Homeಮುಖಪುಟಮಥುರಾ: ಈದ್ಗಾ ಮಸೀದಿ ತೆರವು ಕೋರಿದ್ದ ಮನವಿ ವಜಾ

ಮಥುರಾ: ಈದ್ಗಾ ಮಸೀದಿ ತೆರವು ಕೋರಿದ್ದ ಮನವಿ ವಜಾ

ಪ್ರಾರ್ಥನಾ ಸ್ಥಳಗಳ (ವಿಶೇಷ ನಿಬಂಧನೆ) ಕಾಯ್ದೆ 1991ರ ಅಡಿಯಲ್ಲಿ ಅರ್ಜಿಯನ್ನು ಮಥುರಾ ಸಿವಿಲ್ ನ್ಯಾಯಾಲಯ ವಜಾಗೊಳಿದೆ.

- Advertisement -
- Advertisement -

ಶ್ರೀಕೃಷ್ಣನ ಜನ್ಮಸ್ಥಳದಲ್ಲಿ ನಿರ್ಮಿಸಲಾಗಿದೆ ಎಂಬ ಆರೋಪದ ಮೇಲೆ ಮಥುರಾದಲ್ಲಿನ ಈದ್ಗಾ ಮಸೀದಿಯನ್ನು ತೆರವುಗೊಳಿಸುವಂತೆ ಕೋರಿದ್ದ ಮನವಿಯನ್ನು ಮಥುರಾದ ಸಿವಿಲ್ ನ್ಯಾಯಾಲಯ ವಜಾಗೊಳಿಸಿದೆ ಎಂದು ಲೈವ್ ಲಾ ವರದಿ ಮಾಡಿದೆ. ಪ್ರಾರ್ಥನಾ ಸ್ಥಳಗಳ (ವಿಶೇಷ ನಿಬಂಧನೆ) ಕಾಯ್ದೆ 1991ರ ಅಡಿಯಲ್ಲಿ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿದೆ.

ಲಖನೌ ಹೈಕೋರ್ಟ್ ಮುಂದೆ ಅಯೋಧ್ಯ ಶೀರ್ಷಿಕೆ ಮೊಕದ್ದಮೆಯಲ್ಲಿ ವಾದಿಸಿದ ವಕೀಲರಲ್ಲಿ ಒಬ್ಬರಾದ ರಂಜನಾ ಅಗ್ನಿಹೋತ್ರಿ ಮೊಕದ್ದಮೆ ಹೂಡಿದ್ದರು. ಶಾಹಿ ಈದ್ಗಾ ಮಸೀದಿ ನಿರ್ಮಿಸಲಾಗಿರುವ ಸ್ಥಳದ ಮೇಲೆ ಮಾಲೀಕತ್ವವನ್ನು ಪಡೆಯಲು ಮತ್ತು ಮಸೀದಿಯನ್ನು ತೆಗೆಯಬೇಕೆಂದು ಕೋರಿ ಮೊಕದ್ದಮೆ ಹೂಡಿದ್ದರು.

ಇದನ್ನೂ ಓದಿ: ಮಥುರಾ: ಶ್ರೀಕೃಷ್ಣಾ ದೇವಾಲಯದ ಬಳಿಯ ಈದ್ಗಾ ಮಸೀದಿ ತೆರವಿಗೆ ಮೊಕದ್ದಮೆ ದಾಖಲು

ಕೆಲವು ಮುಸ್ಲಿಮರ ಸಹಾಯದಿಂದ ಈದ್ಗಾ ಟ್ರಸ್ಟ್, ಶ್ರೀಕೃಷ್ಣ ಜನಂಸ್ಥಾನ್ ಟ್ರಸ್ಟ್ ಮತ್ತು ದೇವರಿಗೆ ಸೇರಿದ ಭೂಮಿಯನ್ನು ಅತಿಕ್ರಮಣ ಮಾಡಿ ಈದ್ಗಾ ಮಸೀದಿ ನಿರ್ಮಿಸಿದೆ ಎಂದು ಮೊಕದ್ದಮೆಯಲ್ಲಿ ದೂರಲಾಗಿತ್ತು. ಶ್ರೀಕೃಷ್ಣನ ಜನ್ಮಸ್ಥಳವು ಟ್ರಸ್ಟ್ ರಚಿಸಿದ ಮಸೀದಿಯ ಕೆಳಗೆ ಇದೆ ಎಂದು ಮೊಕದ್ದಮೆಯಲ್ಲಿ ಆರೋಪಿಸಲಾಗಿತ್ತು.

ಅಲ್ಲದೆ ದೇವಾಲಯ ಆಡಳಿತ ಮಂಡಳಿಯಾಗಿರುವ ಶ್ರೀಕೃಷ್ಣ ಜನಂಸ್ಥಾನ್ ಸೇವಾ ಸಂಸ್ಥೆಯು ಆಸ್ತಿಯನ್ನು ಕಸಿದುಕೊಳ್ಳುವ ಉದ್ದೇಶದಿಂದ ಶಾಹಿ ಈದ್ಗಾ ಟ್ರಸ್ಟ್‌ನೊಂದಿಗೆ ಅಕ್ರಮ ರಾಜಿ ಮಾಡಿಕೊಂಡಿದೆ ಎಂದು ಆರೋಪಿಸಲಾಗಿತ್ತು.

ಮೊಕದ್ದಮೆಯನ್ನು ವಜಾಗೊಳಿಸಲು ಸಿವಿಲ್ ನ್ಯಾಯಾಧೀಶರ ನ್ಯಾಯಾಲಯ (ಹಿರಿಯ ವಿಭಾಗ) ಪ್ರಾರ್ಥನಾ ಸ್ಥಳಗಳ (ವಿಶೇಷ ನಿಬಂಧನೆಗಳು) ಕಾಯ್ದೆ 1991 ಅನ್ನು ಉಲ್ಲೇಖಿಸಿದೆ. ಬಾಬರಿ ಮಸೀದಿಯನ್ನು ಅಕ್ರಮವಾಗಿ ಉರುಳಿಸಿದ ನಂತರ ಈ ಕಾಯ್ದೆ ಜಾರಿಗೆ ಬಂದಿತ್ತು.

ಇದನ್ನೂ ಓದಿ: ಬಾಬರಿ ಮಸೀದಿ ದ್ವಂಸ ತೀರ್ಪು ಪ್ರಕಟಿಸಿದ ನ್ಯಾಯಾಲಯ: ಆರೋಪಿಗಳು ದೋಷಮುಕ್ತ

ಈ ಕಾಯ್ದೆಯ ಪ್ರಕಾರ, ಪೂಜಾ ಸ್ಥಳದ ಧಾರ್ಮಿಕ ಸ್ವರೂಪವನ್ನು ಸ್ವಾತಂತ್ರ್ಯದ ಸಮಯದಲ್ಲಿ ಹೇಗಿತ್ತೋ ಹಾಗೆ ಉಳಿಸುತ್ತದೆ. ಕಾಯ್ದೆ ಜಾರಿಗೆ ಬಂದ ನಂತರ ಪ್ರಾರ್ಥನಾ ಸ್ಥಳದ ಧಾರ್ಮಿಕ ಸ್ವರೂಪವನ್ನು ಬದಲಾಯಿಸುವ ಯಾವುದೇ ಮನವಿಯನ್ನು ಯಾವುದೇ ನ್ಯಾಯಾಲಯವು ಒಪ್ಪಿಕೊಳ್ಳುವುದಿಲ್ಲ ಎಂದು ಕಾಯಿದೆಯ ಸೆಕ್ಷನ್ 4 ಹೇಳುತ್ತದೆ. ಈ ಹಿನ್ನೆಲೆ ನ್ಯಾಯಾಲಯವು ಈದ್ಗಾ ಮಸೀದಿ ತೆರವು ಅರ್ಜಿಯನ್ನು ಕಾನೂನಿನ ಪ್ರಕಾರ ವಜಾಗೊಳಿಸಿತು.

ಸದ್ಯ ಬಾಬರಿ ಮಸೀದಿ ಧ್ವಂಸ ಪ್ರಕರಣದಲ್ಲಿ ವಿಎಚ್‌ಪಿ ಕರಸೇವಕರ ನಾಚಿಕೆಗೇಡಿನ ಕೃತ್ಯಗಳಿಗೆ ನ್ಯಾಯಾಂಗದ ಅನುಮೋದನೆ, ಸುಪ್ರೀಂ ಕೋರ್ಟ್ ತೀರ್ಪಿನೊಂದಿಗೆ ರಾಮ ಮಂದಿರವನ್ನು ನಿರ್ಮಿಸಲು ಅನುಮತಿ ಸಿಕ್ಕಿದೆ. ಜೊತೆಗೆ ಈಗ ಸಿಬಿಐ ವಿಶೇಷ ನ್ಯಾಯಾಲಯದ ತೀರ್ಪಿನಲ್ಲಿ ಅಂದು ಹಿಂಸಾಚಾರವನ್ನು ಪ್ರಚೋದಿಸಿದ ಎಲ್ಲ ಆರ್‌ಎಸ್‌ಎಸ್ ನಾಯಕರನ್ನು ಖುಲಾಸೆಗೊಳಿಸಿದೆ. ಇದು ಹಿಂದೂ ಮೂಲಭೂತವಾದಿಗಳಲ್ಲಿ ನಿರ್ಭಯದ ಭಾವನೆಯನ್ನು ಸೃಷ್ಟಿಸಿದೆ.

ಈದ್ಗಾ ಮಸೀದಿಯನ್ನು ತೆರುವುಗೊಳಿಸುವ ಮೊದಲಿನ ಪ್ರಯತ್ನಕ್ಕೆ ಸೋಲಾಗಿದೆ. ಕಾನೂನು ಕೂಡ ಮಸೀದಿ ತೆರವಿಗೆ ಅನುಮತಿ ನೀಡುವುದಿಲ್ಲ. ಆದರೂ ಇವೆಲ್ಲದರ ನಡುವೆಯೂ ಹಿಂದುತ್ವ ಕಾರ್ಯಕರ್ತರು ಮಸೀದಿ ತೆರವಿಗೆ ಒತ್ತಾಯಿಸುತ್ತಿದ್ದಾರೆ.

ಪ್ರಸ್ತುತ ರಾಮ ಜನ್ಮಭೂಮಿಯ ಉತ್ಸಾಹವು ಕಳೆದಿದೆ ಹಾಗಾಗಿ ಈ ಮೊಕದ್ದಮೆಯು ಮುಸ್ಲಿಮರ ವಿರುದ್ಧ ಹಿಂದೂಗಳನ್ನು ಪ್ರಚೋದಿಸಲು ಮತ್ತು ಸರ್ಕಾರದ ವೈಫಲ್ಯಗಳನ್ನು ಗಮನಿಸದಂತೆ ದೇಶದ ಜನರನ್ನು ಬೇರೆಡೆಗೆ ಸೆಳೆಯುವ ಮತ್ತೊಂದು ಪ್ರಚಾರ ಅಭಿಯಾನದ ಆರಂಭವನ್ನು ಸೂಚಿಸುತ್ತದೆ.


ಇದನ್ನೂ ಓದಿ: ಡಿಸೆಂಬರ್‌ ಚಳಿಯ ಒಂದು ದಿನ ಬಾಬರಿ ಮಸೀದಿ ಸ್ವಯಂ ಸ್ಫೋಟಗೊಂಡಿತು: ತೀರ್ಪು ವಿರುದ್ದ ಟ್ವಿಟ್ಟರ್‌‌ನಲ್ಲಿ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...