶೋಕ್ ಆಗ್ರಹಿಸಿದ್ದಾರೆ. ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

ನ್ಯಾಯಾಂಗ ತನಿಖೆಗೆ ಬಿಜೆಪಿ ಮನವಿ

ಬಳ್ಳಾರಿ ಮತ್ತು ರಾಜ್ಯದ ವಿವಿಧ ಜಿಲ್ಲಾಸ್ಪತ್ರೆಗಳಲ್ಲಿ ಬಾಣಂತಿಯರು ಮತ್ತು ಶಿಶು ಮರಣದ ಪ್ರಕರಣಗಳ ಕುರಿತು ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಬಿಜೆಪಿ ರಾಜ್ಯ ಘಟಕದ ನಿಯೋಗ ಲೋಕಾಯುಕ್ತರನ್ನು ಒತ್ತಾಯಿಸಿದೆ.

ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ, ವಿಧಾನಪರಿಷತ್ ಸದಸ್ಯ ಎನ್‌ ರವಿಕುಮಾರ್, ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಮಂಜುಳಾ, ಶಾಸಕ ಸಿ.ಕೆ ರಾಮಮೂರ್ತಿ, ಸೇರಿದಂತೆ ಪ್ರಮುಖರು ಇದ್ದ ನಿಯೋಗ ಶುಕ್ರವಾರ (ಡಿ.6) ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್ ಪಾಟೀಲ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ.

ರಾಜ್ಯ ಸರ್ಕಾರವೇ ಹೊಣೆ- ಬಿ.ವೈ ವಿಜಯೇಂದ್ರ

ಕಪ್ಪು ಪಟ್ಟಿಗೆ ಸೇರಿಸಲಾದ ಕಂಪನಿಯ ಐವಿ ದ್ರಾವಣ ಖರೀದಿಸಲಾಗಿದೆ. ಅದರಿಂದ ಬಾಣಂತಿಯರು ಸಾವನ್ನಪ್ಪಿದ್ದಾರೆ. ರಾಜ್ಯ ಸರ್ಕಾರವೇ ಇದಕ್ಕೆ ನೇರ ಹೊಣೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ | ಚಿಕ್ಕಮಗಳೂರು : ನರಸೀಪುರದಲ್ಲಿ ಪೂಜೆ ಪುನರಾರಂಭ : ಅಧಿಕಾರಿಗಳ ಸಮ್ಮುಖದಲ್ಲಿ ದೇಗುಲ ಪ್ರವೇಶಿಸಿದ ದಲಿತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...