Homeಚಳವಳಿದಲಿತರ ಪಾದಸ್ಪರ್ಶದಿಂದ ಬಸವನಗುಡಿ ಶಾಪ ವಿಮುಕ್ತಿಯಾಗಿದೆ: ಮಾವಳ್ಳಿ ಶಂಕರ್

ದಲಿತರ ಪಾದಸ್ಪರ್ಶದಿಂದ ಬಸವನಗುಡಿ ಶಾಪ ವಿಮುಕ್ತಿಯಾಗಿದೆ: ಮಾವಳ್ಳಿ ಶಂಕರ್

ಅಮಿತ್ ಶಾ ಚರಿತ್ರೆ ಹೊಸದಾಗಿ ಬರೆಯುತ್ತೇವೆ ಎನ್ನುತ್ತಾರೆ. ನೀವೇನು ಚರಿತ್ರೆ ಬರೆಯುವುದು? ಸಿಂಹಗಳ ಚರಿತ್ರೆಯನ್ನು ಸಿಂಹಗಳೇ ಬರೆಯುತ್ತೇವೆ. ನರಿಗಳಲ್ಲ...

- Advertisement -
- Advertisement -

ಬಸವನಗುಡಿಗೆ ತಟ್ಟಿದ್ದ ಶಾಪ ನಿಮ್ಮ ಪಾದಗಳ ಸ್ಪರ್ಶದಿಂದ ಮುಕ್ತಿಯಾಗಿದೆ. ಈ ದೇಶವನ್ನು ನಾವು ಕಟ್ಟಿದ್ದೇವೆ. ಅಶ್ವಿನಿ ಎಂಬ ಹೆಣ್ಣು ಮಗಳು ವಿಶ್ವಸಂಸ್ಥೆಗೆ ಹೋಗಿದ್ದಾಳೆ. ಬಾಬಾ ಸಾಹೇಬರು ಭೌತಿಕವಾಗಿ ಇಲ್ಲ. ಆದರೆ ಸಂವಿಧಾನದ ಮೂಲಕ ಅವರು ಜೀವಂತವಾಗಿದ್ದಾರೆ. ಅಂತಹ ಸಂವಿಧಾನವನ್ನು ರಕ್ಷಣೆ ಮಾಡಬೇಕಾಗಿರುವುದು ನಮ್ಮ ಹೊಣೆ ಎಂದು ದಲಿತ ಮುಖಂಡರಾದ ಮಾವಳ್ಳಿ ಶಂಕರ್ ಅಭಿಪ್ರಾಯಪಟ್ಟರು.

ಬುದ್ಧನ ಕ್ರಾಂತಿಯನ್ನು ಪುಷ್ಯಶುಂಗ ಕುಟಿಲ ಬುದ್ದಿಯಿಂದ ಪ್ರತಿ ಕ್ರಾಂತಿ ಮೂಲಕ ತಡೆದು, ಬುದ್ದರನ್ನೇ ದೇಶದಿಂದ ಓಡಿಸಿದನು. ಆದರೆ ಅಂಬೇಡ್ಕರ್ ಬುದ್ಧನನ್ನು ವಾಪಸ್ ತಂದರು. ಆದರೆ ಮನುವಾದಿಗಳು ಈಗ ಭೂತಚೇಷ್ಟೇ ಮತ್ತೆ ಮಾಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕಾಶ್ಮೀರ್ ಫೈಲ್ಸ್ ಎನ್ನುತ್ತಾರೆ. ಇಲ್ಲಿ ದಲಿತ್ ಫೈಲ್ಸ್ ಇಲ್ಲಿದೆ ನೋಡಿ. ಬಿಲ್ಕಿಸ್ ಬಾನೋ ಫೈಲ್ಸ್ ಎಲ್ಲಿಗೆ ಹೋಯಿತಪ್ಪ? ಕಾಂಗನಾ ರಾಣವತ್ ಗೆ ಜೆಡ್ ಪ್ಲಸ್ ಸೆಕ್ಯುರಿಟಿ, ನಮಗೆ ರಕ್ಷಣೆ ಇಲ್ಲ. ಕಾಶ್ಮೀರ್ ಫೈಲ್ಸ್ ಎನ್ನುತ್ತೀರಾ? ಎಲ್ಲಿ ನಮ್ಮ ಕಂಪಾಲಪಲ್ಲಿ ಫೈಲ್ಸ್, ಖೈರ್ಲಾಂಜಿ ದಲಿತ ಫೈಲ್ಸ್ ಎಂದು ಪ್ರಶ್ನಿಸಿದರು.

ಕುವೆಂಪು ಹೇಳುತ್ತಿದ್ದರು, ನಾವು ಹಿಂದೂ ಅಲ್ಲ, ಹಿಂದೂ ಅಲ್ಲ ಎನ್ನುತ್ತಿದ್ದರು. ನೀವು ಏನು ಹೇಳುತ್ತೀರಿ? ಹಿಂದೂ ಧರ್ಮದ ಹೆಸರಿನಲ್ಲಿ ನಿಮ್ಮ ತಿನ್ನುವ ಆಹಾರವನ್ನು ಅವರು ನಿರ್ಧಾರ ಮಾಡುತ್ತಿದ್ದಾರೆ ಇದು ತಪ್ಪಬೇಕು ಎಂದರು.

ಗೋಹತ್ಯೆ ನಿಷೇಧ ಮಾಡುತ್ತೇವೆ ಅನ್ನುತ್ತಾರೆ ನರೇಂದ್ರ ಮೋದಿಯವರು. ಏನು ಮೋದಿ ಮನೆಯಲ್ಲಿ, ಬೊಮ್ಮಾಯಿ ಮನೆಯಲ್ಲಿ ದನ ಸಾಕಿಕೊಂಡಿದ್ದೀರಾ? ನಮ್ಮ ದಲಿತರ, ರೈತರ ಮೇಲೆ ನಿಮ್ಮ ಪ್ರಹಾರವನ್ನು ಒಪ್ಪುವುದಿಲ್ಲ ಎಂದರು.

ರಾಜಸ್ಥಾನದಲ್ಲಿ ದಲಿತ ಮಗು ನೀರು ಕುಡಿದಿದ್ದಕ್ಕೆ ಕೊಂದರಿ? ಬಿಲ್ಕಿಸ್ ಬಾನೋ ಅತ್ಯಾಚಾರ ಮಾಡಿ, ಅವರ ಮಗುವನ್ನು ಕೊಂದಿದ್ದೀರಿ. ಆದರೆ ನೀವು ಎಷ್ಟೇ ದಾಳಿ ಮಾಡಿದರೂ ಸಹ ನಾವು ಎದ್ದು ಬರುತ್ತೇವೆ. ನಾವು ಬಾಬಾ ಸಾಹೇಬರ ಕುಡಿಗಳು ಎಂದು ಗುಡುಗಿದರು.

ನಾವು ದೇಶದ್ರೋಹಿಗಳಾಗಿಲ್ಲ, ಬಂದೂಕು ಹಿಡಿದಿಲ್ಲ. ಯಾರನ್ನು ತುಳಿದಿಲ್ಲ. ಆದರೆ ಈ RSS ನವರು ಬಂದೂಕು ಹಿಡಿದಿದ್ದಾರೆ. ಈ ಶನಿಸಂತಾನವನ್ನು ಮುಗಿಸಬೇಕಾಗಿದೆ. ನಾವು ಏಕಲವ್ಯನ ವಂಶಸ್ಥರು, ಹೆಬ್ಬರಳನ್ನು ಕಿತ್ತುಕೊಂಡರೂ ಸಹ ನಾವು ಮತ್ತೆ ಮತ್ತೆ ಬಿಲ್ಲು ಹಿಡಿಯುತ್ತೇವೆ. ನಾವು ದೇಶವನ್ನು ಕಟ್ಟಿದವರು. ನೀಲಿಯ ದಂಡು ಬೆಂಗಳೂರಿಗೆ ಬಂದಿದೆ ಎಂದರು.

ಇಡಬ್ಲೂಎಸ್ ಮೀಸಲಾತಿ ಹತ್ತು ಪರ್ಸೆಂಟ್ ಕೊಟ್ಟಿದ್ದೀರಿ. ಅಂದರೆ ಮೀಸಲಾತಿ ನಿಮ್ಮ ಅಪ್ಪನದ್ದಾ? ನಾವು ಮೋದಿಯನ್ನು ಬೈಯೋದ್ದಲ್ಲ, ಬಿಜೆಪಿ ಸಂಘಪರಿವಾರದ ಗುಲಾಮಗಿರಿಯನ್ನು ಮಾಡುತ್ತಿರುವ ದಲಿತ ಎಂಪಿಗಳನ್ನು ಬೈಯ್ಯಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅಮಿತ್ ಶಾ ಚರಿತ್ರೆ ಹೊಸದಾಗಿ ಬರೆಯುತ್ತೇವೆ ಎನ್ನುತ್ತಾರೆ. ಮುಸಲ್ಮಾನರ ಬೂತ ತೋರುಸುತ್ತಿದ್ದಾರೆ. ಅಮಿತ್ ಶಾರವರೆ ನೀವೇನು ಚರಿತ್ರೆ ಬರೆಯುವುದು? ಸಿಂಹಗಳ ಚರಿತ್ರೆಯನ್ನು ಸಿಂಹಗಳೇ ಬರೆಯುತ್ತೇವೆ. ನರಿಗಳು ಬರೆಯಬೇಕಿಲ್ಲ ಎಂದು ವ್ಯಂಗ್ಯವಾಡಿದರು.

ಇದನ್ನೂ ಓದಿ; ಮಹಿಳೆಯರ ಹಕ್ಕುಗಳಿಗಾಗಿ ರಾಜೀನಾಮೆ ನೀಡಿದ ಏಕೈಕ ನಾಯಕ ಅಂಬೇಡ್ಕರ್: ನಾಗಮೋಹನ್ ದಾಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...