HomeUncategorizedಮಥುರಾ ಶಾಹಿ ಮಸೀದಿ ಸಮೀಕ್ಷೆಗೆ ನೀಡಿದ್ದ ತಡೆ ವಿಸ್ತರಿಸಿದ ಸುಪ್ರೀಂಕೋರ್ಟ್

ಮಥುರಾ ಶಾಹಿ ಮಸೀದಿ ಸಮೀಕ್ಷೆಗೆ ನೀಡಿದ್ದ ತಡೆ ವಿಸ್ತರಿಸಿದ ಸುಪ್ರೀಂಕೋರ್ಟ್

- Advertisement -
- Advertisement -

ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ಮಥುರಾದ ಶಾಹಿ ಈದ್ಗಾ ಮಸೀದಿ ಸಂಕೀರ್ಣದ ಸಮೀಕ್ಷೆಗೆ ಅನುಮತಿ ನೀಡಿದ ಅಲಹಾಬಾದ್ ಹೈಕೋರ್ಟ್ ಆದೇಶದ ಮೇಲಿನ ತಡೆಯಾಜ್ಞೆಯನ್ನು ಸುಪ್ರೀಂ ಕೋರ್ಟ್ ಬುಧವಾರ ವಿಸ್ತರಿಸಿದೆ. ಶಾಹಿ ಮಸೀದಿಯು ಮಥುರಾದ ದೇವಾಲಯದ ಪಕ್ಕವೆ ಇರುವುದರಿಂದ ಬಿಜೆಪಿ ಬೆಂಬಲಿಗರ ಕುಮ್ಮಕ್ಕಿನಿಂದ ಮಸೀದಿಯು ಈ ಹಿಂದೆ ದೇವಸ್ಥಾನವಿದ್ದ ಜಾಗದಲ್ಲಿ ನಿರ್ಮಿಸಲಾಗಿದೆ ಎಂದು ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ಮಥುರಾ ಶಾಹಿ ಮಸೀದಿ

ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ನಡೆಸಲಾಗುತ್ತಿರುವ ಸಮೀಕ್ಷೆಯ ವಿರುದ್ಧ ಟ್ರಸ್ಟ್ ಶಾಹಿ ಮಸೀದಿ ಈದ್ಗಾದ ನಿರ್ವಹಣಾ ಸಮಿತಿಯ ಅರ್ಜಿಯ ವಿಚಾರಣೆಯನ್ನು ಏಪ್ರಿಲ್ 1ರ ನಂತರರ ವಾರದಲ್ಲಿ ಮುಂದೂಡುವುದಾಗಿ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿಗಳಾದ ಸಂಜಯ್ ಕುಮಾರ್ ಮತ್ತು ಕೆ.ವಿ. ವಿಶ್ವನಾಥನ್ ಅವರನ್ನೊಳಗೊಂಡ ಪೀಠ ಹೇಳಿದೆ. ಮಥುರಾ ಶಾಹಿ ಮಸೀದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಹಾಗಾಗಿ, ಶಾಹಿ ಈದ್ಗಾ ಮಸೀದಿ ಸಂಕೀರ್ಣದಲ್ಲಿ ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ನಡೆದ ಸಮೀಕ್ಷೆಗೆ ತಡೆ ನೀಡಿದ ಅಲಹಾಬಾದ್ ಹೈಕೋರ್ಟ್‌ನ ಮಧ್ಯಂತರ ಆದೇಶವು ಮುಂದುವರಿಯಲಿದೆ ಎಂದು ಪೀಠ ಹೇಳಿದೆ. ಕಳೆದ ವರ್ಷ ಜನವರಿ 16 ರಂದು ಡಿಸೆಂಬರ್ 14, 2023 ರಂದು ಹೈಕೋರ್ಟ್‌ ನೀಡಿದ್ದ ಆದೇಶದ ಕಾರ್ಯಾಚರಣೆಗೆ ಸುಪ್ರೀಂ ಕೋರ್ಟ್ ತಡೆ ನೀಡಿತ್ತು.

ಸುಪ್ರೀಂ ಕೋರ್ಟ್‌ನಲ್ಲಿ ಈಗ ಮೂರು ಪ್ರಕರಣಗಳು ಬಾಕಿ ಉಳಿದಿದ್ದು, ಅವೆಲ್ಲವೂ ನ್ಯಾಯಾಲಯದೊಳಗಿನ ಮೇಲ್ಮನವಿಯ ಪ್ರಕರಣಗಳಾಗಿವೆ. ಮತ್ತೊಂದು, ಪೂಜಾ ಸ್ಥಳಗಳ (ವಿಶೇಷ ನಿಬಂಧನೆಗಳು) ಕಾಯ್ದೆ, 1991 ರ ಪ್ರಕರಣವಾಗಿದೆ ಎಂದು ಸಿಜೆಐ ಹೇಳಿದ್ದು, ಅವುಗಳನ್ನು ಏಪ್ರಿಲ್ 1 ರಿಂದ ಪ್ರಾರಂಭವಾಗುವ ವಾರದಲ್ಲಿ ಪಟ್ಟಿ ಮಾಡುವುದಾಗಿ ಹೇಳಿದೆ.

ಅದಕ್ಕೂ ಹಿಂದೆ, ಶಾಹಿ ಈದ್ಗಾ ಮಸೀದಿ ಸಂಕೀರ್ಣದಲ್ಲಿ ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ಸಮೀಕ್ಷೆ ನಡೆಸಲು ಹೈಕೋರ್ಟ್ ಅನುಮತಿ ನೀಡಿತ್ತು ಮತ್ತು ಅದರ ಮೇಲ್ವಿಚಾರಣೆಗೆ ನ್ಯಾಯಾಲಯ ಆಯುಕ್ತರ ನೇಮಕಕ್ಕೆ ಒಪ್ಪಿಕೊಂಡಿತ್ತು. ಬಿಜೆಪಿ ಪರ ಅರ್ಜಿದಾರರು, ಮಸೀದಿಯ ಆವರಣದಲ್ಲಿ ಒಂದು ಕಾಲದಲ್ಲಿ ದೇವಾಲಯವಿತ್ತು ಎಂದು ವಾದಿಸಿ ಈ ಪ್ರಕರಣ ದಾಖಲಿಸಿದ್ದರು. ಇದನ್ನು ವಿರೋಧಿಸಿ ಮುಸ್ಲಿಮರು ಸುಪ್ರಿಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಬಿಜೆಪಿ ಪರ ಅರ್ಜಿದಾರರು, ಮಥುರಾದಲ್ಲಿ, ಶಾಹಿ ಈದ್ಗಾ ಮಸೀದಿಯನ್ನು ಶ್ರೀ ಕೃಷ್ಣ ಜನ್ಮಭೂಮಿ ಟ್ರಸ್ಟ್‌ನ 13.37 ಎಕರೆ ಭೂಮಿಯ ಒಂದು ಭಾಗದಲ್ಲಿ ನಿರ್ಮಿಸಲಾಗಿದ್ದು, ಅದನ್ನು ಸ್ಥಳಾಂತರಿಸುವಂತೆ ಸಿವಿಲ್ ನ್ಯಾಯಾಧೀಶರ ಹಿರಿಯ ವಿಭಾಗ (III) ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಲಾಗಿತ್ತು.

1991 ರ ಪೂಜಾ ಸ್ಥಳಗಳ ಕಾಯ್ದೆಯು ದೇಶದ ಸ್ವಾತಂತ್ರ್ಯದ ದಿನದಂದು ಅಸ್ತಿತ್ವದಲ್ಲಿದ್ದ ಯಾವುದೇ ದೇವಾಲಯದ ಧಾರ್ಮಿಕ ಸ್ವರೂಪವನ್ನು ಬದಲಾಯಿಸುವುದನ್ನು ನಿಷೇಧಿಸುತ್ತದೆ. ಅದಾಗ್ಯೂ, ಈ ಕಾಯ್ದೆಯು ರಾಮ ಜನ್ಮಭೂಮಿ-ಬಾಬರಿ ಮಸೀದಿ ವಿವಾದವನ್ನು ಮಾತ್ರ ಅದರ ವ್ಯಾಪ್ತಿಯಿಂದ ವಿನಾಯಿತಿ ನೀಡಿತ್ತು.

ಇದನ್ನೂಓದಿ:  ಆರಾಧನಾ ಸ್ಥಳಗಳ ಕಾಯ್ದೆ ಪ್ರಕರಣದಲ್ಲಿ ಪ್ರತಿಕ್ರಿಯೆ ವಿಳಂಬ ಕೇಂದ್ರದ ಉದ್ದೇಶಪೂರ್ವಕ ಕ್ರಮ : ಶಾಹಿ ಈದ್ಗಾ ಸಮಿತಿ

ಆರಾಧನಾ ಸ್ಥಳಗಳ ಕಾಯ್ದೆ ಪ್ರಕರಣದಲ್ಲಿ ಪ್ರತಿಕ್ರಿಯೆ ವಿಳಂಬ ಕೇಂದ್ರದ ಉದ್ದೇಶಪೂರ್ವಕ ಕ್ರಮ : ಶಾಹಿ ಈದ್ಗಾ ಸಮಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...