Homeಅಂಕಣಗಳುಪ್ರಬುದ್ಧ ಸಮುದಾಯದ ಅಭೂತಪೂರ್ವ ಚಳವಳಿ ಮತ್ತು ಬೇಜವಾಬ್ದಾರಿ ಎಳಸು ಹುಡುಗಿಯ ‘ಅಪಾಯಕಾರಿ ಘೋಷಣೆ’

ಪ್ರಬುದ್ಧ ಸಮುದಾಯದ ಅಭೂತಪೂರ್ವ ಚಳವಳಿ ಮತ್ತು ಬೇಜವಾಬ್ದಾರಿ ಎಳಸು ಹುಡುಗಿಯ ‘ಅಪಾಯಕಾರಿ ಘೋಷಣೆ’

- Advertisement -
- Advertisement -

ಮೂರು ವಾರಗಳ ಹಿಂದೆ ಇದೇ ಪುಟದಲ್ಲಿ ‘ನಿರೀಕ್ಷಿತ ಕೀಳು ಮಟ್ಟದ ನಡವಳಿಕೆ ಮತ್ತು ಅನಿರೀಕ್ಷಿತ ಪ್ರಬುದ್ಧತೆ’ ಎಂಬ ಬರಹವನ್ನು ಬರೆಯಲಾಗಿತ್ತು. ದೆಹಲಿ ಚುನಾವಣೆಯ ಹಿನ್ನೆಲೆಯಲ್ಲಿ ದೊಡ್ಡ ಸ್ಥಾನದಲ್ಲಿರುವವರೇ ಇಲ್ಲಿ ಬಟನ್ ಒತ್ತಿದರೆ ಅಲ್ಲಿ ಷಾಕ್ ಹೊಡೆಯಬೇಕು; ಅಲ್ಲಿ ಧರಣಿ ಕೂತಿರುವವರು ರೇಪ್ ಮಾಡುವವರು ಇತ್ಯಾದಿ ಮಾತುಗಳನ್ನು ಶಹೀನ್‍ಬಾಗ್‍ನ ಧರಣಿಯ ಬಗ್ಗೆ ಆಡಿದ್ದರು. ಅದೇ ಸಂದರ್ಭದಲ್ಲಿ ತಮ್ಮತ್ತ ಗುಂಡು ಹಾರಿಸಿದರೂ ಪ್ರಚೋದನೆಗೊಳಗಾಗದೇ ರಾಷ್ಟ್ರಧ್ವಜ ಹಾಗೂ ಸಂವಿಧಾನ ಹಿಡಿದು ಶಾಂತಿಯುತ ಹೋರಾಟವನ್ನು ದೇಶದೆಲ್ಲೆಡೆ ಮಾಡುತ್ತಿದ್ದ ಸಮುದಾಯದ ಪ್ರಬುದ್ಧತೆ ಎದ್ದು ಕಾಣುತ್ತಿತ್ತು.

ಆದರೆ ಇಂದಿನ ಸಂದರ್ಭ ಇನ್ನೂ ಅಪಾಯಕಾರಿಯಾಗಿ ಪರಿವರ್ತನೆಯಾಗಿದೆ. ಬೆಂಗಳೂರಿನಲ್ಲಿ ಮುಸ್ಲಿಂ ಸಮುದಾಯದವರೇ ಹೆಚ್ಚಾಗಿದ್ದ ಸಮಾವೇಶವೊಂದರಲ್ಲಿ ಅಮೂಲ್ಯ ಎಂಬ ಎಳೆಯ ಹುಡುಗಿಯ ಮಾತುಗಳು ಪರಿಸ್ಥಿತಿಯನ್ನು ಸಂಕೀರ್ಣಗೊಳಿಸಿದೆ. ‘ಆಕೆ ಏನನ್ನೋ ಹೇಳಲು ಹೊರಟಿದ್ದಳು, ವಿಶ್ವಮಾನವ ಸಂದೇಶ ಸಾರಲು ಹೊರಟಿದ್ದಳು, ಅದನ್ನು ಅರ್ಥ ಮಾಡಿಕೊಳ್ಳಲು ನಾಲ್ಕು ದಿನದ ಹಿಂದಿನ ಆಕೆಯ ಫೇಸ್‍ಬುಕ್ ಪೋಸ್ಟ್ ನೋಡಬೇಕು, ಆಕೆಯ ಮೇಲೆ ದೇಶದ್ರೋಹದ ಕೇಸನ್ನು ದಾಖಲಿಸಿರುವುದೇ ತಪ್ಪು’ ಇವೆಲ್ಲವೂ ನಿಜ. ಆದರೆ ಇಷ್ಟೇ ನಿಜವಲ್ಲ.

ಮೂರು ವಾರಗಳ ಹಿಂದೆ ಬರೆದಂತೆ ದೇಶದ ಅತಿ ದೊಡ್ಡ ಅಲ್ಪಸಂಖ್ಯಾತ ಸಮುದಾಯವು ತೋರಿದ ಪ್ರಬುದ್ಧತೆಯು ಆಳುವವರನ್ನು ಕಂಗಾಲಾಗಿಸಿತ್ತು. ಅದು ತಾನು ಬಳಸಿಕೊಳ್ಳಬಹುದಾದ ಅಸ್ತ್ರವೊಂದನ್ನು ಹುಡುಕುತ್ತಿತ್ತು. ಆ ಅಸ್ತ್ರವನ್ನು ಆ ಸಮುದಾಯ ಕೊಡಲಿಲ್ಲ. ಬದಲಿಗೆ ತಾನಂದುಕೊಂಡಿದ್ದನ್ನು ಹೇಗೆ ಜನರಿಗೆ ತಲುಪಿಸಬೇಕು ಎಂಬುದರ ಕನಿಷ್ಠ ಪ್ರಜ್ಞೆ ಇಲ್ಲದ ಒಂದು ಎಳಸು ಹುಡುಗಿ ತಪ್ಪಾದ ಜಾಗದಲ್ಲಿ ತಪ್ಪಾದ ಮಾತುಗಳನ್ನು ಆಡಿದಳು. ಆ ಮೂಲಕ ಇದನ್ನೇ ಬಯಸುತ್ತಿದ್ದವರಿಗೆ ಅಸ್ತ್ರವನ್ನು ಒದಗಿಸಿದಳು.

ಯಾರು ಇದನ್ನು ಬಯಸುತ್ತಿದ್ದರೋ ಅವರು ಪಾಕಿಸ್ತಾನವನ್ನು ನಿರಂತರವಾಗಿ ಬಳಸಿಕೊಳ್ಳುತ್ತಾ ಬಂದಿರುವವರು. ಪಾಕಿಸ್ತಾನದಲ್ಲಿ ಆಳುವ ಎಲ್ಲರಿಗೂ ಕಾಶ್ಮೀರ ಹಾಗೂ ಭಾರತ ನಿರಂತರವಾಗಿ ರೊಚ್ಚಿಗೆಬ್ಬಿಸುವ ಅಸ್ತ್ರಗಳಾಗಿ ಬಳಕೆಯಾಗುತ್ತಾ ಬಂದಿದೆ. ಇಲ್ಲಿಯೂ ಅಂತಹ ಒಂದು ವರ್ಗವಿದೆ. ಇಲ್ಲಿ ಅಂತಹದ್ದೇನೂ ನಡೆಯದಿದ್ದಲ್ಲಿ ತಾವೇ ಪಾಕಿಸ್ತಾನದ ಧ್ವಜ ಹಾರಿಸುವವರು ಅವರು. ವಿಜಾಪುರ ಜಿಲ್ಲೆಯ ಸಿಂಧಗಿಯಲ್ಲಿ ಪಾಕಿಸ್ತಾನದ ಧ್ವಜ ಹಾರಿಸಿ ಸಿಕ್ಕಿಕೊಂಡ ಪರಶುರಾಮ ವಾಘ್ಮೋರೆ ನಂತರ ಗೌರಿ ಲಂಕೇಶರ ಹತ್ಯೆಯ ಪ್ರಮುಖ ಆರೋಪಿಯಾದ ಎಂಬುದನ್ನು ನಾವು ಮರೆಯಲಾಗದು. ಆತ ಶ್ರೀರಾಮಸೇನೆಯವನು ಎಂಬ ಆರೋಪ ಬಂದಾಗ, ಆತ ಆರೆಸ್ಸೆಸ್ಸಿನವನು ಎಂದು ಖಚಿತ ಪಡಿಸಿದ್ದು ಶ್ರೀರಾಮಸೇನೆಯ ಪ್ರಮೋದ್ ಮುತಾಲಿಕ್!

ಇದರ ಹೊಣೆಯನ್ನು ಯಾರು ಹೊರಬೇಕು? ಅಮೂಲ್ಯಳೂ ಹೊರಬೇಕು. ಅದೇ ರೀತಿಯಲ್ಲಿ ಅಪ್ರಬುದ್ಧವಾಗಿ ಆಲೋಚಿಸುವ, ದೇಶದ ಇಂದಿನ ಸಂಕೀರ್ಣ ಪರಿಸ್ಥಿತಿಯಲ್ಲಿ ನಾವು ಅನುಭವದ ಮಾತನ್ನೂ ಕೇಳಬೇಕು ಎಂಬ ಎಚ್ಚರವಿಲ್ಲದ ಇನ್ನೂ ಹಲವರು ಇದ್ದಾರೆ ಅವರೆಲ್ಲರೂ ಹೊರಬೇಕು. ಆಕೆಗಿರುವ ಎನರ್ಜಿ ಮತ್ತು ಅನ್ಯಾಯವನ್ನು ಯಾವ ರೀತಿಯಿಂದಲಾದರೂ ಪ್ರತಿಭಟಿಸಬೇಕು ಎಂಬ ಉಮೇದನ್ನಷ್ಟೇ ನೋಡಿ, ಬಹಿರಂಗ ಸಭೆಗಳಲ್ಲಿ ಮಾತನಾಡಲು ಪ್ರೇರೇಪಿಸಿದವರೂ ಹೊರಬೇಕು. ಯುವಜನರನ್ನು ಪ್ರೋತ್ಸಾಹಿಸಬೇಕು ಎಂಬುದು ಸರಿಯಾದರೂ, ಗರಿಷ್ಠ ಮಿತಿಗಳನ್ನು ಮೀರುವವರನ್ನು ತಲೆ ಮೇಲೆ ಹೊತ್ತುಕೊಳ್ಳಬಾರದು ಎಂಬುದೂ ಇದರಿಂದ ಕಲಿಯಬೇಕಾದ ಪಾಠವಾಗಿದೆ.

ಅದೇನೇ ಇರಲಿ, ಇದನ್ನು ಬಳಸಿಕೊಂಡು ಇಡೀ ಚಳವಳಿಯನ್ನೇ ದಮನ ಮಾಡಲು ಹೊರಟಿರುವ ಸರ್ಕಾರದ ಹುನ್ನಾರದ ವಿರುದ್ಧ ಎಲ್ಲರೂ ಎದ್ದು ನಿಲ್ಲಬೇಕಿದೆ. ಚಳವಳಿ ಇದುವರೆಗೆ ನಡೆಸಿರುವ ಸಾವಿರಾರು ಕಾರ್ಯಕ್ರಮಗಳಲ್ಲಿ ತೋರಿದ ಪ್ರಬುದ್ಧತೆಯು ಸರ್ಕಾರಕ್ಕೆ ಕಷ್ಟ ತಂದಿತ್ತು ಎಂಬುದು ಸ್ಪಷ್ಟವಾಗಿದೆ. ಹಾಗಾಗಿ ಚಳವಳಿಯ ಸಂದರ್ಭದಲ್ಲಿ ನಡೆದ ಒಂದು ಬಿಡಿ ಅಪ್ರಬುದ್ಧತೆಯನ್ನು ಇಟ್ಟುಕೊಂಡು ದಮನಕಾಂಡ ಹರಿಬಿಡಲು ಸರ್ಕಾರ ಸಜ್ಜಾಗಿದೆ. ಇದನ್ನು ಈ ಚಳವಳಿ ಹೇಗೆ ಎದುರಿಸುತ್ತದೆ ಎಂಬುದು ಅದರ ಪ್ರಬುದ್ಧತೆಯನ್ನು ಒರೆಗೆ ಹಚ್ಚಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...