Homeಕರ್ನಾಟಕಯುವಜನರೊಂದಿಗೆ ಸಮಾನತೆಯ ಆಶಯದೊಂದಿಗೆ ಸಂವಾದಕ್ಕಿಳಿದ 'ಮತ್ತೆ ಕಲ್ಯಾಣ'ದ ಪ್ರಯೋಗ ಜನಪರವಲ್ಲವೇ?

ಯುವಜನರೊಂದಿಗೆ ಸಮಾನತೆಯ ಆಶಯದೊಂದಿಗೆ ಸಂವಾದಕ್ಕಿಳಿದ ‘ಮತ್ತೆ ಕಲ್ಯಾಣ’ದ ಪ್ರಯೋಗ ಜನಪರವಲ್ಲವೇ?

- Advertisement -
- Advertisement -

ಹನ್ನೆರಡನೆಯ ಶತಮಾನದಲ್ಲಿ ನಡೆದ ಶರಣ ಚಳುವಳಿಯ ಆಶಯಗಳನ್ನು ಜನಸಾಮಾನ್ಯರು ಮತ್ತು ಯುವಜನರ ಬಳಿ ಮತ್ತೆ ತೆಗೆದುಕೊಂಡು ಹೋಗಬೇಕೆನ್ನುವ ಆಶಯದೊಂದಿಗೆ ಒಂದು ವಿಶಿಷ್ಟ ಕಾರ್ಯಕ್ರಮ ಶುರುವಾಗಿದೆ. ಸಾಣೇಹಳ್ಳಿಯ ಪಂಡಿತಾರಾಧ್ಯ ಸ್ವಾಮಿಜಿಗಳ ನೇತೃತ್ವದಲ್ಲಿ ವಿವಿಧ ಸ್ವಾಮೀಜಿಗಳು, ಜನಪರ ಸಂಘಟನೆಗಳ ಸಹಯೋಗದಲ್ಲಿ ಮತ್ತೆ ಕಲ್ಯಾಣ ಎಂಬ ಆಂದೋಲನ ನಡೆಯುತ್ತಿದೆ.

ಮತ್ತೆ ಕಲ್ಯಾಣದ ಪರಿಕಲ್ಪನೆ ಹನ್ನೆರಡನೆ ಶತಮಾನದಲ್ಲಿ ಕಲ್ಯಾಣದಲ್ಲಿ ನಡೆದ ಮಾನವೀಯ ಮೌಲ್ಯಗಳನ್ನು ಮುನ್ನೆಲೆಗೆ ತಂದ ಶರಣ ಚಳುವಳಿಯ ಆಶಯಗಳನ್ನು ಸಮಾಜದ ಮಧ್ಯೆ ತೆಗೆದುಕೊಂಡು ಹೋಗಲು ಹುಟ್ಟಿಕೊಂಡ ಒಂದು ಆಂದೋಲನವಾಗಿದೆ. ಈ ಆಂದೋಲನವು ರಾಜ್ಯದ ಪ್ರತಿಯೊಂದು ಜಿಲ್ಲೆಯಲ್ಲೂ ಕಾರ್ಯಕ್ರಮವನ್ನು ನಡೆಸುತ್ತಿದ್ದು ಯುವಜನರೊಂದಿಗೆ ಸಂವಾದ ನಡೆಸುವುದು ಇದರ ಮುಖ್ಯವಾದ ಭಾಗವಾಗಿದೆ.

ನಾವು ಮುಖ್ಯವಾಗಿ ಗಮನಿಸಬೇಕೇರುವುದು ಬಹುಪಾಲು ವಾಟ್ಸಪ್ , ಫೇಸ್‌ಬುಕ್ ಪದವಿಧರರಾಗಿರುವ ಯುವಜನರ ಜೊತೆ ಈ ಆಂದೋಲನ ಎದುರಾಗುತ್ತಿರುವುದು. ಇಲ್ಲಿ ಸ್ವಾಮೀಜಿಯವರನ್ನು ಒಳಗೊಂಡಂತೆ ಇಬ್ಬರು ಚಿಂತಕರಿಗೆ ಬಂದಂತಹ ಹೆಚ್ಚಿನ ಪ್ರಶ್ನೆಗಳಾವುವು ನೋಡಬೇಕು. ಎಲ್ಲಾ ಕಡೆ ಎದುರಾಗುತ್ತಿರುವ ಪ್ರಶ್ನೆ ಎಂದರೆ ಮೀಸಲಾತಿಯಿಂದ ಮೇಲ್ಜಾತಿಯವರಿಗೆ ಅನ್ಯಾಯವಾಗುತ್ತಿದೆ. ಈ ಮೀಸಲಾತಿಯನ್ನು ಕೊನೆಗಾಣಿಸಬೇಕಲ್ಲವೆ ಎಂಬುದು. ಈ ರೀತಿಯ ಯೋಚನೆಗಳು ಇತ್ತೀಚಿಗೆ ಹೆಚ್ಚು ಕೇಳಿ ಬರುತ್ತಿರುವುದನ್ನು ಗಮನಿಸಬಹುದು. ಇದಕ್ಕೆ ಕಾರಣ ಬಲಪಂಥೀಯ ಶಕ್ತಿಗಳು ಸೋಷೀಯಲ್ ಮೀಡೀಯಾದಲ್ಲಿ ಇದನ್ನು ಒಂದು ನಿರಂತರ ಅಜೆಂಡಾವಾಗಿ ಮಾಡಿಕೊಂಡು ಅಭಿಪ್ರಾಯ ರೂಪಿಸಲು ಸತತವಾಗಿ ಪ್ರಯತ್ನಪಡುತ್ತಲೇ ಇವೆ. ಮೀಸಲಾತಿಯಿಂದಲೇ ಈ ದೇಶ ಹಿಂದುಳಿದಿದೆ ಎನ್ನುವಂತಹ ಮನಸ್ಥಿತಿಯನ್ನು ರೂಪಿಸುವಲ್ಲಿ ಒಂದು ಮಟ್ಟಿಗೆ ಯಶಸ್ಸನ್ನೂ ಪಡೆದಿದ್ದಾರೆ. ದುರಂತವೆಂದರೆ ಎಸ್.ಸಿ/ ಎಸ್.ಟಿ ಸಮುದಾಯಗಳಂತೆ ಮೀಸಲಾತಿಯ ಫಲಾನುಭವಿಗಳಾದಂತಹ ಒ.ಬಿ.ಸಿ ಸಮುದಾಯದ ಯುವಜನರಲ್ಲೇ  ಹೆಚ್ಚು ಈ ರೀತಿಯ ಮನಸ್ಥಿತಿ ಬೆಳೆಯುತ್ತಿದೆ.

ಈ ಪ್ರಶ್ನೆಯನ್ನು ಸಮರ್ಥವಾಗಿ ಎದುರಿಸುತ್ತಿರುವ ಪಂಡಿತಾರಾಧ್ಯ ಸ್ವಾಮೀಜಿಗಳು ಜಾತಿ ಇರುವವರೆಗೂ, ಅಸಮಾನತೆ ತೊಲಗುವವರೆಗೂ ಮೀಸಲಾತಿ ಅವಶ್ಯಕ ಎಂದು ಪ್ರತಿಪಾದಿಸುತ್ತಾ ಬಂದಿದ್ದಾರೆ. ನಿಜವಾಗಲೂ ಸಮಾನತೆ ಬಂದಮೇಲೆ ಮೀಸಲಾತಿ, ಬಡ್ತಿ ಮೀಸಲಾತಿಯ ಅವಶ್ಯಕತೆ ಇರುವುದಿಲ್ಲ ಎಂದು ಹೇಳಿದ್ದರು. ಈ ಸುಧ್ದಿ ಮಾಧ್ಯಮಗಳಲ್ಲಿ ತಪ್ಪಾಗಿ ಪ್ರಕಟವಾಗಿ ನಂತರ ಸ್ವಾಮೀಜಿಯವರು ಸ್ಫಷ್ಟನೆ ನೀಡಬೇಕಾಗಿ ಬಂದಿತು. ಈ ಮಧ್ಯೆ ಸಾಕಷ್ಟು ಜನರ ಟೀಕೆಗಳು ಬಂದು ಹೋದವು. ಈಗ ಅರ್ಧ ಜಿಲ್ಲೆಗಳಲ್ಲಿ ಕಾರ್ಯಕ್ರಮ ಮುಗಿಯುತ್ತಾ ಬಂದಿದೆ. ಎಲ್ಲಾ ಜಿಲ್ಲೆಗಳಲ್ಲೂ ಬಂದ ಜಾತಿ ಬಗೆಗಿನ, ಮೀಸಲಾತಿ ಬಗೆಗಿನ ಪ್ರಶ್ನೆಗಳಿಗೆ ಸಮರ್ಥವಾಗಿ ಉತ್ತರಿಸಿದ್ದಾರೆ ಮತ್ತು ಲಿಂಗಾಯತ ಜಾತಿವಾದಿಗಳು ಸಹ ಕಟು ವಾಸ್ತವಗಳನ್ನು ಕೇಳಿಸಿಕೊಂಡಿದ್ದಾರೆ.

ತರಿಕೆರೆಯಲ್ಲಿ ಸ್ವಾಮೀಜಿಗಳಿಗೆ ಒಬ್ಬ ವಿದ್ಯಾರ್ಥಿ ಎಂ.ಎಂ.ಕಲ್ಬುರ್ಗಿ ಮತ್ತು ಗೌರಿ ಲಂಕೇಶ್ ಹತ್ಯೆ ಮತ್ತು ಹನ್ನೆರಡನೆ ಶತಮಾನದ ಶರಣರ ಕೊಲೆಗಳು ಒಂದೇನಾ ? ಅನ್ನುವ ಪ್ರಶ್ನೆಗೆ ಇದು ಭಿನ್ನವಾದ ಸಂದರ್ಭದಲ್ಲಿ ನಡೆದ ಹತ್ಯೆಗಳಾದರೂ, ಹತ್ಯೆ ಮಾಡಿದರು ಒಂದೇ ವಂಶಜರು, ಪಟ್ಟಭದ್ರ ಹಿತಾಸಕ್ತಿಗಳಿಂದಲೇ ನಡೆಯಿತು ಎಂದು ಉತ್ತರಿಸಿದರು. ಈ ರೀತಿ ಬೇರೆ ಬೇರೆ ರೀತಿಯ ಪ್ರಶ್ನೆಗಳನ್ನು ಮತ್ತೆ ಕಲ್ಯಾಣ ತಂಡ ಎದುರಿಸುತ್ತಾ ಯಶಸ್ವಿಯಾಗಿ ಇಂದಿಗೆ ೧೯ ಜಿಲ್ಲೆಗಳನ್ನು ಮುಕ್ತಾಯ ಮಾಡಿದೆ. ಈ ತಿಂಗಳಾದ್ಯಂತ ಆಂದೋಲನ ಮುಂದುವರೆಯಲಿದ್ದು ಈ ಪೀಳಿಗೆಯ ಯುವಜನರ ಪ್ರಶ್ನೆಗಳನ್ನು ಎದುರಿಸುತ್ತಾ ಪರಸ್ಪರ ಮುಖಾಮುಖಿಯು ಹೊಸದನ್ನು ಕಲಿಸುವ ಸಾಧ್ಯತೆಯಿದೆ.

ಮಂಗಳೂರಿಗೆ ಮೋಹನ್ ಆಳ್ವಾ ಅಂತ ವ್ಯಕ್ತಿಯನ್ನ ಒಳಗೊಂಡಿದ್ದು ಸಹಾ ವಿಮರ್ಶೆಗೊಳಗಾಯಿತು. ವಿಮರ್ಶೆಯ ಕಣ್ಣಿನಿಂದಲೇ ಈ ಆಂದೋಲನದ ಜೊತೆ ಇರುವ ಅವಶ್ಯಕತೆ ಖಂಡಿತ ಇದೆ ಎಂದು ಎನಿಸುತ್ತದೆ. ತಮಗೆ ನೂರೆಂಟು ಮಿತಿಗಳನ್ನು ಹಾಕಿಕೊಂಡು, ಮಠಗಳನ್ನು ತಮ್ಮ ಸಮುದಾಯಗಳವರ ಹಿತಕ್ಕಾಗಿ, ಮಠದ ಆಸ್ತಿ ಮಾಡಲು ಮತ್ತು ರಾಜಕೀಯ ಮಾಡುವುದೇ ಉದ್ದೇಶವಾಗಿ ನಡೆಸುತ್ತಿರುವ ಹಲವು ಮಠಾಧೀಶರ ನಡುವೆ ನಿಜವಾಗಲೂ ಬಸವ ತತ್ವ ಪ್ರಚಾರಕರಾಗಿ ಮಾಡಬೇಕಾದ ಕೆಲಸವನ್ನು ಮತ್ತೆ ಕಲ್ಯಾಣದ ಮೂಲಕ ಪಂಡಿತಾರಾಧ್ಯ ಸ್ವಾಮೀಜಿಯವರು ವಿಭಿನ್ನವಾದ ಪ್ರಯತ್ನಕ್ಕೆ ಕೈ ಹಾಕಿದ್ದಾರೆ ಎನಿಸುತ್ತಿದೆ.

ಇಂತಹ ಪ್ರಯೋಗಗಳನ್ನು ನಡೆಸುವಾಗ ಬಹಳ ಎಚ್ಚರದಿಂದ ಹೆಜ್ಜೆ ಹಾಕಬೇಕಾಗುತ್ತದೆ. ನೀವು ಎಂತದ್ದೇ ಜನಪರವಾದ ಕಾರ್ಯಕ್ರಮವನ್ನು ಬೀದಿಗೆ ಬಂದು ಮಾಡಿ ಅದು ಆಳುವ ವರ್ಗದ ಪರವಿಲ್ಲದಿದ್ದರೆ ಅದಕ್ಕೆ ಕೊಡಬೇಕಾದಷ್ಟು ಪ್ರಾಶಾಸ್ತ್ಯವನ್ನು  ಮಾರಿಕೊಂಡ ಮಾಧ್ಯಮಗಳು ಕೊಡುವುದಿಲ್ಲ. ಇದು ಬೀದಿಗಿಳಿದು ಜನಪರ ಕೆಲಸ ಮಾಡುವ ದಲಿತ, ಜೀವಪರ ಹೋರಾಟಗಾರರ ಅನುಭವಕ್ಕೆ ಬಂದಿರುತ್ತದೆ. ಬಲಪಂಥೀಯ ಶಕ್ತಿಗಳು ಪದೇ ಪದೇ ಹಲವು ವಿಚಾರಗಳಲ್ಲಿ ಗೆಲುವು ಸಾಧಿಸಿದಾಗ ಯುವಜನರನ್ನು ಒಳಗೊಳ್ಳಬೇಕು ಎನ್ನುವ ಸಾಕಷ್ಟು ಮಾತು ಇದುವರೆಗೆ ನಡೆದಿದೆ.

ಬುದ್ಧಿವಂತರು ಯುವಜನರ ಜೊತೆ ಕೆಲಸ ಮಾಡುವಂತಹ ಜೀವಪರರಿಗೆ ಬೆಂಬಲಿಸದೆ ಜೊತೆ ನಿಲ್ಲದೆ ಇರುವ ಎಷ್ಟೋ ಉದಾಹರಣೆಗಳಿವೆ. ಮತ್ತೆ ಕಲ್ಯಾಣ ಯಾವುದೇ ವಿಮರ್ಶೆಗೆ ಅತೀತವಾದದ್ದಲ್ಲ. ಒಂದು ಮಠದ ಹಿನ್ನಲೆಯ ಸ್ವಾಮೀಜಿಯ ನೇತೃತ್ವದಲ್ಲಿ ನಡೆಯುತ್ತಿರುವ ಕಾರ್ಯಕ್ರಮವಾದ್ದರಿಂದ ಅನುಮಾನದಿಂದಲೇ ನೋಡಬೇಕಾದ ಅವಶ್ಯಕತೆ ಖಂಡಿತ ಇದೆ. ಆದರೆ ಇದೇ ವಿಚಾರವಾಗಿ ಆ ಆಂದೋಲನ ಎಲ್ಲರನ್ನು ಒಳಗೊಳ್ಳುವ ಮೂಲಕ ಏನನ್ನು ಹೇಳಲು ಹೊರಟಿದೆ ಎನ್ನುವುದನ್ನು ಯೋಚಿಸಬೇಕಿದೆ. ಈ ಮಾಧ್ಯಮಗಳು, ಸಾಮಾಜಿಕ ಜಾಲತಾಣಗಳ ಮೂಲಕ ಹುಸಿ ದೇಶ/ದ್ವೇಷಭಕ್ತಿಯನ್ನೆ ಮನಸ್ಸಲ್ಲಿ ತುಂಬಿಕೊಳ್ಳುತ್ತಿರುವ ಈ ಹೊತ್ತಿನಲ್ಲಿ ನಮ್ಮದೇ ನೆಲದಲ್ಲಿ ಒಂದು ಮಾನವೀಯ ತತ್ವಗಳ ಆಧಾರದಲ್ಲಿ ಹನ್ನೆರಡನೆ ಶತಮಾನದಲ್ಲಿ  ಒಂದು ಸಿದ್ದಾಂತ ಹುಟ್ಟಿತ್ತು, ಅದು ಸರ್ವ ಜಾತಿಗಳ ನಡುವೆ ಸಮಾನತೆಯನ್ನು ಬಯಸಿತ್ತು, ಕಾಯಕ ಘನತೆಯನ್ನು ಎತ್ತಿ ಹಿಡಿದಿತ್ತು, ಅಂತರ್ಜಾತಿ ವಿವಾಹಗಳನ್ನು ಮಾಡಲು ಸಂಘರ್ಷ ನಡೆಸಿತ್ತು, ಅದನ್ನು ನಾವು ಮತ್ತೆ ನೆನೆಪಿಸಿಕೊಳ್ಳಬೇಕಿದೆ ಎನಿಸುತ್ತದೆ.

ಇದರ ಅನುಭವದ ಹಿನ್ನೆಲೆಯಲ್ಲಿ ಜಾತಿವಿನಾಶದಂತಹ ದೊಡ್ಡ ಹೆಜ್ಜೆಗಳನ್ನಿಡಲು ಬಸವ ತತ್ವದಲ್ಲಿರುವ ಅಂಶಗಳು ಯಾವುವು, ಕರ್ಮಠತನಕ್ಕೆ ಒಗ್ಗಿಕೊಂಡ ಲಿಂಗಾಯತ ಸಮುದಾಯಕ್ಕೆ ಮನವರಿಕೆ ಮಾಡಿಕೊಡುವುದಾದರೂ ಹೇಗೆ ಎಂದು ಮುಂದಿನ ದಿನಗಳಲ್ಲಿ ಚಿಂತಿಸಬೇಕಿದೆ. ಈಗ ನಡೆಯುತ್ತಿರುವ ಆಂದೋಲನವನ್ನು ನಾವು ನೋಡಬೇಕಾದ ರೀತಿ ಹೇಗೆ ಎಂದು ಮರುಚಿಂತಿಸಬೇಕಿದೆ ಎನಿಸುತ್ತದೆ. ಶರಣರು ಸಾಮಾಜಿಕ ಸಮಸ್ಯೆಗಳಿಗೆ ಸೂಚಿಸಿದ ಮೌಲ್ಯಾಧಾರಿತ ಪರಿಹಾರಗಳು, ಅವರು ವಿಚಾರಗಳನ್ನು ಸರಳ ವಚನಗಳ ರೂಪದಲ್ಲಿ ಮನಸ್ಸಿನಾಳಕ್ಕೆ ಇಳಿಸಿದ ಬಗ್ಗೆ ಇನ್ನಷ್ಟು ಸಂಶೋಧನೆ, ಅಧ್ಯಯನವನ್ನು ಪ್ರಜ್ಞಾವಂತ ವಲಯ ಮಾಡಬೇಕಿದೆ. ನಮ್ಮದೇ ನೆಲದ ಬಸವ ಚಿಂತನೆಯನ್ನು ಇಂದಿನ ಪೀಳಿಗೆಗೆ ತಿಳಿಸುವ ಪ್ರಯತ್ನಗಳಿಗೆ ಬಲ ತುಂಬ ಬೇಕಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...