Homeಕರ್ನಾಟಕಎದೆಗೆ ಬಿದ್ದ ಸಂವಿಧಾನ-ಭೂಮಿಗೆ ಬಿದ್ದ ಬೀಜ ಒಂದಲ್ಲ ಒಂದು ದಿನ ಫಲ ಕೊಡುತ್ತದೆ: ಮಾವಳ್ಳಿ ಶಂಕರ್

ಎದೆಗೆ ಬಿದ್ದ ಸಂವಿಧಾನ-ಭೂಮಿಗೆ ಬಿದ್ದ ಬೀಜ ಒಂದಲ್ಲ ಒಂದು ದಿನ ಫಲ ಕೊಡುತ್ತದೆ: ಮಾವಳ್ಳಿ ಶಂಕರ್

- Advertisement -
- Advertisement -

‘ದೇವನೂರ ಮಹಾದೇವ ಅವರ ಮಾತನ್ನು ಸ್ವಲ್ಪ ಬದಲಿಸಿ, ಎದೆಗೆ ಬಿದ್ದ ಸಂವಿಧಾನ- ಭೂಮಿಗೆ ಬಿದ್ದ ಬೀಜ ಒಂದಲ್ಲ ಒಂದು ದಿನ ಫಲ ಕೊಡುತ್ತದೆ ಎಂದು ನಾವಿಂದು ಹೇಳಬೇಕಿದೆ’ ಎಂದು ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ರಾಜ್ಯ ಪ್ರಧಾನ ಸಂಚಾಲಕರಾದ ಮಾವಳ್ಳಿ ಶಂಕರ್ ಹೇಳಿದರು.

ದಾವಣಗೆರೆಯ ಬೀರಲಿಂಗೇಶ್ವರ ದೇವಸ್ಥಾನ ಆವರಣದಲ್ಲಿ ನಡೆಯುತ್ತಿರುವ ‘ಸಂವಿಧಾನ ಸಂರಕ್ಷಕರ ಸಮಾವೇಶ’ದಲ್ಲಿ ಭಾಗವಹಿಸಿ ಮಾತನಾಡಿದ ಅವರು, “ಆಳುವವರಿಗೆ ಎಂದಿಗೂ ಸಂವಿಧಾನ ಅಪಥ್ಯ ಆಗಿತ್ತು. ಆಧರೆ, ಅದರ ರಕ್ಷಣೆ ಮಾಡಬೇಕಿದ್ದ ನಾವುಗಳೂ ಅದನ್ನು ಸರಿಯಾಗಿ ಅರ್ಥ ಮಾಡಿಕೊಂಡಿರಲಿಲ್ಲ. ನಾವು ಮೊದಲೇ ಸಂವಿಧಾನದ ರಕ್ಷಣೆಯ ಹೊಣೆ ಹೊತ್ತಿದ್ದರೆ, ಇಂದು ಇಂತಹ ಗತಿ ಬರುತ್ತಿರಲಿಲ್ಲಲ” ಎಂದರು.

“ಬಾಬಾಸಾಹೇಬರು ರತ್ತುಗೆ ಹೇಳುತ್ತಿದ್ದರು, ‘ನೋಡು ರತ್ತು, ನಾನು ಸಂವಿಧಾನವನ್ನು ಬರೆದಿದ್ದೇನೆ, ನನ್ನ ಎಲ್ಲ ಆಶಯಗಳನ್ನೂ ಅದರಲ್ಲಿ ತರಲು ಆಗಲಿಲ್ಲ. ಆದರೆ, ಈ ದೇಶದ ಎಲ್ಲ ದಮನಿತರು, ಶೋಷಿತರು, ರಕ್ತ ಬಸಿಯುವ ಜನರಿಗೆ ಬೇಕಿರುವ ಎಷ್ಟೋ ವಿಷಯಗಳನ್ನು ಅದರಲ್ಲಿ ತಂದಿದ್ದೇನೆ, ಆ ಜನರು ಇದರ ರಕ್ಷಣೆಗೆ ಮುಂದಾದರೆ ಅದರ ಪ್ರಯೋಜನ ಪಡೆಯಬಲ್ಲರು’ ಎಂದು ಹೇಳಿದ್ದರು” ಎಂದರು.

“ಸಂವಿಧಾನ 1949 ನವೆಂಬರ್ 26ರಂದು ಜಾರಿಯಾಯಿತು, ಸಂವಿಧಾನದಿಂದ ಮಾತ್ರ ಎಲ್ಲ ಸಮಸ್ಯೆ ಬಗೆಹರಿಯುವುದಿಲ್ಲ. ಸಂವಿಧಾನದ ಆಶಯ ಈಡೇರಬೇಕಾದರೆ, ಜನರಿಗೆ ಆರ್ಥಿಕ, ಸಾಮಾಜಿಕ, ರಾಜಕೀಯ ಸಮಾನತೆ ದೊರೆಯಬೇಕು. ಇದಕ್ಕೆ ಆಳುವ ಪ್ರಭುತ್ವಗಳು ಕೆಲಸ ಮಾಡಬೇಕು ಎಂದು ಬಾಬಾಸಾಹೇಬರು ಹೇಳಿದರು” ಎಂದು ವಿವರಿಸಿದರು.

“ಈ ದೇಶದ ಜನ ಒಟ್ಟಾಗಿರಬೇಕು, ಒಂದೇ ದೇವಸ್ಥಾನ, ಒಂದೇ ಸ್ಮಶಾನ, ಒಂದೇ ದೇವರು ಇರಬೇಕು ಎಂದು ಇತ್ತೀಚೆಗೆ ಮೋಹನ್ ಭಾಗವತ್ ಹೇಳಿದ್ದು ಪತ್ರಿಕೆಯಲ್ಲಿ ನೋಡಿದೆ. ಅವರಿಗೆ ನಾನು ಹೇಳುತ್ತೇನೆ, ಒಂದೇ ದೇವಸ್ಥಾನ ಮಾತ್ರವಲ್ಲ, ಒಂದೇ ಚರ್ಚ್, ಒಂದೇ ಮಸೀದಿ ಇದೆ ಎಂಬುದನ್ನೂ ಮರೆಯಬೇಡಿ” ಎಂದರು.

“ಸಂವಿಧಾನ ಜಾರಿಯಾದಾಗ ‘ಇದರಲ್ಲಿ ಭಾರತೀಯತೆ ಇಲ್ಲ’ ಎಂದಿದ್ದ ಆರೆಸ್ಸೆಸ್, ಇವತ್ತು ತನ್ನ ಅಭಿಪ್ರಾಯ ಬದಲಿಸಿದ್ದರೆ, ಸಂವಿಧಾನ ಜಾರಿಯಾದ ಮರುದಿನ ಆರ್ಗನೈಸರ್ ಪತ್ರಿಕೆಯಲ್ಲಿ ಬಂದಿದ್ದ ಮಾತಿಗೆ ನಾನು ಕ್ಷಮೆ ಕೇಳುತ್ತೇನೆ ಎಂದು ಹೇಳಬೇಕಿತ್ತು” ಎಂದು ವಾಗ್ದಾಳಿ ನಡೆಸಿದರು.

“ವಾಜಪೇಯಿ ಪ್ರಧಾನಮಂತ್ರಿ ಆಗಿದ್ದಾಗ ಸಂವಿಧಾನ ಪುನರ್‌ರಚನೆ ಮಾಡಲು ಹೊರಟಾಗ ರಾಷ್ಟ್ರಪತಿಗಳಾಗಿದ್ದ ಕೆ ಆರ್ ನಾರಾಯಣನ್ ಹೇಳಿದರು, ಸಂವಿಧಾನ ಪುನರ್‌ರಚನೆಯಲ್ಲ, ಸಂವಿಧಾನ ಜಾರಿಮಾಡುವ ಕೆಲಸ ಆಗಬೇಕು, ಬಡಗಿ ಸರಿಯಿದ್ದರೆ ಎಂತಹ ಮರ ಇದ್ದರೂ ಸುಂದರ ಮೂರ್ತಿ ಮಾಡುತ್ತಾನೆ, ಈಗ ಬಡಗಿ ಸರಿಯಾಗಬೇಕಿದೆ ಎಂದು ಸೂಕ್ಷ್ಮವಾಗಿ ಹೇಳಿದ್ದರು” ಎಂದ ಬಿಜೆಪಿ ವಿರುದ್ಧ ಕಿಡಿಕಾರಿದರು.

ಸಂವಿಧಾನದ ಆಶಯಗಳನ್ನು ಎತ್ತಿಹಿಡಿಯುವವರೇ ನೈಜ ದೇಶಪ್ರೇಮಿಗಳು: ಪ್ರೊ. ಬರಗೂರು ರಾಮಚಂದ್ರಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...