Homeಕರೋನಾ ತಲ್ಲಣಒಂದೇ ದಿನಕ್ಕೆ 48,000 ಕ್ಕೂ ಹೆಚ್ಚು ಕೊರೊನಾ ಪ್ರಕರಣಗಳು; ಒಟ್ಟು ಸೋಂಕಿತರ ಸಂಖ್ಯೆ 13.36 ಲಕ್ಷ!

ಒಂದೇ ದಿನಕ್ಕೆ 48,000 ಕ್ಕೂ ಹೆಚ್ಚು ಕೊರೊನಾ ಪ್ರಕರಣಗಳು; ಒಟ್ಟು ಸೋಂಕಿತರ ಸಂಖ್ಯೆ 13.36 ಲಕ್ಷ!

ಭಾರತದಲ್ಲಿ ಇದುವರೆಗೆ ಒಟ್ಟಾರೆ 31,358 ಸಾವುಗಳು ಸಂಭವಿಸಿದ್ದು, ಯುಎಸ್, ಬ್ರೆಜಿಲ್, ಬ್ರಿಟನ್, ಮೆಕ್ಸಿಕೊ ಮತ್ತು ಇಟಲಿಯ ನಂತರ ದೇಶವು ವಿಶ್ವದ 6ನೇ ಸ್ಥಾನದಲ್ಲಿದೆ.

- Advertisement -
- Advertisement -

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 48,916 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ. ಒಟ್ಟು ಪ್ರಕರಣಗಳ ಸಂಖ್ಯೆ 13,36,861 ಕ್ಕೆ ಏರಿದೆ ಎಂದು ಸರ್ಕಾರದ ಅಂಕಿ ಅಂಶಗಳು ತಿಳಿಸಿವೆ.

ಈ ಒಂದು ದಿನದ ಅವಧಿಯಲ್ಲಿ 757 ಕೊರೊನಾ ಸಂಬಂಧಿತ ಸಾವುಗಳು ಸಂಭವಿಸಿವೆ ಎಂದು ಆರೋಗ್ಯ ಸಚಿವಾಲಯ ವರದಿ ಬಿಡುಗಡೆ ಮಾಡಿದೆ. ಭಾರತದಲ್ಲಿ ಇದುವರೆಗೆ ಒಟ್ಟಾರೆ 31,358 ಸಾವುಗಳು ಸಂಭವಿಸಿದ್ದು, ಈಗ ಯುಎಸ್, ಬ್ರೆಜಿಲ್, ಬ್ರಿಟನ್, ಮೆಕ್ಸಿಕೊ ಮತ್ತು ಇಟಲಿಯ ನಂತರ ವಿಶ್ವದ 6ನೇ ಸ್ಥಾನದಲ್ಲಿದೆ.

ಚೇತರಿಕೆ ದರವು ಶೇಕಡಾ 63.53 ಮತ್ತು ಕೊರೊನಾ ಪಾಸಿಟೀವ್ ದರವು ಶೇಕಡಾ 11.62 ಆಗಿದೆ. ಶುಕ್ರವಾರ ಅತಿ ಹೆಚ್ಚು 4,20,898 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಕೊರೊನಾ ಪ್ರಕರಣಗಳು 45,000 ಕ್ಕಿಂತ ಹೆಚ್ಚು ವರದಿಯಾಗುತ್ತಿರುವುದು ಇದು ಮೂರನೇ ಬಾರಿ.

ಕೊರೊನಾ ಬೆಳವಣಿಗೆಯ 10 ಪ್ರಮುಖ ಅಂಶಗಳು:

  1. ಭಾರತದಲ್ಲಿ ಶುಕ್ರವಾರ ಕೊರೊನಾ ವೈರಸ್ ಪ್ರಕರಣಗಳ ಸಂಖ್ಯೆ 13 ಲಕ್ಷ ದಾಟಿದೆ. ದೇಶದಲ್ಲಿ ಒಂದೇ ದಿನದಲ್ಲಿ ದಾಖಲೆಯ 49,310 ಹೊಸ ಪ್ರಕರಣಗಳು ದಾಖಲಾಗಿವೆ.

2. ಭಾರತದ ಕೊರೊನಾ ಪ್ರಕರಣಗಳ ಮೊತ್ತವು 13 ಲಕ್ಷ ತಲುಪಲು 177 ದಿನಗಳನ್ನು ತೆಗೆದುಕೊಂಡಿತು. ಜುಲೈ 2 ರಿಂದ ದೇಶವು ಆರು ಲಕ್ಷಗಳನ್ನು ದಾಟಿದ ನಂತರ, ಭಾರತದಲ್ಲಿ ಸುಮಾರು ಮೂರು ವಾರಗಳಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ದ್ವಿಗುಣಗೊಂಡಿದೆ.

3. ಅತಿ ಹೆಚ್ಚು ಹಾನಿಗೊಳಗಾದ ಮಹಾರಾಷ್ಟ್ರದಲ್ಲಿ ಶುಕ್ರವಾರ 9,615 ಹೊಸ ಪ್ರಕರಣಗಳು ದಾಖಲಾಗಿದ್ದು, ಅವುಗಳಲ್ಲಿ 1,057 ಮುಂಬೈನಲ್ಲಿದೆ. ರಾಜ್ಯದ ಕೊರೊನಾ ಸೋಂಕಿತರ ಮೊತ್ತವು ಪ್ರಸ್ತುತ 3,57,117 ಆಗಿದೆ. ವೈರಸ್ ಸಂಬಂಧಿತ ಸಾವುಗಳ ಸಂಖ್ಯೆ 13,132 ಕ್ಕೆ ಏರಿಕೆಯಾಗಿದ್ದು, ಶುಕ್ರವಾರ 278 ಹೊಸ ಸಾವು ಸಂಭವಿಸಿವೆ ಎಂದು ಆರೋಗ್ಯ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

4. ದೆಹಲಿಯಲ್ಲಿ ಶುಕ್ರವಾರ 1,025 ಹೊಸ ಪ್ರಕರಣಗಳು ದೃಢಪಟ್ಟಿದ್ದು, ಒಟ್ಟು 1.28 ಲಕ್ಷ ಪ್ರಕರಣಗಳು ದಾಖಲಾಗಿವೆ. ಅಲ್ಲಿ ಈವರೆಗೆ ವೈರಸ್‌ನಿಂದ 3,777 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

5. ದೆಹಲಿಯ ಚೇತರಿಕೆಯ ಪ್ರಮಾಣವು ಶೇಕಡಾ 86 ಕ್ಕಿಂತ ಹೆಚ್ಚಾಗಿದೆ. ಪ್ರಸ್ತುತ ಸಕ್ರಿಯ ಪ್ರಕರಣಗಳು 13,681 ಕ್ಕೆ ಇಳಿದಿದೆ. ಇದು ಕಳೆದ ಏಳು ವಾರಗಳಲ್ಲಿ ಅತಿ ಕಡಿಮೆ ಎಂದು ಶುಕ್ರವಾರ ಬಿಡುಗಡೆ ಮಾಡಿದ ಆರೋಗ್ಯ ಬುಲೆಟಿನ್ ತಿಳಿಸಿದೆ.

6. ಅಸ್ಸಾಂನಲ್ಲಿನ ಕೊರೊನಾ ಸೋಂಕಿತರ ಸಂಖ್ಯೆ ಶುಕ್ರವಾರ 1,130 ಹೊಸ ಪ್ರಕರಣಗಳೊಟ್ಟಿಗೆ 29,921 ಕ್ಕೆ ತಲುಪಿದೆ. ಆರು ಸಾವು ಸಂಭವಿಸಿದ್ದು, ಸಾವಿನ ಸಂಖ್ಯೆ 76 ಕ್ಕೆ ಏರಿದೆ ಎಂದು ರಾಜ್ಯ ಆರೋಗ್ಯ ಸಚಿವ ಹಿಮಂತ ಬಿಸ್ವಾ ಶರ್ಮಾ ತಿಳಿಸಿದ್ದಾರೆ.

7. ಒಡಿಶಾದ ಕೊರೊನಾ ಸೋಂಕಿತರ ಮೊತ್ತವು ಶುಕ್ರವಾರ ದಾಖಲೆಯ 1,594 ಪ್ರಕರಣಗಳೊಟ್ಟಿಗೆ 22,693 ಕ್ಕೆ ಏರಿದೆ. ಗಂಜಾಂ ಜಿಲ್ಲೆಯಲ್ಲಿ ಗರಿಷ್ಠ 732 ಹೊಸ ಪ್ರಕರಣಗಳು ದಾಖಲಾಗಿದೆ. ರಾಜ್ಯದಲ್ಲಿ ವೈರಸ್‌ನಿಂದ 120 ಜನರು ಸಾವನ್ನಪ್ಪಿದ್ದಾರೆ.

8. ಭಾರತವು ವಿಶ್ವದ ಅತ್ಯಂತ ಕಡಿಮೆ ಸೋಂಕು ಮತ್ತು ಸಾವಿನ ಪ್ರಮಾಣವನ್ನು ಹೊಂದಿದೆ” ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷ್ ವರ್ಧನ್ ಶುಕ್ರವಾರ ಹೇಳಿದ್ದಾರೆ. ದೇಶದಲ್ಲಿ ಸೋಂಕಿತರು ಶೇಕಡಾ 63.45 ರಷ್ಟಿದ್ದರೆ, ಮರಣ ಪ್ರಮಾಣವು ಶೇಕಡಾ 2.3 ರಷ್ಟಿದೆ.

9. ವಿಶ್ವ ಆರೋಗ್ಯ ಸಂಸ್ಥೆ ಶುಕ್ರವಾರ ಜಾಗತಿಕ ಕೊರೊನಾ ವೈರಸ್ ಪ್ರಕರಣಗಳಲ್ಲಿ ದಾಖಲೆಯ ಹೆಚ್ಚಳವನ್ನು ವರದಿ ಮಾಡಿದೆ. ಒಟ್ಟು 24 ಗಂಟೆಗಳಲ್ಲಿ 284,196 ರಷ್ಟು ಏರಿಕೆಯಾಗಿದೆ.

10. ಸಾಂಕ್ರಾಮಿಕ ರೋಗವು ವಿಶ್ವದಾದ್ಯಂತ 633,000 ಕ್ಕೂ ಹೆಚ್ಚು ಜನರನ್ನು ಬಲಿ ತೆಗೆದುಕೊಂಡಿದೆ. 15.5 ದಶಲಕ್ಷಕ್ಕೂ ಹೆಚ್ಚು ಜನರು ಸೋಂಕಿಗೆ ಒಳಗಾಗಿದ್ದಾರೆ ಎಂದು ಸುದ್ದಿ ಸಂಸ್ಥೆ AFP ತಿಳಿಸಿದೆ.


ಇದನ್ನೂ ಓದಿ: ರಾಜಸ್ಥಾನ ಬಿಕ್ಕಟ್ಟು: ಅಧಿವೇಶನ ಕರೆಯಲು ಆಗ್ರಹಿಸಿ ತಡರಾತ್ರಿವರೆಗೂ ಪ್ರತಿಭಟನೆ – 102 ಶಾಸಕರ ಪಟ್ಟಿ ರವಾನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...