Homeಮುಖಪುಟಗಾಝಾ ಪಟ್ಟಿಯಾದ್ಯಂತ ನೀರಿನ ಅಭಾವ: ಅಪಾಯದಲ್ಲಿ 2 ಮಿಲಿಯನ್‌ ಜನರು: UNRWA

ಗಾಝಾ ಪಟ್ಟಿಯಾದ್ಯಂತ ನೀರಿನ ಅಭಾವ: ಅಪಾಯದಲ್ಲಿ 2 ಮಿಲಿಯನ್‌ ಜನರು: UNRWA

- Advertisement -
- Advertisement -

ಗಾಝಾ ಪಟ್ಟಿಯಾದ್ಯಂತ ನೀರಿನ ಕೊರತೆಯಾಗಿದ್ದು 2 ಮಿಲಿಯನ್‌ಗಿಂತಲೂ ಹೆಚ್ಚು ಜನರು ಅಪಾಯದಲ್ಲಿದ್ದಾರೆ. ಇದು ಬದುಕು ಮತ್ತು ಸಾವಿನ ವಿಷಯವಾಗಿದೆ. 2 ಮಿಲಿಯನ್ ಜನರಿಗೆ ನೀರು ಲಭ್ಯವಾಗುವಂತೆ ಮಾಡಲು ಇಂಧನವನ್ನು ಈಗ ಗಾಝಾಕ್ಕೆ ತಲುಪಿಸಬೇಕಾಗಿದೆ ಎಂದು ಯುಎನ್‌ಆರ್‌ಡ್ಬ್ಲೂಎ (UNRWA) ಕಮಿಷನರ್-ಜನರಲ್ ಫಿಲಿಪ್ ಲಾಝಾರಿನಿ ಹೇಳಿದರು.

ಒಂದು ವಾರದಿಂದ ಗಾಝಾಕ್ಕೆ ಯಾವುದೇ ಮಾನವೀಯ ನೆಲೆಯ ಸಹಕಾರಕ್ಕೆ ಅನುಮತಿಸಲಾಗಿಲ್ಲ. ಸಾರ್ವಜನಿಕ ನೀರಿನ ಜಾಲಗಳು ಕೆಲಸ ಮಾಡುವುದನ್ನು ನಿಲ್ಲಿಸಿದ ನಂತರ, ಗಾಝಾ ಪಟ್ಟಿಯಲ್ಲಿ ಶುದ್ಧ ನೀರು ಖಾಲಿಯಾಗುತ್ತಿದೆ. ಜನರು ಈಗ ಬಾವಿಗಳಿಂದ ಕೊಳಕು ನೀರನ್ನು ಬಳಸಬೇಕಾದ ಅನಿವಾರ್ಯತೆಗೆ ಒಳಗಾಗಿದ್ದಾರೆ. ಇದು ನೀರಿನಿಂದ ಹರಡುವ ರೋಗಗಳ ಅಪಾಯವನ್ನು ಹೆಚ್ಚಿಸುತ್ತದೆ. ಅಕ್ಟೋಬರ್ 11 ರಿಂದ ಗಾಜಾದಲ್ಲಿ ವಿದ್ಯುತ್ ಸ್ಥಗಿತಗೊಂಡಿದೆ. ಇದು ನೀರಿನ ಪೂರೈಕೆಯ ಮೇಲೆ ಅಗಾಧ ಪರಿಣಾಮ ಬೀರುತ್ತದೆ ಎಂದು ಯುಎನ್‌ಆರ್‌ಡ್ಬ್ಲೂಎ (UNRWA) ಹೇಳಿದೆ.

ಗಾಝಾ ಪಟ್ಟಿಯ ಉತ್ತರ ಭಾಗದಲ್ಲಿರುವ ಜನರು ತಮ್ಮ ಮನೆಗಳನ್ನು ತೊರೆಯುವಂತೆ ಇಸ್ರೇಲ್ ಎಚ್ಚರಿಕೆ ನೀಡಿದೆ. ಕಳೆದ 12 ಗಂಟೆಯಿಂದ ಸಾವಿರಾರು ಮಂದಿ ಮನೆಗಳನ್ನು ತೊರೆದಿದ್ದಾರೆ. ಕೇವಲ ಒಂದು ವಾರದಲ್ಲಿ ಸುಮಾರು 1 ಮಿಲಿಯನ್ ಜನರು ಸ್ಥಳಾಂತರಗೊಂಡಿದ್ದಾರೆ.

ನಾವು ಈಗ ಗಾಝಾಕ್ಕೆ ಇಂಧನವನ್ನು ತಲುಪಿಸಬೇಕಿದೆ. ಜನರು ಸುರಕ್ಷಿತ ಕುಡಿಯುವ ನೀರನ್ನು ಹೊಂದಲು ಇಂಧನವು ಅಗತ್ಯವಾಗಿದೆ. ಇಲ್ಲದಿದ್ದರೆ ಚಿಕ್ಕ ಮಕ್ಕಳು, ವೃದ್ಧರು ಮತ್ತು ಮಹಿಳೆಯರು ಸೇರಿ ಜನರು ತೀವ್ರ ನಿರ್ಜಲೀಕರಣದಿಂದ ಸಾಯಲು ಪ್ರಾರಂಭಿಸುತ್ತಾರೆ. ನೀರು ಈಗ ಉಳಿದಿರುವ ಕೊನೆಯ ಜೀವನಾಡಿಯಾಗಿದೆ. ಮಾನವೀಯ ನೆರವಿನ ಮೇಲಿನ ತಡೆಯನ್ನು ಈಗ ಹಿಂತೆಗೆದುಕೊಳ್ಳುವಂತೆ ನಾನು ಮನವಿ ಮಾಡುತ್ತೇನೆ ಎಂದು ಲಾಝಾರಿನಿ ಹೇಳಿದ್ದಾರೆ.

ಉತ್ತರ ಗಾಜಾ ಮತ್ತು ಗಾಝಾ ನಗರದಿಂದ ದಕ್ಷಿಣ ಗಾಝಾ ಪಟ್ಟಿಗೆ ಜನರ ಸ್ಥಳಾಂತರಕ್ಕೆ ಆದೇಶಿಸಿದ್ದರೂ, ಗರ್ಭಿಣಿಯರು, ಮಕ್ಕಳು, ವೃದ್ಧರು ಮತ್ತು ವಿಕಲಚೇತನರು ಪ್ರದೇಶದಿಂದ ಪಲಾಯನ ಮಾಡಲು ಸಾಧ್ಯವಾಗಿಲ್ಲ. ಅವರಿಗೆ ಯಾವುದೇ ಆಯ್ಕೆಯಿಲ್ಲ ಮತ್ತು ಎಲ್ಲಾ ಸಮಯದಲ್ಲೂ ಅವರನ್ನು ರಕ್ಷಿಸಬೇಕು ಎಂದು UNRWA ಹೇಳಿದೆ.

ಇದನ್ನು ಓದಿ: ಅಲ್‌ ಜಝೀರಾ ಕಚೇರಿಯನ್ನು ಬಂದ್ ಮಾಡಲು ಮುಂದಾದ ಇಸ್ರೇಲ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....