Homeಅಂಕಣಗಳುಪ್ರಬುದ್ಧ ಸಮುದಾಯದ ಅಭೂತಪೂರ್ವ ಚಳವಳಿ ಮತ್ತು ಬೇಜವಾಬ್ದಾರಿ ಎಳಸು ಹುಡುಗಿಯ ‘ಅಪಾಯಕಾರಿ ಘೋಷಣೆ’

ಪ್ರಬುದ್ಧ ಸಮುದಾಯದ ಅಭೂತಪೂರ್ವ ಚಳವಳಿ ಮತ್ತು ಬೇಜವಾಬ್ದಾರಿ ಎಳಸು ಹುಡುಗಿಯ ‘ಅಪಾಯಕಾರಿ ಘೋಷಣೆ’

- Advertisement -
- Advertisement -

ಮೂರು ವಾರಗಳ ಹಿಂದೆ ಇದೇ ಪುಟದಲ್ಲಿ ‘ನಿರೀಕ್ಷಿತ ಕೀಳು ಮಟ್ಟದ ನಡವಳಿಕೆ ಮತ್ತು ಅನಿರೀಕ್ಷಿತ ಪ್ರಬುದ್ಧತೆ’ ಎಂಬ ಬರಹವನ್ನು ಬರೆಯಲಾಗಿತ್ತು. ದೆಹಲಿ ಚುನಾವಣೆಯ ಹಿನ್ನೆಲೆಯಲ್ಲಿ ದೊಡ್ಡ ಸ್ಥಾನದಲ್ಲಿರುವವರೇ ಇಲ್ಲಿ ಬಟನ್ ಒತ್ತಿದರೆ ಅಲ್ಲಿ ಷಾಕ್ ಹೊಡೆಯಬೇಕು; ಅಲ್ಲಿ ಧರಣಿ ಕೂತಿರುವವರು ರೇಪ್ ಮಾಡುವವರು ಇತ್ಯಾದಿ ಮಾತುಗಳನ್ನು ಶಹೀನ್‍ಬಾಗ್‍ನ ಧರಣಿಯ ಬಗ್ಗೆ ಆಡಿದ್ದರು. ಅದೇ ಸಂದರ್ಭದಲ್ಲಿ ತಮ್ಮತ್ತ ಗುಂಡು ಹಾರಿಸಿದರೂ ಪ್ರಚೋದನೆಗೊಳಗಾಗದೇ ರಾಷ್ಟ್ರಧ್ವಜ ಹಾಗೂ ಸಂವಿಧಾನ ಹಿಡಿದು ಶಾಂತಿಯುತ ಹೋರಾಟವನ್ನು ದೇಶದೆಲ್ಲೆಡೆ ಮಾಡುತ್ತಿದ್ದ ಸಮುದಾಯದ ಪ್ರಬುದ್ಧತೆ ಎದ್ದು ಕಾಣುತ್ತಿತ್ತು.

ಆದರೆ ಇಂದಿನ ಸಂದರ್ಭ ಇನ್ನೂ ಅಪಾಯಕಾರಿಯಾಗಿ ಪರಿವರ್ತನೆಯಾಗಿದೆ. ಬೆಂಗಳೂರಿನಲ್ಲಿ ಮುಸ್ಲಿಂ ಸಮುದಾಯದವರೇ ಹೆಚ್ಚಾಗಿದ್ದ ಸಮಾವೇಶವೊಂದರಲ್ಲಿ ಅಮೂಲ್ಯ ಎಂಬ ಎಳೆಯ ಹುಡುಗಿಯ ಮಾತುಗಳು ಪರಿಸ್ಥಿತಿಯನ್ನು ಸಂಕೀರ್ಣಗೊಳಿಸಿದೆ. ‘ಆಕೆ ಏನನ್ನೋ ಹೇಳಲು ಹೊರಟಿದ್ದಳು, ವಿಶ್ವಮಾನವ ಸಂದೇಶ ಸಾರಲು ಹೊರಟಿದ್ದಳು, ಅದನ್ನು ಅರ್ಥ ಮಾಡಿಕೊಳ್ಳಲು ನಾಲ್ಕು ದಿನದ ಹಿಂದಿನ ಆಕೆಯ ಫೇಸ್‍ಬುಕ್ ಪೋಸ್ಟ್ ನೋಡಬೇಕು, ಆಕೆಯ ಮೇಲೆ ದೇಶದ್ರೋಹದ ಕೇಸನ್ನು ದಾಖಲಿಸಿರುವುದೇ ತಪ್ಪು’ ಇವೆಲ್ಲವೂ ನಿಜ. ಆದರೆ ಇಷ್ಟೇ ನಿಜವಲ್ಲ.

ಮೂರು ವಾರಗಳ ಹಿಂದೆ ಬರೆದಂತೆ ದೇಶದ ಅತಿ ದೊಡ್ಡ ಅಲ್ಪಸಂಖ್ಯಾತ ಸಮುದಾಯವು ತೋರಿದ ಪ್ರಬುದ್ಧತೆಯು ಆಳುವವರನ್ನು ಕಂಗಾಲಾಗಿಸಿತ್ತು. ಅದು ತಾನು ಬಳಸಿಕೊಳ್ಳಬಹುದಾದ ಅಸ್ತ್ರವೊಂದನ್ನು ಹುಡುಕುತ್ತಿತ್ತು. ಆ ಅಸ್ತ್ರವನ್ನು ಆ ಸಮುದಾಯ ಕೊಡಲಿಲ್ಲ. ಬದಲಿಗೆ ತಾನಂದುಕೊಂಡಿದ್ದನ್ನು ಹೇಗೆ ಜನರಿಗೆ ತಲುಪಿಸಬೇಕು ಎಂಬುದರ ಕನಿಷ್ಠ ಪ್ರಜ್ಞೆ ಇಲ್ಲದ ಒಂದು ಎಳಸು ಹುಡುಗಿ ತಪ್ಪಾದ ಜಾಗದಲ್ಲಿ ತಪ್ಪಾದ ಮಾತುಗಳನ್ನು ಆಡಿದಳು. ಆ ಮೂಲಕ ಇದನ್ನೇ ಬಯಸುತ್ತಿದ್ದವರಿಗೆ ಅಸ್ತ್ರವನ್ನು ಒದಗಿಸಿದಳು.

ಯಾರು ಇದನ್ನು ಬಯಸುತ್ತಿದ್ದರೋ ಅವರು ಪಾಕಿಸ್ತಾನವನ್ನು ನಿರಂತರವಾಗಿ ಬಳಸಿಕೊಳ್ಳುತ್ತಾ ಬಂದಿರುವವರು. ಪಾಕಿಸ್ತಾನದಲ್ಲಿ ಆಳುವ ಎಲ್ಲರಿಗೂ ಕಾಶ್ಮೀರ ಹಾಗೂ ಭಾರತ ನಿರಂತರವಾಗಿ ರೊಚ್ಚಿಗೆಬ್ಬಿಸುವ ಅಸ್ತ್ರಗಳಾಗಿ ಬಳಕೆಯಾಗುತ್ತಾ ಬಂದಿದೆ. ಇಲ್ಲಿಯೂ ಅಂತಹ ಒಂದು ವರ್ಗವಿದೆ. ಇಲ್ಲಿ ಅಂತಹದ್ದೇನೂ ನಡೆಯದಿದ್ದಲ್ಲಿ ತಾವೇ ಪಾಕಿಸ್ತಾನದ ಧ್ವಜ ಹಾರಿಸುವವರು ಅವರು. ವಿಜಾಪುರ ಜಿಲ್ಲೆಯ ಸಿಂಧಗಿಯಲ್ಲಿ ಪಾಕಿಸ್ತಾನದ ಧ್ವಜ ಹಾರಿಸಿ ಸಿಕ್ಕಿಕೊಂಡ ಪರಶುರಾಮ ವಾಘ್ಮೋರೆ ನಂತರ ಗೌರಿ ಲಂಕೇಶರ ಹತ್ಯೆಯ ಪ್ರಮುಖ ಆರೋಪಿಯಾದ ಎಂಬುದನ್ನು ನಾವು ಮರೆಯಲಾಗದು. ಆತ ಶ್ರೀರಾಮಸೇನೆಯವನು ಎಂಬ ಆರೋಪ ಬಂದಾಗ, ಆತ ಆರೆಸ್ಸೆಸ್ಸಿನವನು ಎಂದು ಖಚಿತ ಪಡಿಸಿದ್ದು ಶ್ರೀರಾಮಸೇನೆಯ ಪ್ರಮೋದ್ ಮುತಾಲಿಕ್!

ಇದರ ಹೊಣೆಯನ್ನು ಯಾರು ಹೊರಬೇಕು? ಅಮೂಲ್ಯಳೂ ಹೊರಬೇಕು. ಅದೇ ರೀತಿಯಲ್ಲಿ ಅಪ್ರಬುದ್ಧವಾಗಿ ಆಲೋಚಿಸುವ, ದೇಶದ ಇಂದಿನ ಸಂಕೀರ್ಣ ಪರಿಸ್ಥಿತಿಯಲ್ಲಿ ನಾವು ಅನುಭವದ ಮಾತನ್ನೂ ಕೇಳಬೇಕು ಎಂಬ ಎಚ್ಚರವಿಲ್ಲದ ಇನ್ನೂ ಹಲವರು ಇದ್ದಾರೆ ಅವರೆಲ್ಲರೂ ಹೊರಬೇಕು. ಆಕೆಗಿರುವ ಎನರ್ಜಿ ಮತ್ತು ಅನ್ಯಾಯವನ್ನು ಯಾವ ರೀತಿಯಿಂದಲಾದರೂ ಪ್ರತಿಭಟಿಸಬೇಕು ಎಂಬ ಉಮೇದನ್ನಷ್ಟೇ ನೋಡಿ, ಬಹಿರಂಗ ಸಭೆಗಳಲ್ಲಿ ಮಾತನಾಡಲು ಪ್ರೇರೇಪಿಸಿದವರೂ ಹೊರಬೇಕು. ಯುವಜನರನ್ನು ಪ್ರೋತ್ಸಾಹಿಸಬೇಕು ಎಂಬುದು ಸರಿಯಾದರೂ, ಗರಿಷ್ಠ ಮಿತಿಗಳನ್ನು ಮೀರುವವರನ್ನು ತಲೆ ಮೇಲೆ ಹೊತ್ತುಕೊಳ್ಳಬಾರದು ಎಂಬುದೂ ಇದರಿಂದ ಕಲಿಯಬೇಕಾದ ಪಾಠವಾಗಿದೆ.

ಅದೇನೇ ಇರಲಿ, ಇದನ್ನು ಬಳಸಿಕೊಂಡು ಇಡೀ ಚಳವಳಿಯನ್ನೇ ದಮನ ಮಾಡಲು ಹೊರಟಿರುವ ಸರ್ಕಾರದ ಹುನ್ನಾರದ ವಿರುದ್ಧ ಎಲ್ಲರೂ ಎದ್ದು ನಿಲ್ಲಬೇಕಿದೆ. ಚಳವಳಿ ಇದುವರೆಗೆ ನಡೆಸಿರುವ ಸಾವಿರಾರು ಕಾರ್ಯಕ್ರಮಗಳಲ್ಲಿ ತೋರಿದ ಪ್ರಬುದ್ಧತೆಯು ಸರ್ಕಾರಕ್ಕೆ ಕಷ್ಟ ತಂದಿತ್ತು ಎಂಬುದು ಸ್ಪಷ್ಟವಾಗಿದೆ. ಹಾಗಾಗಿ ಚಳವಳಿಯ ಸಂದರ್ಭದಲ್ಲಿ ನಡೆದ ಒಂದು ಬಿಡಿ ಅಪ್ರಬುದ್ಧತೆಯನ್ನು ಇಟ್ಟುಕೊಂಡು ದಮನಕಾಂಡ ಹರಿಬಿಡಲು ಸರ್ಕಾರ ಸಜ್ಜಾಗಿದೆ. ಇದನ್ನು ಈ ಚಳವಳಿ ಹೇಗೆ ಎದುರಿಸುತ್ತದೆ ಎಂಬುದು ಅದರ ಪ್ರಬುದ್ಧತೆಯನ್ನು ಒರೆಗೆ ಹಚ್ಚಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...