Homeಮುಖಪುಟಮಥುರಾ: ಶ್ರೀಕೃಷ್ಣಾ ದೇವಾಲಯದ ಬಳಿಯ ಈದ್ಗಾ ಮಸೀದಿ ತೆರವಿಗೆ ಮೊಕದ್ದಮೆ ದಾಖಲು

ಮಥುರಾ: ಶ್ರೀಕೃಷ್ಣಾ ದೇವಾಲಯದ ಬಳಿಯ ಈದ್ಗಾ ಮಸೀದಿ ತೆರವಿಗೆ ಮೊಕದ್ದಮೆ ದಾಖಲು

ಶ್ರೀಕೃಷ್ಣನ ಜನ್ಮಸ್ಥಳವು ಟ್ರಸ್ಟ್ ರಚಿಸಿದ ಮಸೀದಿಯ ಕೆಳಗೆ ಇದೆ ಎಂದು ಮೊಕದ್ದಮೆ ಆರೋಪಿಸಿದೆ

- Advertisement -
- Advertisement -

ಮಥುರಾದ ಶ್ರೀ ಕೃಷ್ಣ ದೇವಾಲಯ ಸಂಕೀರ್ಣದ ಪಕ್ಕದಲ್ಲಿರುವ ಶಾಹಿ ಈದ್ಗಾವನ್ನು ತೆಗೆದುಹಾಕುವಂತೆ ಕೋರಿ ಮಥುರಾ ನ್ಯಾಯಾಲಯದ ಹಿರಿಯ ವಿಭಾಗದ ಸಿವಿಲ್ ನ್ಯಾಯಾಧೀಶರ ಮುಂದೆ ಸಿವಿಲ್ ಮೊಕದ್ದಮೆ ಹೂಡಲಾಗಿದೆ.

ಉತ್ತರ ಪ್ರದೇಶದ ಲಕ್ನೋ ನಿವಾಸಿ ರಂಜನಾ ಅಗ್ನಿಹೋತ್ರಿ ಎಂಬವರು ಮೊಕದ್ದಮೆ ಹೂಡಿದ್ದು, ಯುಪಿ ಸುನ್ನಿ ಸೆಂಟ್ರಲ್ ವಕ್ಫ್ ಮಂಡಳಿ ಮತ್ತು ಶಾಹಿ ಈದ್ಗಾ ಟ್ರಸ್ಟ್‌ನ ನಿರ್ವಹಣಾ ಸಮಿತಿಯನ್ನು ಮೊಕದ್ದಮೆಯಲ್ಲಿ ಪ್ರತಿವಾದಿಗಳನ್ನಾಗಿ ಮಾಡಲಾಗಿದೆ.

ಮೊಕದ್ದಮೆಯು ದೇವಾಲಯದ ವ್ಯಾಪ್ತಿಯಲ್ಲಿರುವ 13.37 ಎಕರೆ ಭೂಮಿಯನ್ನು ಪಡೆಯಲು ಪ್ರಯತ್ನಿಸುತ್ತದೆ.

ಇದನ್ನೂ ಓದಿ: ಓದುಗರ ಪತ್ರ: ಅಯೋಧ್ಯೆಯಲ್ಲಿ ಶ್ರೀರಾಮನಿದ್ದ ಎಂಬುದಕ್ಕೆ ಕೆಲವು ಪ್ರಶ್ನೆಗಳು

ಕೆಲವು ಮುಸ್ಲಿಮರ ಸಹಾಯದಿಂದ ಈದ್ಗಾ ಟ್ರಸ್ಟ್ ಶ್ರೀ ಕೃಷ್ಣ ಜನಂಸ್ಥಾನ್ ಟ್ರಸ್ಟ್ ಮತ್ತು ದೇವತೆಗೆ ಸೇರಿದ ಭೂಮಿಯನ್ನು ಅತಿಕ್ರಮಣ ಮಾಡಿ ಈದ್ಗಾ ಮಸೀದಿ ನಿರ್ಮಿಸಿದೆ ಎಂದು ಮೊಕದ್ದಮೆಯಲ್ಲಿ ದೂರಲಾಗಿದೆ.

ಶ್ರೀಕೃಷ್ಣನ ಜನ್ಮಸ್ಥಳವು ಟ್ರಸ್ಟ್ ರಚಿಸಿದ ಮಸೀದಿಯ ಕೆಳಗೆ ಇದೆ ಎಂದು ಮೊಕದ್ದಮೆ ಆರೋಪಿಸಿದೆ.

ಅಲ್ಲದೆ ದೇವಾಲಯ ಆಡಳಿತ ಮಂಡಳಿಯಾಗಿರುವ ಶ್ರೀ ಕೃಷ್ಣ ಜನಂಸ್ಥಾನ್ ಸೇವಾ ಸಂಸ್ಥೆಯು ಆಸ್ತಿಯನ್ನು ಕಸಿದುಕೊಳ್ಳುವ ಉದ್ದೇಶದಿಂದ ಶಾಹಿ ಈದ್ಗಾ ಟ್ರಸ್ಟ್‌ನೊಂದಿಗೆ ಅಕ್ರಮ ರಾಜಿ ಮಾಡಿಕೊಂಡಿದೆ ಎಂದು ಆರೋಪಿಸಲಾಗಿದೆ.

“ಶ್ರೀ ಕೃಷ್ಣ ಜನಂಸ್ಥಾನ್ ಸೇವಾ ಸಂಸ್ಥೆಯು ದೇವತೆ ಮತ್ತು ಭಕ್ತರ ಹಿತಾಸಕ್ತಿಗೆ ವಿರುದ್ಧವಾಗಿ ಕಾರ್ಯನಿರ್ವಹಿಸುತ್ತಿದೆ ಮತ್ತು 1968 ರಲ್ಲಿ ಟ್ರಸ್ಟ್ ಮಸ್ಜಿದ್ ಈದ್ಗಾ (ಟ್ರಸ್ಟ್) ದ ನಿರ್ವಹಣಾ ಸಮಿತಿಯೊಂದಿಗೆ ಮೋಸದಿಂದ ರಾಜಿ ಮಾಡಿಕೊಂಡಿದೆ” ಮೊಕದ್ದಮೆ ಹೇಳಿದೆ.

ಇದನ್ನೂ ಓದಿ: ಅಯೋಧ್ಯೆ ತೀರ್ಪು ಹೊರಬಂದಿರುವ ಸಂದರ್ಭದಲ್ಲಿ… : ಎಚ್.ಎಸ್.ದೊರೆಸ್ವಾಮಿ ಅಭಿಪ್ರಾಯ

ಜುಲೈ 20, 1973 ರಂದು ಮಥುರ ಸಿವಿಲ್ ನ್ಯಾಯಾಧೀಶರು ತೀರ್ಪು ನೀಡಿದ್ದ, “ಕೃಷ್ಣ ಜನ್ಮಸ್ಥಾನ್ ಸೇವಾ ಸಂಸ್ಥಾನ ಮತ್ತು ಟ್ರಸ್ಟ್ ನಡುವಿನ ರಾಜಿ” ಯ ಬಗೆಗಿನ ತೀರ್ಪನ್ನು ರದ್ದುಗೊಳಿಸಬೇಕೆಂದು ಮೊಕದ್ದಮೆಯಲ್ಲಿ ವಿನಂತಿಸಲಾಗಿದೆ.

ಅದಾಗ್ಯೂ 1991 ರಲ್ಲಿ ಅಂಗೀಕರಿಸಲ್ಪಟ್ಟ Places of Worship (Special Provisions Act) ಪ್ರಕಾರ, ಅಯೋಧ್ಯೆಯಲ್ಲಿನ ವಿವಾದಿತ ಸ್ಥಳವನ್ನು ಹೊರತುಪಡಿಸಿ ದೇಶಕ್ಕೆ ಸ್ವಾತಂತ್ರ್ಯ ಸಿಗುವ ಸಮಯದಲ್ಲಿ ಅಸ್ತಿತ್ವದಲ್ಲಿದ್ದಂತೆ ಎಲ್ಲಾ ಧಾರ್ಮಿಕ ರಚನೆಗಳನ್ನು ರಕ್ಷಿಸಬೇಕು ಎಂದು ಹೇಳುತ್ತದೆ.

ಹೀಗಾಗಿ, ಮಸೀದಿಗಳನ್ನು ದೇವಾಲಯಗಳಾಗಿ ಪರಿವರ್ತಿಸುವುದು ಅಥವಾ ದೇವಾಲಯವನ್ನು ಮಸೀದಿಯಾಗಿ ಪರಿವರ್ತಿಸುವುದು ಕಾಯಿದೆಯು ನಿರ್ಬಂಧಿಸಿದೆ.

ಇದನ್ನೂ ಓದಿ: ಅಯೋಧ್ಯೆ ತೀರ್ಪು- ವಿಚಿತ್ರ ತರ್ಕದ ಆಧಾರ: ಮಾರ್ಕಂಡೇಯ ಕಟ್ಜು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...