Homeಅಂಕಣಗಳುಪ್ರಬುದ್ಧ ಸಮುದಾಯದ ಅಭೂತಪೂರ್ವ ಚಳವಳಿ ಮತ್ತು ಬೇಜವಾಬ್ದಾರಿ ಎಳಸು ಹುಡುಗಿಯ ‘ಅಪಾಯಕಾರಿ ಘೋಷಣೆ’

ಪ್ರಬುದ್ಧ ಸಮುದಾಯದ ಅಭೂತಪೂರ್ವ ಚಳವಳಿ ಮತ್ತು ಬೇಜವಾಬ್ದಾರಿ ಎಳಸು ಹುಡುಗಿಯ ‘ಅಪಾಯಕಾರಿ ಘೋಷಣೆ’

- Advertisement -
- Advertisement -

ಮೂರು ವಾರಗಳ ಹಿಂದೆ ಇದೇ ಪುಟದಲ್ಲಿ ‘ನಿರೀಕ್ಷಿತ ಕೀಳು ಮಟ್ಟದ ನಡವಳಿಕೆ ಮತ್ತು ಅನಿರೀಕ್ಷಿತ ಪ್ರಬುದ್ಧತೆ’ ಎಂಬ ಬರಹವನ್ನು ಬರೆಯಲಾಗಿತ್ತು. ದೆಹಲಿ ಚುನಾವಣೆಯ ಹಿನ್ನೆಲೆಯಲ್ಲಿ ದೊಡ್ಡ ಸ್ಥಾನದಲ್ಲಿರುವವರೇ ಇಲ್ಲಿ ಬಟನ್ ಒತ್ತಿದರೆ ಅಲ್ಲಿ ಷಾಕ್ ಹೊಡೆಯಬೇಕು; ಅಲ್ಲಿ ಧರಣಿ ಕೂತಿರುವವರು ರೇಪ್ ಮಾಡುವವರು ಇತ್ಯಾದಿ ಮಾತುಗಳನ್ನು ಶಹೀನ್‍ಬಾಗ್‍ನ ಧರಣಿಯ ಬಗ್ಗೆ ಆಡಿದ್ದರು. ಅದೇ ಸಂದರ್ಭದಲ್ಲಿ ತಮ್ಮತ್ತ ಗುಂಡು ಹಾರಿಸಿದರೂ ಪ್ರಚೋದನೆಗೊಳಗಾಗದೇ ರಾಷ್ಟ್ರಧ್ವಜ ಹಾಗೂ ಸಂವಿಧಾನ ಹಿಡಿದು ಶಾಂತಿಯುತ ಹೋರಾಟವನ್ನು ದೇಶದೆಲ್ಲೆಡೆ ಮಾಡುತ್ತಿದ್ದ ಸಮುದಾಯದ ಪ್ರಬುದ್ಧತೆ ಎದ್ದು ಕಾಣುತ್ತಿತ್ತು.

ಆದರೆ ಇಂದಿನ ಸಂದರ್ಭ ಇನ್ನೂ ಅಪಾಯಕಾರಿಯಾಗಿ ಪರಿವರ್ತನೆಯಾಗಿದೆ. ಬೆಂಗಳೂರಿನಲ್ಲಿ ಮುಸ್ಲಿಂ ಸಮುದಾಯದವರೇ ಹೆಚ್ಚಾಗಿದ್ದ ಸಮಾವೇಶವೊಂದರಲ್ಲಿ ಅಮೂಲ್ಯ ಎಂಬ ಎಳೆಯ ಹುಡುಗಿಯ ಮಾತುಗಳು ಪರಿಸ್ಥಿತಿಯನ್ನು ಸಂಕೀರ್ಣಗೊಳಿಸಿದೆ. ‘ಆಕೆ ಏನನ್ನೋ ಹೇಳಲು ಹೊರಟಿದ್ದಳು, ವಿಶ್ವಮಾನವ ಸಂದೇಶ ಸಾರಲು ಹೊರಟಿದ್ದಳು, ಅದನ್ನು ಅರ್ಥ ಮಾಡಿಕೊಳ್ಳಲು ನಾಲ್ಕು ದಿನದ ಹಿಂದಿನ ಆಕೆಯ ಫೇಸ್‍ಬುಕ್ ಪೋಸ್ಟ್ ನೋಡಬೇಕು, ಆಕೆಯ ಮೇಲೆ ದೇಶದ್ರೋಹದ ಕೇಸನ್ನು ದಾಖಲಿಸಿರುವುದೇ ತಪ್ಪು’ ಇವೆಲ್ಲವೂ ನಿಜ. ಆದರೆ ಇಷ್ಟೇ ನಿಜವಲ್ಲ.

ಮೂರು ವಾರಗಳ ಹಿಂದೆ ಬರೆದಂತೆ ದೇಶದ ಅತಿ ದೊಡ್ಡ ಅಲ್ಪಸಂಖ್ಯಾತ ಸಮುದಾಯವು ತೋರಿದ ಪ್ರಬುದ್ಧತೆಯು ಆಳುವವರನ್ನು ಕಂಗಾಲಾಗಿಸಿತ್ತು. ಅದು ತಾನು ಬಳಸಿಕೊಳ್ಳಬಹುದಾದ ಅಸ್ತ್ರವೊಂದನ್ನು ಹುಡುಕುತ್ತಿತ್ತು. ಆ ಅಸ್ತ್ರವನ್ನು ಆ ಸಮುದಾಯ ಕೊಡಲಿಲ್ಲ. ಬದಲಿಗೆ ತಾನಂದುಕೊಂಡಿದ್ದನ್ನು ಹೇಗೆ ಜನರಿಗೆ ತಲುಪಿಸಬೇಕು ಎಂಬುದರ ಕನಿಷ್ಠ ಪ್ರಜ್ಞೆ ಇಲ್ಲದ ಒಂದು ಎಳಸು ಹುಡುಗಿ ತಪ್ಪಾದ ಜಾಗದಲ್ಲಿ ತಪ್ಪಾದ ಮಾತುಗಳನ್ನು ಆಡಿದಳು. ಆ ಮೂಲಕ ಇದನ್ನೇ ಬಯಸುತ್ತಿದ್ದವರಿಗೆ ಅಸ್ತ್ರವನ್ನು ಒದಗಿಸಿದಳು.

ಯಾರು ಇದನ್ನು ಬಯಸುತ್ತಿದ್ದರೋ ಅವರು ಪಾಕಿಸ್ತಾನವನ್ನು ನಿರಂತರವಾಗಿ ಬಳಸಿಕೊಳ್ಳುತ್ತಾ ಬಂದಿರುವವರು. ಪಾಕಿಸ್ತಾನದಲ್ಲಿ ಆಳುವ ಎಲ್ಲರಿಗೂ ಕಾಶ್ಮೀರ ಹಾಗೂ ಭಾರತ ನಿರಂತರವಾಗಿ ರೊಚ್ಚಿಗೆಬ್ಬಿಸುವ ಅಸ್ತ್ರಗಳಾಗಿ ಬಳಕೆಯಾಗುತ್ತಾ ಬಂದಿದೆ. ಇಲ್ಲಿಯೂ ಅಂತಹ ಒಂದು ವರ್ಗವಿದೆ. ಇಲ್ಲಿ ಅಂತಹದ್ದೇನೂ ನಡೆಯದಿದ್ದಲ್ಲಿ ತಾವೇ ಪಾಕಿಸ್ತಾನದ ಧ್ವಜ ಹಾರಿಸುವವರು ಅವರು. ವಿಜಾಪುರ ಜಿಲ್ಲೆಯ ಸಿಂಧಗಿಯಲ್ಲಿ ಪಾಕಿಸ್ತಾನದ ಧ್ವಜ ಹಾರಿಸಿ ಸಿಕ್ಕಿಕೊಂಡ ಪರಶುರಾಮ ವಾಘ್ಮೋರೆ ನಂತರ ಗೌರಿ ಲಂಕೇಶರ ಹತ್ಯೆಯ ಪ್ರಮುಖ ಆರೋಪಿಯಾದ ಎಂಬುದನ್ನು ನಾವು ಮರೆಯಲಾಗದು. ಆತ ಶ್ರೀರಾಮಸೇನೆಯವನು ಎಂಬ ಆರೋಪ ಬಂದಾಗ, ಆತ ಆರೆಸ್ಸೆಸ್ಸಿನವನು ಎಂದು ಖಚಿತ ಪಡಿಸಿದ್ದು ಶ್ರೀರಾಮಸೇನೆಯ ಪ್ರಮೋದ್ ಮುತಾಲಿಕ್!

ಇದರ ಹೊಣೆಯನ್ನು ಯಾರು ಹೊರಬೇಕು? ಅಮೂಲ್ಯಳೂ ಹೊರಬೇಕು. ಅದೇ ರೀತಿಯಲ್ಲಿ ಅಪ್ರಬುದ್ಧವಾಗಿ ಆಲೋಚಿಸುವ, ದೇಶದ ಇಂದಿನ ಸಂಕೀರ್ಣ ಪರಿಸ್ಥಿತಿಯಲ್ಲಿ ನಾವು ಅನುಭವದ ಮಾತನ್ನೂ ಕೇಳಬೇಕು ಎಂಬ ಎಚ್ಚರವಿಲ್ಲದ ಇನ್ನೂ ಹಲವರು ಇದ್ದಾರೆ ಅವರೆಲ್ಲರೂ ಹೊರಬೇಕು. ಆಕೆಗಿರುವ ಎನರ್ಜಿ ಮತ್ತು ಅನ್ಯಾಯವನ್ನು ಯಾವ ರೀತಿಯಿಂದಲಾದರೂ ಪ್ರತಿಭಟಿಸಬೇಕು ಎಂಬ ಉಮೇದನ್ನಷ್ಟೇ ನೋಡಿ, ಬಹಿರಂಗ ಸಭೆಗಳಲ್ಲಿ ಮಾತನಾಡಲು ಪ್ರೇರೇಪಿಸಿದವರೂ ಹೊರಬೇಕು. ಯುವಜನರನ್ನು ಪ್ರೋತ್ಸಾಹಿಸಬೇಕು ಎಂಬುದು ಸರಿಯಾದರೂ, ಗರಿಷ್ಠ ಮಿತಿಗಳನ್ನು ಮೀರುವವರನ್ನು ತಲೆ ಮೇಲೆ ಹೊತ್ತುಕೊಳ್ಳಬಾರದು ಎಂಬುದೂ ಇದರಿಂದ ಕಲಿಯಬೇಕಾದ ಪಾಠವಾಗಿದೆ.

ಅದೇನೇ ಇರಲಿ, ಇದನ್ನು ಬಳಸಿಕೊಂಡು ಇಡೀ ಚಳವಳಿಯನ್ನೇ ದಮನ ಮಾಡಲು ಹೊರಟಿರುವ ಸರ್ಕಾರದ ಹುನ್ನಾರದ ವಿರುದ್ಧ ಎಲ್ಲರೂ ಎದ್ದು ನಿಲ್ಲಬೇಕಿದೆ. ಚಳವಳಿ ಇದುವರೆಗೆ ನಡೆಸಿರುವ ಸಾವಿರಾರು ಕಾರ್ಯಕ್ರಮಗಳಲ್ಲಿ ತೋರಿದ ಪ್ರಬುದ್ಧತೆಯು ಸರ್ಕಾರಕ್ಕೆ ಕಷ್ಟ ತಂದಿತ್ತು ಎಂಬುದು ಸ್ಪಷ್ಟವಾಗಿದೆ. ಹಾಗಾಗಿ ಚಳವಳಿಯ ಸಂದರ್ಭದಲ್ಲಿ ನಡೆದ ಒಂದು ಬಿಡಿ ಅಪ್ರಬುದ್ಧತೆಯನ್ನು ಇಟ್ಟುಕೊಂಡು ದಮನಕಾಂಡ ಹರಿಬಿಡಲು ಸರ್ಕಾರ ಸಜ್ಜಾಗಿದೆ. ಇದನ್ನು ಈ ಚಳವಳಿ ಹೇಗೆ ಎದುರಿಸುತ್ತದೆ ಎಂಬುದು ಅದರ ಪ್ರಬುದ್ಧತೆಯನ್ನು ಒರೆಗೆ ಹಚ್ಚಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...