Homeನ್ಯಾಯ ಪಥಬಹುಜನ ಭಾರತ: ಕೃಷ್ಣನ ಮೋಹಿಸಿದ ಕಮ್ಯೂನಿಸ್ಟ್ ಮೌಲಾನಾ! - ಡಿ.ಉಮಾಪತಿ

ಬಹುಜನ ಭಾರತ: ಕೃಷ್ಣನ ಮೋಹಿಸಿದ ಕಮ್ಯೂನಿಸ್ಟ್ ಮೌಲಾನಾ! – ಡಿ.ಉಮಾಪತಿ

ಕಾವ್ಯದಲ್ಲಿ ರಮ್ಯವಾದಿಯೂ ರಾಜಕಾರಣದಲ್ಲಿ ಕ್ರಾಂತಿವಾದಿಯೂ ಆಗಿದ್ದರು ಮೋಹಾನಿ

- Advertisement -
- Advertisement -

ಈ ಅಂಕಣ ಬರೆಯಲು ಕುಳಿತಿರುವ ಹೊತ್ತಿನಲ್ಲಿ ಜನಸಮುದಾಯಗಳ ಕವಿ ರಾಹತ್ ಇಂದೋರಿ ತೀರಿ ಹೋಗಿದ್ದಾರೆ. ಆಳುವವರು ಕಾರುತ್ತಿರುವ ಕೋಮುದ್ವೇಷಕ್ಕೆ ಸಿಡಿಲಿನಂತಹ ಕಾವ್ಯದ ಜವಾಬು ನೀಡಿ ಸೆಡ್ಡು ಹೊಡೆದಿದ್ದವರು. ಪೌರತ್ವ ಕಸಿಯುವ ಹುನ್ನಾರದ ವಿರುದ್ಧ ಕೆರಳಿದ್ದರು. ಎಲ್ಲರ ನೆತ್ತರು ಕಲೆತು ಬೆರೆತಿದೆ ಈ ಮಣ್ಣಿನಲಿ, ಹಿಂದುಸ್ತಾನ ಯಾರಪ್ಪನ ಮನೆಯ ಆಸ್ತಿಯಲ್ಲ ಎಂದು ಸಿಡಿದಿದ್ದರು. ಉಸಿರು ನಿಂತ ಮೇಲೆ ಪಕ್ಕಾ ಪ್ರತ್ಯೇಕ ಗುರುತನೊಂದ ಬರೆಯಿರಿ, ನನ್ನ ಕಳೇಬರದ ಮೇಲೆ ನೆತ್ತರಿನಿಂದ ಹಿಂದುಸ್ತಾನಿಯೆಂದು ಬರೆಯಿರಿ ಎಂದು ದುಗುಡ ದುಮ್ಮಾನದಿಂದ ಪ್ರತಿರೋಧದ ಕಿಡಿ ಹಾರಿಸಿ ಹಾಡಿದ್ದರು. ಪ್ರತಿಭಟನೆಯ ಸಶಕ್ತ ದನಿಯಾಗಿದ್ದರು. ಮಣ್ಣು ಗಾಳಿ ಮಾತು ಅನ್ನ ಅರಿವೆ ಎಲ್ಲವನ್ನೂ ಹಿಂದು-ಮುಸ್ಲಿಮ್ ಆಗಿಸಿ ವಿಷ ಹಿಂಡುತ್ತಿರುವ ಫ್ಯಾಸಿಸಮ್‌ನ ದುಷ್ಟ ಕಳೆ ದೇಶವನ್ನೆಲ್ಲ ಸುತ್ತಿ ಆವರಿಸಿಕೊಂಡಿರುವ ಈ ದುರಿತ ದಿನಗಳಲ್ಲಿ ಇಂದೂರಿಯಂತಹ ದನಿ ನಮ್ಮ ನಡುವೆ ಇರುವುದು ಕಾಲದ ಅಗತ್ಯವಾಗಿತ್ತು. ಆದರೆ ಮರಣಕ್ಕೆ ಅಡ್ಡ ನಿಲ್ಲಲಹುದೇ? ಗತಿಸಿರುವ ಇಂದೋರಿ ಜೀವಿಸಿರುವ ಇಂದೋರಿಗಿಂತ ಪ್ರಭಾವಿ ಎಂದು ಬಗೆದು ಮುಂದೆ ಸಾಗಬೇಕಿದೆ.

ರಾಹತ್ ಇಂದೋರಿ

ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರಕ್ಕೆ ಅಡಿಗಲ್ಲಿರಿಸಲಾಗಿದೆ. ‘…ಮಥುರಾ ಕಾಶೀ ಬಾಕಿ ಹೈ…’ ಎಂದಿದ್ದವರು ಇನ್ನು ಕೃಷ್ಣನ ಮಥುರೆಗೆ ಮತ್ತು ವಿಶ್ವನಾಥನ ವಾರಾಣಸಿಯತ್ತ ಮುಖ ಮಾಡಲಿದ್ದಾರೆ. ದ್ವೇಷ ವಿಧ್ವಂಸ ಇನ್ನು ಅತ್ತ ಮೈವೆತ್ತಿ ಪಯಣಿಸಲಿದೆ.


ಇದನ್ನೂ ಓದಿ; ಉರ್ದು ಭಾಷೆಯ ಖ್ಯಾತ ಕವಿ ’ರಾಹತ್ ಇಂದೋರಿ’ ನಿಧನ


ಬಾಬಾಸಾಹೇಬ ಅಂಬೇಡ್ಕರ್ ಅವರು ಕೇಳಿದ ರಾಮ-ಕೃಷ್ಣರ ಒಗಟುಗಳಿಗೆ ಉತ್ತರ ಹೇಳುವವರು ಇನ್ನೂ ಮುಂದೆ ಬರಬೇಕಿದೆ. ಈ ಸಂದರ್ಭದ ಕೃಷ್ಣ ಜನ್ಮಾಷ್ಟಮಿಯಲ್ಲಿ ಹಜರತ್ ಮೋಹಾನಿ ಎಂಬ ಕುತೂಹಲಕರ ಸಮರಸವಾದಿಯ ನೆನೆಯಬೇಕಿದೆ.

ಮಥುರಾದ ಶ್ರೀಕೃಷ್ಣ, ಲೆನಿನ್ನನ ಕಮ್ಯೂನಿಸ್ಟ್ ರಷ್ಯಾ ಹಾಗೂ ತಾನು ನಂಬಿದ್ದ ಇಸ್ಲಾಮ್ ಧರ್ಮವನ್ನು ಒಟ್ಟೊಟ್ಟಿಗೆ ಇಟ್ಟರೆ ಈ ಮೂರೂ ಸಂಗತಿಗಳ ನಡುವೆ ವಿರಸ ವೈರುಧ್ಯವನ್ನು ಕಲ್ಪಿಸುತ್ತದೆ ಇಂದು ನಾವು ಬದುಕಿರುವ ವಿಷಮ ಸಮಾಜ. ಆದರೆ ಇವುಗಳ ನಡುವೆ ಸರಸ ಸಮರಸವನ್ನು ಕಂಡ ವಿಚಿತ್ರ ನಿಷ್ಠುರ ವ್ಯಕ್ತಿ ಮೋಹಾನಿ. ಕೃಷ್ಣ, ಕಮ್ಯೂನಿಸಮ್ ಹಾಗೂ ಇಸ್ಲಾಮನ್ನು ಒಟ್ಟೊಟ್ಟಿಗೆ ಆರಾಧಿಸಿದವರು. ಹಜರತ್ ಮೋಹಾನಿ ಎಂದೇ ಹೆಸರಾಗಿದ್ದ ಇವರ ಅಸಲಿ ಹೆಸರು ಸೈಯದ್ ಫಜಲುಲ್ ಹಸನ್. ಉತ್ತರ ಪ್ರದೇಶದ ಉನ್ನಾವ ಜಿಲ್ಲೆಯ ಮೋಹನದಲ್ಲಿ ಹುಟ್ಟಿದ ಕಾರಣ ಮೋಹಾನಿ ಎಂದು ಕರೆದುಕೊಂಡರು.

1875ರಿಂದ 1951 ರ ನಡುವೆ ಜೀವಿಸಿದ್ದ ಈತ ಸ್ವಾತಂತ್ರ‍್ಯ ಹೋರಾಟಗಾರರು ಉತ್ಕೃಷ್ಟ ಉರ್ದು ಕವಿಯೂ ಆಗಿದ್ದರು. ಮೋಹಾನಿಯವರ ಕಾವ್ಯಪ್ರತಿಭೆಯನ್ನು ವಿಮರ್ಶಕರು- ಬರೆಹಗಾರರು ಪ್ರಶಂಸಿಸಿದ್ದಾರೆ. ತನ್ನ ಕಾಲಘಟ್ಟ ಎಬ್ಬಿಸಿದ್ದ ರಾಜಕೀಯ ತರಂಗಗಳಿಗೆ ಕಾವ್ಯ, ಪತ್ರಿಕೋದ್ಯಮ, ಕ್ರಾಂತಿ ಪಥಗಳ ಮೂಲಕ ಪ್ರತಿಕ್ರಿಯಿಸಿದ್ದರು ಮೋಹಾನಿ. ಕಾವ್ಯದಲ್ಲಿ ರಮ್ಯವಾದಿಯೂ ರಾಜಕಾರಣದಲ್ಲಿ ಕ್ರಾಂತಿವಾದಿಯೂ ಆಗಿದ್ದರು. ಅವರು ಬರೆದ ಮತ್ತು ಅವರ ಕುರಿತು ಬರೆದ ಪುಸ್ತಕಗಳು ನೂರಾರು.

ಮೋಹಾನಿಯವರು ಬಂಡುಕೋರರು. ಒಪ್ಪಿತ ಮೌಲ್ಯಗಳು ಮತ್ತು ಸಂಪ್ರದಾಯಗಳ ಚೌಕಟ್ಟನ್ನು ಮುರಿದು ಬದುಕಿದವರು. ರಾಜಕೀಯ ಮತ್ತು ಸಾಮಾಜಿಕ ವಾಸ್ತವಗಳನ್ನು ತಮ್ಮ ಕಾಲದ ಕಾವ್ಯಕ್ಕೆ ಎಳೆದುತಂದು ಅಳವಡಿಸಿಕೊಂಡಿದ್ದವರು. ಕಡು ನಿಷ್ಠುರಿಯಾಗಿದ್ದವರು. ರಾಜಿ ಮಾಡಿಕೊಳ್ಳುವುದು ಅವರ ಜಾಯಮಾನಕ್ಕೆ ಒಗ್ಗುತ್ತಿರಲಿಲ್ಲ. ಲೋಕಮಾನ್ಯ ಬಾಲಗಂಗಾಧರ ತಿಲಕರು ಹೋಮ್ ರೂಲ್ ಬೇಕು ಎಂದಾಗ ಸಂಪೂರ್ಣ ಸ್ವರಾಜ್ಯವೇ ಆಗಬೇಕು ಎಂದಿದ್ದ ಹಠವಾದಿ. ಆದರೆ ತಿಲಕರನ್ನು ಮೆಚ್ಚಿ ತಮ್ಮ ಪತ್ರಿಕೆಯಲ್ಲಿ ಕವಿತೆಗಳನ್ನು ಬರೆದಿದ್ದರು. ಗಾಂಧೀ ಮತ್ತು ಜಿನ್ನಾ ಇಬ್ಬರನ್ನೂ ವಿರೋಧಿಸುತ್ತಿದ್ದವರು. ದೇಶವಿಭಜನೆಯ ಕಡುವಿರೋಧಿ.

ಮಹಾತ್ಮಾ ಗಾಂಧೀಜಿ ಪ್ರತಿಪಾದಿಸಿದ ಸ್ವಾವಲಂಬನೆಯ ಸಿದ್ಧಾಂತದ ಕಟು ವಿಮರ್ಶಕರಾಗಿದ್ದರು. ಬಡಜನರ ವಿಮುಕ್ತಿಯು ಚರಕ ಸುತ್ತಿ ನೂಲು ತೆಗೆಯುವುದರಲ್ಲಿ ಅಡಗಿಲ್ಲ ಎಂದು ವಾದಿಸಿದ್ದರು. ವ್ಲಾದಿಮಿರ್ ಲೆನಿನ್ ನೇತೃತ್ವದ 1917ರ ರಷ್ಯನ್ ಕ್ರಾಂತಿಯಿಂದ ಪ್ರೇರಣೆ ಪಡೆದಿದ್ದರು. ಅವರು ಲೆನಿನ್‌ರನ್ನು ಭೇಟಿಯಾಗಿದ್ದಾಗಿ ಹೇಳಲಾಗುತ್ತದೆ. ಆದರೆ ಅದಕ್ಕೆ ಪುರಾವೆಗಳಿಲ್ಲ. ಆದರೆ ಸ್ಟಾಲಿನ್‌ರನ್ನು ಭೇಟಿಯಾಗಿ ಗೆರಿಲ್ಲಾ ಕದನ ತಂತ್ರಗಳ ಕುರಿತು ವಿಚಾರವಿನಿಮಯ ನಡೆಸಿದ್ದು ಖಚಿತಪಟ್ಟಿದೆ.

ಅವರು ಸಂವಿಧಾನ ರಚನಾ ಸಭೆಯ ಸದಸ್ಯರಾಗಿದ್ದರು ಕೂಡ. ಬಾಬಾಸಾಹೇಬ ಅಂಬೇಡ್ಕರ್ ಅವರೊಡನೆ ಒಡನಾಡಿದ್ದವರು. ಸಂವಿಧಾನದ ಅಂತಿಮ ಕರಡಿಗೆ ಸಹಿ ಹಾಕದೆ ಉಳಿದ ಏಕೈಕ ಸದಸ್ಯರಿವರು. ದೇಶವಿಭಜನೆಯ ಕುರಿತ ತಮ್ಮ ಅಸಮ್ಮತಿ ದಾಖಲಿಸಲು ತಮ್ಮ ಅಂಕಿತ ಹಾಕಲಿಲ್ಲ ಎಂದು ಕೆಲವರು ಹೇಳಿದರೆ ಮುಸಲ್ಮಾನರ ಹಿತ ಕಡೆಗಣಿಸಲಾಗಿದೆ ಎಂಬ ಕಾರಣಕ್ಕಾಗಿ ಸಹಿ ಹಾಕಲಿಲ್ಲ ಎಂಬ ಎರಡು ಬಗೆಯ ಅಭಿಪ್ರಾಯಗಳಿವೆ.

ಇಸ್ಲಾಮಿಕ್ ಚಿಂತನೆಯ ಪ್ರಕಾಂಡ ಪಂಡಿತರೂ ಗಾಢ ಧಾರ್ಮಿಕರೂ ಆಗಿದ್ದ ಮೋಹಾನಿ ಅಗಾಧ ರೊಮ್ಯಾಂಟಿಕ್ ಕವಿಯಾಗಿ ಹೊಮ್ಮಿದ್ದು ವಿಚಿತ್ರ ವಿದ್ಯಮಾನ. ಉರ್ದು ಸಾಹಿತ್ಯ ವಿಮರ್ಶಕ ಅಖ್ತರ್ ಪಯ್ಯಾಮಿ ಅವರ ಅಭಿಮತವಿದು. ಮೋಹಾನಿ ಜೀವನಶೈಲಿ ಅತಿ ಸರಳ. ಸಮಾಜವಾದೀ ತತ್ವಗಳಿಂದ ಪ್ರೇರಿತರಾಗಿದ್ದರು. ಮೋಹಾನಿ ಉರ್ದು ಪತ್ರಿಕೆ ನಡೆಸುತ್ತಿದ್ದರು. ಈಜಿಪ್ಟ್ನಲ್ಲಿ ಶಿಕ್ಷಣ ಕುರಿತು ಬ್ರಿಟಿಷರ ವಸಾಹತು ನೀತಿಯನ್ನು ಪ್ರಶ್ನಿಸಿದ ಲೇಖನವೊಂದನ್ನು ಅಚ್ಚು ಮಾಡಿದ್ದರು. ಭಾರೀ ಒತ್ತಡದ ನಡುವೆಯೂ ಲೇಖನ ಬರೆದವರ ಹೆಸರನ್ನು ಮೋಹಾನಿ ಬಿಟ್ಟುಕೊಡಲಿಲ್ಲ. ಲೇಖನದ ಎಲ್ಲ ಜವಾಬ್ದಾರಿಯನ್ನು ತಾವೇ ಹೊತ್ತರು. ಅವರ ಮೇಲೆ ಬ್ರಿಟಿಷ್ ಸರ್ಕಾರ ರಾಜದ್ರೋಹದ ಆಪಾದನೆ ಹೊರಿಸಿತು. ಕಠಿಣ ಕಾರಾಗಾರ ಸಜೆ ವಿಧಿಸಿತು. ದಿನಕ್ಕೊಂದು ಮಣ (37.3ಕೆ.ಜಿ) ಗೋಧಿ ಬೀಸಿ ಹಿಟ್ಟು ಮಾಡುವ ದೈಹಿಕ ಶ್ರಮದ ಕಠಿಣ ಶಿಕ್ಷೆ.

1920ರ ದಶಕ. ಕಾನ್ಪುರದಲ್ಲಿ ಭಾರತೀಯ ಕಮ್ಯೂನಿಸ್ಟ್ ಪಕ್ಷದ ಮೊಟ್ಟಮೊದಲ ಸಮ್ಮೇಳನ ಜರುಗಿತ್ತು. ಅದರ ಸಂಘಟಕ ಮತ್ತು ಸ್ವಾಗತ ಸಮಿತಿಯ ಅಧ್ಯಕ್ಷ ಖುದ್ದು ಮೋಹಾನಿಯೇ ಆಗಿದ್ದರು. ಇಂಕ್ವಿಲಾಬ್ ಜಿಂದಾಬಾದ್ (ಕ್ರಾಂತಿ ಚಿರಾಯುವಾಗಲಿ) ಎಂಬ ಘೋಷಣೆಯನ್ನು ಮೋಹಾನಿ ರೂಪಿಸಿದ್ದು ಇದೇ ಸಮ್ಮೇಳನದ ಸಂದರ್ಭದಲ್ಲಿ ಎನ್ನುವವರಿದ್ದಾರೆ. ಸೂಫೀ ವಿಶ್ವಾಸಿ ಮತ್ತು ಕಮ್ಯೂನಿಸ್ಟ್ ಮುಸ್ಲಿಮ್ ಎಂಬುದಾಗಿ ತಮ್ಮನ್ನು ಮೋಹಾನಿ ಬಣ್ಣಿಸಿಕೊಂಡಿದ್ದಾರೆ.

ಮುಸಲ್ಮಾನರ ಪವಿತ್ರ ಹಜ್ ಯಾತ್ರೆಯನ್ನು ಮೋಹಾನಿ ಹನ್ನೊಂದು ಬಾರಿ ಕೈಗೊಂಡಿದ್ದವರು. ಆದರೆ ಹಿಂದೂ ದೈವ ಕೃಷ್ಣನ ಕುರಿತು ಆಳದ ಆರಾಧನೆ ಪ್ರಕಟಿಸುವ ಪದ್ಯಗಳನ್ನು ಬರೆದಿದ್ದಾರೆ. ಕೃಷ್ಣ ಜನ್ಮಾಷ್ಟಮಿ ಆಚರಿಸಲು ಮಥುರೆಗೆ ಹೋಗುತ್ತಿದ್ದರು. ಜೈಲಿನಲ್ಲಿ ಗೋಧಿ ಬೀಸುತ್ತಲೇ ರಚಿಸಿದ ಕವಿತೆಗಳನ್ನು ಕಂಠಪಾಠ ಮಾಡಿ, ಬಿಡುಗಡೆಯ ನಂತರ ಬರೆದಿಡುತ್ತಿದ್ದ ಕವಿ ಇವರು. ರಾಜದ್ರೋಹದ ಅಪರಾಧಕ್ಕೆ ಸಜೆಯಾಗಿ ಪುಣೆಯ ಯರವಾಡ ಜೈಲಿನಲ್ಲಿ ಬಂಧಿಯಾಗಿ ಜನ್ಮಾಷ್ಟಮಿಯಂದು ಮಥುರೆಗೆ ಹೋಗಲು ಹಂಬಲಿಸುತ್ತ ಬರೆದ ಕವಿತೆಗಳೂ ಉಂಟು.

ಮೋಹಾನಿಯವರ ಕೃಷ್ಣಭಕ್ತಿಯ ಕೆಲ ಉರ್ದು ಮತ್ತು ಅವಧಿ ಭಾಷೆಯ ಕವಿತೆಗಳ ಸ್ಥೂಲ ಅನುವಾದ ಹೀಗಿದೆ:
1
ಎಂದೂ ಕಳೆಯದ ಇರುಳಿನ ವಿರಹ, ಬೆಟ್ಟದಷ್ಟು ಭಾರ
ಹತಭಾಗ್ಯರಾದ ಎಮ್ಮನು ತೊರೆದು ತೆರಳಿಹನು
ನಿರ್ದಯೀ ಶ್ಯಾಮ ಮತ್ತೊಂದು ಸೀಮೆಗೆ,
ನಾಡು ನಿರ್ಜನ. ಸರ್ವಸ್ವವನು ಕಿತ್ತೆಸೆದು ಕದವಿಟ್ಟು,
ಚಿಲಕವಿಕ್ಕಿ ಉಳಿಯಬಾರದೇಕೆ ಹಜರತ್ ನಾವು ಮನೆಯೊಳಗೆ?
2
ಬನವಾರಿಯ ವಿನಾ ನಿದ್ದೆ ನೆಮ್ಮದಿಗಳಿಲ್ಲ ಎನಗೆ ಎಂದು
ಯಾರಿಗೆ ಹೇಳಲಿ?
ಮುರಾರಿಯಿಲ್ಲದೆ ಕಂಬನಿಯ ಧಾರೆಗಳು ಎನ್ನ ಇರುಳುಗಳು.
ಏನ ಮಾಡಿದರೇನು, ಇನ್ನೂ ಶೂನ್ಯವೆನ್ನ ಮನ.
ಗಿರಿಧಾರಿಯಿಲ್ಲದೆ ಇಳಿಯಲೊಲ್ಲದು ನಿದಿರೆ ಕಣ್ಣುಗಳಿಗೆ.
ನೋಡು ಗೆಳೆಯಾ ಯಾರೂ ಗುರುತು ಹಿಡಿಯರು ಎಮ್ಮನು,
ಬಲುವಾಗಿ ಬಣ್ಣಗೆಟ್ಟಿದ್ದೇವೆ ಹಜರತ್,
ಬನವಾರಿಯ ಕಾಣದೆ.


ಇದನ್ನೂ ಓದಿ: ಹಿಂದೂಸ್ಥಾನ ಯಾರಪ್ಪನದೂ ಅಲ್ಲ: ರಾಹತ್ ಇಂದೋರಿ ಅವರ ಒಂದು ಗಜಲ್ ಓದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...