Homeಕರ್ನಾಟಕಎದೆಗೆ ಬಿದ್ದ ಸಂವಿಧಾನ-ಭೂಮಿಗೆ ಬಿದ್ದ ಬೀಜ ಒಂದಲ್ಲ ಒಂದು ದಿನ ಫಲ ಕೊಡುತ್ತದೆ: ಮಾವಳ್ಳಿ ಶಂಕರ್

ಎದೆಗೆ ಬಿದ್ದ ಸಂವಿಧಾನ-ಭೂಮಿಗೆ ಬಿದ್ದ ಬೀಜ ಒಂದಲ್ಲ ಒಂದು ದಿನ ಫಲ ಕೊಡುತ್ತದೆ: ಮಾವಳ್ಳಿ ಶಂಕರ್

- Advertisement -
- Advertisement -

‘ದೇವನೂರ ಮಹಾದೇವ ಅವರ ಮಾತನ್ನು ಸ್ವಲ್ಪ ಬದಲಿಸಿ, ಎದೆಗೆ ಬಿದ್ದ ಸಂವಿಧಾನ- ಭೂಮಿಗೆ ಬಿದ್ದ ಬೀಜ ಒಂದಲ್ಲ ಒಂದು ದಿನ ಫಲ ಕೊಡುತ್ತದೆ ಎಂದು ನಾವಿಂದು ಹೇಳಬೇಕಿದೆ’ ಎಂದು ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ರಾಜ್ಯ ಪ್ರಧಾನ ಸಂಚಾಲಕರಾದ ಮಾವಳ್ಳಿ ಶಂಕರ್ ಹೇಳಿದರು.

ದಾವಣಗೆರೆಯ ಬೀರಲಿಂಗೇಶ್ವರ ದೇವಸ್ಥಾನ ಆವರಣದಲ್ಲಿ ನಡೆಯುತ್ತಿರುವ ‘ಸಂವಿಧಾನ ಸಂರಕ್ಷಕರ ಸಮಾವೇಶ’ದಲ್ಲಿ ಭಾಗವಹಿಸಿ ಮಾತನಾಡಿದ ಅವರು, “ಆಳುವವರಿಗೆ ಎಂದಿಗೂ ಸಂವಿಧಾನ ಅಪಥ್ಯ ಆಗಿತ್ತು. ಆಧರೆ, ಅದರ ರಕ್ಷಣೆ ಮಾಡಬೇಕಿದ್ದ ನಾವುಗಳೂ ಅದನ್ನು ಸರಿಯಾಗಿ ಅರ್ಥ ಮಾಡಿಕೊಂಡಿರಲಿಲ್ಲ. ನಾವು ಮೊದಲೇ ಸಂವಿಧಾನದ ರಕ್ಷಣೆಯ ಹೊಣೆ ಹೊತ್ತಿದ್ದರೆ, ಇಂದು ಇಂತಹ ಗತಿ ಬರುತ್ತಿರಲಿಲ್ಲಲ” ಎಂದರು.

“ಬಾಬಾಸಾಹೇಬರು ರತ್ತುಗೆ ಹೇಳುತ್ತಿದ್ದರು, ‘ನೋಡು ರತ್ತು, ನಾನು ಸಂವಿಧಾನವನ್ನು ಬರೆದಿದ್ದೇನೆ, ನನ್ನ ಎಲ್ಲ ಆಶಯಗಳನ್ನೂ ಅದರಲ್ಲಿ ತರಲು ಆಗಲಿಲ್ಲ. ಆದರೆ, ಈ ದೇಶದ ಎಲ್ಲ ದಮನಿತರು, ಶೋಷಿತರು, ರಕ್ತ ಬಸಿಯುವ ಜನರಿಗೆ ಬೇಕಿರುವ ಎಷ್ಟೋ ವಿಷಯಗಳನ್ನು ಅದರಲ್ಲಿ ತಂದಿದ್ದೇನೆ, ಆ ಜನರು ಇದರ ರಕ್ಷಣೆಗೆ ಮುಂದಾದರೆ ಅದರ ಪ್ರಯೋಜನ ಪಡೆಯಬಲ್ಲರು’ ಎಂದು ಹೇಳಿದ್ದರು” ಎಂದರು.

“ಸಂವಿಧಾನ 1949 ನವೆಂಬರ್ 26ರಂದು ಜಾರಿಯಾಯಿತು, ಸಂವಿಧಾನದಿಂದ ಮಾತ್ರ ಎಲ್ಲ ಸಮಸ್ಯೆ ಬಗೆಹರಿಯುವುದಿಲ್ಲ. ಸಂವಿಧಾನದ ಆಶಯ ಈಡೇರಬೇಕಾದರೆ, ಜನರಿಗೆ ಆರ್ಥಿಕ, ಸಾಮಾಜಿಕ, ರಾಜಕೀಯ ಸಮಾನತೆ ದೊರೆಯಬೇಕು. ಇದಕ್ಕೆ ಆಳುವ ಪ್ರಭುತ್ವಗಳು ಕೆಲಸ ಮಾಡಬೇಕು ಎಂದು ಬಾಬಾಸಾಹೇಬರು ಹೇಳಿದರು” ಎಂದು ವಿವರಿಸಿದರು.

“ಈ ದೇಶದ ಜನ ಒಟ್ಟಾಗಿರಬೇಕು, ಒಂದೇ ದೇವಸ್ಥಾನ, ಒಂದೇ ಸ್ಮಶಾನ, ಒಂದೇ ದೇವರು ಇರಬೇಕು ಎಂದು ಇತ್ತೀಚೆಗೆ ಮೋಹನ್ ಭಾಗವತ್ ಹೇಳಿದ್ದು ಪತ್ರಿಕೆಯಲ್ಲಿ ನೋಡಿದೆ. ಅವರಿಗೆ ನಾನು ಹೇಳುತ್ತೇನೆ, ಒಂದೇ ದೇವಸ್ಥಾನ ಮಾತ್ರವಲ್ಲ, ಒಂದೇ ಚರ್ಚ್, ಒಂದೇ ಮಸೀದಿ ಇದೆ ಎಂಬುದನ್ನೂ ಮರೆಯಬೇಡಿ” ಎಂದರು.

“ಸಂವಿಧಾನ ಜಾರಿಯಾದಾಗ ‘ಇದರಲ್ಲಿ ಭಾರತೀಯತೆ ಇಲ್ಲ’ ಎಂದಿದ್ದ ಆರೆಸ್ಸೆಸ್, ಇವತ್ತು ತನ್ನ ಅಭಿಪ್ರಾಯ ಬದಲಿಸಿದ್ದರೆ, ಸಂವಿಧಾನ ಜಾರಿಯಾದ ಮರುದಿನ ಆರ್ಗನೈಸರ್ ಪತ್ರಿಕೆಯಲ್ಲಿ ಬಂದಿದ್ದ ಮಾತಿಗೆ ನಾನು ಕ್ಷಮೆ ಕೇಳುತ್ತೇನೆ ಎಂದು ಹೇಳಬೇಕಿತ್ತು” ಎಂದು ವಾಗ್ದಾಳಿ ನಡೆಸಿದರು.

“ವಾಜಪೇಯಿ ಪ್ರಧಾನಮಂತ್ರಿ ಆಗಿದ್ದಾಗ ಸಂವಿಧಾನ ಪುನರ್‌ರಚನೆ ಮಾಡಲು ಹೊರಟಾಗ ರಾಷ್ಟ್ರಪತಿಗಳಾಗಿದ್ದ ಕೆ ಆರ್ ನಾರಾಯಣನ್ ಹೇಳಿದರು, ಸಂವಿಧಾನ ಪುನರ್‌ರಚನೆಯಲ್ಲ, ಸಂವಿಧಾನ ಜಾರಿಮಾಡುವ ಕೆಲಸ ಆಗಬೇಕು, ಬಡಗಿ ಸರಿಯಿದ್ದರೆ ಎಂತಹ ಮರ ಇದ್ದರೂ ಸುಂದರ ಮೂರ್ತಿ ಮಾಡುತ್ತಾನೆ, ಈಗ ಬಡಗಿ ಸರಿಯಾಗಬೇಕಿದೆ ಎಂದು ಸೂಕ್ಷ್ಮವಾಗಿ ಹೇಳಿದ್ದರು” ಎಂದ ಬಿಜೆಪಿ ವಿರುದ್ಧ ಕಿಡಿಕಾರಿದರು.

ಸಂವಿಧಾನದ ಆಶಯಗಳನ್ನು ಎತ್ತಿಹಿಡಿಯುವವರೇ ನೈಜ ದೇಶಪ್ರೇಮಿಗಳು: ಪ್ರೊ. ಬರಗೂರು ರಾಮಚಂದ್ರಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...