Homeದಲಿತ್ ಫೈಲ್ಸ್ಮಥುರಾ| ಹಲ್ಲೆ ನಡೆದ ಎರಡು ವಾರಗಳ ಬಳಿಕ ನಡೆದ ದಲಿತ ಸಹೋದರಿಯರ ಮದುವೆ; ಬಿಗಿ ಪೊಲೀಸ್...

ಮಥುರಾ| ಹಲ್ಲೆ ನಡೆದ ಎರಡು ವಾರಗಳ ಬಳಿಕ ನಡೆದ ದಲಿತ ಸಹೋದರಿಯರ ಮದುವೆ; ಬಿಗಿ ಪೊಲೀಸ್ ಭದ್ರತೆ

- Advertisement -
- Advertisement -

ಮಥುರಾದ ಕರ್ನವಾಲ್‌ನಲ್ಲಿರುವ ದಲಿತ ಕುಟುಂಬದ ಇಬ್ಬರು ಸಹೋದರಿಯರು ಶುಕ್ರವಾರ ಮತ್ತೊಮ್ಮೆ ತಮ್ಮ ಮದುವೆಯ ಸಂಭ್ರಮದಲ್ಲಿ ಭಾಗಿಯಾದರು. ಪ್ರಬಲ ಜಾತಿಗೆ ಸೇರಿದ ಕನಿಷ್ಠ 15 ಜನರು ರಸ್ತೆ ಅಪಘಾತದಲ್ಲಿ ಉಂಟಾದ ಜಗಳದಲ್ಲಿ ದಲಿತ ಸಹೋದರಿಯರು ಮತ್ತು ಅವರ ಸಂಬಂಧಿಕರ ಮೇಲೆ ಹಲ್ಲೆ ನಡೆಸಿ, ಪಾರ್ಲರ್‌ನಿಂದ ಬರುತ್ತಿದ್ದ ನವ ವದುಗಳ ಮೇಲೆ ಕೆಸರು ಎರಚಿ ವಿಕೃತಿ ಮೆರೆದಿದ್ದರು. ದಾಳಿಯಿಂದ ಹೆದರಿದ್ದ ವರನ ಕಡೆಯವರು ಮದುವೆ ರದ್ದುಗೊಳಿಸಿದ್ದರು.

ಫೆಬ್ರವರಿ 21 ಕ್ಕೆ ಹೋಲಿಸಿದರೆ ಮದುವೆ ಸಿದ್ಧತೆಗಳು ಸಂಪೂರ್ಣವಾಗಿ ಭಿನ್ನವಾಗಿದ್ದವು. ಹಿಂಸಾತ್ಮಕ ಘರ್ಷಣೆಯ ಸಮಯದಲ್ಲಿ ಗೈರುಹಾಜರಾಗಿದ್ದ ಪೊಲೀಸ್ ಸಿಬ್ಬಂದಿ ನಿನ್ನೆ ನಡೆದ ‘ಬರಾತ್’ಗೆ ಪೂರ್ಣ ಬೆಂಗಾವಲು ನೀಡಿದರು. ಸಮಾಜ ಕಲ್ಯಾಣ ಸಚಿವ (ಸ್ವತಂತ್ರ ಉಸ್ತುವಾರಿ) ಅಸಿಮ್ ಅರುಣ್ ಅವರು ಕೂಡ ಸಹೋದರಿಯರ ವಿವಾಹದಲ್ಲಿ ಭಾಗವಹಿಸಿದ್ದರು.

ಕಳೆದ ಗುರುವಾರ, ರಾಜ್ಯಸಭಾ ಸದಸ್ಯ ಮತ್ತು ಸಮಾಜವಾದಿ ಪಕ್ಷದ ನಾಯಕ ರಾಮ್‌ಜಿಲಾಲ್ ಸುಮನ್ ನೇತೃತ್ವದ ನಿಯೋಗವು ಕುಟುಂಬಕ್ಕೆ ₹2 ಲಕ್ಷದ ಚೆಕ್ ನೀಡಲು ಕರ್ನವಾಲ್‌ನಲ್ಲಿತ್ತು. ಕಾಂಗ್ರೆಸ್ ಮತ್ತು ಆಜಾದ್ ಸಮಾಜ ಪಕ್ಷದ ನಾಯಕರು ಸಹ ದಲಿತ ಸಹೋದರಿಯರ ಮದುವೆಗೆ ತಮ್ಮ ಕೊಡುಗೆಗಳನ್ನು ನೀಡಿದರು.

“ಫೆಬ್ರವರಿ 21 ರಂದು, ಈ ಘಟನೆಯಿಂದಾಗಿ ಪದಮ್ ಸಿಂಗ್ ಅವರ ಹೆಣ್ಣುಮಕ್ಕಳ ವಿವಾಹಗಳನ್ನು ರದ್ದುಗೊಳಿಸಲಾಯಿತು ಎಂಬುದು ದುರದೃಷ್ಟಕರ. ಬಜೆಟ್ ಅಧಿವೇಶನ ನಡೆಯುತ್ತಿರುವಾಗ, 15 ಆರೋಪಿಗಳನ್ನು ಬಂಧಿಸುವಂತೆ ನೋಡಿಕೊಳ್ಳಲು ಮುಖ್ಯಮಂತ್ರಿಗಳು ನನ್ನನ್ನು ಇಲ್ಲಿಗೆ ಕಳುಹಿಸಿದರು. ನಾನು ಮದುವೆಗೆ ಹಾಜರಾಗುವುದಾಗಿ ಭರವಸೆ ನೀಡಿದ್ದೆ, ಇಂದು ಇಲ್ಲಿದ್ದೇನೆ” ಎಂದು ಸಚಿವ ಅರುಣ್ ಹೇಳಿದರು.

ಶನಿವಾರ ಗ್ರಾಮದಲ್ಲಿ ಪೊಲೀಸರನ್ನು ನಿಯೋಜಿಸಲಾಗಿತ್ತು. ವಿವಾಹ ಸುಗಮವಾಗಿ ನಡೆಯುವಂತೆ ನೋಡಿಕೊಳ್ಳಲು ಎಸ್‌ಪಿ (ನಗರ) ಅರವಿಂದ್ ಕುಮಾರ್ ಕೂಡ ಗ್ರಾಮದಲ್ಲಿದ್ದರು.

ಘಟನೆ ಹಿನ್ನೆಲೆ:

ಉತ್ತರ ಪ್ರದೇಶದ ಮಥುರಾ ಜಿಲ್ಲೆಯ ರಿಫೈನರಿ ಪ್ರದೇಶದಲ್ಲಿ ನಡೆದ ಸಣ್ಣ ಅಪಘಾತವು ಹಿಂಸಾತ್ಮಕ ಘರ್ಷಣೆಗೆ ಕಾರಣವಾಗಿತ್ತು. ಈ ಘಟನೆಯಲ್ಲಿ ದಲಿತ ಕುಟುಂಬದ ಇಬ್ಬರು ಸಹೋದರಿಯರ ವಿವಾಹವೆ ರದ್ದಾಗಿದ್ದು, ಹಲವಾರು ಅತಿಥಿಗಳಿಗೆ ಗಾಯಗೊಂಡಿದ್ದರು.

ಬ್ಯೂಟಿ ಪಾರ್ಲರ್‌ನಿಂದ ಇಬ್ಬರು ಸಹೋದರಿಯರು ತಮ್ಮ ಸಂಬಂಧಿಕರೊಂದಿಗೆ ಮನೆಗೆ ಹಿಂತಿರುಗುತ್ತಿದ್ದಾಗ ಅವರ ಕಾರು ಮೋಟಾರ್‌ಸೈಕಲ್‌ಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದರ ನಂತರ, ಮೋಟಾರ್‌ಸೈಕಲ್‌ನಲ್ಲಿದ್ದ ಕರ್ಣವಾಲ್ ಗ್ರಾಮದ ನಿವಾಸಿಗಳಾದ ಲೋಕೇಶ್, ರೋಹ್ತಾಶ್ ಮತ್ತು ಸತೀಶ್ ಕಾರಿನ ಪ್ರಯಾಣಿಕರೊಂದಿಗೆ ವಾಗ್ವಾದ ನಡೆಸಿದರು. ಮೂವರು ಪುರುಷರು ಮಹಿಳೆಯರನ್ನು ಕಾರಿನಿಂದ ಹೊರಗೆಳೆದು, ಅವರ ಮೇಲೆ ಹಲ್ಲೆ ನಡೆಸಿ, ಅವರ ಮುಖಕ್ಕೆ ಕೆಸರು ಎರಚಿದ್ದಾರೆ ಎಂದು ಆರೋಪಿಸಲಾಗಿದೆ.

ವಧುವಿನ ಕುಟುಂಬ ಸದಸ್ಯರಿಗೆ ದಾಳಿಯ ಬಗ್ಗೆ ತಿಳಿದಾಗ, ಅವರು ಸ್ಥಳಕ್ಕೆ ಧಾವಿಸಿದರು. ಶಂಕಿತ ದಾಳಿಕೋರರು ಸಹ ಪ್ರತಿಯಾಗಿ ತಮ್ಮ ಸಂಬಂಧಿಕರನ್ನು ಕರೆದರು. ನಂತರ ನಡೆದ ಘರ್ಷಣೆಯಲ್ಲಿ, ವಧುವಿನ ತಂದೆ ಸೇರಿದಂತೆ ಹಲವಾರು ಜನರು ಗಾಯಗೊಂಡರು, ಅವರ ತಲೆಗೆ ಗಾಯವಾಗಿತ್ತು.

ಮೀರತ್| ಅತ್ಯಾಚಾರದ ವಿಡಿಯೊ ತೋರಿಸಿ ದಲಿತ ಯುವತಿಯ ವಿವಾಹ ಮುರಿದ ದುರುಳ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...