Homeಅಂಕಣಗಳುಪ್ರಬುದ್ಧ ಸಮುದಾಯದ ಅಭೂತಪೂರ್ವ ಚಳವಳಿ ಮತ್ತು ಬೇಜವಾಬ್ದಾರಿ ಎಳಸು ಹುಡುಗಿಯ ‘ಅಪಾಯಕಾರಿ ಘೋಷಣೆ’

ಪ್ರಬುದ್ಧ ಸಮುದಾಯದ ಅಭೂತಪೂರ್ವ ಚಳವಳಿ ಮತ್ತು ಬೇಜವಾಬ್ದಾರಿ ಎಳಸು ಹುಡುಗಿಯ ‘ಅಪಾಯಕಾರಿ ಘೋಷಣೆ’

- Advertisement -
- Advertisement -

ಮೂರು ವಾರಗಳ ಹಿಂದೆ ಇದೇ ಪುಟದಲ್ಲಿ ‘ನಿರೀಕ್ಷಿತ ಕೀಳು ಮಟ್ಟದ ನಡವಳಿಕೆ ಮತ್ತು ಅನಿರೀಕ್ಷಿತ ಪ್ರಬುದ್ಧತೆ’ ಎಂಬ ಬರಹವನ್ನು ಬರೆಯಲಾಗಿತ್ತು. ದೆಹಲಿ ಚುನಾವಣೆಯ ಹಿನ್ನೆಲೆಯಲ್ಲಿ ದೊಡ್ಡ ಸ್ಥಾನದಲ್ಲಿರುವವರೇ ಇಲ್ಲಿ ಬಟನ್ ಒತ್ತಿದರೆ ಅಲ್ಲಿ ಷಾಕ್ ಹೊಡೆಯಬೇಕು; ಅಲ್ಲಿ ಧರಣಿ ಕೂತಿರುವವರು ರೇಪ್ ಮಾಡುವವರು ಇತ್ಯಾದಿ ಮಾತುಗಳನ್ನು ಶಹೀನ್‍ಬಾಗ್‍ನ ಧರಣಿಯ ಬಗ್ಗೆ ಆಡಿದ್ದರು. ಅದೇ ಸಂದರ್ಭದಲ್ಲಿ ತಮ್ಮತ್ತ ಗುಂಡು ಹಾರಿಸಿದರೂ ಪ್ರಚೋದನೆಗೊಳಗಾಗದೇ ರಾಷ್ಟ್ರಧ್ವಜ ಹಾಗೂ ಸಂವಿಧಾನ ಹಿಡಿದು ಶಾಂತಿಯುತ ಹೋರಾಟವನ್ನು ದೇಶದೆಲ್ಲೆಡೆ ಮಾಡುತ್ತಿದ್ದ ಸಮುದಾಯದ ಪ್ರಬುದ್ಧತೆ ಎದ್ದು ಕಾಣುತ್ತಿತ್ತು.

ಆದರೆ ಇಂದಿನ ಸಂದರ್ಭ ಇನ್ನೂ ಅಪಾಯಕಾರಿಯಾಗಿ ಪರಿವರ್ತನೆಯಾಗಿದೆ. ಬೆಂಗಳೂರಿನಲ್ಲಿ ಮುಸ್ಲಿಂ ಸಮುದಾಯದವರೇ ಹೆಚ್ಚಾಗಿದ್ದ ಸಮಾವೇಶವೊಂದರಲ್ಲಿ ಅಮೂಲ್ಯ ಎಂಬ ಎಳೆಯ ಹುಡುಗಿಯ ಮಾತುಗಳು ಪರಿಸ್ಥಿತಿಯನ್ನು ಸಂಕೀರ್ಣಗೊಳಿಸಿದೆ. ‘ಆಕೆ ಏನನ್ನೋ ಹೇಳಲು ಹೊರಟಿದ್ದಳು, ವಿಶ್ವಮಾನವ ಸಂದೇಶ ಸಾರಲು ಹೊರಟಿದ್ದಳು, ಅದನ್ನು ಅರ್ಥ ಮಾಡಿಕೊಳ್ಳಲು ನಾಲ್ಕು ದಿನದ ಹಿಂದಿನ ಆಕೆಯ ಫೇಸ್‍ಬುಕ್ ಪೋಸ್ಟ್ ನೋಡಬೇಕು, ಆಕೆಯ ಮೇಲೆ ದೇಶದ್ರೋಹದ ಕೇಸನ್ನು ದಾಖಲಿಸಿರುವುದೇ ತಪ್ಪು’ ಇವೆಲ್ಲವೂ ನಿಜ. ಆದರೆ ಇಷ್ಟೇ ನಿಜವಲ್ಲ.

ಮೂರು ವಾರಗಳ ಹಿಂದೆ ಬರೆದಂತೆ ದೇಶದ ಅತಿ ದೊಡ್ಡ ಅಲ್ಪಸಂಖ್ಯಾತ ಸಮುದಾಯವು ತೋರಿದ ಪ್ರಬುದ್ಧತೆಯು ಆಳುವವರನ್ನು ಕಂಗಾಲಾಗಿಸಿತ್ತು. ಅದು ತಾನು ಬಳಸಿಕೊಳ್ಳಬಹುದಾದ ಅಸ್ತ್ರವೊಂದನ್ನು ಹುಡುಕುತ್ತಿತ್ತು. ಆ ಅಸ್ತ್ರವನ್ನು ಆ ಸಮುದಾಯ ಕೊಡಲಿಲ್ಲ. ಬದಲಿಗೆ ತಾನಂದುಕೊಂಡಿದ್ದನ್ನು ಹೇಗೆ ಜನರಿಗೆ ತಲುಪಿಸಬೇಕು ಎಂಬುದರ ಕನಿಷ್ಠ ಪ್ರಜ್ಞೆ ಇಲ್ಲದ ಒಂದು ಎಳಸು ಹುಡುಗಿ ತಪ್ಪಾದ ಜಾಗದಲ್ಲಿ ತಪ್ಪಾದ ಮಾತುಗಳನ್ನು ಆಡಿದಳು. ಆ ಮೂಲಕ ಇದನ್ನೇ ಬಯಸುತ್ತಿದ್ದವರಿಗೆ ಅಸ್ತ್ರವನ್ನು ಒದಗಿಸಿದಳು.

ಯಾರು ಇದನ್ನು ಬಯಸುತ್ತಿದ್ದರೋ ಅವರು ಪಾಕಿಸ್ತಾನವನ್ನು ನಿರಂತರವಾಗಿ ಬಳಸಿಕೊಳ್ಳುತ್ತಾ ಬಂದಿರುವವರು. ಪಾಕಿಸ್ತಾನದಲ್ಲಿ ಆಳುವ ಎಲ್ಲರಿಗೂ ಕಾಶ್ಮೀರ ಹಾಗೂ ಭಾರತ ನಿರಂತರವಾಗಿ ರೊಚ್ಚಿಗೆಬ್ಬಿಸುವ ಅಸ್ತ್ರಗಳಾಗಿ ಬಳಕೆಯಾಗುತ್ತಾ ಬಂದಿದೆ. ಇಲ್ಲಿಯೂ ಅಂತಹ ಒಂದು ವರ್ಗವಿದೆ. ಇಲ್ಲಿ ಅಂತಹದ್ದೇನೂ ನಡೆಯದಿದ್ದಲ್ಲಿ ತಾವೇ ಪಾಕಿಸ್ತಾನದ ಧ್ವಜ ಹಾರಿಸುವವರು ಅವರು. ವಿಜಾಪುರ ಜಿಲ್ಲೆಯ ಸಿಂಧಗಿಯಲ್ಲಿ ಪಾಕಿಸ್ತಾನದ ಧ್ವಜ ಹಾರಿಸಿ ಸಿಕ್ಕಿಕೊಂಡ ಪರಶುರಾಮ ವಾಘ್ಮೋರೆ ನಂತರ ಗೌರಿ ಲಂಕೇಶರ ಹತ್ಯೆಯ ಪ್ರಮುಖ ಆರೋಪಿಯಾದ ಎಂಬುದನ್ನು ನಾವು ಮರೆಯಲಾಗದು. ಆತ ಶ್ರೀರಾಮಸೇನೆಯವನು ಎಂಬ ಆರೋಪ ಬಂದಾಗ, ಆತ ಆರೆಸ್ಸೆಸ್ಸಿನವನು ಎಂದು ಖಚಿತ ಪಡಿಸಿದ್ದು ಶ್ರೀರಾಮಸೇನೆಯ ಪ್ರಮೋದ್ ಮುತಾಲಿಕ್!

ಇದರ ಹೊಣೆಯನ್ನು ಯಾರು ಹೊರಬೇಕು? ಅಮೂಲ್ಯಳೂ ಹೊರಬೇಕು. ಅದೇ ರೀತಿಯಲ್ಲಿ ಅಪ್ರಬುದ್ಧವಾಗಿ ಆಲೋಚಿಸುವ, ದೇಶದ ಇಂದಿನ ಸಂಕೀರ್ಣ ಪರಿಸ್ಥಿತಿಯಲ್ಲಿ ನಾವು ಅನುಭವದ ಮಾತನ್ನೂ ಕೇಳಬೇಕು ಎಂಬ ಎಚ್ಚರವಿಲ್ಲದ ಇನ್ನೂ ಹಲವರು ಇದ್ದಾರೆ ಅವರೆಲ್ಲರೂ ಹೊರಬೇಕು. ಆಕೆಗಿರುವ ಎನರ್ಜಿ ಮತ್ತು ಅನ್ಯಾಯವನ್ನು ಯಾವ ರೀತಿಯಿಂದಲಾದರೂ ಪ್ರತಿಭಟಿಸಬೇಕು ಎಂಬ ಉಮೇದನ್ನಷ್ಟೇ ನೋಡಿ, ಬಹಿರಂಗ ಸಭೆಗಳಲ್ಲಿ ಮಾತನಾಡಲು ಪ್ರೇರೇಪಿಸಿದವರೂ ಹೊರಬೇಕು. ಯುವಜನರನ್ನು ಪ್ರೋತ್ಸಾಹಿಸಬೇಕು ಎಂಬುದು ಸರಿಯಾದರೂ, ಗರಿಷ್ಠ ಮಿತಿಗಳನ್ನು ಮೀರುವವರನ್ನು ತಲೆ ಮೇಲೆ ಹೊತ್ತುಕೊಳ್ಳಬಾರದು ಎಂಬುದೂ ಇದರಿಂದ ಕಲಿಯಬೇಕಾದ ಪಾಠವಾಗಿದೆ.

ಅದೇನೇ ಇರಲಿ, ಇದನ್ನು ಬಳಸಿಕೊಂಡು ಇಡೀ ಚಳವಳಿಯನ್ನೇ ದಮನ ಮಾಡಲು ಹೊರಟಿರುವ ಸರ್ಕಾರದ ಹುನ್ನಾರದ ವಿರುದ್ಧ ಎಲ್ಲರೂ ಎದ್ದು ನಿಲ್ಲಬೇಕಿದೆ. ಚಳವಳಿ ಇದುವರೆಗೆ ನಡೆಸಿರುವ ಸಾವಿರಾರು ಕಾರ್ಯಕ್ರಮಗಳಲ್ಲಿ ತೋರಿದ ಪ್ರಬುದ್ಧತೆಯು ಸರ್ಕಾರಕ್ಕೆ ಕಷ್ಟ ತಂದಿತ್ತು ಎಂಬುದು ಸ್ಪಷ್ಟವಾಗಿದೆ. ಹಾಗಾಗಿ ಚಳವಳಿಯ ಸಂದರ್ಭದಲ್ಲಿ ನಡೆದ ಒಂದು ಬಿಡಿ ಅಪ್ರಬುದ್ಧತೆಯನ್ನು ಇಟ್ಟುಕೊಂಡು ದಮನಕಾಂಡ ಹರಿಬಿಡಲು ಸರ್ಕಾರ ಸಜ್ಜಾಗಿದೆ. ಇದನ್ನು ಈ ಚಳವಳಿ ಹೇಗೆ ಎದುರಿಸುತ್ತದೆ ಎಂಬುದು ಅದರ ಪ್ರಬುದ್ಧತೆಯನ್ನು ಒರೆಗೆ ಹಚ್ಚಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...