Homeಕರ್ನಾಟಕಎದೆಗೆ ಬಿದ್ದ ಸಂವಿಧಾನ-ಭೂಮಿಗೆ ಬಿದ್ದ ಬೀಜ ಒಂದಲ್ಲ ಒಂದು ದಿನ ಫಲ ಕೊಡುತ್ತದೆ: ಮಾವಳ್ಳಿ ಶಂಕರ್

ಎದೆಗೆ ಬಿದ್ದ ಸಂವಿಧಾನ-ಭೂಮಿಗೆ ಬಿದ್ದ ಬೀಜ ಒಂದಲ್ಲ ಒಂದು ದಿನ ಫಲ ಕೊಡುತ್ತದೆ: ಮಾವಳ್ಳಿ ಶಂಕರ್

- Advertisement -
- Advertisement -

‘ದೇವನೂರ ಮಹಾದೇವ ಅವರ ಮಾತನ್ನು ಸ್ವಲ್ಪ ಬದಲಿಸಿ, ಎದೆಗೆ ಬಿದ್ದ ಸಂವಿಧಾನ- ಭೂಮಿಗೆ ಬಿದ್ದ ಬೀಜ ಒಂದಲ್ಲ ಒಂದು ದಿನ ಫಲ ಕೊಡುತ್ತದೆ ಎಂದು ನಾವಿಂದು ಹೇಳಬೇಕಿದೆ’ ಎಂದು ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ರಾಜ್ಯ ಪ್ರಧಾನ ಸಂಚಾಲಕರಾದ ಮಾವಳ್ಳಿ ಶಂಕರ್ ಹೇಳಿದರು.

ದಾವಣಗೆರೆಯ ಬೀರಲಿಂಗೇಶ್ವರ ದೇವಸ್ಥಾನ ಆವರಣದಲ್ಲಿ ನಡೆಯುತ್ತಿರುವ ‘ಸಂವಿಧಾನ ಸಂರಕ್ಷಕರ ಸಮಾವೇಶ’ದಲ್ಲಿ ಭಾಗವಹಿಸಿ ಮಾತನಾಡಿದ ಅವರು, “ಆಳುವವರಿಗೆ ಎಂದಿಗೂ ಸಂವಿಧಾನ ಅಪಥ್ಯ ಆಗಿತ್ತು. ಆಧರೆ, ಅದರ ರಕ್ಷಣೆ ಮಾಡಬೇಕಿದ್ದ ನಾವುಗಳೂ ಅದನ್ನು ಸರಿಯಾಗಿ ಅರ್ಥ ಮಾಡಿಕೊಂಡಿರಲಿಲ್ಲ. ನಾವು ಮೊದಲೇ ಸಂವಿಧಾನದ ರಕ್ಷಣೆಯ ಹೊಣೆ ಹೊತ್ತಿದ್ದರೆ, ಇಂದು ಇಂತಹ ಗತಿ ಬರುತ್ತಿರಲಿಲ್ಲಲ” ಎಂದರು.

“ಬಾಬಾಸಾಹೇಬರು ರತ್ತುಗೆ ಹೇಳುತ್ತಿದ್ದರು, ‘ನೋಡು ರತ್ತು, ನಾನು ಸಂವಿಧಾನವನ್ನು ಬರೆದಿದ್ದೇನೆ, ನನ್ನ ಎಲ್ಲ ಆಶಯಗಳನ್ನೂ ಅದರಲ್ಲಿ ತರಲು ಆಗಲಿಲ್ಲ. ಆದರೆ, ಈ ದೇಶದ ಎಲ್ಲ ದಮನಿತರು, ಶೋಷಿತರು, ರಕ್ತ ಬಸಿಯುವ ಜನರಿಗೆ ಬೇಕಿರುವ ಎಷ್ಟೋ ವಿಷಯಗಳನ್ನು ಅದರಲ್ಲಿ ತಂದಿದ್ದೇನೆ, ಆ ಜನರು ಇದರ ರಕ್ಷಣೆಗೆ ಮುಂದಾದರೆ ಅದರ ಪ್ರಯೋಜನ ಪಡೆಯಬಲ್ಲರು’ ಎಂದು ಹೇಳಿದ್ದರು” ಎಂದರು.

“ಸಂವಿಧಾನ 1949 ನವೆಂಬರ್ 26ರಂದು ಜಾರಿಯಾಯಿತು, ಸಂವಿಧಾನದಿಂದ ಮಾತ್ರ ಎಲ್ಲ ಸಮಸ್ಯೆ ಬಗೆಹರಿಯುವುದಿಲ್ಲ. ಸಂವಿಧಾನದ ಆಶಯ ಈಡೇರಬೇಕಾದರೆ, ಜನರಿಗೆ ಆರ್ಥಿಕ, ಸಾಮಾಜಿಕ, ರಾಜಕೀಯ ಸಮಾನತೆ ದೊರೆಯಬೇಕು. ಇದಕ್ಕೆ ಆಳುವ ಪ್ರಭುತ್ವಗಳು ಕೆಲಸ ಮಾಡಬೇಕು ಎಂದು ಬಾಬಾಸಾಹೇಬರು ಹೇಳಿದರು” ಎಂದು ವಿವರಿಸಿದರು.

“ಈ ದೇಶದ ಜನ ಒಟ್ಟಾಗಿರಬೇಕು, ಒಂದೇ ದೇವಸ್ಥಾನ, ಒಂದೇ ಸ್ಮಶಾನ, ಒಂದೇ ದೇವರು ಇರಬೇಕು ಎಂದು ಇತ್ತೀಚೆಗೆ ಮೋಹನ್ ಭಾಗವತ್ ಹೇಳಿದ್ದು ಪತ್ರಿಕೆಯಲ್ಲಿ ನೋಡಿದೆ. ಅವರಿಗೆ ನಾನು ಹೇಳುತ್ತೇನೆ, ಒಂದೇ ದೇವಸ್ಥಾನ ಮಾತ್ರವಲ್ಲ, ಒಂದೇ ಚರ್ಚ್, ಒಂದೇ ಮಸೀದಿ ಇದೆ ಎಂಬುದನ್ನೂ ಮರೆಯಬೇಡಿ” ಎಂದರು.

“ಸಂವಿಧಾನ ಜಾರಿಯಾದಾಗ ‘ಇದರಲ್ಲಿ ಭಾರತೀಯತೆ ಇಲ್ಲ’ ಎಂದಿದ್ದ ಆರೆಸ್ಸೆಸ್, ಇವತ್ತು ತನ್ನ ಅಭಿಪ್ರಾಯ ಬದಲಿಸಿದ್ದರೆ, ಸಂವಿಧಾನ ಜಾರಿಯಾದ ಮರುದಿನ ಆರ್ಗನೈಸರ್ ಪತ್ರಿಕೆಯಲ್ಲಿ ಬಂದಿದ್ದ ಮಾತಿಗೆ ನಾನು ಕ್ಷಮೆ ಕೇಳುತ್ತೇನೆ ಎಂದು ಹೇಳಬೇಕಿತ್ತು” ಎಂದು ವಾಗ್ದಾಳಿ ನಡೆಸಿದರು.

“ವಾಜಪೇಯಿ ಪ್ರಧಾನಮಂತ್ರಿ ಆಗಿದ್ದಾಗ ಸಂವಿಧಾನ ಪುನರ್‌ರಚನೆ ಮಾಡಲು ಹೊರಟಾಗ ರಾಷ್ಟ್ರಪತಿಗಳಾಗಿದ್ದ ಕೆ ಆರ್ ನಾರಾಯಣನ್ ಹೇಳಿದರು, ಸಂವಿಧಾನ ಪುನರ್‌ರಚನೆಯಲ್ಲ, ಸಂವಿಧಾನ ಜಾರಿಮಾಡುವ ಕೆಲಸ ಆಗಬೇಕು, ಬಡಗಿ ಸರಿಯಿದ್ದರೆ ಎಂತಹ ಮರ ಇದ್ದರೂ ಸುಂದರ ಮೂರ್ತಿ ಮಾಡುತ್ತಾನೆ, ಈಗ ಬಡಗಿ ಸರಿಯಾಗಬೇಕಿದೆ ಎಂದು ಸೂಕ್ಷ್ಮವಾಗಿ ಹೇಳಿದ್ದರು” ಎಂದ ಬಿಜೆಪಿ ವಿರುದ್ಧ ಕಿಡಿಕಾರಿದರು.

ಸಂವಿಧಾನದ ಆಶಯಗಳನ್ನು ಎತ್ತಿಹಿಡಿಯುವವರೇ ನೈಜ ದೇಶಪ್ರೇಮಿಗಳು: ಪ್ರೊ. ಬರಗೂರು ರಾಮಚಂದ್ರಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...