Homeನ್ಯಾಯ ಪಥಬಹುಜನ ಭಾರತ: ಕೃಷ್ಣನ ಮೋಹಿಸಿದ ಕಮ್ಯೂನಿಸ್ಟ್ ಮೌಲಾನಾ! - ಡಿ.ಉಮಾಪತಿ

ಬಹುಜನ ಭಾರತ: ಕೃಷ್ಣನ ಮೋಹಿಸಿದ ಕಮ್ಯೂನಿಸ್ಟ್ ಮೌಲಾನಾ! – ಡಿ.ಉಮಾಪತಿ

ಕಾವ್ಯದಲ್ಲಿ ರಮ್ಯವಾದಿಯೂ ರಾಜಕಾರಣದಲ್ಲಿ ಕ್ರಾಂತಿವಾದಿಯೂ ಆಗಿದ್ದರು ಮೋಹಾನಿ

- Advertisement -
- Advertisement -

ಈ ಅಂಕಣ ಬರೆಯಲು ಕುಳಿತಿರುವ ಹೊತ್ತಿನಲ್ಲಿ ಜನಸಮುದಾಯಗಳ ಕವಿ ರಾಹತ್ ಇಂದೋರಿ ತೀರಿ ಹೋಗಿದ್ದಾರೆ. ಆಳುವವರು ಕಾರುತ್ತಿರುವ ಕೋಮುದ್ವೇಷಕ್ಕೆ ಸಿಡಿಲಿನಂತಹ ಕಾವ್ಯದ ಜವಾಬು ನೀಡಿ ಸೆಡ್ಡು ಹೊಡೆದಿದ್ದವರು. ಪೌರತ್ವ ಕಸಿಯುವ ಹುನ್ನಾರದ ವಿರುದ್ಧ ಕೆರಳಿದ್ದರು. ಎಲ್ಲರ ನೆತ್ತರು ಕಲೆತು ಬೆರೆತಿದೆ ಈ ಮಣ್ಣಿನಲಿ, ಹಿಂದುಸ್ತಾನ ಯಾರಪ್ಪನ ಮನೆಯ ಆಸ್ತಿಯಲ್ಲ ಎಂದು ಸಿಡಿದಿದ್ದರು. ಉಸಿರು ನಿಂತ ಮೇಲೆ ಪಕ್ಕಾ ಪ್ರತ್ಯೇಕ ಗುರುತನೊಂದ ಬರೆಯಿರಿ, ನನ್ನ ಕಳೇಬರದ ಮೇಲೆ ನೆತ್ತರಿನಿಂದ ಹಿಂದುಸ್ತಾನಿಯೆಂದು ಬರೆಯಿರಿ ಎಂದು ದುಗುಡ ದುಮ್ಮಾನದಿಂದ ಪ್ರತಿರೋಧದ ಕಿಡಿ ಹಾರಿಸಿ ಹಾಡಿದ್ದರು. ಪ್ರತಿಭಟನೆಯ ಸಶಕ್ತ ದನಿಯಾಗಿದ್ದರು. ಮಣ್ಣು ಗಾಳಿ ಮಾತು ಅನ್ನ ಅರಿವೆ ಎಲ್ಲವನ್ನೂ ಹಿಂದು-ಮುಸ್ಲಿಮ್ ಆಗಿಸಿ ವಿಷ ಹಿಂಡುತ್ತಿರುವ ಫ್ಯಾಸಿಸಮ್‌ನ ದುಷ್ಟ ಕಳೆ ದೇಶವನ್ನೆಲ್ಲ ಸುತ್ತಿ ಆವರಿಸಿಕೊಂಡಿರುವ ಈ ದುರಿತ ದಿನಗಳಲ್ಲಿ ಇಂದೂರಿಯಂತಹ ದನಿ ನಮ್ಮ ನಡುವೆ ಇರುವುದು ಕಾಲದ ಅಗತ್ಯವಾಗಿತ್ತು. ಆದರೆ ಮರಣಕ್ಕೆ ಅಡ್ಡ ನಿಲ್ಲಲಹುದೇ? ಗತಿಸಿರುವ ಇಂದೋರಿ ಜೀವಿಸಿರುವ ಇಂದೋರಿಗಿಂತ ಪ್ರಭಾವಿ ಎಂದು ಬಗೆದು ಮುಂದೆ ಸಾಗಬೇಕಿದೆ.

ರಾಹತ್ ಇಂದೋರಿ

ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರಕ್ಕೆ ಅಡಿಗಲ್ಲಿರಿಸಲಾಗಿದೆ. ‘…ಮಥುರಾ ಕಾಶೀ ಬಾಕಿ ಹೈ…’ ಎಂದಿದ್ದವರು ಇನ್ನು ಕೃಷ್ಣನ ಮಥುರೆಗೆ ಮತ್ತು ವಿಶ್ವನಾಥನ ವಾರಾಣಸಿಯತ್ತ ಮುಖ ಮಾಡಲಿದ್ದಾರೆ. ದ್ವೇಷ ವಿಧ್ವಂಸ ಇನ್ನು ಅತ್ತ ಮೈವೆತ್ತಿ ಪಯಣಿಸಲಿದೆ.


ಇದನ್ನೂ ಓದಿ; ಉರ್ದು ಭಾಷೆಯ ಖ್ಯಾತ ಕವಿ ’ರಾಹತ್ ಇಂದೋರಿ’ ನಿಧನ


ಬಾಬಾಸಾಹೇಬ ಅಂಬೇಡ್ಕರ್ ಅವರು ಕೇಳಿದ ರಾಮ-ಕೃಷ್ಣರ ಒಗಟುಗಳಿಗೆ ಉತ್ತರ ಹೇಳುವವರು ಇನ್ನೂ ಮುಂದೆ ಬರಬೇಕಿದೆ. ಈ ಸಂದರ್ಭದ ಕೃಷ್ಣ ಜನ್ಮಾಷ್ಟಮಿಯಲ್ಲಿ ಹಜರತ್ ಮೋಹಾನಿ ಎಂಬ ಕುತೂಹಲಕರ ಸಮರಸವಾದಿಯ ನೆನೆಯಬೇಕಿದೆ.

ಮಥುರಾದ ಶ್ರೀಕೃಷ್ಣ, ಲೆನಿನ್ನನ ಕಮ್ಯೂನಿಸ್ಟ್ ರಷ್ಯಾ ಹಾಗೂ ತಾನು ನಂಬಿದ್ದ ಇಸ್ಲಾಮ್ ಧರ್ಮವನ್ನು ಒಟ್ಟೊಟ್ಟಿಗೆ ಇಟ್ಟರೆ ಈ ಮೂರೂ ಸಂಗತಿಗಳ ನಡುವೆ ವಿರಸ ವೈರುಧ್ಯವನ್ನು ಕಲ್ಪಿಸುತ್ತದೆ ಇಂದು ನಾವು ಬದುಕಿರುವ ವಿಷಮ ಸಮಾಜ. ಆದರೆ ಇವುಗಳ ನಡುವೆ ಸರಸ ಸಮರಸವನ್ನು ಕಂಡ ವಿಚಿತ್ರ ನಿಷ್ಠುರ ವ್ಯಕ್ತಿ ಮೋಹಾನಿ. ಕೃಷ್ಣ, ಕಮ್ಯೂನಿಸಮ್ ಹಾಗೂ ಇಸ್ಲಾಮನ್ನು ಒಟ್ಟೊಟ್ಟಿಗೆ ಆರಾಧಿಸಿದವರು. ಹಜರತ್ ಮೋಹಾನಿ ಎಂದೇ ಹೆಸರಾಗಿದ್ದ ಇವರ ಅಸಲಿ ಹೆಸರು ಸೈಯದ್ ಫಜಲುಲ್ ಹಸನ್. ಉತ್ತರ ಪ್ರದೇಶದ ಉನ್ನಾವ ಜಿಲ್ಲೆಯ ಮೋಹನದಲ್ಲಿ ಹುಟ್ಟಿದ ಕಾರಣ ಮೋಹಾನಿ ಎಂದು ಕರೆದುಕೊಂಡರು.

1875ರಿಂದ 1951 ರ ನಡುವೆ ಜೀವಿಸಿದ್ದ ಈತ ಸ್ವಾತಂತ್ರ‍್ಯ ಹೋರಾಟಗಾರರು ಉತ್ಕೃಷ್ಟ ಉರ್ದು ಕವಿಯೂ ಆಗಿದ್ದರು. ಮೋಹಾನಿಯವರ ಕಾವ್ಯಪ್ರತಿಭೆಯನ್ನು ವಿಮರ್ಶಕರು- ಬರೆಹಗಾರರು ಪ್ರಶಂಸಿಸಿದ್ದಾರೆ. ತನ್ನ ಕಾಲಘಟ್ಟ ಎಬ್ಬಿಸಿದ್ದ ರಾಜಕೀಯ ತರಂಗಗಳಿಗೆ ಕಾವ್ಯ, ಪತ್ರಿಕೋದ್ಯಮ, ಕ್ರಾಂತಿ ಪಥಗಳ ಮೂಲಕ ಪ್ರತಿಕ್ರಿಯಿಸಿದ್ದರು ಮೋಹಾನಿ. ಕಾವ್ಯದಲ್ಲಿ ರಮ್ಯವಾದಿಯೂ ರಾಜಕಾರಣದಲ್ಲಿ ಕ್ರಾಂತಿವಾದಿಯೂ ಆಗಿದ್ದರು. ಅವರು ಬರೆದ ಮತ್ತು ಅವರ ಕುರಿತು ಬರೆದ ಪುಸ್ತಕಗಳು ನೂರಾರು.

ಮೋಹಾನಿಯವರು ಬಂಡುಕೋರರು. ಒಪ್ಪಿತ ಮೌಲ್ಯಗಳು ಮತ್ತು ಸಂಪ್ರದಾಯಗಳ ಚೌಕಟ್ಟನ್ನು ಮುರಿದು ಬದುಕಿದವರು. ರಾಜಕೀಯ ಮತ್ತು ಸಾಮಾಜಿಕ ವಾಸ್ತವಗಳನ್ನು ತಮ್ಮ ಕಾಲದ ಕಾವ್ಯಕ್ಕೆ ಎಳೆದುತಂದು ಅಳವಡಿಸಿಕೊಂಡಿದ್ದವರು. ಕಡು ನಿಷ್ಠುರಿಯಾಗಿದ್ದವರು. ರಾಜಿ ಮಾಡಿಕೊಳ್ಳುವುದು ಅವರ ಜಾಯಮಾನಕ್ಕೆ ಒಗ್ಗುತ್ತಿರಲಿಲ್ಲ. ಲೋಕಮಾನ್ಯ ಬಾಲಗಂಗಾಧರ ತಿಲಕರು ಹೋಮ್ ರೂಲ್ ಬೇಕು ಎಂದಾಗ ಸಂಪೂರ್ಣ ಸ್ವರಾಜ್ಯವೇ ಆಗಬೇಕು ಎಂದಿದ್ದ ಹಠವಾದಿ. ಆದರೆ ತಿಲಕರನ್ನು ಮೆಚ್ಚಿ ತಮ್ಮ ಪತ್ರಿಕೆಯಲ್ಲಿ ಕವಿತೆಗಳನ್ನು ಬರೆದಿದ್ದರು. ಗಾಂಧೀ ಮತ್ತು ಜಿನ್ನಾ ಇಬ್ಬರನ್ನೂ ವಿರೋಧಿಸುತ್ತಿದ್ದವರು. ದೇಶವಿಭಜನೆಯ ಕಡುವಿರೋಧಿ.

ಮಹಾತ್ಮಾ ಗಾಂಧೀಜಿ ಪ್ರತಿಪಾದಿಸಿದ ಸ್ವಾವಲಂಬನೆಯ ಸಿದ್ಧಾಂತದ ಕಟು ವಿಮರ್ಶಕರಾಗಿದ್ದರು. ಬಡಜನರ ವಿಮುಕ್ತಿಯು ಚರಕ ಸುತ್ತಿ ನೂಲು ತೆಗೆಯುವುದರಲ್ಲಿ ಅಡಗಿಲ್ಲ ಎಂದು ವಾದಿಸಿದ್ದರು. ವ್ಲಾದಿಮಿರ್ ಲೆನಿನ್ ನೇತೃತ್ವದ 1917ರ ರಷ್ಯನ್ ಕ್ರಾಂತಿಯಿಂದ ಪ್ರೇರಣೆ ಪಡೆದಿದ್ದರು. ಅವರು ಲೆನಿನ್‌ರನ್ನು ಭೇಟಿಯಾಗಿದ್ದಾಗಿ ಹೇಳಲಾಗುತ್ತದೆ. ಆದರೆ ಅದಕ್ಕೆ ಪುರಾವೆಗಳಿಲ್ಲ. ಆದರೆ ಸ್ಟಾಲಿನ್‌ರನ್ನು ಭೇಟಿಯಾಗಿ ಗೆರಿಲ್ಲಾ ಕದನ ತಂತ್ರಗಳ ಕುರಿತು ವಿಚಾರವಿನಿಮಯ ನಡೆಸಿದ್ದು ಖಚಿತಪಟ್ಟಿದೆ.

ಅವರು ಸಂವಿಧಾನ ರಚನಾ ಸಭೆಯ ಸದಸ್ಯರಾಗಿದ್ದರು ಕೂಡ. ಬಾಬಾಸಾಹೇಬ ಅಂಬೇಡ್ಕರ್ ಅವರೊಡನೆ ಒಡನಾಡಿದ್ದವರು. ಸಂವಿಧಾನದ ಅಂತಿಮ ಕರಡಿಗೆ ಸಹಿ ಹಾಕದೆ ಉಳಿದ ಏಕೈಕ ಸದಸ್ಯರಿವರು. ದೇಶವಿಭಜನೆಯ ಕುರಿತ ತಮ್ಮ ಅಸಮ್ಮತಿ ದಾಖಲಿಸಲು ತಮ್ಮ ಅಂಕಿತ ಹಾಕಲಿಲ್ಲ ಎಂದು ಕೆಲವರು ಹೇಳಿದರೆ ಮುಸಲ್ಮಾನರ ಹಿತ ಕಡೆಗಣಿಸಲಾಗಿದೆ ಎಂಬ ಕಾರಣಕ್ಕಾಗಿ ಸಹಿ ಹಾಕಲಿಲ್ಲ ಎಂಬ ಎರಡು ಬಗೆಯ ಅಭಿಪ್ರಾಯಗಳಿವೆ.

ಇಸ್ಲಾಮಿಕ್ ಚಿಂತನೆಯ ಪ್ರಕಾಂಡ ಪಂಡಿತರೂ ಗಾಢ ಧಾರ್ಮಿಕರೂ ಆಗಿದ್ದ ಮೋಹಾನಿ ಅಗಾಧ ರೊಮ್ಯಾಂಟಿಕ್ ಕವಿಯಾಗಿ ಹೊಮ್ಮಿದ್ದು ವಿಚಿತ್ರ ವಿದ್ಯಮಾನ. ಉರ್ದು ಸಾಹಿತ್ಯ ವಿಮರ್ಶಕ ಅಖ್ತರ್ ಪಯ್ಯಾಮಿ ಅವರ ಅಭಿಮತವಿದು. ಮೋಹಾನಿ ಜೀವನಶೈಲಿ ಅತಿ ಸರಳ. ಸಮಾಜವಾದೀ ತತ್ವಗಳಿಂದ ಪ್ರೇರಿತರಾಗಿದ್ದರು. ಮೋಹಾನಿ ಉರ್ದು ಪತ್ರಿಕೆ ನಡೆಸುತ್ತಿದ್ದರು. ಈಜಿಪ್ಟ್ನಲ್ಲಿ ಶಿಕ್ಷಣ ಕುರಿತು ಬ್ರಿಟಿಷರ ವಸಾಹತು ನೀತಿಯನ್ನು ಪ್ರಶ್ನಿಸಿದ ಲೇಖನವೊಂದನ್ನು ಅಚ್ಚು ಮಾಡಿದ್ದರು. ಭಾರೀ ಒತ್ತಡದ ನಡುವೆಯೂ ಲೇಖನ ಬರೆದವರ ಹೆಸರನ್ನು ಮೋಹಾನಿ ಬಿಟ್ಟುಕೊಡಲಿಲ್ಲ. ಲೇಖನದ ಎಲ್ಲ ಜವಾಬ್ದಾರಿಯನ್ನು ತಾವೇ ಹೊತ್ತರು. ಅವರ ಮೇಲೆ ಬ್ರಿಟಿಷ್ ಸರ್ಕಾರ ರಾಜದ್ರೋಹದ ಆಪಾದನೆ ಹೊರಿಸಿತು. ಕಠಿಣ ಕಾರಾಗಾರ ಸಜೆ ವಿಧಿಸಿತು. ದಿನಕ್ಕೊಂದು ಮಣ (37.3ಕೆ.ಜಿ) ಗೋಧಿ ಬೀಸಿ ಹಿಟ್ಟು ಮಾಡುವ ದೈಹಿಕ ಶ್ರಮದ ಕಠಿಣ ಶಿಕ್ಷೆ.

1920ರ ದಶಕ. ಕಾನ್ಪುರದಲ್ಲಿ ಭಾರತೀಯ ಕಮ್ಯೂನಿಸ್ಟ್ ಪಕ್ಷದ ಮೊಟ್ಟಮೊದಲ ಸಮ್ಮೇಳನ ಜರುಗಿತ್ತು. ಅದರ ಸಂಘಟಕ ಮತ್ತು ಸ್ವಾಗತ ಸಮಿತಿಯ ಅಧ್ಯಕ್ಷ ಖುದ್ದು ಮೋಹಾನಿಯೇ ಆಗಿದ್ದರು. ಇಂಕ್ವಿಲಾಬ್ ಜಿಂದಾಬಾದ್ (ಕ್ರಾಂತಿ ಚಿರಾಯುವಾಗಲಿ) ಎಂಬ ಘೋಷಣೆಯನ್ನು ಮೋಹಾನಿ ರೂಪಿಸಿದ್ದು ಇದೇ ಸಮ್ಮೇಳನದ ಸಂದರ್ಭದಲ್ಲಿ ಎನ್ನುವವರಿದ್ದಾರೆ. ಸೂಫೀ ವಿಶ್ವಾಸಿ ಮತ್ತು ಕಮ್ಯೂನಿಸ್ಟ್ ಮುಸ್ಲಿಮ್ ಎಂಬುದಾಗಿ ತಮ್ಮನ್ನು ಮೋಹಾನಿ ಬಣ್ಣಿಸಿಕೊಂಡಿದ್ದಾರೆ.

ಮುಸಲ್ಮಾನರ ಪವಿತ್ರ ಹಜ್ ಯಾತ್ರೆಯನ್ನು ಮೋಹಾನಿ ಹನ್ನೊಂದು ಬಾರಿ ಕೈಗೊಂಡಿದ್ದವರು. ಆದರೆ ಹಿಂದೂ ದೈವ ಕೃಷ್ಣನ ಕುರಿತು ಆಳದ ಆರಾಧನೆ ಪ್ರಕಟಿಸುವ ಪದ್ಯಗಳನ್ನು ಬರೆದಿದ್ದಾರೆ. ಕೃಷ್ಣ ಜನ್ಮಾಷ್ಟಮಿ ಆಚರಿಸಲು ಮಥುರೆಗೆ ಹೋಗುತ್ತಿದ್ದರು. ಜೈಲಿನಲ್ಲಿ ಗೋಧಿ ಬೀಸುತ್ತಲೇ ರಚಿಸಿದ ಕವಿತೆಗಳನ್ನು ಕಂಠಪಾಠ ಮಾಡಿ, ಬಿಡುಗಡೆಯ ನಂತರ ಬರೆದಿಡುತ್ತಿದ್ದ ಕವಿ ಇವರು. ರಾಜದ್ರೋಹದ ಅಪರಾಧಕ್ಕೆ ಸಜೆಯಾಗಿ ಪುಣೆಯ ಯರವಾಡ ಜೈಲಿನಲ್ಲಿ ಬಂಧಿಯಾಗಿ ಜನ್ಮಾಷ್ಟಮಿಯಂದು ಮಥುರೆಗೆ ಹೋಗಲು ಹಂಬಲಿಸುತ್ತ ಬರೆದ ಕವಿತೆಗಳೂ ಉಂಟು.

ಮೋಹಾನಿಯವರ ಕೃಷ್ಣಭಕ್ತಿಯ ಕೆಲ ಉರ್ದು ಮತ್ತು ಅವಧಿ ಭಾಷೆಯ ಕವಿತೆಗಳ ಸ್ಥೂಲ ಅನುವಾದ ಹೀಗಿದೆ:
1
ಎಂದೂ ಕಳೆಯದ ಇರುಳಿನ ವಿರಹ, ಬೆಟ್ಟದಷ್ಟು ಭಾರ
ಹತಭಾಗ್ಯರಾದ ಎಮ್ಮನು ತೊರೆದು ತೆರಳಿಹನು
ನಿರ್ದಯೀ ಶ್ಯಾಮ ಮತ್ತೊಂದು ಸೀಮೆಗೆ,
ನಾಡು ನಿರ್ಜನ. ಸರ್ವಸ್ವವನು ಕಿತ್ತೆಸೆದು ಕದವಿಟ್ಟು,
ಚಿಲಕವಿಕ್ಕಿ ಉಳಿಯಬಾರದೇಕೆ ಹಜರತ್ ನಾವು ಮನೆಯೊಳಗೆ?
2
ಬನವಾರಿಯ ವಿನಾ ನಿದ್ದೆ ನೆಮ್ಮದಿಗಳಿಲ್ಲ ಎನಗೆ ಎಂದು
ಯಾರಿಗೆ ಹೇಳಲಿ?
ಮುರಾರಿಯಿಲ್ಲದೆ ಕಂಬನಿಯ ಧಾರೆಗಳು ಎನ್ನ ಇರುಳುಗಳು.
ಏನ ಮಾಡಿದರೇನು, ಇನ್ನೂ ಶೂನ್ಯವೆನ್ನ ಮನ.
ಗಿರಿಧಾರಿಯಿಲ್ಲದೆ ಇಳಿಯಲೊಲ್ಲದು ನಿದಿರೆ ಕಣ್ಣುಗಳಿಗೆ.
ನೋಡು ಗೆಳೆಯಾ ಯಾರೂ ಗುರುತು ಹಿಡಿಯರು ಎಮ್ಮನು,
ಬಲುವಾಗಿ ಬಣ್ಣಗೆಟ್ಟಿದ್ದೇವೆ ಹಜರತ್,
ಬನವಾರಿಯ ಕಾಣದೆ.


ಇದನ್ನೂ ಓದಿ: ಹಿಂದೂಸ್ಥಾನ ಯಾರಪ್ಪನದೂ ಅಲ್ಲ: ರಾಹತ್ ಇಂದೋರಿ ಅವರ ಒಂದು ಗಜಲ್ ಓದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...