Homeದಲಿತ್ ಫೈಲ್ಸ್ಮಥುರಾ| ಹಲ್ಲೆ ನಡೆದ ಎರಡು ವಾರಗಳ ಬಳಿಕ ನಡೆದ ದಲಿತ ಸಹೋದರಿಯರ ಮದುವೆ; ಬಿಗಿ ಪೊಲೀಸ್...

ಮಥುರಾ| ಹಲ್ಲೆ ನಡೆದ ಎರಡು ವಾರಗಳ ಬಳಿಕ ನಡೆದ ದಲಿತ ಸಹೋದರಿಯರ ಮದುವೆ; ಬಿಗಿ ಪೊಲೀಸ್ ಭದ್ರತೆ

- Advertisement -
- Advertisement -

ಮಥುರಾದ ಕರ್ನವಾಲ್‌ನಲ್ಲಿರುವ ದಲಿತ ಕುಟುಂಬದ ಇಬ್ಬರು ಸಹೋದರಿಯರು ಶುಕ್ರವಾರ ಮತ್ತೊಮ್ಮೆ ತಮ್ಮ ಮದುವೆಯ ಸಂಭ್ರಮದಲ್ಲಿ ಭಾಗಿಯಾದರು. ಪ್ರಬಲ ಜಾತಿಗೆ ಸೇರಿದ ಕನಿಷ್ಠ 15 ಜನರು ರಸ್ತೆ ಅಪಘಾತದಲ್ಲಿ ಉಂಟಾದ ಜಗಳದಲ್ಲಿ ದಲಿತ ಸಹೋದರಿಯರು ಮತ್ತು ಅವರ ಸಂಬಂಧಿಕರ ಮೇಲೆ ಹಲ್ಲೆ ನಡೆಸಿ, ಪಾರ್ಲರ್‌ನಿಂದ ಬರುತ್ತಿದ್ದ ನವ ವದುಗಳ ಮೇಲೆ ಕೆಸರು ಎರಚಿ ವಿಕೃತಿ ಮೆರೆದಿದ್ದರು. ದಾಳಿಯಿಂದ ಹೆದರಿದ್ದ ವರನ ಕಡೆಯವರು ಮದುವೆ ರದ್ದುಗೊಳಿಸಿದ್ದರು.

ಫೆಬ್ರವರಿ 21 ಕ್ಕೆ ಹೋಲಿಸಿದರೆ ಮದುವೆ ಸಿದ್ಧತೆಗಳು ಸಂಪೂರ್ಣವಾಗಿ ಭಿನ್ನವಾಗಿದ್ದವು. ಹಿಂಸಾತ್ಮಕ ಘರ್ಷಣೆಯ ಸಮಯದಲ್ಲಿ ಗೈರುಹಾಜರಾಗಿದ್ದ ಪೊಲೀಸ್ ಸಿಬ್ಬಂದಿ ನಿನ್ನೆ ನಡೆದ ‘ಬರಾತ್’ಗೆ ಪೂರ್ಣ ಬೆಂಗಾವಲು ನೀಡಿದರು. ಸಮಾಜ ಕಲ್ಯಾಣ ಸಚಿವ (ಸ್ವತಂತ್ರ ಉಸ್ತುವಾರಿ) ಅಸಿಮ್ ಅರುಣ್ ಅವರು ಕೂಡ ಸಹೋದರಿಯರ ವಿವಾಹದಲ್ಲಿ ಭಾಗವಹಿಸಿದ್ದರು.

ಕಳೆದ ಗುರುವಾರ, ರಾಜ್ಯಸಭಾ ಸದಸ್ಯ ಮತ್ತು ಸಮಾಜವಾದಿ ಪಕ್ಷದ ನಾಯಕ ರಾಮ್‌ಜಿಲಾಲ್ ಸುಮನ್ ನೇತೃತ್ವದ ನಿಯೋಗವು ಕುಟುಂಬಕ್ಕೆ ₹2 ಲಕ್ಷದ ಚೆಕ್ ನೀಡಲು ಕರ್ನವಾಲ್‌ನಲ್ಲಿತ್ತು. ಕಾಂಗ್ರೆಸ್ ಮತ್ತು ಆಜಾದ್ ಸಮಾಜ ಪಕ್ಷದ ನಾಯಕರು ಸಹ ದಲಿತ ಸಹೋದರಿಯರ ಮದುವೆಗೆ ತಮ್ಮ ಕೊಡುಗೆಗಳನ್ನು ನೀಡಿದರು.

“ಫೆಬ್ರವರಿ 21 ರಂದು, ಈ ಘಟನೆಯಿಂದಾಗಿ ಪದಮ್ ಸಿಂಗ್ ಅವರ ಹೆಣ್ಣುಮಕ್ಕಳ ವಿವಾಹಗಳನ್ನು ರದ್ದುಗೊಳಿಸಲಾಯಿತು ಎಂಬುದು ದುರದೃಷ್ಟಕರ. ಬಜೆಟ್ ಅಧಿವೇಶನ ನಡೆಯುತ್ತಿರುವಾಗ, 15 ಆರೋಪಿಗಳನ್ನು ಬಂಧಿಸುವಂತೆ ನೋಡಿಕೊಳ್ಳಲು ಮುಖ್ಯಮಂತ್ರಿಗಳು ನನ್ನನ್ನು ಇಲ್ಲಿಗೆ ಕಳುಹಿಸಿದರು. ನಾನು ಮದುವೆಗೆ ಹಾಜರಾಗುವುದಾಗಿ ಭರವಸೆ ನೀಡಿದ್ದೆ, ಇಂದು ಇಲ್ಲಿದ್ದೇನೆ” ಎಂದು ಸಚಿವ ಅರುಣ್ ಹೇಳಿದರು.

ಶನಿವಾರ ಗ್ರಾಮದಲ್ಲಿ ಪೊಲೀಸರನ್ನು ನಿಯೋಜಿಸಲಾಗಿತ್ತು. ವಿವಾಹ ಸುಗಮವಾಗಿ ನಡೆಯುವಂತೆ ನೋಡಿಕೊಳ್ಳಲು ಎಸ್‌ಪಿ (ನಗರ) ಅರವಿಂದ್ ಕುಮಾರ್ ಕೂಡ ಗ್ರಾಮದಲ್ಲಿದ್ದರು.

ಘಟನೆ ಹಿನ್ನೆಲೆ:

ಉತ್ತರ ಪ್ರದೇಶದ ಮಥುರಾ ಜಿಲ್ಲೆಯ ರಿಫೈನರಿ ಪ್ರದೇಶದಲ್ಲಿ ನಡೆದ ಸಣ್ಣ ಅಪಘಾತವು ಹಿಂಸಾತ್ಮಕ ಘರ್ಷಣೆಗೆ ಕಾರಣವಾಗಿತ್ತು. ಈ ಘಟನೆಯಲ್ಲಿ ದಲಿತ ಕುಟುಂಬದ ಇಬ್ಬರು ಸಹೋದರಿಯರ ವಿವಾಹವೆ ರದ್ದಾಗಿದ್ದು, ಹಲವಾರು ಅತಿಥಿಗಳಿಗೆ ಗಾಯಗೊಂಡಿದ್ದರು.

ಬ್ಯೂಟಿ ಪಾರ್ಲರ್‌ನಿಂದ ಇಬ್ಬರು ಸಹೋದರಿಯರು ತಮ್ಮ ಸಂಬಂಧಿಕರೊಂದಿಗೆ ಮನೆಗೆ ಹಿಂತಿರುಗುತ್ತಿದ್ದಾಗ ಅವರ ಕಾರು ಮೋಟಾರ್‌ಸೈಕಲ್‌ಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದರ ನಂತರ, ಮೋಟಾರ್‌ಸೈಕಲ್‌ನಲ್ಲಿದ್ದ ಕರ್ಣವಾಲ್ ಗ್ರಾಮದ ನಿವಾಸಿಗಳಾದ ಲೋಕೇಶ್, ರೋಹ್ತಾಶ್ ಮತ್ತು ಸತೀಶ್ ಕಾರಿನ ಪ್ರಯಾಣಿಕರೊಂದಿಗೆ ವಾಗ್ವಾದ ನಡೆಸಿದರು. ಮೂವರು ಪುರುಷರು ಮಹಿಳೆಯರನ್ನು ಕಾರಿನಿಂದ ಹೊರಗೆಳೆದು, ಅವರ ಮೇಲೆ ಹಲ್ಲೆ ನಡೆಸಿ, ಅವರ ಮುಖಕ್ಕೆ ಕೆಸರು ಎರಚಿದ್ದಾರೆ ಎಂದು ಆರೋಪಿಸಲಾಗಿದೆ.

ವಧುವಿನ ಕುಟುಂಬ ಸದಸ್ಯರಿಗೆ ದಾಳಿಯ ಬಗ್ಗೆ ತಿಳಿದಾಗ, ಅವರು ಸ್ಥಳಕ್ಕೆ ಧಾವಿಸಿದರು. ಶಂಕಿತ ದಾಳಿಕೋರರು ಸಹ ಪ್ರತಿಯಾಗಿ ತಮ್ಮ ಸಂಬಂಧಿಕರನ್ನು ಕರೆದರು. ನಂತರ ನಡೆದ ಘರ್ಷಣೆಯಲ್ಲಿ, ವಧುವಿನ ತಂದೆ ಸೇರಿದಂತೆ ಹಲವಾರು ಜನರು ಗಾಯಗೊಂಡರು, ಅವರ ತಲೆಗೆ ಗಾಯವಾಗಿತ್ತು.

ಮೀರತ್| ಅತ್ಯಾಚಾರದ ವಿಡಿಯೊ ತೋರಿಸಿ ದಲಿತ ಯುವತಿಯ ವಿವಾಹ ಮುರಿದ ದುರುಳ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...