Homeಅಂಕಣಗಳುಪ್ರಬುದ್ಧ ಸಮುದಾಯದ ಅಭೂತಪೂರ್ವ ಚಳವಳಿ ಮತ್ತು ಬೇಜವಾಬ್ದಾರಿ ಎಳಸು ಹುಡುಗಿಯ ‘ಅಪಾಯಕಾರಿ ಘೋಷಣೆ’

ಪ್ರಬುದ್ಧ ಸಮುದಾಯದ ಅಭೂತಪೂರ್ವ ಚಳವಳಿ ಮತ್ತು ಬೇಜವಾಬ್ದಾರಿ ಎಳಸು ಹುಡುಗಿಯ ‘ಅಪಾಯಕಾರಿ ಘೋಷಣೆ’

- Advertisement -
- Advertisement -

ಮೂರು ವಾರಗಳ ಹಿಂದೆ ಇದೇ ಪುಟದಲ್ಲಿ ‘ನಿರೀಕ್ಷಿತ ಕೀಳು ಮಟ್ಟದ ನಡವಳಿಕೆ ಮತ್ತು ಅನಿರೀಕ್ಷಿತ ಪ್ರಬುದ್ಧತೆ’ ಎಂಬ ಬರಹವನ್ನು ಬರೆಯಲಾಗಿತ್ತು. ದೆಹಲಿ ಚುನಾವಣೆಯ ಹಿನ್ನೆಲೆಯಲ್ಲಿ ದೊಡ್ಡ ಸ್ಥಾನದಲ್ಲಿರುವವರೇ ಇಲ್ಲಿ ಬಟನ್ ಒತ್ತಿದರೆ ಅಲ್ಲಿ ಷಾಕ್ ಹೊಡೆಯಬೇಕು; ಅಲ್ಲಿ ಧರಣಿ ಕೂತಿರುವವರು ರೇಪ್ ಮಾಡುವವರು ಇತ್ಯಾದಿ ಮಾತುಗಳನ್ನು ಶಹೀನ್‍ಬಾಗ್‍ನ ಧರಣಿಯ ಬಗ್ಗೆ ಆಡಿದ್ದರು. ಅದೇ ಸಂದರ್ಭದಲ್ಲಿ ತಮ್ಮತ್ತ ಗುಂಡು ಹಾರಿಸಿದರೂ ಪ್ರಚೋದನೆಗೊಳಗಾಗದೇ ರಾಷ್ಟ್ರಧ್ವಜ ಹಾಗೂ ಸಂವಿಧಾನ ಹಿಡಿದು ಶಾಂತಿಯುತ ಹೋರಾಟವನ್ನು ದೇಶದೆಲ್ಲೆಡೆ ಮಾಡುತ್ತಿದ್ದ ಸಮುದಾಯದ ಪ್ರಬುದ್ಧತೆ ಎದ್ದು ಕಾಣುತ್ತಿತ್ತು.

ಆದರೆ ಇಂದಿನ ಸಂದರ್ಭ ಇನ್ನೂ ಅಪಾಯಕಾರಿಯಾಗಿ ಪರಿವರ್ತನೆಯಾಗಿದೆ. ಬೆಂಗಳೂರಿನಲ್ಲಿ ಮುಸ್ಲಿಂ ಸಮುದಾಯದವರೇ ಹೆಚ್ಚಾಗಿದ್ದ ಸಮಾವೇಶವೊಂದರಲ್ಲಿ ಅಮೂಲ್ಯ ಎಂಬ ಎಳೆಯ ಹುಡುಗಿಯ ಮಾತುಗಳು ಪರಿಸ್ಥಿತಿಯನ್ನು ಸಂಕೀರ್ಣಗೊಳಿಸಿದೆ. ‘ಆಕೆ ಏನನ್ನೋ ಹೇಳಲು ಹೊರಟಿದ್ದಳು, ವಿಶ್ವಮಾನವ ಸಂದೇಶ ಸಾರಲು ಹೊರಟಿದ್ದಳು, ಅದನ್ನು ಅರ್ಥ ಮಾಡಿಕೊಳ್ಳಲು ನಾಲ್ಕು ದಿನದ ಹಿಂದಿನ ಆಕೆಯ ಫೇಸ್‍ಬುಕ್ ಪೋಸ್ಟ್ ನೋಡಬೇಕು, ಆಕೆಯ ಮೇಲೆ ದೇಶದ್ರೋಹದ ಕೇಸನ್ನು ದಾಖಲಿಸಿರುವುದೇ ತಪ್ಪು’ ಇವೆಲ್ಲವೂ ನಿಜ. ಆದರೆ ಇಷ್ಟೇ ನಿಜವಲ್ಲ.

ಮೂರು ವಾರಗಳ ಹಿಂದೆ ಬರೆದಂತೆ ದೇಶದ ಅತಿ ದೊಡ್ಡ ಅಲ್ಪಸಂಖ್ಯಾತ ಸಮುದಾಯವು ತೋರಿದ ಪ್ರಬುದ್ಧತೆಯು ಆಳುವವರನ್ನು ಕಂಗಾಲಾಗಿಸಿತ್ತು. ಅದು ತಾನು ಬಳಸಿಕೊಳ್ಳಬಹುದಾದ ಅಸ್ತ್ರವೊಂದನ್ನು ಹುಡುಕುತ್ತಿತ್ತು. ಆ ಅಸ್ತ್ರವನ್ನು ಆ ಸಮುದಾಯ ಕೊಡಲಿಲ್ಲ. ಬದಲಿಗೆ ತಾನಂದುಕೊಂಡಿದ್ದನ್ನು ಹೇಗೆ ಜನರಿಗೆ ತಲುಪಿಸಬೇಕು ಎಂಬುದರ ಕನಿಷ್ಠ ಪ್ರಜ್ಞೆ ಇಲ್ಲದ ಒಂದು ಎಳಸು ಹುಡುಗಿ ತಪ್ಪಾದ ಜಾಗದಲ್ಲಿ ತಪ್ಪಾದ ಮಾತುಗಳನ್ನು ಆಡಿದಳು. ಆ ಮೂಲಕ ಇದನ್ನೇ ಬಯಸುತ್ತಿದ್ದವರಿಗೆ ಅಸ್ತ್ರವನ್ನು ಒದಗಿಸಿದಳು.

ಯಾರು ಇದನ್ನು ಬಯಸುತ್ತಿದ್ದರೋ ಅವರು ಪಾಕಿಸ್ತಾನವನ್ನು ನಿರಂತರವಾಗಿ ಬಳಸಿಕೊಳ್ಳುತ್ತಾ ಬಂದಿರುವವರು. ಪಾಕಿಸ್ತಾನದಲ್ಲಿ ಆಳುವ ಎಲ್ಲರಿಗೂ ಕಾಶ್ಮೀರ ಹಾಗೂ ಭಾರತ ನಿರಂತರವಾಗಿ ರೊಚ್ಚಿಗೆಬ್ಬಿಸುವ ಅಸ್ತ್ರಗಳಾಗಿ ಬಳಕೆಯಾಗುತ್ತಾ ಬಂದಿದೆ. ಇಲ್ಲಿಯೂ ಅಂತಹ ಒಂದು ವರ್ಗವಿದೆ. ಇಲ್ಲಿ ಅಂತಹದ್ದೇನೂ ನಡೆಯದಿದ್ದಲ್ಲಿ ತಾವೇ ಪಾಕಿಸ್ತಾನದ ಧ್ವಜ ಹಾರಿಸುವವರು ಅವರು. ವಿಜಾಪುರ ಜಿಲ್ಲೆಯ ಸಿಂಧಗಿಯಲ್ಲಿ ಪಾಕಿಸ್ತಾನದ ಧ್ವಜ ಹಾರಿಸಿ ಸಿಕ್ಕಿಕೊಂಡ ಪರಶುರಾಮ ವಾಘ್ಮೋರೆ ನಂತರ ಗೌರಿ ಲಂಕೇಶರ ಹತ್ಯೆಯ ಪ್ರಮುಖ ಆರೋಪಿಯಾದ ಎಂಬುದನ್ನು ನಾವು ಮರೆಯಲಾಗದು. ಆತ ಶ್ರೀರಾಮಸೇನೆಯವನು ಎಂಬ ಆರೋಪ ಬಂದಾಗ, ಆತ ಆರೆಸ್ಸೆಸ್ಸಿನವನು ಎಂದು ಖಚಿತ ಪಡಿಸಿದ್ದು ಶ್ರೀರಾಮಸೇನೆಯ ಪ್ರಮೋದ್ ಮುತಾಲಿಕ್!

ಇದರ ಹೊಣೆಯನ್ನು ಯಾರು ಹೊರಬೇಕು? ಅಮೂಲ್ಯಳೂ ಹೊರಬೇಕು. ಅದೇ ರೀತಿಯಲ್ಲಿ ಅಪ್ರಬುದ್ಧವಾಗಿ ಆಲೋಚಿಸುವ, ದೇಶದ ಇಂದಿನ ಸಂಕೀರ್ಣ ಪರಿಸ್ಥಿತಿಯಲ್ಲಿ ನಾವು ಅನುಭವದ ಮಾತನ್ನೂ ಕೇಳಬೇಕು ಎಂಬ ಎಚ್ಚರವಿಲ್ಲದ ಇನ್ನೂ ಹಲವರು ಇದ್ದಾರೆ ಅವರೆಲ್ಲರೂ ಹೊರಬೇಕು. ಆಕೆಗಿರುವ ಎನರ್ಜಿ ಮತ್ತು ಅನ್ಯಾಯವನ್ನು ಯಾವ ರೀತಿಯಿಂದಲಾದರೂ ಪ್ರತಿಭಟಿಸಬೇಕು ಎಂಬ ಉಮೇದನ್ನಷ್ಟೇ ನೋಡಿ, ಬಹಿರಂಗ ಸಭೆಗಳಲ್ಲಿ ಮಾತನಾಡಲು ಪ್ರೇರೇಪಿಸಿದವರೂ ಹೊರಬೇಕು. ಯುವಜನರನ್ನು ಪ್ರೋತ್ಸಾಹಿಸಬೇಕು ಎಂಬುದು ಸರಿಯಾದರೂ, ಗರಿಷ್ಠ ಮಿತಿಗಳನ್ನು ಮೀರುವವರನ್ನು ತಲೆ ಮೇಲೆ ಹೊತ್ತುಕೊಳ್ಳಬಾರದು ಎಂಬುದೂ ಇದರಿಂದ ಕಲಿಯಬೇಕಾದ ಪಾಠವಾಗಿದೆ.

ಅದೇನೇ ಇರಲಿ, ಇದನ್ನು ಬಳಸಿಕೊಂಡು ಇಡೀ ಚಳವಳಿಯನ್ನೇ ದಮನ ಮಾಡಲು ಹೊರಟಿರುವ ಸರ್ಕಾರದ ಹುನ್ನಾರದ ವಿರುದ್ಧ ಎಲ್ಲರೂ ಎದ್ದು ನಿಲ್ಲಬೇಕಿದೆ. ಚಳವಳಿ ಇದುವರೆಗೆ ನಡೆಸಿರುವ ಸಾವಿರಾರು ಕಾರ್ಯಕ್ರಮಗಳಲ್ಲಿ ತೋರಿದ ಪ್ರಬುದ್ಧತೆಯು ಸರ್ಕಾರಕ್ಕೆ ಕಷ್ಟ ತಂದಿತ್ತು ಎಂಬುದು ಸ್ಪಷ್ಟವಾಗಿದೆ. ಹಾಗಾಗಿ ಚಳವಳಿಯ ಸಂದರ್ಭದಲ್ಲಿ ನಡೆದ ಒಂದು ಬಿಡಿ ಅಪ್ರಬುದ್ಧತೆಯನ್ನು ಇಟ್ಟುಕೊಂಡು ದಮನಕಾಂಡ ಹರಿಬಿಡಲು ಸರ್ಕಾರ ಸಜ್ಜಾಗಿದೆ. ಇದನ್ನು ಈ ಚಳವಳಿ ಹೇಗೆ ಎದುರಿಸುತ್ತದೆ ಎಂಬುದು ಅದರ ಪ್ರಬುದ್ಧತೆಯನ್ನು ಒರೆಗೆ ಹಚ್ಚಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...