Homeಚಳವಳಿದಲಿತರ ಪಾದಸ್ಪರ್ಶದಿಂದ ಬಸವನಗುಡಿ ಶಾಪ ವಿಮುಕ್ತಿಯಾಗಿದೆ: ಮಾವಳ್ಳಿ ಶಂಕರ್

ದಲಿತರ ಪಾದಸ್ಪರ್ಶದಿಂದ ಬಸವನಗುಡಿ ಶಾಪ ವಿಮುಕ್ತಿಯಾಗಿದೆ: ಮಾವಳ್ಳಿ ಶಂಕರ್

ಅಮಿತ್ ಶಾ ಚರಿತ್ರೆ ಹೊಸದಾಗಿ ಬರೆಯುತ್ತೇವೆ ಎನ್ನುತ್ತಾರೆ. ನೀವೇನು ಚರಿತ್ರೆ ಬರೆಯುವುದು? ಸಿಂಹಗಳ ಚರಿತ್ರೆಯನ್ನು ಸಿಂಹಗಳೇ ಬರೆಯುತ್ತೇವೆ. ನರಿಗಳಲ್ಲ...

- Advertisement -
- Advertisement -

ಬಸವನಗುಡಿಗೆ ತಟ್ಟಿದ್ದ ಶಾಪ ನಿಮ್ಮ ಪಾದಗಳ ಸ್ಪರ್ಶದಿಂದ ಮುಕ್ತಿಯಾಗಿದೆ. ಈ ದೇಶವನ್ನು ನಾವು ಕಟ್ಟಿದ್ದೇವೆ. ಅಶ್ವಿನಿ ಎಂಬ ಹೆಣ್ಣು ಮಗಳು ವಿಶ್ವಸಂಸ್ಥೆಗೆ ಹೋಗಿದ್ದಾಳೆ. ಬಾಬಾ ಸಾಹೇಬರು ಭೌತಿಕವಾಗಿ ಇಲ್ಲ. ಆದರೆ ಸಂವಿಧಾನದ ಮೂಲಕ ಅವರು ಜೀವಂತವಾಗಿದ್ದಾರೆ. ಅಂತಹ ಸಂವಿಧಾನವನ್ನು ರಕ್ಷಣೆ ಮಾಡಬೇಕಾಗಿರುವುದು ನಮ್ಮ ಹೊಣೆ ಎಂದು ದಲಿತ ಮುಖಂಡರಾದ ಮಾವಳ್ಳಿ ಶಂಕರ್ ಅಭಿಪ್ರಾಯಪಟ್ಟರು.

ಬುದ್ಧನ ಕ್ರಾಂತಿಯನ್ನು ಪುಷ್ಯಶುಂಗ ಕುಟಿಲ ಬುದ್ದಿಯಿಂದ ಪ್ರತಿ ಕ್ರಾಂತಿ ಮೂಲಕ ತಡೆದು, ಬುದ್ದರನ್ನೇ ದೇಶದಿಂದ ಓಡಿಸಿದನು. ಆದರೆ ಅಂಬೇಡ್ಕರ್ ಬುದ್ಧನನ್ನು ವಾಪಸ್ ತಂದರು. ಆದರೆ ಮನುವಾದಿಗಳು ಈಗ ಭೂತಚೇಷ್ಟೇ ಮತ್ತೆ ಮಾಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕಾಶ್ಮೀರ್ ಫೈಲ್ಸ್ ಎನ್ನುತ್ತಾರೆ. ಇಲ್ಲಿ ದಲಿತ್ ಫೈಲ್ಸ್ ಇಲ್ಲಿದೆ ನೋಡಿ. ಬಿಲ್ಕಿಸ್ ಬಾನೋ ಫೈಲ್ಸ್ ಎಲ್ಲಿಗೆ ಹೋಯಿತಪ್ಪ? ಕಾಂಗನಾ ರಾಣವತ್ ಗೆ ಜೆಡ್ ಪ್ಲಸ್ ಸೆಕ್ಯುರಿಟಿ, ನಮಗೆ ರಕ್ಷಣೆ ಇಲ್ಲ. ಕಾಶ್ಮೀರ್ ಫೈಲ್ಸ್ ಎನ್ನುತ್ತೀರಾ? ಎಲ್ಲಿ ನಮ್ಮ ಕಂಪಾಲಪಲ್ಲಿ ಫೈಲ್ಸ್, ಖೈರ್ಲಾಂಜಿ ದಲಿತ ಫೈಲ್ಸ್ ಎಂದು ಪ್ರಶ್ನಿಸಿದರು.

ಕುವೆಂಪು ಹೇಳುತ್ತಿದ್ದರು, ನಾವು ಹಿಂದೂ ಅಲ್ಲ, ಹಿಂದೂ ಅಲ್ಲ ಎನ್ನುತ್ತಿದ್ದರು. ನೀವು ಏನು ಹೇಳುತ್ತೀರಿ? ಹಿಂದೂ ಧರ್ಮದ ಹೆಸರಿನಲ್ಲಿ ನಿಮ್ಮ ತಿನ್ನುವ ಆಹಾರವನ್ನು ಅವರು ನಿರ್ಧಾರ ಮಾಡುತ್ತಿದ್ದಾರೆ ಇದು ತಪ್ಪಬೇಕು ಎಂದರು.

ಗೋಹತ್ಯೆ ನಿಷೇಧ ಮಾಡುತ್ತೇವೆ ಅನ್ನುತ್ತಾರೆ ನರೇಂದ್ರ ಮೋದಿಯವರು. ಏನು ಮೋದಿ ಮನೆಯಲ್ಲಿ, ಬೊಮ್ಮಾಯಿ ಮನೆಯಲ್ಲಿ ದನ ಸಾಕಿಕೊಂಡಿದ್ದೀರಾ? ನಮ್ಮ ದಲಿತರ, ರೈತರ ಮೇಲೆ ನಿಮ್ಮ ಪ್ರಹಾರವನ್ನು ಒಪ್ಪುವುದಿಲ್ಲ ಎಂದರು.

ರಾಜಸ್ಥಾನದಲ್ಲಿ ದಲಿತ ಮಗು ನೀರು ಕುಡಿದಿದ್ದಕ್ಕೆ ಕೊಂದರಿ? ಬಿಲ್ಕಿಸ್ ಬಾನೋ ಅತ್ಯಾಚಾರ ಮಾಡಿ, ಅವರ ಮಗುವನ್ನು ಕೊಂದಿದ್ದೀರಿ. ಆದರೆ ನೀವು ಎಷ್ಟೇ ದಾಳಿ ಮಾಡಿದರೂ ಸಹ ನಾವು ಎದ್ದು ಬರುತ್ತೇವೆ. ನಾವು ಬಾಬಾ ಸಾಹೇಬರ ಕುಡಿಗಳು ಎಂದು ಗುಡುಗಿದರು.

ನಾವು ದೇಶದ್ರೋಹಿಗಳಾಗಿಲ್ಲ, ಬಂದೂಕು ಹಿಡಿದಿಲ್ಲ. ಯಾರನ್ನು ತುಳಿದಿಲ್ಲ. ಆದರೆ ಈ RSS ನವರು ಬಂದೂಕು ಹಿಡಿದಿದ್ದಾರೆ. ಈ ಶನಿಸಂತಾನವನ್ನು ಮುಗಿಸಬೇಕಾಗಿದೆ. ನಾವು ಏಕಲವ್ಯನ ವಂಶಸ್ಥರು, ಹೆಬ್ಬರಳನ್ನು ಕಿತ್ತುಕೊಂಡರೂ ಸಹ ನಾವು ಮತ್ತೆ ಮತ್ತೆ ಬಿಲ್ಲು ಹಿಡಿಯುತ್ತೇವೆ. ನಾವು ದೇಶವನ್ನು ಕಟ್ಟಿದವರು. ನೀಲಿಯ ದಂಡು ಬೆಂಗಳೂರಿಗೆ ಬಂದಿದೆ ಎಂದರು.

ಇಡಬ್ಲೂಎಸ್ ಮೀಸಲಾತಿ ಹತ್ತು ಪರ್ಸೆಂಟ್ ಕೊಟ್ಟಿದ್ದೀರಿ. ಅಂದರೆ ಮೀಸಲಾತಿ ನಿಮ್ಮ ಅಪ್ಪನದ್ದಾ? ನಾವು ಮೋದಿಯನ್ನು ಬೈಯೋದ್ದಲ್ಲ, ಬಿಜೆಪಿ ಸಂಘಪರಿವಾರದ ಗುಲಾಮಗಿರಿಯನ್ನು ಮಾಡುತ್ತಿರುವ ದಲಿತ ಎಂಪಿಗಳನ್ನು ಬೈಯ್ಯಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅಮಿತ್ ಶಾ ಚರಿತ್ರೆ ಹೊಸದಾಗಿ ಬರೆಯುತ್ತೇವೆ ಎನ್ನುತ್ತಾರೆ. ಮುಸಲ್ಮಾನರ ಬೂತ ತೋರುಸುತ್ತಿದ್ದಾರೆ. ಅಮಿತ್ ಶಾರವರೆ ನೀವೇನು ಚರಿತ್ರೆ ಬರೆಯುವುದು? ಸಿಂಹಗಳ ಚರಿತ್ರೆಯನ್ನು ಸಿಂಹಗಳೇ ಬರೆಯುತ್ತೇವೆ. ನರಿಗಳು ಬರೆಯಬೇಕಿಲ್ಲ ಎಂದು ವ್ಯಂಗ್ಯವಾಡಿದರು.

ಇದನ್ನೂ ಓದಿ; ಮಹಿಳೆಯರ ಹಕ್ಕುಗಳಿಗಾಗಿ ರಾಜೀನಾಮೆ ನೀಡಿದ ಏಕೈಕ ನಾಯಕ ಅಂಬೇಡ್ಕರ್: ನಾಗಮೋಹನ್ ದಾಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...