Homeಕರ್ನಾಟಕಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವು ಪ್ರಕರಣ : ಐವಿ ಕಂಪನಿ ವಿರುದ್ದ ಕ್ರಮಕ್ಕೆ ಸೂಚಿಸಿದ ಸಿಎಂ

ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವು ಪ್ರಕರಣ : ಐವಿ ಕಂಪನಿ ವಿರುದ್ದ ಕ್ರಮಕ್ಕೆ ಸೂಚಿಸಿದ ಸಿಎಂ

- Advertisement -
- Advertisement -

ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ (BIMS) ನವೆಂಬರ್ 10ರ ಬಳಿಕ ಮೃತಪಟ್ಟ ಬಾಣಂತಿಯರ ಸಂಖ್ಯೆ ಗುರುವಾರ (ಡಿ.5) ಐದಕ್ಕೆ ಏರಿಕೆಯಾಗಿದ್ದು, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ತಪ್ಪಿತಸ್ಥರ ವಿರುದ್ದ ಕ್ರಮಕ್ಕೆ ಸೂಚಿಸಿದೆ.

ನವೆಂಬರ್ 9ರಂದು ಜಿಲ್ಲಾಸ್ಪತ್ರೆಯಲ್ಲಿ 9 ಮಹಿಳೆಯರಿಗೆ ಸಿಸೇರಿಯನ್ ಮೂಲಕ ಹೆರಿಗೆ ಮಾಡಿಸಲಾಗಿತ್ತು. ಬಳಿಕ ಅವರಿಗೆ ಐವಿ ದ್ರಾವಣ (ಐವಿ ರಿಂಗರ್ ಲ್ಯಾಕ್ಟೇಟ್ ದ್ರಾವಣ) ನೀಡಲಾಗಿದೆ. ದ್ರಾವಣ ಪಡೆದ ಎರಡೇ ಗಂಟೆಯಲ್ಲಿ ಒಂಬತ್ತೂ ಬಾಣಂತಿಯರು ಅಸ್ವಸ್ಥರಾಗಿದ್ದರು.

ನಂದಿನಿ, ಲಲಿತಮ್ಮ, ಸುಮಯ್ಯಾ ರೋಜಾ, ಮುಸ್ಕಾನ್, ಅಮೃತಾ, ಮಹಾಲಕ್ಷ್ಮೀ, ರಾಜೇಶ್ವರಿ, ಸುಮಲತಾ ಎಂಬವರಿಗೆ ಹೆರಿಗೆ ಬಳಿಕ ಐವಿ ದ್ರಾವಣ ನೀಡಲಾಗಿದೆ. ಈ ಪೈಕಿ ನಂದಿನಿ, ಲಲಿತಮ್ಮ, ರೋಜಾ, ಮುಸ್ಕಾನ್ ಹಾಗೂ ಸುಮಯ್ಯಾ ಮೃತಪಟ್ಟಿದ್ದಾರೆ. ಇನ್ನುಳಿದ ನಾಲ್ವರು ಬಾಣಂತಿಯರು ಚಿಕಿತ್ಸೆ ಪಡೆದು ಬಿಡುಗಡೆಯಾಗಿದ್ದಾರೆ.

ಐವಿ ದ್ರಾವಣ ಪಡೆದಿದ್ದ ಬಳಿಕ ತೀವ್ರ ಅಸ್ವಸ್ಥಗೊಂಡಿದ್ದ ಬಾಣಂತಿಯರ ಪೈಕಿ ಏಳು ಮಂದಿ ಕಿಡ್ನಿ ಮತ್ತು ಬಹು ಅಂಗಾಂಗ ವೈಫಲ್ಯತೆಯಿಂದ ಬಳಲುತ್ತಿದ್ದರು. ಕೂಡಲೇ ಅವರನ್ನು ಬಳ್ಳಾರಿ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವಿಮ್ಸ್​ನಲ್ಲಿ ಪರೀಕ್ಷಿಸಿದಾಗ ಏಳು ಮಂದಿಯಲ್ಲಿ ಮೂವರಲ್ಲಿ ಇಲಿ ಜ್ವರ ಪತ್ತೆಯಾಗಿತ್ತು.

ನವೆಂಬರ್ 10ರ ಬಳಿಕ 9 ಬಾಣಂತಿಯರ ಪೈಕಿ ನಾಲ್ವರು ( ನಂದಿನಿ, ಲಲಿತಮ್ಮ, ರೋಜಾ, ಮುಸ್ಕಾನ್) ಮೃತಪಟ್ಟಿದ್ದರು. ಕಿಡ್ನಿ ವೈಫಲ್ಯ ಮತ್ತು ಇಲಿ ಜ್ವರದಿಂದ ಬಳಲುತ್ತಿದ್ದ ಮತ್ತೊಬ್ಬರು ಬಾಣಂತಿ ಸುಮ್ಮಯ್ಯಾ ಅವರು ನವೆಂಬರ್​ 12ರಿಂದ ವಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಗುರುವಾರ (ಡಿ.5) ಚಿಕಿತ್ಸೆ ಫಲಿಸದೆ ಸುಮಯ್ಯಾ ಮೃತಪಟ್ಟಿದ್ದಾರೆ. ಮೃತ ಬಾಣಂತಿಯರೆಲ್ಲರೂ 25 ವರ್ಷದೊಳಗಿನವರು ಎಂದು ತಿಳಿದು ಬಂದಿದೆ.

ಐವಿ ಕಂಪನಿ ವಿರುದ್ದ ಕ್ರಮಕ್ಕೆ ಸೂಚನೆ

ಶುಕ್ರವಾರ (ಡಿ.6) ನಡೆದ ಸಚಿವ ಸಂಪುಟ ಸಭೆಗೆ ಬಾಣಂತಿಯರ ಸಾವಿನ ಕುರಿತು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾಹಿತಿ ನೀಡಿದ್ದಾರೆ. ವಿಷಯ ಅರಿತುಕೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ ಐವಿ ದ್ರಾವಣ ಪೂರೈಕೆ ಮಾಡಿದ ಕಂಪನಿ ವಿರುದ್ದ ಕಠಿಣ ಕ್ರಮಕ್ಕೆ ಸೂಚಿಸಿದ್ದಾರೆ.

ಸಂಪುಟ ಸಭೆಯ ಬಳಿಕ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ “ಔಷಧಿ ಸರಬರಾಜು ನಿಗಮಕ್ಕೆ ಕಾಯಕಲ್ಪದ ಅಗತ್ಯವಿದೆ. ಗುಣಮಟ್ಟದ ಔಷಧಿಗಳನ್ನು ಪೂರೈಸುವಂತಹ ದೊಡ್ಡ ಕಂಪನಿಗಳು ನಿಗಮ ಕರೆಯುವ ಟೆಂಡರ್‌ಗಳಲ್ಲಿ ಭಾಗಿಯಾಗುವಂತೆ ನಿಯಮಗಳಲ್ಲಿ ಬದಲಾವಣೆಗಳನ್ನು ಸೂಚಿಸಿ ಪ್ರಸ್ತಾವನೆ ಸಲ್ಲಿಸಲಾಗಿದೆ” ಎಂದು ತಿಳಿಸಿದ್ದಾರೆ.

ರಾಜೀನಾಮೆಗೆ ಸಿದ್ದ-ದಿನೇಶ್ ಗುಂಡೂರಾವ್ 

ಬಾಣಂತಿಯರ ಸಾವಿನ ಪ್ರಕರಣದಲ್ಲಿ ನನ್ನಿಂದ ಲೋಪವಾಗಿದ್ದರೆ, ಖಂಡಿತ ರಾಜೀನಾಮೆ ನೀಡಲು ಸಿದ್ದ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಆಡಳಿತ ಮತ್ತು ಪ್ರತಿಪಕ್ಷಗಳು ಜೊತೆ ಸೇರಿ ಈ ಸಮಸ್ಯೆ ಪರಿಹರಿಸಬೇಕಿದೆ. ಪ್ರತಿಪಕ್ಷದವರ ಸಲಹೆಗಳನ್ನು ಮುಕ್ತವಾಗಿ ಸ್ವೀಕರಿಸುತ್ತೇವೆ ಎಂದಿದ್ದಾರೆ.

‘ರಾಜ್ಯ ತಿರಸ್ಕರಿಸಿದ್ದ ದ್ರಾವಣಕ್ಕೆ ಕೇಂದ್ರ ಪುರಸ್ಕಾರ’

ಬಾಣಂತಿಯರ ಸಾವಿಗೆ ಐವಿ ದ್ರಾವಣ ಕಾರಣ ಎಂದು ಮೇಲ್ನೋಟಕ್ಕೆ ಕಂಡು ಬಂದಿರುವುದಾಗಿ ವರದಿಯಾಗಿದೆ. ‘ಪಶ್ಚಿಮ್ ಬಂಗಾ ಫಾರ್ಮಾಸ್ಯುಟಿಕಲ್ಸ್’ ಎಂಬ ಕಂಪನಿ ಪೂರೈಸಿರುವ ಐವಿ ದ್ರಾವಣ ಕೊಟ್ಟ ಬಳಿಕ ಬಾಣಂತಿಯರು ಅಸ್ವಸ್ಥಗೊಂಡು ಸಾವನ್ನಪ್ಪಿದ್ದಾರೆ ಎಂದು ಆರೋಪಿಸಲಾಗಿದೆ.

“ಪಶ್ಚಿಮ್ ಬಂಗಾ ಫಾರ್ಮಾಸ್ಯುಟಿಕಲ್ಸ್ ಕಂಪನಿಯ ಐವಿ ದ್ರಾವಣ ಕಳಪೆ ಗುಣಮಟ್ಟದ್ದು ಎಂಬುವುದು ರಾಜ್ಯದ ಪ್ರಯೋಗಾಲಯಗಳು ನಡೆಸಿದ ಪರೀಕ್ಷೆಗಳಲ್ಲಿ ಪತ್ತೆಯಾಗಿತ್ತು. ಆದರೆ, ಕೇಂದ್ರ ಸರ್ಕಾರದ ಔಷಧ ನಿಯಂತ್ರಕರು ಅದೇ ದ್ರಾವಣವನ್ನು ಪುರಸ್ಕರಿಸಿದ್ದಾರೆ” ಎಂದು ಸಚಿವ ದಿನೇಶ್ ಗುಂಡೂರಾವ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಅಂತಹ ಕಂಪನಿಗಳು ಮತ್ತು ಅವುಗಳ ಉತ್ಪನ್ನಗಳು ಮಾರಾಟಕ್ಕೆ ಅರ್ಹ ಎಂದು ಕೇಂದ್ರದ ಸಂಸ್ಥೆಗಳು ವರದಿ ನೀಡುವ ಕಾರಣದಿಂದ ಅವುಗಳನ್ನು ಕಪ್ಪುಪಟ್ಟಿಗೆ ಸೇರಿಸಲು ಸಾಧ್ಯವಾಗಿಲ್ಲ. ಅವುಗಳ ಉತ್ಪನ್ನಗಳನ್ನು ತಿರಸ್ಕರಿಸಲೂ ಆಗುವುದಿಲ್ಲ” ಎಂದಿದ್ದಾರೆ.

ಈ ಬಗ್ಗೆ ಕೇಂದ್ರ ಔಷಧ ನಿಯಂತ್ರಕರಿಗೆ ಪತ್ರ ಬರೆದಿದ್ದೇವೆ. ಅವರ ಕ್ರಮದಿಂದ ತೊಂದರೆ ಆಗುತ್ತಿದೆ ಎಂಬುವುದನ್ನು ವಿವರಿಸಿದ್ದೇವೆ. ಜೊತೆಗೆ ಉತ್ತಮ ಗುಣಮಟ್ಟದ ಔಷಧಗಳ ಪೂರೈಕೆಗೆ ಅನುಕೂಲವಾಗುವಂತೆ ಟೆಂಡರ್ ನಿಯಮಗಳನ್ನು ಕಠಿಣಗೊಳಿಸಲು ಕ್ರಮ ತೆಗೆದುಕೊಂಡಿದ್ದೇವೆ ಎಂದು ತಿಳಿಸಿದ್ದಾರೆ.

ಲೋಕಾಯುಕ್ತ ತನಿಖೆ ನಡೆಸಿ-ಆರ್.ಅಶೋಕ್

ಬಾಣಂತಿಯರ ಸಾವು ಪ್ರಕರಣಗಳನ್ನು ಲೋಕಾಯುಕ್ತ ತನಿಖೆಗೆ ವಹಿಸಬೇಕು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕರ ಆರ್. ಅಶೋಕ್ ಆಗ್ರಹಿಸಿದ್ದಾರೆ. ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

ನ್ಯಾಯಾಂಗ ತನಿಖೆಗೆ ಬಿಜೆಪಿ ಮನವಿ

ಬಳ್ಳಾರಿ ಮತ್ತು ರಾಜ್ಯದ ವಿವಿಧ ಜಿಲ್ಲಾಸ್ಪತ್ರೆಗಳಲ್ಲಿ ಬಾಣಂತಿಯರು ಮತ್ತು ಶಿಶು ಮರಣದ ಪ್ರಕರಣಗಳ ಕುರಿತು ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಬಿಜೆಪಿ ರಾಜ್ಯ ಘಟಕದ ನಿಯೋಗ ಲೋಕಾಯುಕ್ತರನ್ನು ಒತ್ತಾಯಿಸಿದೆ.

ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ, ವಿಧಾನಪರಿಷತ್ ಸದಸ್ಯ ಎನ್‌ ರವಿಕುಮಾರ್, ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಮಂಜುಳಾ, ಶಾಸಕ ಸಿ.ಕೆ ರಾಮಮೂರ್ತಿ, ಸೇರಿದಂತೆ ಪ್ರಮುಖರು ಇದ್ದ ನಿಯೋಗ ಶುಕ್ರವಾರ (ಡಿ.6) ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್ ಪಾಟೀಲ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ.

ರಾಜ್ಯ ಸರ್ಕಾರವೇ ಹೊಣೆ- ಬಿ.ವೈ ವಿಜಯೇಂದ್ರ

ಕಪ್ಪು ಪಟ್ಟಿಗೆ ಸೇರಿಸಲಾದ ಕಂಪನಿಯ ಐವಿ ದ್ರಾವಣ ಖರೀದಿಸಲಾಗಿದೆ. ಅದರಿಂದ ಬಾಣಂತಿಯರು ಸಾವನ್ನಪ್ಪಿದ್ದಾರೆ. ರಾಜ್ಯ ಸರ್ಕಾರವೇ ಇದಕ್ಕೆ ನೇರ ಹೊಣೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ | ಚಿಕ್ಕಮಗಳೂರು : ನರಸೀಪುರದಲ್ಲಿ ಪೂಜೆ ಪುನರಾರಂಭ : ಅಧಿಕಾರಿಗಳ ಸಮ್ಮುಖದಲ್ಲಿ ದೇಗುಲ ಪ್ರವೇಶಿಸಿದ ದಲಿತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...