Homeಅಂಕಣಗಳುಪ್ರಬುದ್ಧ ಸಮುದಾಯದ ಅಭೂತಪೂರ್ವ ಚಳವಳಿ ಮತ್ತು ಬೇಜವಾಬ್ದಾರಿ ಎಳಸು ಹುಡುಗಿಯ ‘ಅಪಾಯಕಾರಿ ಘೋಷಣೆ’

ಪ್ರಬುದ್ಧ ಸಮುದಾಯದ ಅಭೂತಪೂರ್ವ ಚಳವಳಿ ಮತ್ತು ಬೇಜವಾಬ್ದಾರಿ ಎಳಸು ಹುಡುಗಿಯ ‘ಅಪಾಯಕಾರಿ ಘೋಷಣೆ’

- Advertisement -
- Advertisement -

ಮೂರು ವಾರಗಳ ಹಿಂದೆ ಇದೇ ಪುಟದಲ್ಲಿ ‘ನಿರೀಕ್ಷಿತ ಕೀಳು ಮಟ್ಟದ ನಡವಳಿಕೆ ಮತ್ತು ಅನಿರೀಕ್ಷಿತ ಪ್ರಬುದ್ಧತೆ’ ಎಂಬ ಬರಹವನ್ನು ಬರೆಯಲಾಗಿತ್ತು. ದೆಹಲಿ ಚುನಾವಣೆಯ ಹಿನ್ನೆಲೆಯಲ್ಲಿ ದೊಡ್ಡ ಸ್ಥಾನದಲ್ಲಿರುವವರೇ ಇಲ್ಲಿ ಬಟನ್ ಒತ್ತಿದರೆ ಅಲ್ಲಿ ಷಾಕ್ ಹೊಡೆಯಬೇಕು; ಅಲ್ಲಿ ಧರಣಿ ಕೂತಿರುವವರು ರೇಪ್ ಮಾಡುವವರು ಇತ್ಯಾದಿ ಮಾತುಗಳನ್ನು ಶಹೀನ್‍ಬಾಗ್‍ನ ಧರಣಿಯ ಬಗ್ಗೆ ಆಡಿದ್ದರು. ಅದೇ ಸಂದರ್ಭದಲ್ಲಿ ತಮ್ಮತ್ತ ಗುಂಡು ಹಾರಿಸಿದರೂ ಪ್ರಚೋದನೆಗೊಳಗಾಗದೇ ರಾಷ್ಟ್ರಧ್ವಜ ಹಾಗೂ ಸಂವಿಧಾನ ಹಿಡಿದು ಶಾಂತಿಯುತ ಹೋರಾಟವನ್ನು ದೇಶದೆಲ್ಲೆಡೆ ಮಾಡುತ್ತಿದ್ದ ಸಮುದಾಯದ ಪ್ರಬುದ್ಧತೆ ಎದ್ದು ಕಾಣುತ್ತಿತ್ತು.

ಆದರೆ ಇಂದಿನ ಸಂದರ್ಭ ಇನ್ನೂ ಅಪಾಯಕಾರಿಯಾಗಿ ಪರಿವರ್ತನೆಯಾಗಿದೆ. ಬೆಂಗಳೂರಿನಲ್ಲಿ ಮುಸ್ಲಿಂ ಸಮುದಾಯದವರೇ ಹೆಚ್ಚಾಗಿದ್ದ ಸಮಾವೇಶವೊಂದರಲ್ಲಿ ಅಮೂಲ್ಯ ಎಂಬ ಎಳೆಯ ಹುಡುಗಿಯ ಮಾತುಗಳು ಪರಿಸ್ಥಿತಿಯನ್ನು ಸಂಕೀರ್ಣಗೊಳಿಸಿದೆ. ‘ಆಕೆ ಏನನ್ನೋ ಹೇಳಲು ಹೊರಟಿದ್ದಳು, ವಿಶ್ವಮಾನವ ಸಂದೇಶ ಸಾರಲು ಹೊರಟಿದ್ದಳು, ಅದನ್ನು ಅರ್ಥ ಮಾಡಿಕೊಳ್ಳಲು ನಾಲ್ಕು ದಿನದ ಹಿಂದಿನ ಆಕೆಯ ಫೇಸ್‍ಬುಕ್ ಪೋಸ್ಟ್ ನೋಡಬೇಕು, ಆಕೆಯ ಮೇಲೆ ದೇಶದ್ರೋಹದ ಕೇಸನ್ನು ದಾಖಲಿಸಿರುವುದೇ ತಪ್ಪು’ ಇವೆಲ್ಲವೂ ನಿಜ. ಆದರೆ ಇಷ್ಟೇ ನಿಜವಲ್ಲ.

ಮೂರು ವಾರಗಳ ಹಿಂದೆ ಬರೆದಂತೆ ದೇಶದ ಅತಿ ದೊಡ್ಡ ಅಲ್ಪಸಂಖ್ಯಾತ ಸಮುದಾಯವು ತೋರಿದ ಪ್ರಬುದ್ಧತೆಯು ಆಳುವವರನ್ನು ಕಂಗಾಲಾಗಿಸಿತ್ತು. ಅದು ತಾನು ಬಳಸಿಕೊಳ್ಳಬಹುದಾದ ಅಸ್ತ್ರವೊಂದನ್ನು ಹುಡುಕುತ್ತಿತ್ತು. ಆ ಅಸ್ತ್ರವನ್ನು ಆ ಸಮುದಾಯ ಕೊಡಲಿಲ್ಲ. ಬದಲಿಗೆ ತಾನಂದುಕೊಂಡಿದ್ದನ್ನು ಹೇಗೆ ಜನರಿಗೆ ತಲುಪಿಸಬೇಕು ಎಂಬುದರ ಕನಿಷ್ಠ ಪ್ರಜ್ಞೆ ಇಲ್ಲದ ಒಂದು ಎಳಸು ಹುಡುಗಿ ತಪ್ಪಾದ ಜಾಗದಲ್ಲಿ ತಪ್ಪಾದ ಮಾತುಗಳನ್ನು ಆಡಿದಳು. ಆ ಮೂಲಕ ಇದನ್ನೇ ಬಯಸುತ್ತಿದ್ದವರಿಗೆ ಅಸ್ತ್ರವನ್ನು ಒದಗಿಸಿದಳು.

ಯಾರು ಇದನ್ನು ಬಯಸುತ್ತಿದ್ದರೋ ಅವರು ಪಾಕಿಸ್ತಾನವನ್ನು ನಿರಂತರವಾಗಿ ಬಳಸಿಕೊಳ್ಳುತ್ತಾ ಬಂದಿರುವವರು. ಪಾಕಿಸ್ತಾನದಲ್ಲಿ ಆಳುವ ಎಲ್ಲರಿಗೂ ಕಾಶ್ಮೀರ ಹಾಗೂ ಭಾರತ ನಿರಂತರವಾಗಿ ರೊಚ್ಚಿಗೆಬ್ಬಿಸುವ ಅಸ್ತ್ರಗಳಾಗಿ ಬಳಕೆಯಾಗುತ್ತಾ ಬಂದಿದೆ. ಇಲ್ಲಿಯೂ ಅಂತಹ ಒಂದು ವರ್ಗವಿದೆ. ಇಲ್ಲಿ ಅಂತಹದ್ದೇನೂ ನಡೆಯದಿದ್ದಲ್ಲಿ ತಾವೇ ಪಾಕಿಸ್ತಾನದ ಧ್ವಜ ಹಾರಿಸುವವರು ಅವರು. ವಿಜಾಪುರ ಜಿಲ್ಲೆಯ ಸಿಂಧಗಿಯಲ್ಲಿ ಪಾಕಿಸ್ತಾನದ ಧ್ವಜ ಹಾರಿಸಿ ಸಿಕ್ಕಿಕೊಂಡ ಪರಶುರಾಮ ವಾಘ್ಮೋರೆ ನಂತರ ಗೌರಿ ಲಂಕೇಶರ ಹತ್ಯೆಯ ಪ್ರಮುಖ ಆರೋಪಿಯಾದ ಎಂಬುದನ್ನು ನಾವು ಮರೆಯಲಾಗದು. ಆತ ಶ್ರೀರಾಮಸೇನೆಯವನು ಎಂಬ ಆರೋಪ ಬಂದಾಗ, ಆತ ಆರೆಸ್ಸೆಸ್ಸಿನವನು ಎಂದು ಖಚಿತ ಪಡಿಸಿದ್ದು ಶ್ರೀರಾಮಸೇನೆಯ ಪ್ರಮೋದ್ ಮುತಾಲಿಕ್!

ಇದರ ಹೊಣೆಯನ್ನು ಯಾರು ಹೊರಬೇಕು? ಅಮೂಲ್ಯಳೂ ಹೊರಬೇಕು. ಅದೇ ರೀತಿಯಲ್ಲಿ ಅಪ್ರಬುದ್ಧವಾಗಿ ಆಲೋಚಿಸುವ, ದೇಶದ ಇಂದಿನ ಸಂಕೀರ್ಣ ಪರಿಸ್ಥಿತಿಯಲ್ಲಿ ನಾವು ಅನುಭವದ ಮಾತನ್ನೂ ಕೇಳಬೇಕು ಎಂಬ ಎಚ್ಚರವಿಲ್ಲದ ಇನ್ನೂ ಹಲವರು ಇದ್ದಾರೆ ಅವರೆಲ್ಲರೂ ಹೊರಬೇಕು. ಆಕೆಗಿರುವ ಎನರ್ಜಿ ಮತ್ತು ಅನ್ಯಾಯವನ್ನು ಯಾವ ರೀತಿಯಿಂದಲಾದರೂ ಪ್ರತಿಭಟಿಸಬೇಕು ಎಂಬ ಉಮೇದನ್ನಷ್ಟೇ ನೋಡಿ, ಬಹಿರಂಗ ಸಭೆಗಳಲ್ಲಿ ಮಾತನಾಡಲು ಪ್ರೇರೇಪಿಸಿದವರೂ ಹೊರಬೇಕು. ಯುವಜನರನ್ನು ಪ್ರೋತ್ಸಾಹಿಸಬೇಕು ಎಂಬುದು ಸರಿಯಾದರೂ, ಗರಿಷ್ಠ ಮಿತಿಗಳನ್ನು ಮೀರುವವರನ್ನು ತಲೆ ಮೇಲೆ ಹೊತ್ತುಕೊಳ್ಳಬಾರದು ಎಂಬುದೂ ಇದರಿಂದ ಕಲಿಯಬೇಕಾದ ಪಾಠವಾಗಿದೆ.

ಅದೇನೇ ಇರಲಿ, ಇದನ್ನು ಬಳಸಿಕೊಂಡು ಇಡೀ ಚಳವಳಿಯನ್ನೇ ದಮನ ಮಾಡಲು ಹೊರಟಿರುವ ಸರ್ಕಾರದ ಹುನ್ನಾರದ ವಿರುದ್ಧ ಎಲ್ಲರೂ ಎದ್ದು ನಿಲ್ಲಬೇಕಿದೆ. ಚಳವಳಿ ಇದುವರೆಗೆ ನಡೆಸಿರುವ ಸಾವಿರಾರು ಕಾರ್ಯಕ್ರಮಗಳಲ್ಲಿ ತೋರಿದ ಪ್ರಬುದ್ಧತೆಯು ಸರ್ಕಾರಕ್ಕೆ ಕಷ್ಟ ತಂದಿತ್ತು ಎಂಬುದು ಸ್ಪಷ್ಟವಾಗಿದೆ. ಹಾಗಾಗಿ ಚಳವಳಿಯ ಸಂದರ್ಭದಲ್ಲಿ ನಡೆದ ಒಂದು ಬಿಡಿ ಅಪ್ರಬುದ್ಧತೆಯನ್ನು ಇಟ್ಟುಕೊಂಡು ದಮನಕಾಂಡ ಹರಿಬಿಡಲು ಸರ್ಕಾರ ಸಜ್ಜಾಗಿದೆ. ಇದನ್ನು ಈ ಚಳವಳಿ ಹೇಗೆ ಎದುರಿಸುತ್ತದೆ ಎಂಬುದು ಅದರ ಪ್ರಬುದ್ಧತೆಯನ್ನು ಒರೆಗೆ ಹಚ್ಚಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...