Homeಕರ್ನಾಟಕಯುವಜನರೊಂದಿಗೆ ಸಮಾನತೆಯ ಆಶಯದೊಂದಿಗೆ ಸಂವಾದಕ್ಕಿಳಿದ 'ಮತ್ತೆ ಕಲ್ಯಾಣ'ದ ಪ್ರಯೋಗ ಜನಪರವಲ್ಲವೇ?

ಯುವಜನರೊಂದಿಗೆ ಸಮಾನತೆಯ ಆಶಯದೊಂದಿಗೆ ಸಂವಾದಕ್ಕಿಳಿದ ‘ಮತ್ತೆ ಕಲ್ಯಾಣ’ದ ಪ್ರಯೋಗ ಜನಪರವಲ್ಲವೇ?

- Advertisement -
- Advertisement -

ಹನ್ನೆರಡನೆಯ ಶತಮಾನದಲ್ಲಿ ನಡೆದ ಶರಣ ಚಳುವಳಿಯ ಆಶಯಗಳನ್ನು ಜನಸಾಮಾನ್ಯರು ಮತ್ತು ಯುವಜನರ ಬಳಿ ಮತ್ತೆ ತೆಗೆದುಕೊಂಡು ಹೋಗಬೇಕೆನ್ನುವ ಆಶಯದೊಂದಿಗೆ ಒಂದು ವಿಶಿಷ್ಟ ಕಾರ್ಯಕ್ರಮ ಶುರುವಾಗಿದೆ. ಸಾಣೇಹಳ್ಳಿಯ ಪಂಡಿತಾರಾಧ್ಯ ಸ್ವಾಮಿಜಿಗಳ ನೇತೃತ್ವದಲ್ಲಿ ವಿವಿಧ ಸ್ವಾಮೀಜಿಗಳು, ಜನಪರ ಸಂಘಟನೆಗಳ ಸಹಯೋಗದಲ್ಲಿ ಮತ್ತೆ ಕಲ್ಯಾಣ ಎಂಬ ಆಂದೋಲನ ನಡೆಯುತ್ತಿದೆ.

ಮತ್ತೆ ಕಲ್ಯಾಣದ ಪರಿಕಲ್ಪನೆ ಹನ್ನೆರಡನೆ ಶತಮಾನದಲ್ಲಿ ಕಲ್ಯಾಣದಲ್ಲಿ ನಡೆದ ಮಾನವೀಯ ಮೌಲ್ಯಗಳನ್ನು ಮುನ್ನೆಲೆಗೆ ತಂದ ಶರಣ ಚಳುವಳಿಯ ಆಶಯಗಳನ್ನು ಸಮಾಜದ ಮಧ್ಯೆ ತೆಗೆದುಕೊಂಡು ಹೋಗಲು ಹುಟ್ಟಿಕೊಂಡ ಒಂದು ಆಂದೋಲನವಾಗಿದೆ. ಈ ಆಂದೋಲನವು ರಾಜ್ಯದ ಪ್ರತಿಯೊಂದು ಜಿಲ್ಲೆಯಲ್ಲೂ ಕಾರ್ಯಕ್ರಮವನ್ನು ನಡೆಸುತ್ತಿದ್ದು ಯುವಜನರೊಂದಿಗೆ ಸಂವಾದ ನಡೆಸುವುದು ಇದರ ಮುಖ್ಯವಾದ ಭಾಗವಾಗಿದೆ.

ನಾವು ಮುಖ್ಯವಾಗಿ ಗಮನಿಸಬೇಕೇರುವುದು ಬಹುಪಾಲು ವಾಟ್ಸಪ್ , ಫೇಸ್‌ಬುಕ್ ಪದವಿಧರರಾಗಿರುವ ಯುವಜನರ ಜೊತೆ ಈ ಆಂದೋಲನ ಎದುರಾಗುತ್ತಿರುವುದು. ಇಲ್ಲಿ ಸ್ವಾಮೀಜಿಯವರನ್ನು ಒಳಗೊಂಡಂತೆ ಇಬ್ಬರು ಚಿಂತಕರಿಗೆ ಬಂದಂತಹ ಹೆಚ್ಚಿನ ಪ್ರಶ್ನೆಗಳಾವುವು ನೋಡಬೇಕು. ಎಲ್ಲಾ ಕಡೆ ಎದುರಾಗುತ್ತಿರುವ ಪ್ರಶ್ನೆ ಎಂದರೆ ಮೀಸಲಾತಿಯಿಂದ ಮೇಲ್ಜಾತಿಯವರಿಗೆ ಅನ್ಯಾಯವಾಗುತ್ತಿದೆ. ಈ ಮೀಸಲಾತಿಯನ್ನು ಕೊನೆಗಾಣಿಸಬೇಕಲ್ಲವೆ ಎಂಬುದು. ಈ ರೀತಿಯ ಯೋಚನೆಗಳು ಇತ್ತೀಚಿಗೆ ಹೆಚ್ಚು ಕೇಳಿ ಬರುತ್ತಿರುವುದನ್ನು ಗಮನಿಸಬಹುದು. ಇದಕ್ಕೆ ಕಾರಣ ಬಲಪಂಥೀಯ ಶಕ್ತಿಗಳು ಸೋಷೀಯಲ್ ಮೀಡೀಯಾದಲ್ಲಿ ಇದನ್ನು ಒಂದು ನಿರಂತರ ಅಜೆಂಡಾವಾಗಿ ಮಾಡಿಕೊಂಡು ಅಭಿಪ್ರಾಯ ರೂಪಿಸಲು ಸತತವಾಗಿ ಪ್ರಯತ್ನಪಡುತ್ತಲೇ ಇವೆ. ಮೀಸಲಾತಿಯಿಂದಲೇ ಈ ದೇಶ ಹಿಂದುಳಿದಿದೆ ಎನ್ನುವಂತಹ ಮನಸ್ಥಿತಿಯನ್ನು ರೂಪಿಸುವಲ್ಲಿ ಒಂದು ಮಟ್ಟಿಗೆ ಯಶಸ್ಸನ್ನೂ ಪಡೆದಿದ್ದಾರೆ. ದುರಂತವೆಂದರೆ ಎಸ್.ಸಿ/ ಎಸ್.ಟಿ ಸಮುದಾಯಗಳಂತೆ ಮೀಸಲಾತಿಯ ಫಲಾನುಭವಿಗಳಾದಂತಹ ಒ.ಬಿ.ಸಿ ಸಮುದಾಯದ ಯುವಜನರಲ್ಲೇ  ಹೆಚ್ಚು ಈ ರೀತಿಯ ಮನಸ್ಥಿತಿ ಬೆಳೆಯುತ್ತಿದೆ.

ಈ ಪ್ರಶ್ನೆಯನ್ನು ಸಮರ್ಥವಾಗಿ ಎದುರಿಸುತ್ತಿರುವ ಪಂಡಿತಾರಾಧ್ಯ ಸ್ವಾಮೀಜಿಗಳು ಜಾತಿ ಇರುವವರೆಗೂ, ಅಸಮಾನತೆ ತೊಲಗುವವರೆಗೂ ಮೀಸಲಾತಿ ಅವಶ್ಯಕ ಎಂದು ಪ್ರತಿಪಾದಿಸುತ್ತಾ ಬಂದಿದ್ದಾರೆ. ನಿಜವಾಗಲೂ ಸಮಾನತೆ ಬಂದಮೇಲೆ ಮೀಸಲಾತಿ, ಬಡ್ತಿ ಮೀಸಲಾತಿಯ ಅವಶ್ಯಕತೆ ಇರುವುದಿಲ್ಲ ಎಂದು ಹೇಳಿದ್ದರು. ಈ ಸುಧ್ದಿ ಮಾಧ್ಯಮಗಳಲ್ಲಿ ತಪ್ಪಾಗಿ ಪ್ರಕಟವಾಗಿ ನಂತರ ಸ್ವಾಮೀಜಿಯವರು ಸ್ಫಷ್ಟನೆ ನೀಡಬೇಕಾಗಿ ಬಂದಿತು. ಈ ಮಧ್ಯೆ ಸಾಕಷ್ಟು ಜನರ ಟೀಕೆಗಳು ಬಂದು ಹೋದವು. ಈಗ ಅರ್ಧ ಜಿಲ್ಲೆಗಳಲ್ಲಿ ಕಾರ್ಯಕ್ರಮ ಮುಗಿಯುತ್ತಾ ಬಂದಿದೆ. ಎಲ್ಲಾ ಜಿಲ್ಲೆಗಳಲ್ಲೂ ಬಂದ ಜಾತಿ ಬಗೆಗಿನ, ಮೀಸಲಾತಿ ಬಗೆಗಿನ ಪ್ರಶ್ನೆಗಳಿಗೆ ಸಮರ್ಥವಾಗಿ ಉತ್ತರಿಸಿದ್ದಾರೆ ಮತ್ತು ಲಿಂಗಾಯತ ಜಾತಿವಾದಿಗಳು ಸಹ ಕಟು ವಾಸ್ತವಗಳನ್ನು ಕೇಳಿಸಿಕೊಂಡಿದ್ದಾರೆ.

ತರಿಕೆರೆಯಲ್ಲಿ ಸ್ವಾಮೀಜಿಗಳಿಗೆ ಒಬ್ಬ ವಿದ್ಯಾರ್ಥಿ ಎಂ.ಎಂ.ಕಲ್ಬುರ್ಗಿ ಮತ್ತು ಗೌರಿ ಲಂಕೇಶ್ ಹತ್ಯೆ ಮತ್ತು ಹನ್ನೆರಡನೆ ಶತಮಾನದ ಶರಣರ ಕೊಲೆಗಳು ಒಂದೇನಾ ? ಅನ್ನುವ ಪ್ರಶ್ನೆಗೆ ಇದು ಭಿನ್ನವಾದ ಸಂದರ್ಭದಲ್ಲಿ ನಡೆದ ಹತ್ಯೆಗಳಾದರೂ, ಹತ್ಯೆ ಮಾಡಿದರು ಒಂದೇ ವಂಶಜರು, ಪಟ್ಟಭದ್ರ ಹಿತಾಸಕ್ತಿಗಳಿಂದಲೇ ನಡೆಯಿತು ಎಂದು ಉತ್ತರಿಸಿದರು. ಈ ರೀತಿ ಬೇರೆ ಬೇರೆ ರೀತಿಯ ಪ್ರಶ್ನೆಗಳನ್ನು ಮತ್ತೆ ಕಲ್ಯಾಣ ತಂಡ ಎದುರಿಸುತ್ತಾ ಯಶಸ್ವಿಯಾಗಿ ಇಂದಿಗೆ ೧೯ ಜಿಲ್ಲೆಗಳನ್ನು ಮುಕ್ತಾಯ ಮಾಡಿದೆ. ಈ ತಿಂಗಳಾದ್ಯಂತ ಆಂದೋಲನ ಮುಂದುವರೆಯಲಿದ್ದು ಈ ಪೀಳಿಗೆಯ ಯುವಜನರ ಪ್ರಶ್ನೆಗಳನ್ನು ಎದುರಿಸುತ್ತಾ ಪರಸ್ಪರ ಮುಖಾಮುಖಿಯು ಹೊಸದನ್ನು ಕಲಿಸುವ ಸಾಧ್ಯತೆಯಿದೆ.

ಮಂಗಳೂರಿಗೆ ಮೋಹನ್ ಆಳ್ವಾ ಅಂತ ವ್ಯಕ್ತಿಯನ್ನ ಒಳಗೊಂಡಿದ್ದು ಸಹಾ ವಿಮರ್ಶೆಗೊಳಗಾಯಿತು. ವಿಮರ್ಶೆಯ ಕಣ್ಣಿನಿಂದಲೇ ಈ ಆಂದೋಲನದ ಜೊತೆ ಇರುವ ಅವಶ್ಯಕತೆ ಖಂಡಿತ ಇದೆ ಎಂದು ಎನಿಸುತ್ತದೆ. ತಮಗೆ ನೂರೆಂಟು ಮಿತಿಗಳನ್ನು ಹಾಕಿಕೊಂಡು, ಮಠಗಳನ್ನು ತಮ್ಮ ಸಮುದಾಯಗಳವರ ಹಿತಕ್ಕಾಗಿ, ಮಠದ ಆಸ್ತಿ ಮಾಡಲು ಮತ್ತು ರಾಜಕೀಯ ಮಾಡುವುದೇ ಉದ್ದೇಶವಾಗಿ ನಡೆಸುತ್ತಿರುವ ಹಲವು ಮಠಾಧೀಶರ ನಡುವೆ ನಿಜವಾಗಲೂ ಬಸವ ತತ್ವ ಪ್ರಚಾರಕರಾಗಿ ಮಾಡಬೇಕಾದ ಕೆಲಸವನ್ನು ಮತ್ತೆ ಕಲ್ಯಾಣದ ಮೂಲಕ ಪಂಡಿತಾರಾಧ್ಯ ಸ್ವಾಮೀಜಿಯವರು ವಿಭಿನ್ನವಾದ ಪ್ರಯತ್ನಕ್ಕೆ ಕೈ ಹಾಕಿದ್ದಾರೆ ಎನಿಸುತ್ತಿದೆ.

ಇಂತಹ ಪ್ರಯೋಗಗಳನ್ನು ನಡೆಸುವಾಗ ಬಹಳ ಎಚ್ಚರದಿಂದ ಹೆಜ್ಜೆ ಹಾಕಬೇಕಾಗುತ್ತದೆ. ನೀವು ಎಂತದ್ದೇ ಜನಪರವಾದ ಕಾರ್ಯಕ್ರಮವನ್ನು ಬೀದಿಗೆ ಬಂದು ಮಾಡಿ ಅದು ಆಳುವ ವರ್ಗದ ಪರವಿಲ್ಲದಿದ್ದರೆ ಅದಕ್ಕೆ ಕೊಡಬೇಕಾದಷ್ಟು ಪ್ರಾಶಾಸ್ತ್ಯವನ್ನು  ಮಾರಿಕೊಂಡ ಮಾಧ್ಯಮಗಳು ಕೊಡುವುದಿಲ್ಲ. ಇದು ಬೀದಿಗಿಳಿದು ಜನಪರ ಕೆಲಸ ಮಾಡುವ ದಲಿತ, ಜೀವಪರ ಹೋರಾಟಗಾರರ ಅನುಭವಕ್ಕೆ ಬಂದಿರುತ್ತದೆ. ಬಲಪಂಥೀಯ ಶಕ್ತಿಗಳು ಪದೇ ಪದೇ ಹಲವು ವಿಚಾರಗಳಲ್ಲಿ ಗೆಲುವು ಸಾಧಿಸಿದಾಗ ಯುವಜನರನ್ನು ಒಳಗೊಳ್ಳಬೇಕು ಎನ್ನುವ ಸಾಕಷ್ಟು ಮಾತು ಇದುವರೆಗೆ ನಡೆದಿದೆ.

ಬುದ್ಧಿವಂತರು ಯುವಜನರ ಜೊತೆ ಕೆಲಸ ಮಾಡುವಂತಹ ಜೀವಪರರಿಗೆ ಬೆಂಬಲಿಸದೆ ಜೊತೆ ನಿಲ್ಲದೆ ಇರುವ ಎಷ್ಟೋ ಉದಾಹರಣೆಗಳಿವೆ. ಮತ್ತೆ ಕಲ್ಯಾಣ ಯಾವುದೇ ವಿಮರ್ಶೆಗೆ ಅತೀತವಾದದ್ದಲ್ಲ. ಒಂದು ಮಠದ ಹಿನ್ನಲೆಯ ಸ್ವಾಮೀಜಿಯ ನೇತೃತ್ವದಲ್ಲಿ ನಡೆಯುತ್ತಿರುವ ಕಾರ್ಯಕ್ರಮವಾದ್ದರಿಂದ ಅನುಮಾನದಿಂದಲೇ ನೋಡಬೇಕಾದ ಅವಶ್ಯಕತೆ ಖಂಡಿತ ಇದೆ. ಆದರೆ ಇದೇ ವಿಚಾರವಾಗಿ ಆ ಆಂದೋಲನ ಎಲ್ಲರನ್ನು ಒಳಗೊಳ್ಳುವ ಮೂಲಕ ಏನನ್ನು ಹೇಳಲು ಹೊರಟಿದೆ ಎನ್ನುವುದನ್ನು ಯೋಚಿಸಬೇಕಿದೆ. ಈ ಮಾಧ್ಯಮಗಳು, ಸಾಮಾಜಿಕ ಜಾಲತಾಣಗಳ ಮೂಲಕ ಹುಸಿ ದೇಶ/ದ್ವೇಷಭಕ್ತಿಯನ್ನೆ ಮನಸ್ಸಲ್ಲಿ ತುಂಬಿಕೊಳ್ಳುತ್ತಿರುವ ಈ ಹೊತ್ತಿನಲ್ಲಿ ನಮ್ಮದೇ ನೆಲದಲ್ಲಿ ಒಂದು ಮಾನವೀಯ ತತ್ವಗಳ ಆಧಾರದಲ್ಲಿ ಹನ್ನೆರಡನೆ ಶತಮಾನದಲ್ಲಿ  ಒಂದು ಸಿದ್ದಾಂತ ಹುಟ್ಟಿತ್ತು, ಅದು ಸರ್ವ ಜಾತಿಗಳ ನಡುವೆ ಸಮಾನತೆಯನ್ನು ಬಯಸಿತ್ತು, ಕಾಯಕ ಘನತೆಯನ್ನು ಎತ್ತಿ ಹಿಡಿದಿತ್ತು, ಅಂತರ್ಜಾತಿ ವಿವಾಹಗಳನ್ನು ಮಾಡಲು ಸಂಘರ್ಷ ನಡೆಸಿತ್ತು, ಅದನ್ನು ನಾವು ಮತ್ತೆ ನೆನೆಪಿಸಿಕೊಳ್ಳಬೇಕಿದೆ ಎನಿಸುತ್ತದೆ.

ಇದರ ಅನುಭವದ ಹಿನ್ನೆಲೆಯಲ್ಲಿ ಜಾತಿವಿನಾಶದಂತಹ ದೊಡ್ಡ ಹೆಜ್ಜೆಗಳನ್ನಿಡಲು ಬಸವ ತತ್ವದಲ್ಲಿರುವ ಅಂಶಗಳು ಯಾವುವು, ಕರ್ಮಠತನಕ್ಕೆ ಒಗ್ಗಿಕೊಂಡ ಲಿಂಗಾಯತ ಸಮುದಾಯಕ್ಕೆ ಮನವರಿಕೆ ಮಾಡಿಕೊಡುವುದಾದರೂ ಹೇಗೆ ಎಂದು ಮುಂದಿನ ದಿನಗಳಲ್ಲಿ ಚಿಂತಿಸಬೇಕಿದೆ. ಈಗ ನಡೆಯುತ್ತಿರುವ ಆಂದೋಲನವನ್ನು ನಾವು ನೋಡಬೇಕಾದ ರೀತಿ ಹೇಗೆ ಎಂದು ಮರುಚಿಂತಿಸಬೇಕಿದೆ ಎನಿಸುತ್ತದೆ. ಶರಣರು ಸಾಮಾಜಿಕ ಸಮಸ್ಯೆಗಳಿಗೆ ಸೂಚಿಸಿದ ಮೌಲ್ಯಾಧಾರಿತ ಪರಿಹಾರಗಳು, ಅವರು ವಿಚಾರಗಳನ್ನು ಸರಳ ವಚನಗಳ ರೂಪದಲ್ಲಿ ಮನಸ್ಸಿನಾಳಕ್ಕೆ ಇಳಿಸಿದ ಬಗ್ಗೆ ಇನ್ನಷ್ಟು ಸಂಶೋಧನೆ, ಅಧ್ಯಯನವನ್ನು ಪ್ರಜ್ಞಾವಂತ ವಲಯ ಮಾಡಬೇಕಿದೆ. ನಮ್ಮದೇ ನೆಲದ ಬಸವ ಚಿಂತನೆಯನ್ನು ಇಂದಿನ ಪೀಳಿಗೆಗೆ ತಿಳಿಸುವ ಪ್ರಯತ್ನಗಳಿಗೆ ಬಲ ತುಂಬ ಬೇಕಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...