Homeಕರೋನಾ ತಲ್ಲಣಒಂದೇ ದಿನಕ್ಕೆ 48,000 ಕ್ಕೂ ಹೆಚ್ಚು ಕೊರೊನಾ ಪ್ರಕರಣಗಳು; ಒಟ್ಟು ಸೋಂಕಿತರ ಸಂಖ್ಯೆ 13.36 ಲಕ್ಷ!

ಒಂದೇ ದಿನಕ್ಕೆ 48,000 ಕ್ಕೂ ಹೆಚ್ಚು ಕೊರೊನಾ ಪ್ರಕರಣಗಳು; ಒಟ್ಟು ಸೋಂಕಿತರ ಸಂಖ್ಯೆ 13.36 ಲಕ್ಷ!

ಭಾರತದಲ್ಲಿ ಇದುವರೆಗೆ ಒಟ್ಟಾರೆ 31,358 ಸಾವುಗಳು ಸಂಭವಿಸಿದ್ದು, ಯುಎಸ್, ಬ್ರೆಜಿಲ್, ಬ್ರಿಟನ್, ಮೆಕ್ಸಿಕೊ ಮತ್ತು ಇಟಲಿಯ ನಂತರ ದೇಶವು ವಿಶ್ವದ 6ನೇ ಸ್ಥಾನದಲ್ಲಿದೆ.

- Advertisement -
- Advertisement -

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 48,916 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ. ಒಟ್ಟು ಪ್ರಕರಣಗಳ ಸಂಖ್ಯೆ 13,36,861 ಕ್ಕೆ ಏರಿದೆ ಎಂದು ಸರ್ಕಾರದ ಅಂಕಿ ಅಂಶಗಳು ತಿಳಿಸಿವೆ.

ಈ ಒಂದು ದಿನದ ಅವಧಿಯಲ್ಲಿ 757 ಕೊರೊನಾ ಸಂಬಂಧಿತ ಸಾವುಗಳು ಸಂಭವಿಸಿವೆ ಎಂದು ಆರೋಗ್ಯ ಸಚಿವಾಲಯ ವರದಿ ಬಿಡುಗಡೆ ಮಾಡಿದೆ. ಭಾರತದಲ್ಲಿ ಇದುವರೆಗೆ ಒಟ್ಟಾರೆ 31,358 ಸಾವುಗಳು ಸಂಭವಿಸಿದ್ದು, ಈಗ ಯುಎಸ್, ಬ್ರೆಜಿಲ್, ಬ್ರಿಟನ್, ಮೆಕ್ಸಿಕೊ ಮತ್ತು ಇಟಲಿಯ ನಂತರ ವಿಶ್ವದ 6ನೇ ಸ್ಥಾನದಲ್ಲಿದೆ.

ಚೇತರಿಕೆ ದರವು ಶೇಕಡಾ 63.53 ಮತ್ತು ಕೊರೊನಾ ಪಾಸಿಟೀವ್ ದರವು ಶೇಕಡಾ 11.62 ಆಗಿದೆ. ಶುಕ್ರವಾರ ಅತಿ ಹೆಚ್ಚು 4,20,898 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಕೊರೊನಾ ಪ್ರಕರಣಗಳು 45,000 ಕ್ಕಿಂತ ಹೆಚ್ಚು ವರದಿಯಾಗುತ್ತಿರುವುದು ಇದು ಮೂರನೇ ಬಾರಿ.

ಕೊರೊನಾ ಬೆಳವಣಿಗೆಯ 10 ಪ್ರಮುಖ ಅಂಶಗಳು:

  1. ಭಾರತದಲ್ಲಿ ಶುಕ್ರವಾರ ಕೊರೊನಾ ವೈರಸ್ ಪ್ರಕರಣಗಳ ಸಂಖ್ಯೆ 13 ಲಕ್ಷ ದಾಟಿದೆ. ದೇಶದಲ್ಲಿ ಒಂದೇ ದಿನದಲ್ಲಿ ದಾಖಲೆಯ 49,310 ಹೊಸ ಪ್ರಕರಣಗಳು ದಾಖಲಾಗಿವೆ.

2. ಭಾರತದ ಕೊರೊನಾ ಪ್ರಕರಣಗಳ ಮೊತ್ತವು 13 ಲಕ್ಷ ತಲುಪಲು 177 ದಿನಗಳನ್ನು ತೆಗೆದುಕೊಂಡಿತು. ಜುಲೈ 2 ರಿಂದ ದೇಶವು ಆರು ಲಕ್ಷಗಳನ್ನು ದಾಟಿದ ನಂತರ, ಭಾರತದಲ್ಲಿ ಸುಮಾರು ಮೂರು ವಾರಗಳಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ದ್ವಿಗುಣಗೊಂಡಿದೆ.

3. ಅತಿ ಹೆಚ್ಚು ಹಾನಿಗೊಳಗಾದ ಮಹಾರಾಷ್ಟ್ರದಲ್ಲಿ ಶುಕ್ರವಾರ 9,615 ಹೊಸ ಪ್ರಕರಣಗಳು ದಾಖಲಾಗಿದ್ದು, ಅವುಗಳಲ್ಲಿ 1,057 ಮುಂಬೈನಲ್ಲಿದೆ. ರಾಜ್ಯದ ಕೊರೊನಾ ಸೋಂಕಿತರ ಮೊತ್ತವು ಪ್ರಸ್ತುತ 3,57,117 ಆಗಿದೆ. ವೈರಸ್ ಸಂಬಂಧಿತ ಸಾವುಗಳ ಸಂಖ್ಯೆ 13,132 ಕ್ಕೆ ಏರಿಕೆಯಾಗಿದ್ದು, ಶುಕ್ರವಾರ 278 ಹೊಸ ಸಾವು ಸಂಭವಿಸಿವೆ ಎಂದು ಆರೋಗ್ಯ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

4. ದೆಹಲಿಯಲ್ಲಿ ಶುಕ್ರವಾರ 1,025 ಹೊಸ ಪ್ರಕರಣಗಳು ದೃಢಪಟ್ಟಿದ್ದು, ಒಟ್ಟು 1.28 ಲಕ್ಷ ಪ್ರಕರಣಗಳು ದಾಖಲಾಗಿವೆ. ಅಲ್ಲಿ ಈವರೆಗೆ ವೈರಸ್‌ನಿಂದ 3,777 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

5. ದೆಹಲಿಯ ಚೇತರಿಕೆಯ ಪ್ರಮಾಣವು ಶೇಕಡಾ 86 ಕ್ಕಿಂತ ಹೆಚ್ಚಾಗಿದೆ. ಪ್ರಸ್ತುತ ಸಕ್ರಿಯ ಪ್ರಕರಣಗಳು 13,681 ಕ್ಕೆ ಇಳಿದಿದೆ. ಇದು ಕಳೆದ ಏಳು ವಾರಗಳಲ್ಲಿ ಅತಿ ಕಡಿಮೆ ಎಂದು ಶುಕ್ರವಾರ ಬಿಡುಗಡೆ ಮಾಡಿದ ಆರೋಗ್ಯ ಬುಲೆಟಿನ್ ತಿಳಿಸಿದೆ.

6. ಅಸ್ಸಾಂನಲ್ಲಿನ ಕೊರೊನಾ ಸೋಂಕಿತರ ಸಂಖ್ಯೆ ಶುಕ್ರವಾರ 1,130 ಹೊಸ ಪ್ರಕರಣಗಳೊಟ್ಟಿಗೆ 29,921 ಕ್ಕೆ ತಲುಪಿದೆ. ಆರು ಸಾವು ಸಂಭವಿಸಿದ್ದು, ಸಾವಿನ ಸಂಖ್ಯೆ 76 ಕ್ಕೆ ಏರಿದೆ ಎಂದು ರಾಜ್ಯ ಆರೋಗ್ಯ ಸಚಿವ ಹಿಮಂತ ಬಿಸ್ವಾ ಶರ್ಮಾ ತಿಳಿಸಿದ್ದಾರೆ.

7. ಒಡಿಶಾದ ಕೊರೊನಾ ಸೋಂಕಿತರ ಮೊತ್ತವು ಶುಕ್ರವಾರ ದಾಖಲೆಯ 1,594 ಪ್ರಕರಣಗಳೊಟ್ಟಿಗೆ 22,693 ಕ್ಕೆ ಏರಿದೆ. ಗಂಜಾಂ ಜಿಲ್ಲೆಯಲ್ಲಿ ಗರಿಷ್ಠ 732 ಹೊಸ ಪ್ರಕರಣಗಳು ದಾಖಲಾಗಿದೆ. ರಾಜ್ಯದಲ್ಲಿ ವೈರಸ್‌ನಿಂದ 120 ಜನರು ಸಾವನ್ನಪ್ಪಿದ್ದಾರೆ.

8. ಭಾರತವು ವಿಶ್ವದ ಅತ್ಯಂತ ಕಡಿಮೆ ಸೋಂಕು ಮತ್ತು ಸಾವಿನ ಪ್ರಮಾಣವನ್ನು ಹೊಂದಿದೆ” ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷ್ ವರ್ಧನ್ ಶುಕ್ರವಾರ ಹೇಳಿದ್ದಾರೆ. ದೇಶದಲ್ಲಿ ಸೋಂಕಿತರು ಶೇಕಡಾ 63.45 ರಷ್ಟಿದ್ದರೆ, ಮರಣ ಪ್ರಮಾಣವು ಶೇಕಡಾ 2.3 ರಷ್ಟಿದೆ.

9. ವಿಶ್ವ ಆರೋಗ್ಯ ಸಂಸ್ಥೆ ಶುಕ್ರವಾರ ಜಾಗತಿಕ ಕೊರೊನಾ ವೈರಸ್ ಪ್ರಕರಣಗಳಲ್ಲಿ ದಾಖಲೆಯ ಹೆಚ್ಚಳವನ್ನು ವರದಿ ಮಾಡಿದೆ. ಒಟ್ಟು 24 ಗಂಟೆಗಳಲ್ಲಿ 284,196 ರಷ್ಟು ಏರಿಕೆಯಾಗಿದೆ.

10. ಸಾಂಕ್ರಾಮಿಕ ರೋಗವು ವಿಶ್ವದಾದ್ಯಂತ 633,000 ಕ್ಕೂ ಹೆಚ್ಚು ಜನರನ್ನು ಬಲಿ ತೆಗೆದುಕೊಂಡಿದೆ. 15.5 ದಶಲಕ್ಷಕ್ಕೂ ಹೆಚ್ಚು ಜನರು ಸೋಂಕಿಗೆ ಒಳಗಾಗಿದ್ದಾರೆ ಎಂದು ಸುದ್ದಿ ಸಂಸ್ಥೆ AFP ತಿಳಿಸಿದೆ.


ಇದನ್ನೂ ಓದಿ: ರಾಜಸ್ಥಾನ ಬಿಕ್ಕಟ್ಟು: ಅಧಿವೇಶನ ಕರೆಯಲು ಆಗ್ರಹಿಸಿ ತಡರಾತ್ರಿವರೆಗೂ ಪ್ರತಿಭಟನೆ – 102 ಶಾಸಕರ ಪಟ್ಟಿ ರವಾನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...