Homeಚಳವಳಿದಲಿತರ ಪಾದಸ್ಪರ್ಶದಿಂದ ಬಸವನಗುಡಿ ಶಾಪ ವಿಮುಕ್ತಿಯಾಗಿದೆ: ಮಾವಳ್ಳಿ ಶಂಕರ್

ದಲಿತರ ಪಾದಸ್ಪರ್ಶದಿಂದ ಬಸವನಗುಡಿ ಶಾಪ ವಿಮುಕ್ತಿಯಾಗಿದೆ: ಮಾವಳ್ಳಿ ಶಂಕರ್

ಅಮಿತ್ ಶಾ ಚರಿತ್ರೆ ಹೊಸದಾಗಿ ಬರೆಯುತ್ತೇವೆ ಎನ್ನುತ್ತಾರೆ. ನೀವೇನು ಚರಿತ್ರೆ ಬರೆಯುವುದು? ಸಿಂಹಗಳ ಚರಿತ್ರೆಯನ್ನು ಸಿಂಹಗಳೇ ಬರೆಯುತ್ತೇವೆ. ನರಿಗಳಲ್ಲ...

- Advertisement -
- Advertisement -

ಬಸವನಗುಡಿಗೆ ತಟ್ಟಿದ್ದ ಶಾಪ ನಿಮ್ಮ ಪಾದಗಳ ಸ್ಪರ್ಶದಿಂದ ಮುಕ್ತಿಯಾಗಿದೆ. ಈ ದೇಶವನ್ನು ನಾವು ಕಟ್ಟಿದ್ದೇವೆ. ಅಶ್ವಿನಿ ಎಂಬ ಹೆಣ್ಣು ಮಗಳು ವಿಶ್ವಸಂಸ್ಥೆಗೆ ಹೋಗಿದ್ದಾಳೆ. ಬಾಬಾ ಸಾಹೇಬರು ಭೌತಿಕವಾಗಿ ಇಲ್ಲ. ಆದರೆ ಸಂವಿಧಾನದ ಮೂಲಕ ಅವರು ಜೀವಂತವಾಗಿದ್ದಾರೆ. ಅಂತಹ ಸಂವಿಧಾನವನ್ನು ರಕ್ಷಣೆ ಮಾಡಬೇಕಾಗಿರುವುದು ನಮ್ಮ ಹೊಣೆ ಎಂದು ದಲಿತ ಮುಖಂಡರಾದ ಮಾವಳ್ಳಿ ಶಂಕರ್ ಅಭಿಪ್ರಾಯಪಟ್ಟರು.

ಬುದ್ಧನ ಕ್ರಾಂತಿಯನ್ನು ಪುಷ್ಯಶುಂಗ ಕುಟಿಲ ಬುದ್ದಿಯಿಂದ ಪ್ರತಿ ಕ್ರಾಂತಿ ಮೂಲಕ ತಡೆದು, ಬುದ್ದರನ್ನೇ ದೇಶದಿಂದ ಓಡಿಸಿದನು. ಆದರೆ ಅಂಬೇಡ್ಕರ್ ಬುದ್ಧನನ್ನು ವಾಪಸ್ ತಂದರು. ಆದರೆ ಮನುವಾದಿಗಳು ಈಗ ಭೂತಚೇಷ್ಟೇ ಮತ್ತೆ ಮಾಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕಾಶ್ಮೀರ್ ಫೈಲ್ಸ್ ಎನ್ನುತ್ತಾರೆ. ಇಲ್ಲಿ ದಲಿತ್ ಫೈಲ್ಸ್ ಇಲ್ಲಿದೆ ನೋಡಿ. ಬಿಲ್ಕಿಸ್ ಬಾನೋ ಫೈಲ್ಸ್ ಎಲ್ಲಿಗೆ ಹೋಯಿತಪ್ಪ? ಕಾಂಗನಾ ರಾಣವತ್ ಗೆ ಜೆಡ್ ಪ್ಲಸ್ ಸೆಕ್ಯುರಿಟಿ, ನಮಗೆ ರಕ್ಷಣೆ ಇಲ್ಲ. ಕಾಶ್ಮೀರ್ ಫೈಲ್ಸ್ ಎನ್ನುತ್ತೀರಾ? ಎಲ್ಲಿ ನಮ್ಮ ಕಂಪಾಲಪಲ್ಲಿ ಫೈಲ್ಸ್, ಖೈರ್ಲಾಂಜಿ ದಲಿತ ಫೈಲ್ಸ್ ಎಂದು ಪ್ರಶ್ನಿಸಿದರು.

ಕುವೆಂಪು ಹೇಳುತ್ತಿದ್ದರು, ನಾವು ಹಿಂದೂ ಅಲ್ಲ, ಹಿಂದೂ ಅಲ್ಲ ಎನ್ನುತ್ತಿದ್ದರು. ನೀವು ಏನು ಹೇಳುತ್ತೀರಿ? ಹಿಂದೂ ಧರ್ಮದ ಹೆಸರಿನಲ್ಲಿ ನಿಮ್ಮ ತಿನ್ನುವ ಆಹಾರವನ್ನು ಅವರು ನಿರ್ಧಾರ ಮಾಡುತ್ತಿದ್ದಾರೆ ಇದು ತಪ್ಪಬೇಕು ಎಂದರು.

ಗೋಹತ್ಯೆ ನಿಷೇಧ ಮಾಡುತ್ತೇವೆ ಅನ್ನುತ್ತಾರೆ ನರೇಂದ್ರ ಮೋದಿಯವರು. ಏನು ಮೋದಿ ಮನೆಯಲ್ಲಿ, ಬೊಮ್ಮಾಯಿ ಮನೆಯಲ್ಲಿ ದನ ಸಾಕಿಕೊಂಡಿದ್ದೀರಾ? ನಮ್ಮ ದಲಿತರ, ರೈತರ ಮೇಲೆ ನಿಮ್ಮ ಪ್ರಹಾರವನ್ನು ಒಪ್ಪುವುದಿಲ್ಲ ಎಂದರು.

ರಾಜಸ್ಥಾನದಲ್ಲಿ ದಲಿತ ಮಗು ನೀರು ಕುಡಿದಿದ್ದಕ್ಕೆ ಕೊಂದರಿ? ಬಿಲ್ಕಿಸ್ ಬಾನೋ ಅತ್ಯಾಚಾರ ಮಾಡಿ, ಅವರ ಮಗುವನ್ನು ಕೊಂದಿದ್ದೀರಿ. ಆದರೆ ನೀವು ಎಷ್ಟೇ ದಾಳಿ ಮಾಡಿದರೂ ಸಹ ನಾವು ಎದ್ದು ಬರುತ್ತೇವೆ. ನಾವು ಬಾಬಾ ಸಾಹೇಬರ ಕುಡಿಗಳು ಎಂದು ಗುಡುಗಿದರು.

ನಾವು ದೇಶದ್ರೋಹಿಗಳಾಗಿಲ್ಲ, ಬಂದೂಕು ಹಿಡಿದಿಲ್ಲ. ಯಾರನ್ನು ತುಳಿದಿಲ್ಲ. ಆದರೆ ಈ RSS ನವರು ಬಂದೂಕು ಹಿಡಿದಿದ್ದಾರೆ. ಈ ಶನಿಸಂತಾನವನ್ನು ಮುಗಿಸಬೇಕಾಗಿದೆ. ನಾವು ಏಕಲವ್ಯನ ವಂಶಸ್ಥರು, ಹೆಬ್ಬರಳನ್ನು ಕಿತ್ತುಕೊಂಡರೂ ಸಹ ನಾವು ಮತ್ತೆ ಮತ್ತೆ ಬಿಲ್ಲು ಹಿಡಿಯುತ್ತೇವೆ. ನಾವು ದೇಶವನ್ನು ಕಟ್ಟಿದವರು. ನೀಲಿಯ ದಂಡು ಬೆಂಗಳೂರಿಗೆ ಬಂದಿದೆ ಎಂದರು.

ಇಡಬ್ಲೂಎಸ್ ಮೀಸಲಾತಿ ಹತ್ತು ಪರ್ಸೆಂಟ್ ಕೊಟ್ಟಿದ್ದೀರಿ. ಅಂದರೆ ಮೀಸಲಾತಿ ನಿಮ್ಮ ಅಪ್ಪನದ್ದಾ? ನಾವು ಮೋದಿಯನ್ನು ಬೈಯೋದ್ದಲ್ಲ, ಬಿಜೆಪಿ ಸಂಘಪರಿವಾರದ ಗುಲಾಮಗಿರಿಯನ್ನು ಮಾಡುತ್ತಿರುವ ದಲಿತ ಎಂಪಿಗಳನ್ನು ಬೈಯ್ಯಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅಮಿತ್ ಶಾ ಚರಿತ್ರೆ ಹೊಸದಾಗಿ ಬರೆಯುತ್ತೇವೆ ಎನ್ನುತ್ತಾರೆ. ಮುಸಲ್ಮಾನರ ಬೂತ ತೋರುಸುತ್ತಿದ್ದಾರೆ. ಅಮಿತ್ ಶಾರವರೆ ನೀವೇನು ಚರಿತ್ರೆ ಬರೆಯುವುದು? ಸಿಂಹಗಳ ಚರಿತ್ರೆಯನ್ನು ಸಿಂಹಗಳೇ ಬರೆಯುತ್ತೇವೆ. ನರಿಗಳು ಬರೆಯಬೇಕಿಲ್ಲ ಎಂದು ವ್ಯಂಗ್ಯವಾಡಿದರು.

ಇದನ್ನೂ ಓದಿ; ಮಹಿಳೆಯರ ಹಕ್ಕುಗಳಿಗಾಗಿ ರಾಜೀನಾಮೆ ನೀಡಿದ ಏಕೈಕ ನಾಯಕ ಅಂಬೇಡ್ಕರ್: ನಾಗಮೋಹನ್ ದಾಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...