Homeಮುಖಪುಟಮಥುರಾ: ಈದ್ಗಾ ಮಸೀದಿ ತೆರವು ಕೋರಿದ್ದ ಮನವಿ ವಜಾ

ಮಥುರಾ: ಈದ್ಗಾ ಮಸೀದಿ ತೆರವು ಕೋರಿದ್ದ ಮನವಿ ವಜಾ

ಪ್ರಾರ್ಥನಾ ಸ್ಥಳಗಳ (ವಿಶೇಷ ನಿಬಂಧನೆ) ಕಾಯ್ದೆ 1991ರ ಅಡಿಯಲ್ಲಿ ಅರ್ಜಿಯನ್ನು ಮಥುರಾ ಸಿವಿಲ್ ನ್ಯಾಯಾಲಯ ವಜಾಗೊಳಿದೆ.

- Advertisement -
- Advertisement -

ಶ್ರೀಕೃಷ್ಣನ ಜನ್ಮಸ್ಥಳದಲ್ಲಿ ನಿರ್ಮಿಸಲಾಗಿದೆ ಎಂಬ ಆರೋಪದ ಮೇಲೆ ಮಥುರಾದಲ್ಲಿನ ಈದ್ಗಾ ಮಸೀದಿಯನ್ನು ತೆರವುಗೊಳಿಸುವಂತೆ ಕೋರಿದ್ದ ಮನವಿಯನ್ನು ಮಥುರಾದ ಸಿವಿಲ್ ನ್ಯಾಯಾಲಯ ವಜಾಗೊಳಿಸಿದೆ ಎಂದು ಲೈವ್ ಲಾ ವರದಿ ಮಾಡಿದೆ. ಪ್ರಾರ್ಥನಾ ಸ್ಥಳಗಳ (ವಿಶೇಷ ನಿಬಂಧನೆ) ಕಾಯ್ದೆ 1991ರ ಅಡಿಯಲ್ಲಿ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿದೆ.

ಲಖನೌ ಹೈಕೋರ್ಟ್ ಮುಂದೆ ಅಯೋಧ್ಯ ಶೀರ್ಷಿಕೆ ಮೊಕದ್ದಮೆಯಲ್ಲಿ ವಾದಿಸಿದ ವಕೀಲರಲ್ಲಿ ಒಬ್ಬರಾದ ರಂಜನಾ ಅಗ್ನಿಹೋತ್ರಿ ಮೊಕದ್ದಮೆ ಹೂಡಿದ್ದರು. ಶಾಹಿ ಈದ್ಗಾ ಮಸೀದಿ ನಿರ್ಮಿಸಲಾಗಿರುವ ಸ್ಥಳದ ಮೇಲೆ ಮಾಲೀಕತ್ವವನ್ನು ಪಡೆಯಲು ಮತ್ತು ಮಸೀದಿಯನ್ನು ತೆಗೆಯಬೇಕೆಂದು ಕೋರಿ ಮೊಕದ್ದಮೆ ಹೂಡಿದ್ದರು.

ಇದನ್ನೂ ಓದಿ: ಮಥುರಾ: ಶ್ರೀಕೃಷ್ಣಾ ದೇವಾಲಯದ ಬಳಿಯ ಈದ್ಗಾ ಮಸೀದಿ ತೆರವಿಗೆ ಮೊಕದ್ದಮೆ ದಾಖಲು

ಕೆಲವು ಮುಸ್ಲಿಮರ ಸಹಾಯದಿಂದ ಈದ್ಗಾ ಟ್ರಸ್ಟ್, ಶ್ರೀಕೃಷ್ಣ ಜನಂಸ್ಥಾನ್ ಟ್ರಸ್ಟ್ ಮತ್ತು ದೇವರಿಗೆ ಸೇರಿದ ಭೂಮಿಯನ್ನು ಅತಿಕ್ರಮಣ ಮಾಡಿ ಈದ್ಗಾ ಮಸೀದಿ ನಿರ್ಮಿಸಿದೆ ಎಂದು ಮೊಕದ್ದಮೆಯಲ್ಲಿ ದೂರಲಾಗಿತ್ತು. ಶ್ರೀಕೃಷ್ಣನ ಜನ್ಮಸ್ಥಳವು ಟ್ರಸ್ಟ್ ರಚಿಸಿದ ಮಸೀದಿಯ ಕೆಳಗೆ ಇದೆ ಎಂದು ಮೊಕದ್ದಮೆಯಲ್ಲಿ ಆರೋಪಿಸಲಾಗಿತ್ತು.

ಅಲ್ಲದೆ ದೇವಾಲಯ ಆಡಳಿತ ಮಂಡಳಿಯಾಗಿರುವ ಶ್ರೀಕೃಷ್ಣ ಜನಂಸ್ಥಾನ್ ಸೇವಾ ಸಂಸ್ಥೆಯು ಆಸ್ತಿಯನ್ನು ಕಸಿದುಕೊಳ್ಳುವ ಉದ್ದೇಶದಿಂದ ಶಾಹಿ ಈದ್ಗಾ ಟ್ರಸ್ಟ್‌ನೊಂದಿಗೆ ಅಕ್ರಮ ರಾಜಿ ಮಾಡಿಕೊಂಡಿದೆ ಎಂದು ಆರೋಪಿಸಲಾಗಿತ್ತು.

ಮೊಕದ್ದಮೆಯನ್ನು ವಜಾಗೊಳಿಸಲು ಸಿವಿಲ್ ನ್ಯಾಯಾಧೀಶರ ನ್ಯಾಯಾಲಯ (ಹಿರಿಯ ವಿಭಾಗ) ಪ್ರಾರ್ಥನಾ ಸ್ಥಳಗಳ (ವಿಶೇಷ ನಿಬಂಧನೆಗಳು) ಕಾಯ್ದೆ 1991 ಅನ್ನು ಉಲ್ಲೇಖಿಸಿದೆ. ಬಾಬರಿ ಮಸೀದಿಯನ್ನು ಅಕ್ರಮವಾಗಿ ಉರುಳಿಸಿದ ನಂತರ ಈ ಕಾಯ್ದೆ ಜಾರಿಗೆ ಬಂದಿತ್ತು.

ಇದನ್ನೂ ಓದಿ: ಬಾಬರಿ ಮಸೀದಿ ದ್ವಂಸ ತೀರ್ಪು ಪ್ರಕಟಿಸಿದ ನ್ಯಾಯಾಲಯ: ಆರೋಪಿಗಳು ದೋಷಮುಕ್ತ

ಈ ಕಾಯ್ದೆಯ ಪ್ರಕಾರ, ಪೂಜಾ ಸ್ಥಳದ ಧಾರ್ಮಿಕ ಸ್ವರೂಪವನ್ನು ಸ್ವಾತಂತ್ರ್ಯದ ಸಮಯದಲ್ಲಿ ಹೇಗಿತ್ತೋ ಹಾಗೆ ಉಳಿಸುತ್ತದೆ. ಕಾಯ್ದೆ ಜಾರಿಗೆ ಬಂದ ನಂತರ ಪ್ರಾರ್ಥನಾ ಸ್ಥಳದ ಧಾರ್ಮಿಕ ಸ್ವರೂಪವನ್ನು ಬದಲಾಯಿಸುವ ಯಾವುದೇ ಮನವಿಯನ್ನು ಯಾವುದೇ ನ್ಯಾಯಾಲಯವು ಒಪ್ಪಿಕೊಳ್ಳುವುದಿಲ್ಲ ಎಂದು ಕಾಯಿದೆಯ ಸೆಕ್ಷನ್ 4 ಹೇಳುತ್ತದೆ. ಈ ಹಿನ್ನೆಲೆ ನ್ಯಾಯಾಲಯವು ಈದ್ಗಾ ಮಸೀದಿ ತೆರವು ಅರ್ಜಿಯನ್ನು ಕಾನೂನಿನ ಪ್ರಕಾರ ವಜಾಗೊಳಿಸಿತು.

ಸದ್ಯ ಬಾಬರಿ ಮಸೀದಿ ಧ್ವಂಸ ಪ್ರಕರಣದಲ್ಲಿ ವಿಎಚ್‌ಪಿ ಕರಸೇವಕರ ನಾಚಿಕೆಗೇಡಿನ ಕೃತ್ಯಗಳಿಗೆ ನ್ಯಾಯಾಂಗದ ಅನುಮೋದನೆ, ಸುಪ್ರೀಂ ಕೋರ್ಟ್ ತೀರ್ಪಿನೊಂದಿಗೆ ರಾಮ ಮಂದಿರವನ್ನು ನಿರ್ಮಿಸಲು ಅನುಮತಿ ಸಿಕ್ಕಿದೆ. ಜೊತೆಗೆ ಈಗ ಸಿಬಿಐ ವಿಶೇಷ ನ್ಯಾಯಾಲಯದ ತೀರ್ಪಿನಲ್ಲಿ ಅಂದು ಹಿಂಸಾಚಾರವನ್ನು ಪ್ರಚೋದಿಸಿದ ಎಲ್ಲ ಆರ್‌ಎಸ್‌ಎಸ್ ನಾಯಕರನ್ನು ಖುಲಾಸೆಗೊಳಿಸಿದೆ. ಇದು ಹಿಂದೂ ಮೂಲಭೂತವಾದಿಗಳಲ್ಲಿ ನಿರ್ಭಯದ ಭಾವನೆಯನ್ನು ಸೃಷ್ಟಿಸಿದೆ.

ಈದ್ಗಾ ಮಸೀದಿಯನ್ನು ತೆರುವುಗೊಳಿಸುವ ಮೊದಲಿನ ಪ್ರಯತ್ನಕ್ಕೆ ಸೋಲಾಗಿದೆ. ಕಾನೂನು ಕೂಡ ಮಸೀದಿ ತೆರವಿಗೆ ಅನುಮತಿ ನೀಡುವುದಿಲ್ಲ. ಆದರೂ ಇವೆಲ್ಲದರ ನಡುವೆಯೂ ಹಿಂದುತ್ವ ಕಾರ್ಯಕರ್ತರು ಮಸೀದಿ ತೆರವಿಗೆ ಒತ್ತಾಯಿಸುತ್ತಿದ್ದಾರೆ.

ಪ್ರಸ್ತುತ ರಾಮ ಜನ್ಮಭೂಮಿಯ ಉತ್ಸಾಹವು ಕಳೆದಿದೆ ಹಾಗಾಗಿ ಈ ಮೊಕದ್ದಮೆಯು ಮುಸ್ಲಿಮರ ವಿರುದ್ಧ ಹಿಂದೂಗಳನ್ನು ಪ್ರಚೋದಿಸಲು ಮತ್ತು ಸರ್ಕಾರದ ವೈಫಲ್ಯಗಳನ್ನು ಗಮನಿಸದಂತೆ ದೇಶದ ಜನರನ್ನು ಬೇರೆಡೆಗೆ ಸೆಳೆಯುವ ಮತ್ತೊಂದು ಪ್ರಚಾರ ಅಭಿಯಾನದ ಆರಂಭವನ್ನು ಸೂಚಿಸುತ್ತದೆ.


ಇದನ್ನೂ ಓದಿ: ಡಿಸೆಂಬರ್‌ ಚಳಿಯ ಒಂದು ದಿನ ಬಾಬರಿ ಮಸೀದಿ ಸ್ವಯಂ ಸ್ಫೋಟಗೊಂಡಿತು: ತೀರ್ಪು ವಿರುದ್ದ ಟ್ವಿಟ್ಟರ್‌‌ನಲ್ಲಿ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...