Homeಕರೋನಾ ತಲ್ಲಣಒಂದೇ ದಿನಕ್ಕೆ 48,000 ಕ್ಕೂ ಹೆಚ್ಚು ಕೊರೊನಾ ಪ್ರಕರಣಗಳು; ಒಟ್ಟು ಸೋಂಕಿತರ ಸಂಖ್ಯೆ 13.36 ಲಕ್ಷ!

ಒಂದೇ ದಿನಕ್ಕೆ 48,000 ಕ್ಕೂ ಹೆಚ್ಚು ಕೊರೊನಾ ಪ್ರಕರಣಗಳು; ಒಟ್ಟು ಸೋಂಕಿತರ ಸಂಖ್ಯೆ 13.36 ಲಕ್ಷ!

ಭಾರತದಲ್ಲಿ ಇದುವರೆಗೆ ಒಟ್ಟಾರೆ 31,358 ಸಾವುಗಳು ಸಂಭವಿಸಿದ್ದು, ಯುಎಸ್, ಬ್ರೆಜಿಲ್, ಬ್ರಿಟನ್, ಮೆಕ್ಸಿಕೊ ಮತ್ತು ಇಟಲಿಯ ನಂತರ ದೇಶವು ವಿಶ್ವದ 6ನೇ ಸ್ಥಾನದಲ್ಲಿದೆ.

- Advertisement -
- Advertisement -

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 48,916 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ. ಒಟ್ಟು ಪ್ರಕರಣಗಳ ಸಂಖ್ಯೆ 13,36,861 ಕ್ಕೆ ಏರಿದೆ ಎಂದು ಸರ್ಕಾರದ ಅಂಕಿ ಅಂಶಗಳು ತಿಳಿಸಿವೆ.

ಈ ಒಂದು ದಿನದ ಅವಧಿಯಲ್ಲಿ 757 ಕೊರೊನಾ ಸಂಬಂಧಿತ ಸಾವುಗಳು ಸಂಭವಿಸಿವೆ ಎಂದು ಆರೋಗ್ಯ ಸಚಿವಾಲಯ ವರದಿ ಬಿಡುಗಡೆ ಮಾಡಿದೆ. ಭಾರತದಲ್ಲಿ ಇದುವರೆಗೆ ಒಟ್ಟಾರೆ 31,358 ಸಾವುಗಳು ಸಂಭವಿಸಿದ್ದು, ಈಗ ಯುಎಸ್, ಬ್ರೆಜಿಲ್, ಬ್ರಿಟನ್, ಮೆಕ್ಸಿಕೊ ಮತ್ತು ಇಟಲಿಯ ನಂತರ ವಿಶ್ವದ 6ನೇ ಸ್ಥಾನದಲ್ಲಿದೆ.

ಚೇತರಿಕೆ ದರವು ಶೇಕಡಾ 63.53 ಮತ್ತು ಕೊರೊನಾ ಪಾಸಿಟೀವ್ ದರವು ಶೇಕಡಾ 11.62 ಆಗಿದೆ. ಶುಕ್ರವಾರ ಅತಿ ಹೆಚ್ಚು 4,20,898 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಕೊರೊನಾ ಪ್ರಕರಣಗಳು 45,000 ಕ್ಕಿಂತ ಹೆಚ್ಚು ವರದಿಯಾಗುತ್ತಿರುವುದು ಇದು ಮೂರನೇ ಬಾರಿ.

ಕೊರೊನಾ ಬೆಳವಣಿಗೆಯ 10 ಪ್ರಮುಖ ಅಂಶಗಳು:

  1. ಭಾರತದಲ್ಲಿ ಶುಕ್ರವಾರ ಕೊರೊನಾ ವೈರಸ್ ಪ್ರಕರಣಗಳ ಸಂಖ್ಯೆ 13 ಲಕ್ಷ ದಾಟಿದೆ. ದೇಶದಲ್ಲಿ ಒಂದೇ ದಿನದಲ್ಲಿ ದಾಖಲೆಯ 49,310 ಹೊಸ ಪ್ರಕರಣಗಳು ದಾಖಲಾಗಿವೆ.

2. ಭಾರತದ ಕೊರೊನಾ ಪ್ರಕರಣಗಳ ಮೊತ್ತವು 13 ಲಕ್ಷ ತಲುಪಲು 177 ದಿನಗಳನ್ನು ತೆಗೆದುಕೊಂಡಿತು. ಜುಲೈ 2 ರಿಂದ ದೇಶವು ಆರು ಲಕ್ಷಗಳನ್ನು ದಾಟಿದ ನಂತರ, ಭಾರತದಲ್ಲಿ ಸುಮಾರು ಮೂರು ವಾರಗಳಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ದ್ವಿಗುಣಗೊಂಡಿದೆ.

3. ಅತಿ ಹೆಚ್ಚು ಹಾನಿಗೊಳಗಾದ ಮಹಾರಾಷ್ಟ್ರದಲ್ಲಿ ಶುಕ್ರವಾರ 9,615 ಹೊಸ ಪ್ರಕರಣಗಳು ದಾಖಲಾಗಿದ್ದು, ಅವುಗಳಲ್ಲಿ 1,057 ಮುಂಬೈನಲ್ಲಿದೆ. ರಾಜ್ಯದ ಕೊರೊನಾ ಸೋಂಕಿತರ ಮೊತ್ತವು ಪ್ರಸ್ತುತ 3,57,117 ಆಗಿದೆ. ವೈರಸ್ ಸಂಬಂಧಿತ ಸಾವುಗಳ ಸಂಖ್ಯೆ 13,132 ಕ್ಕೆ ಏರಿಕೆಯಾಗಿದ್ದು, ಶುಕ್ರವಾರ 278 ಹೊಸ ಸಾವು ಸಂಭವಿಸಿವೆ ಎಂದು ಆರೋಗ್ಯ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

4. ದೆಹಲಿಯಲ್ಲಿ ಶುಕ್ರವಾರ 1,025 ಹೊಸ ಪ್ರಕರಣಗಳು ದೃಢಪಟ್ಟಿದ್ದು, ಒಟ್ಟು 1.28 ಲಕ್ಷ ಪ್ರಕರಣಗಳು ದಾಖಲಾಗಿವೆ. ಅಲ್ಲಿ ಈವರೆಗೆ ವೈರಸ್‌ನಿಂದ 3,777 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

5. ದೆಹಲಿಯ ಚೇತರಿಕೆಯ ಪ್ರಮಾಣವು ಶೇಕಡಾ 86 ಕ್ಕಿಂತ ಹೆಚ್ಚಾಗಿದೆ. ಪ್ರಸ್ತುತ ಸಕ್ರಿಯ ಪ್ರಕರಣಗಳು 13,681 ಕ್ಕೆ ಇಳಿದಿದೆ. ಇದು ಕಳೆದ ಏಳು ವಾರಗಳಲ್ಲಿ ಅತಿ ಕಡಿಮೆ ಎಂದು ಶುಕ್ರವಾರ ಬಿಡುಗಡೆ ಮಾಡಿದ ಆರೋಗ್ಯ ಬುಲೆಟಿನ್ ತಿಳಿಸಿದೆ.

6. ಅಸ್ಸಾಂನಲ್ಲಿನ ಕೊರೊನಾ ಸೋಂಕಿತರ ಸಂಖ್ಯೆ ಶುಕ್ರವಾರ 1,130 ಹೊಸ ಪ್ರಕರಣಗಳೊಟ್ಟಿಗೆ 29,921 ಕ್ಕೆ ತಲುಪಿದೆ. ಆರು ಸಾವು ಸಂಭವಿಸಿದ್ದು, ಸಾವಿನ ಸಂಖ್ಯೆ 76 ಕ್ಕೆ ಏರಿದೆ ಎಂದು ರಾಜ್ಯ ಆರೋಗ್ಯ ಸಚಿವ ಹಿಮಂತ ಬಿಸ್ವಾ ಶರ್ಮಾ ತಿಳಿಸಿದ್ದಾರೆ.

7. ಒಡಿಶಾದ ಕೊರೊನಾ ಸೋಂಕಿತರ ಮೊತ್ತವು ಶುಕ್ರವಾರ ದಾಖಲೆಯ 1,594 ಪ್ರಕರಣಗಳೊಟ್ಟಿಗೆ 22,693 ಕ್ಕೆ ಏರಿದೆ. ಗಂಜಾಂ ಜಿಲ್ಲೆಯಲ್ಲಿ ಗರಿಷ್ಠ 732 ಹೊಸ ಪ್ರಕರಣಗಳು ದಾಖಲಾಗಿದೆ. ರಾಜ್ಯದಲ್ಲಿ ವೈರಸ್‌ನಿಂದ 120 ಜನರು ಸಾವನ್ನಪ್ಪಿದ್ದಾರೆ.

8. ಭಾರತವು ವಿಶ್ವದ ಅತ್ಯಂತ ಕಡಿಮೆ ಸೋಂಕು ಮತ್ತು ಸಾವಿನ ಪ್ರಮಾಣವನ್ನು ಹೊಂದಿದೆ” ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷ್ ವರ್ಧನ್ ಶುಕ್ರವಾರ ಹೇಳಿದ್ದಾರೆ. ದೇಶದಲ್ಲಿ ಸೋಂಕಿತರು ಶೇಕಡಾ 63.45 ರಷ್ಟಿದ್ದರೆ, ಮರಣ ಪ್ರಮಾಣವು ಶೇಕಡಾ 2.3 ರಷ್ಟಿದೆ.

9. ವಿಶ್ವ ಆರೋಗ್ಯ ಸಂಸ್ಥೆ ಶುಕ್ರವಾರ ಜಾಗತಿಕ ಕೊರೊನಾ ವೈರಸ್ ಪ್ರಕರಣಗಳಲ್ಲಿ ದಾಖಲೆಯ ಹೆಚ್ಚಳವನ್ನು ವರದಿ ಮಾಡಿದೆ. ಒಟ್ಟು 24 ಗಂಟೆಗಳಲ್ಲಿ 284,196 ರಷ್ಟು ಏರಿಕೆಯಾಗಿದೆ.

10. ಸಾಂಕ್ರಾಮಿಕ ರೋಗವು ವಿಶ್ವದಾದ್ಯಂತ 633,000 ಕ್ಕೂ ಹೆಚ್ಚು ಜನರನ್ನು ಬಲಿ ತೆಗೆದುಕೊಂಡಿದೆ. 15.5 ದಶಲಕ್ಷಕ್ಕೂ ಹೆಚ್ಚು ಜನರು ಸೋಂಕಿಗೆ ಒಳಗಾಗಿದ್ದಾರೆ ಎಂದು ಸುದ್ದಿ ಸಂಸ್ಥೆ AFP ತಿಳಿಸಿದೆ.


ಇದನ್ನೂ ಓದಿ: ರಾಜಸ್ಥಾನ ಬಿಕ್ಕಟ್ಟು: ಅಧಿವೇಶನ ಕರೆಯಲು ಆಗ್ರಹಿಸಿ ತಡರಾತ್ರಿವರೆಗೂ ಪ್ರತಿಭಟನೆ – 102 ಶಾಸಕರ ಪಟ್ಟಿ ರವಾನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...